ವೀಡಿಯೊ | ಭಾರತ ಪಾಕ್‌ ಮೇಲೆ ದಾಳಿ ಮಾಡಿದ್ರೆ ನೀವು ಭಾರತದ ಸೇನೆ ಬೆಂಬಲಿಸಿ ; ಪಾಕಿಸ್ತಾನ ಪಶ್ತೂನ್‌ ಮುಸ್ಲಿಮರಿಗೆ ಕರೆ ನೀಡಿದ ಧರ್ಮಗುರು..!

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದ ಇಸ್ಲಾಮಿಕ್ ಧರ್ಮಗುರುವಿನ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ಪಶ್ತೂನ್ ಸಮುದಾಯವು ಭಾರತೀಯ ಸೇನೆಯ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಭಾರತೀಯ ಪ್ರವಾಸಿಗರು ಸಾವಿಗೀಡಾದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚಿದ ಉದ್ವಿಗ್ನತೆಯ … Continued

ವೀಡಿಯೊ | ‘ಯುದ್ಧ ನಡೆದ್ರೆ ನೀವು ಪಾಕಿಸ್ತಾನ ಬೆಂಬಲಿಸ್ತೀರಾ..’-ಪಾಕಿಸ್ತಾನದ ಲಾಲ್‌ ಮಸೀದಿ ಇಮಾಂ ಪ್ರಶ್ನೆಗೆ ಪಾಕ್‌ ಪರ ಕೈ ಎತ್ತುವವರೇ ಇಲ್ಲ..!

ಪಾಕಿಸ್ತಾನವು ತನ್ನ ಜನರ ಮೇಲೆ ಭಾರತಕ್ಕಿಂತ ಹೆಚ್ಚು ದಬ್ಬಾಳಿಕೆ ನಡೆಸುತ್ತಿದೆ, ಆದ್ದರಿಂದ ಭಾರತದ ಜೊತೆ ಯುದ್ಧ ನಡೆದರೆ ಪಾಕಿಸ್ತಾನವನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ ಎಂದು ಪಾಕಿಸ್ತಾನದ ಪ್ರಮುಖ ಧರ್ಮಗುರು ಹೇಳಿದ್ದಾರೆ. ಕಳೆದ ತಿಂಗಳು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಿದ ಹಿನ್ನೆಲೆಯಲ್ಲಿ ಪಾಕಿಸ್ತಾನಿ ಸೇನೆ ಭಾರತದ ವಿರುದ್ಧ … Continued

“ಕೆಲವು ಸಾಮಾಜಿಕ ಮಾಧ್ಯಮ ಪ್ರಭಾವಿಗಳಿಂದ ಭಾರತದ ಹಿತಾಸಕ್ತಿಗೆ ವಿರುದ್ಧ ಕೆಲಸ “: ಕೇಂದ್ರಕ್ಕೆ ತಿಳಿಸಿದ ಸದನ ಸಮಿತಿ

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ “ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಲಾದ ಕೆಲವು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು ವೇದಿಕೆಗಳ ವಿರುದ್ಧ ತೆಗೆದುಕೊಂಡ ಕ್ರಮಗಳ ಕುರಿತು ಕೇಂದ್ರದಿಂದ ವಿವರಗಳನ್ನು ಸಂಸತ್ತಿನ ಸಮಿತಿ ಕೇಳಿದೆ. “ದೇಶದಲ್ಲಿನ ಕೆಲವು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು … Continued

ಪಹಲ್ಗಾಮ್ ದಾಳಿ | ಪ್ರಧಾನಿ ಮೋದಿಗೆ ಫೋನ್‌ ಮಾಡಿದ ರಷ್ಯಾ ಅಧ್ಯಕ್ಷ ಪುತಿನ್ ; ಭಾರತಕ್ಕೆ ʼಸಂಪೂರ್ಣ ಬೆಂಬಲʼ ; ಪಾಕಿಸ್ತಾನಕ್ಕೆ ಕೊಟ್ರು ಶಾಕ್‌…

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಧಿಕೃತ ಹೇಳಿಕೆಯ ಪ್ರಕಾರ, ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾದ ಘಟನೆಯನ್ನು ತೀವ್ರವಾಗಿ ಖಂಡಿಸಿದ ಅವರು, ಅಮಾಯಕರ … Continued

