ಪಾಕಿಸ್ತಾನದಲ್ಲಿ ಜಲ ಬಿಕ್ಕಟ್ಟು | ಸಿಂಧೂ ಜಲ ಒಪ್ಪಂದ ಅಮಾನತು ಬೇಡ ; ಭಾರತಕ್ಕೆ 4 ಪತ್ರ ಬರೆದ ಪಾಕಿಸ್ತಾನ…!

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾದ ನಂತರ ಸಿಂಧೂ ಜಲ ಒಪ್ಪಂದವನ್ನು (ಐಡಬ್ಲ್ಯೂಟಿ) ಸ್ಥಗಿತಗೊಳಿಸಿದ ನಿರ್ಧಾರವನ್ನು ಭಾರತವು ಮರುಪರಿಶೀಲಿಸಬೇಕು ಎಂದು ಕೋರಿ ಪಾಕಿಸ್ತಾನವು ಒಂದರ ನಂತರ ಒಂದರಂತೆ ನಾಲ್ಕು ಪತ್ರಗಳನ್ನು ಬರೆದಿದೆ ಎಂದು ವರದಿಯಾಗಿದೆ. ಪಾಕಿಸ್ತಾನವು ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿದೆ ಮತ್ತು ಹತಾಶವಾಗಿರುವಂತೆ ತೋರುತ್ತಿದೆ ಎಂದು ಈ … Continued

ದೇಶಭಕ್ತನಾಗುವುದು ಅಷ್ಟು ಕಷ್ಟವೇ?: ಕಾಂಗ್ರೆಸ್ ನಾಯಕರಿಗೆ ಕುಟುಕಿದ ಮಾಜಿ ಸಚಿವ ಸಲ್ಮಾನ್ ಖುರ್ಷಿದ್…!

ನವದೆಹಲಿ: ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ ನಂತರ ಪಾಲುದಾರ ರಾಷ್ಟ್ರಗಳಿಗೆ ತೆರಳಿರುವ ಸರ್ವಪಕ್ಷಗಳ ನಿಯೋಗದ ಸದಸ್ಯರಾಗಿರುವ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್, ತಮ್ಮ ಪಕ್ಷ ಕಾಂಗ್ರೆಸ್‌ ಸೇರಿದಂತೆ ಟೀಕಾಕಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ, “ಭಯೋತ್ಪಾದನೆಯ ವಿರುದ್ಧದ ಕಾರ್ಯಾಚರಣೆಯಲ್ಲಿ, ಜಗತ್ತಿಗೆ ಭಾರತದ ಸಂದೇಶವನ್ನು ಹೇಳುವುದರ ಬಗ್ಗೆಯೂ ಜನರು ರಾಜಕೀಯ ನಿಷ್ಠೆಯನ್ನು ಲೆಕ್ಕ … Continued

ವೀಡಿಯೊಗಳು | ಲಾಹೋರ್‌ ರ‍್ಯಾಲಿಯಲ್ಲಿ ಪಹಲ್ಗಾಮ್‌ ದಾಳಿ ಸಂಚುಕೋರ ಸೈಫುಲ್ಲಾ ಕಸೂರಿ ಪ್ರತ್ಯಕ್ಷ : ಉಗ್ರ ಹಫೀಜ್ ಸಯೀದ್ ಪುತ್ರ ಸಹ ಭಾಗಿ

ಲಾಹೋರ್:26 ಅಮಾಯಕರ ಜೀವಗಳನ್ನು ಬಲಿತೆಗೆದುಕೊಂಡ ಪಹಲ್ಗಾಮ್ ದಾಳಿಯ ಯೋಜನೆ ರೂಪಿಸಿದ್ದ ಲಷ್ಕರ್-ಎ-ತೈಬಾ (ಎಲ್‌ಇಟಿ)ಯ ಹಿರಿಯ ಕಮಾಂಡರ್ ಸೈಫುಲ್ಲಾ ಕಸೂರಿ, ಲಾಹೋರ್‌ನಲ್ಲಿ ನಡೆದ ರ್ಯಾಲಿಯಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾನೆ. ಮಾಧ್ಯಮ ವರದಿಗಳ ಪ್ರಕಾರ, ಪಾಕಿಸ್ತಾನದ ಪರಮಾಣು ಪರೀಕ್ಷೆಗಳ ವರ್ಷಾಚರಣೆ ಅಂಗವಾಗಿ ಪಾಕಿಸ್ತಾನ ಮರ್ಕಾಜಿ ಮುಸ್ಲಿಂ ಲೀಗ್ (ಪಿಎಂಎಂಎಲ್) ಈ ರ್ಯಾಲಿಯನ್ನು ಆಯೋಜಿಸಿತ್ತು. ಭಾರತದಿಂದ ಗೊತ್ತುಪಡಿಸಿದ ಭಯೋತ್ಪಾದಕ ಎಂದು ಘೋಷುಸಲ್ಪಟ್ಟ, … Continued

ಭಾರತದ ಸಾಮರ್ಥ್ಯ ಬಹಿರಂಗ…| ಪಾಕಿಸ್ತಾನದ ಮುರಿದ್ ಸೇನಾ ನೆಲೆಯ ಭೂಗತ ಸೌಲಭ್ಯಗಳ ಮೇಲೆ ದಾಳಿ ನಡೆಸಿದ್ದನ್ನು ತೋರಿಸಿದ ಉಪಗ್ರಹ ಚಿತ್ರಗಳು…!

