ಭಾರತ-ಪಾಕಿಸ್ತಾನ ಪರಮಾಣು ಯುದ್ಧ ನಿಲ್ಲಿಸಲು ‘ಸಹಾಯ’ ಮಾಡಿದ್ದೇವೆ…ಕದನ ವಿರಾಮಕ್ಕೆ ‘ದೊಡ್ಡ ಕಾರಣ’ ವ್ಯಾಪಾರ ಎಂದ ಅಮೆರಿಕ ಅಧ್ಯಕ್ಷ ಟ್ರಂಪ್‌

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಉಂಟಾದ ಉದ್ವಿಗ್ನತೆಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಲು ಉಭಯ ರಾಷ್ಟ್ರಗಳು ಒಪ್ಪಿಕೊಂಡ ಕೆಲವು ದಿನಗಳ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಕದನ ವಿರಾಮಕ್ಕೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ ಕೀರ್ತಿಯನ್ನು ಪಡೆದುಕೊಂಡಿದ್ದಾರೆ. ಅಮೆರಿಕ-ಚೀನಾ ವ್ಯಾಪಾರ ಒಪ್ಪಂದವನ್ನು ಘೋಷಿಸುವ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಟ್ರಂಪ್, “ಶನಿವಾರ, ನನ್ನ ಆಡಳಿತವು … Continued

ವೀಡಿಯೊ…| ಪಿಒಕೆ ಹಿಂಪಡೆವ ಬಗ್ಗೆ ಮಾತ್ರ ಮಾತುಕತೆ, ಪರಮಾಣು ಬ್ಲ್ಯಾಕ್‌ ಮೇಲ್‌ ಸಹಿಸಲ್ಲ..ಪಾಕಿಸ್ತಾನದ ಹೃದಯಕ್ಕೆ ಹೊಡೆದಿದ್ದೇವೆ..ಮಿಲಿಟರಿ ಕ್ರಮ ಅಮಾನತು ಅಷ್ಟೆ ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ

ನವದೆಹಲಿ: ಭಾರತದ ಸೇನೆಯ ಆಪರೇಷನ್ ಸಿಂಧೂರ ಕುರಿತು ಸೋಮವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತ-ಪಾಕಿಸ್ತಾನ ಉದ್ವಿಗ್ನತೆಯ ಮಧ್ಯೆ ಯಾವುದೇ ರೀತಿಯ ಪರಮಾಣು ಬ್ಲ್ಯಾಕ್‌ ಮೇಲ್‌ ಅನ್ನು ಭಾರತ ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಭಯೋತ್ಪಾದನೆ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತಕ್ಕೆ ಮರಳಿಸುವ ಕುರಿತು ಮಾತ್ರ ಪಾಕಿಸ್ತಾನದ ಜೊತೆ ಮಾತುಕತೆ ನಡೆಸಲಾಗುವುದು … Continued

ವೀಡಿಯೊ..| ಭಾರತದ ಆಪರೇಶನ್‌ ಸಿಂಧೂರ ದಾಳಿ ನಂತ್ರ 2019ರ ʼಪುಲ್ವಾಮಾ ಭಯೋತ್ಪಾದಕ ದಾಳಿʼಯಲ್ಲಿ ತನ್ನ ಪಾತ್ರವಿದೆ ಎಂದು ಒಪ್ಪಿಕೊಂಡ ಪಾಕಿಸ್ತಾನ..!