ಪಹಲ್ಗಾಮ್ ಹತ್ಯಾಕಾಂಡದ ನಂತರ ಭಯೋತ್ಪಾದಕರ ಅಡಗುತಾಣ ಪತ್ತೆ, 5 ಸ್ಫೋಟಕ ಸಾಧನಗಳು ವಶಕ್ಕೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಭಯೋತ್ಪಾದಕರು ಬಳಸುತ್ತಿದ್ದ ಭೂಗತ ಅಡಗುತಾಣವನ್ನು ಭದ್ರತಾ ಪಡೆಗಳು ಭೇದಿಸಿದ್ದು, ಭಯೋತ್ಪಾದಕರ ಸಂಚನ್ನು ವಿಫಲಗೊಳಿಸಿದ್ದಾರೆ. ಸುಮಾರು ಎರಡು ವಾರಗಳ ಹಿಂದೆ ಪಹಲ್ಗಾಮ್‌ನಲ್ಲಿ ನಡೆದ ಭೀಕರ ದಾಳಿಯಲ್ಲಿ 26 ನಾಗರಿಕರು ಸಾವಿಗೀಡಾದ ನಂತರ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಪೂಂಚ್‌ನ ಸುರನ್‌ಕೋಟ್‌ನಲ್ಲಿ ಭಾನುವಾರ ಸಂಜೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ … Continued

ವೀಡಿಯೊ..| ಭಯೋತ್ಪಾದಕರಿಗೆ ಆಹಾರ-ಆಶ್ರಯ ನೀಡಿದ್ದ ಆರೋಪಿ ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿ ಮುಳುಗಿ ಸಾವು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ಭಯೋತ್ಪಾದಕರಿಗೆ ಆಹಾರ ಮತ್ತು ಆಶ್ರಯ ನೀಡಿದ್ದ ವ್ಯಕ್ತಿಯೊಬ್ಬ ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳುವಾಗ ನದಿಗೆ ಹಾರಿದ ನಂತರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು 23 ವರ್ಷದ ಇಮ್ತಿಯಾಜ್ ಅಹ್ಮದ್ ಮಗ್ರೆ ಎಂದು ಗುರುತಿಸಲಾಗಿದ್ದು, ಭಯೋತ್ಪಾದಕ ಸಂಘಟನೆ ಎಲ್‌ಇಟಿಗಾಗಿ ಕೆಲಸ ಮಾಡುತ್ತಿದ್ದ ಆತನನ್ನು ಬಂಧಿಸಿದ ನಂತರ, … Continued

ಪಾಕಿಸ್ತಾನಕ್ಕೆ ಫಿರಂಗಿ, ಮದ್ದು ಗುಂಡುಗಳ ಕೊರತೆ ; ಭಾರತದ ಜೊತೆ ಪಾಕಿಸ್ತಾನ ಕೇವಲ 4 ದಿನ ಮಾತ್ರ ಯುದ್ಧ ಮಾಡಬಹುದು…!

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದಲ್ಲಿ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಉಲ್ಬಣಗೊಂಡ ನಡುವೆಯೇ ಪಾಕಿಸ್ತಾನ ಸೇನೆಯು ನಿರ್ಣಾಯಕ ಫಿರಂಗಿ ಮದ್ದುಗುಂಡುಗಳ ತೀವ್ರ ಕೊರತೆ ಎದುರಿಸುತ್ತಿದೆ ಹಾಗೂ ಅದರ ಯುದ್ಧ ಸಾಮರ್ಥ್ಯವು ಕೇವಲ ನಾಲ್ಕು ದಿನಗಳವರೆಗೆ ಇರುತ್ತದೆ ಎಂದು ವರದಿಗಳು ತಿಳಿಸಿವೆ. ಉಕ್ರೇನ್‌ ಜೊತೆ ಇತ್ತೀಚಿನ ಶಸ್ತ್ರಾಸ್ತ್ರ ಒಪ್ಪಂದಗಳಿಂದಾಗಿ ಪಾಕಿಸ್ತಾನವು ಫಿರಂಗಿ ಮದ್ದುಗುಂಡುಗಳ ತೀವ್ರ … Continued