ನವದೆಹಲಿ: ಭಾರತದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಮುರಿಯದ್ ವಾಯುನೆಲೆಯ ಮೇಲೆ ನಡೆದ ವಾಯುದಾಳಿಗಳು ಭೂಗತ ಮಿಲಿಟರಿ ಸೌಲಭ್ಯವನ್ನು ಗುರಿಯಾಗಿರಿಸಿಕೊಂಡಿರಬಹುದು ಎಂದು ಹೊಸದಾಗಿ ಬಿಡುಗಡೆಯಾದ ಹೈ-ರೆಸಲ್ಯೂಶನ್ ಉಪಗ್ರಹ ಚಿತ್ರಗಳು ತೋರಿಸಿವೆ. ಬುಧವಾರದ ಹೈ-ರೆಸಲ್ಯೂಶನ್ ಉಪಗ್ರಹ ಚಿತ್ರಗಳು ಪಾಕಿಸ್ತಾನದ ಮುರಿಯದ್ ವಾಯುನೆಲೆಗೆ ವ್ಯಾಪಕ ಹಾನಿಯನ್ನು ಬಹಿರಂಗಪಡಿಸಿವೆ, ಪಾಕಿಸ್ತಾನ ವಾಯುಪಡೆಯ ಭೂಮಿ ಅಡಿಯ ಮಿಲಿಟರಿ ಸೌಲಭ್ಯದಿಂದ … Continued

ಭಯೋತ್ಪಾದನೆ ವಿರುದ್ಧ ಭಾರತವು ಜಾಗತಿಕವಾಗಿ ತಲುಪುವ ಪ್ರಯತ್ನಕ್ಕೆ ಸ್ಥಳೀಯ ರಾಜಕೀಯ ತರಬೇಡಿ ; ಸಂಜಯ ರಾವತಗೆ ಶರದ್ ಪವಾರ್

ಪುಣೆ: ಎನ್‌ಸಿಪಿ (ಶರದ್‌ ಪವಾರ್‌) ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಶರದ್ ಪವಾರ್ ಸೋಮವಾರ ತಮ್ಮ ಪಕ್ಷದ ಮೈತ್ರಿಕೂಟದ ನಾಯಕ ಸಂಜಯ ರಾವತ್ ಅವರ ಹೇಳಿಕೆಯನ್ನು  ತಾವು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. ಭಯೋತ್ಪಾದನೆ ಹಾಗೂ ಅದರ ವಿರುದ್ಧ ದೇಶ ಕೈಗೊಂಡ ಕ್ರಮಗಳ ಕುರಿತು ಭಾರತದ ಜಾಗತಿಕ ಸಂಪರ್ಕ ಪ್ರಯತ್ನಗಳಲ್ಲಿ “ಸ್ಥಳೀಯ ಮಟ್ಟದ ರಾಜಕೀಯ”ವನ್ನು ತರಬೇಡಿ ಎಂದು … Continued

ಭಾರತದ ವಿರುದ್ಧ ಪಾಕಿಸ್ತಾನದ ದಾಳಿಗಳಿಗೆ ಚೀನಾದ ಬೆಂಬಲ ; ಇಲ್ಲಿವೆ ಪ್ರಮುಖ ಪುರಾವೆಗಳು…

ನವದೆಹಲಿ: ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ವಿರುದ್ಧ ಭಾರತೀಯ ವಾಯುದಾಳಿಗಳನ್ನು ಒಳಗೊಂಡ ಆಪರೇಷನ್ ಸಿಂಧೂರದ ನಂತರ ವಿವಿಧ ವರದಿಗಳು ಚೀನಾ ಸರಬರಾಜು ಮಾಡಿದ PL-15 ಕ್ಷಿಪಣಿಗಳು ಮತ್ತು ಟರ್ಕಿಶ್ UAV ಗಳ ಬಳಕೆ ಸೇರಿದಂತೆ ಪಾಕಿಸ್ತಾನಕ್ಕೆ ಚೀನಾದ ಮಿಲಿಟರಿ ಬೆಂಬಲದ ವ್ಯಾಪ್ತಿಯನ್ನು ಎತ್ತಿ ತೋರಿಸಿದೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ನಡೆದ ನಾಲ್ಕು ದಿನಗಳ ಸಂಘರ್ಷದಲ್ಲಿ ಭಾರತದ … Continued

ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ ; ಸೋನು ನಿಗಮ್‌ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್‌

ಬೆಂಗಳೂರು : ಬಹುಭಾಷಾ ಗಾಯಕ ಸೋನು ನಿಗಮ್‌ ಅವರು ಕನ್ನಡಾಭಿಮಾನವನ್ನು ಪಹಲ್ಗಾಮ್‌ ಘಟನೆಗೆ ತಳುಕು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ಗುರುವಾರ ನಗರ ಪೊಲೀಸರಿಗೆ ಅನುಮತಿ ನೀಡಿದೆ. ಆದರೆ, ಯಾವುದೇ ರೀತಿಯ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ. ಹಾಗೂ ಮುಂದಿನ ವಿಚಾರಣೆವರೆಗೆ ಅಂತಿಮ ವರದಿ ಸಲ್ಲಿಸುವುದಕ್ಕೆ … Continued