ನವದೆಹಲಿ: 2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ 40 ಭಾರತೀಯ ಅರೆಸೈನಿಕ ಸಿಬ್ಬಂದಿ ಸಾವಿಗೀಡಾದ ಆತ್ಮಾಹುತಿ ದಾಳಿಯಲ್ಲಿ ಪಾಕಿಸ್ತಾನಿ ಸೇನೆಯ ಪಾತ್ರವಿದೆ ಎಂಬುದನ್ನು ಪಾಕಿಸ್ತಾನಿ ವಾಯುಪಡೆಯ ಉನ್ನತ ಅಧಿಕಾರಿಯೊಬ್ಬರು ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ. ಹಲವು ವರ್ಷಗಳಿಂದ ನಬಂದ ಪಾಕಿಸ್ತಾನವು ಈಗ ಅನಿರೀಕ್ಷಿತವಾಗಿ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ತಮ್ಮ ಕೈವಾಡವಿದೆ ಎಂಬುದನ್ನು ಒಪ್ಪಿಕೊಂಡಿದೆ. ಪತ್ರಿಕಾಗೋಷ್ಠಿಯಲ್ಲಿ, ಪಾಕಿಸ್ತಾನ ವಾಯುಪಡೆಯ ಸಾರ್ವಜನಿಕ … Continued

ಪಾಕ್‌ ಸರ್ಕಾರದ ಮಾತನ್ನೇ ಕೇಳುತ್ತಿಲ್ಲ ಸೇನೆ…! ಭಾರತದ ಜೊತೆ ಕದನ ವಿರಾಮ ಒಪ್ಪಂದ ತಿರಸ್ಕರಿಸಿದ ಪಾಕಿಸ್ತಾನಿ ಸೇನೆ ; ಮತ್ತೆ ದಾಳಿ…!

ನವದೆಹಲಿ: ಸೇನಾ ಕಾರ್ಯಾಚರಣೆಗಳನ್ನು ನಿಲ್ಲಿಸಲು ಭಾರತದ ಜೊತೆ ಒಪ್ಪಂದ ಮಾಡಿಕೊಂಡ ಕೆಲವೇ ಗಂಟೆಗಳ ನಂತರ, ಪಾಕಿಸ್ತಾನ ಸೇನೆಯು ನಿಯಂತ್ರಣ ರೇಖೆಯಾದ್ಯಂತ ಅಪ್ರಚೋದಿತ ಶೆಲ್ ದಾಳಿ ನಡೆಸಿದೆ ಮತ್ತು ಹಲವಾರು ಭಾರತೀಯ ಸ್ಥಳಗಳ ಮೇಲೆ ಡ್ರೋನ್‌ ಗಳಿಂದ ದಾಳಿ ನಡೆಸಿದೆ. ಕದನ ವಿರಾಮ ಒಪ್ಪಂದದ ನಂತರ ಶನಿವಾರ ಸಂಜೆ ಅದನ್ನು ಉಲ್ಲಂಘಿಸಿದ ಪಾಕಿಸ್ತಾನ ಜಮ್ಮುವಿನ ಅಂತಾರಾಷ್ಟ್ರೀಯ ಗಡಿಯಲ್ಲಿ … Continued

ತನ್ನ ಡ್ರೋನ್‌ಗಳ ಮೇಲೆ ಭಾರತದ ದಾಳಿಯಿಂದ ಪಾರಾಗಲು ಪ್ರಯಾಣಿಕ ವಿಮಾನಗಳನ್ನು ಬಳಸಿಕೊಂಡು ಪಾಕಿಸ್ತಾನ ಸೇನೆ…!

ನವದೆಹಲಿ : ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ರಾಜಸ್ಥಾನದಲ್ಲಿ ಹಿಂದಿನ ರಾತ್ರಿ ಮಿಲಿಟರಿ ಘಟಕಗಳ ಮೇಲೆ ಸರಣಿ ದಾಳಿ ನಡೆಸಿದಾಗ ಪಾಕಿಸ್ತಾನ ನಾಗರಿಕ ವಿಮಾನಗಳನ್ನು ಬಳಸಿಕೊಂಡಿದೆ ಎಂದು ಭಾರತ ಶುಕ್ರವಾರ ಹೇಳಿದೆ. ಭಾರತದ ಮೇಲೆ ದಾಳಿ ಮಾಡಿದ ನಂತರವೂ ನೆರೆಯ ದೇಶವು ತನ್ನ ವಾಯುಪ್ರದೇಶವನ್ನು ತೆರೆದಿಟ್ಟಿದೆ ಎಂದು ಅದು ಹೇಳಿದೆ. ಗುರುವಾರ ರಾತ್ರಿ (ಮೇ … Continued