ವೀಡಿಯೊ…| ಭಯೋತ್ಪಾದಕ ದಾಳಿಯ ನಂತರ ತಲ್ಲಣಗೊಂಡ ಪಹಲ್ಗಾಮ್ ಮಾರುಕಟ್ಟೆಯ ಹೊಸ ಸಿಸಿಟಿವಿ ದೃಶ್ಯ ವೈರಲ್‌…

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬೈಸರನ್ ಕಣಿವೆಯ ಸುಂದರವಾದ ಪಹಲ್ಗಾಮ್ ಹುಲ್ಲುಗಾವಲಿನಿಂದ ಇಳಿಜಾರಿನಲ್ಲಿರುವ ಮಾರುಕಟ್ಟೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಭಯೋತ್ಪಾದಕ ದಾಳಿ ಪ್ರಾರಂಭವಾದ ಒಂದು ಗಂಟೆಯ ನಂತರ, ಮಕ್ಕಳು ಸೇರಿದಂತೆ ಕೆಲ ಪ್ರವಾಸಿಗರು ಓಡುತ್ತಿರುವುದನ್ನು ಮತ್ತು ವಾಹನಗಳು ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿರುವುದು ಕಂಡುಬಂದಿದೆ. ದೃಶ್ಯಗಳ ಸಮಯ ಏಪ್ರಿಲ್ 22 ರಂದು ಸಮಯಕ್ಕೆ ಹೊಂದಿಕೆಯಾಗುತ್ತದೆ, ಅಂದರೆ ಗಡಿಯಾಚೆಗಿನ ಸಂಪರ್ಕ … Continued

ಪಹಲ್ಗಾಮ್ ದಾಳಿ: ಭೂಸೇನೆ, ನೌಕಾಪಡೆ ಮಾಹಿತಿ ಪಡೆದ ನಂತರ ವಾಯುಪಡೆ ಮುಖ್ಯಸ್ಥರ ಜೊತೆ ಸಭೆ ನಡೆಸಿದ ಪ್ರಧಾನಿ ಮೋದಿ

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾದ ನಂತರ ಭಾರತ ಹಾಗೂ ಪಾಕಿಸ್ತಾನದ ನಡುವೆ ಪರಿಸ್ಥಿತಿ ಹದಗೆಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಭಾನುವಾರ ಭಾರತೀಯ ವಾಯುಪಡೆಯ ಮುಖ್ಯಸ್ಥ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದರು. ಲೋಕ ಕಲ್ಯಾಣ ಮಾರ್ಗದ 7ರಲ್ಲಿರುವ … Continued

ಭಾರತದಿಂದ ಪಾಕಿಸ್ತಾನಕ್ಕೆ ಮತ್ತೊಂದು ಆಘಾತ ; ಸಿಂಧೂ ಜಲ ಒಪ್ಪಂದ ಸ್ಥಗಿತದ ಬಳಿಕ ಈಗ ಮತ್ತೆರಡು ಅಣೆಕಟ್ಟುಗಳ ನೀರು ಬಂದ್…!

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾದ ನಡುವೆಯೇ ಭಾರತವು ಪಾಕಿಸ್ತಾನಕ್ಕೆ ಮತ್ತೊಂದು ಆಘಾತ ನೀಡಿದೆ. ಈಗಾಗಲೇ ಸಿಂಧೂ ನದಿಯ ನೀರು ಸ್ಥಗಿತ ಮಾಡಿರುವ ಭಾರತ ಈಗ ಮಹತ್ವದ ಮತ್ತೊಂದು ಕ್ರಮವೊಂದರಲ್ಲಿ, ಪಾಕಿಸ್ತಾನಕ್ಕೆ ಹರಿಯುತ್ತಿದ್ದ ಎರಡು ಅಣೆಕಟ್ಟುಗಳ ನೀರನ್ನು ಸ್ಥಗಿತಗೊಳಿಸಿದೆ. ಪಾಕಿಸ್ತಾನಕ್ಕೆ ಹರಿಯುತ್ತಿದ್ದ ಚೆನಾಬ್ ನದಿಯ ಬಾಗ್ಲಿಹಾರ್ ಅಣೆಕಟ್ಟಿನ … Continued