ಪಹಲ್ಗಾಮ್‌ ದಾಳಿ | ಪಾಕ್ ಬೆಂಬಲಿಸಿದ್ದ ಟರ್ಕಿಗೆ ದೊಡ್ಡ ಹೊಡೆತ ನೀಡಿದ ಭಾರತ : ಸೆಲೆಬಿ ಏರ್‌ಪೋರ್ಟ್‌ ಸರ್ವೀಸಸ್‌ ಗೆ ಭದ್ರತಾ ಅನುಮತಿ ರದ್ದು…

ನವದೆಹಲಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿಯ (Pahalgam Attack) ನಂಥರ ಪಾಕಿಸ್ತಾನಕ್ಕೆ ಬೆಂಬಲ ನೀಡಿರುವ ಟರ್ಕಿಗೆ ಭಾರತ ದೊಡ್ಡ ಹೊಡೆತ ನೀಡಿದೆ. ವಿಮಾನ ನಿಲ್ದಾಣದಲ್ಲಿ ಗ್ರೌಂಡ್‌ ಹ್ಯಾಂಡ್ಲಿಂಗ್‌ ಸೇವೆಯನ್ನು ನೀಡುತ್ತಿದ್ದ ಟರ್ಕಿ ಮೂಲದ ಸೆಲೆಬಿ ಏರ್‌ಪೋರ್ಟ್‌ ಇಂಡಿಯಾ ಸರ್ವೀಸ್‌ (Celebi Airport Services India) ಕಂಪನಿಗೆ ಕೊಟ್ಟಿದ್ದ ಅನುಮೋದನೆಯನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ. ಟರ್ಕಿ ಮೂಲದ ಸೆಲೆಬಿ … Continued

ಪಹಲ್ಗಾಮ್ ದಾಳಿ : ಭಯೋತ್ಪಾದಕ ಗುಂಪು ಲಷ್ಕರ್ ಅಂಗಸಂಸ್ಥೆ ಟಿಆರ್‌ಎಫ್ ವಿರುದ್ಧ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಪುರಾವೆ ಸಲ್ಲಿಸಲಿರುವ ಭಾರತ

ನವದೆಹಲಿ: ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾದ ಉಪ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಬೇಕೆಂದು ಒತ್ತಾಯಿಸಿ ಭಾರತ ಗುರುವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ 1267 ನಿರ್ಬಂಧ ಸಮಿತಿಗೆ ಹೊಸ ಪುರಾವೆಗಳನ್ನು ಸಲ್ಲಿಸಲಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ‘ದಿ ರೆಸಿಸ್ಟೆನ್ಸ್ ಫ್ರಂಟ್’ (TRF) ಹೊಣೆ ಹೊತ್ತುಕೊಂಡಿದ್ದು, ಈಗ ವಿಶ್ವಸಂಸ್ಥೆಯ ಭದ್ರತಾ … Continued

ಮೂಲೆಗುಂಪು-ಹತಾಶ ; ʼಸಿಂಧೂ ಜಲ ಒಪ್ಪಂದ ಸಸ್ಪೆಂಡ್‌ʼ ನಿರ್ಧಾರ ಮರುಪರಿಶೀಲಿಸುವಂತೆ ಒತ್ತಾಯಿಸಿ ಭಾರತಕ್ಕೆ ಪತ್ರ ಬರೆದ ಪಾಕಿಸ್ತಾನ

ನವದೆಹಲಿ: ಪಾಕಿಸ್ತಾನದ ಭೈಒತ್ಪಾದಕ ನೆಲೆಗಳ ವಿರುದ್ಧ ಭಾರತದ ಆಪರೇಶನ್‌ ಸಿಂಧೂರ ಕಾರ್ಯಾಚರಣೆಯ ನಂತರ ಕದನ ವಿರಾಮಕ್ಕೆ ಒಪ್ಪಿದ ಕೆಲವೇ ದಿನಗಳಲ್ಲಿ, ಪಾಕಿಸ್ತಾನವು ಈಗ ಭಾರತಕ್ಕೆ ಪತ್ರ ಬರೆದಿದೆ. ಹಾಗೂ ಭಾರತವು ಸ್ಥಗಿತಗೊಳಿಸಿರುವ ಸಿಂಧೂ ಜಲ ಒಪ್ಪಂದದ ಅಡಿಯಲ್ಲಿ ತನ್ನ ಪ್ರದೇಶಕ್ಕೆ ನದಿಗಳ ನೀರಿನ ಹರಿವನ್ನು ಪುನರಾರಂಭಿಸುವಂತೆ ಒತ್ತಾಯಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನದ ಜಲಸಂಪನ್ಮೂಲ ಸಚಿವಾಲಯವು ಭಾರತವು … Continued