ಪಾಕಿಸ್ತಾನಕ್ಕೆ ಐಎಂಎಫ್‌ನ ಬೇಲ್‌ಔಟ್ ಪ್ಯಾಕೇಜ್ ಮೇಲಿನ ಮತದಾನದಿಂದ ದೂರ ಉಳಿದ ಭಾರತ ; ಪಾಕಿಸ್ತಾನದ ‘ಕಳಪೆ ದಾಖಲೆ’ಯ ಉಲ್ಲೇಖ

ವಾಷಿಂಗ್ಟನ್: ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಪಾಕಿಸ್ತಾನಕ್ಕೆ ಪ್ರಸ್ತಾಪಿಸಿದ 1.3 ಶತಕೋಟಿ ಡಾಲರ್ ಬೇಲ್‌ಔಟ್ ಪ್ಯಾಕೇಜ್‌ನ ಮೇಲಿನ ಮತದಾನದಿಂದ ಭಾರತ ಶುಕ್ರವಾರ ದೂರ ಉಳಿದಿದೆ. ಭಾರತವು ಇಪಾಕಿಸ್ತಾನದ ‘ಕಳಪೆ ದಾಖಲೆ’ಯನ್ನು ಉಲ್ಲೇಖಿಸಿ, ಪಾಕಿಸ್ತಾನದ ವಿಷಯದಲ್ಲಿ ಐಎಂಎಫ್‌ (IMF) ಕಾರ್ಯಕ್ರಮಗಳ ಪರಿಣಾಮಕಾರಿತ್ವದ ಬಗ್ಗೆ ಕಳವಳ ವ್ಯಕ್ತಪಡಿಸಿತು. ಪಾಕಿಸ್ತಾನದ ಕಡೆಯಿಂದ ಸರ್ಕಾರಿ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಗೆ ಸಾಲ ಹಣಕಾಸು … Continued

ಟರ್ಕಿಶ್ ಡ್ರೋನ್‌ ಸೇರಿದಂತೆ ಪಾಕಿಸ್ತಾನದ 400 ಡ್ರೋನ್ ಗಳನ್ನು ಉಡೀಸ್ ಮಾಡಿದ ಭಾರತದ ಸೇನೆ…!

ನವದೆಹಲಿ: ಪಾಕಿಸ್ತಾನವು ಗುರುವಾರ ಸಂಜೆ ಭಾರತೀಯ ಮಿಲಿಟರಿ ನೆಲೆಗಳ ಮೇಲೆ ಅಪ್ರಚೋದಿತ ದಾಳಿ ನಡೆಸಲು ಟರ್ಕಿಶ್ ಡ್ರೋನ್‌ಗಳನ್ನು ಬಳಸಿದೆ ಮತ್ತು ಭಾರತೀಯ ವಾಯುಪಡೆಯು ಗಣನೀಯ ಸಂಯಮವನ್ನು ತೋರಿಸಿದೆ ಮತ್ತು ತನ್ನ ನಾಗರಿಕ ವಾಯುಪ್ರದೇಶವನ್ನು ರಕ್ಷಿಸಿದೆ ಎಂದು ವಿದೇಶಾಂಗ ಸಚಿವಾಲಯ (MEA) ಬಹಿರಂಗಪಡಿಸಿದೆ. ಸತತ ಮೂರನೇ ದಿನವೂ ವಿದೇಶಾಂಗ ಸಚಿವಾಲಯ (MEA)ದ ಬ್ರೀಫಿಂಗ್‌ನಲ್ಲಿ, ಕರ್ನಲ್ ಸೋಫಿಯಾ ಖುರೇಷಿ … Continued

ಪಾಕಿಸ್ತಾನ್ ಮುರ್ದಾಬಾದ್ ಎಂದ ಬಾಲಕನಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು…

ಶಹಜಹಾನಪುರ : ಪಾಕಿಸ್ತಾನದಲ್ಲಿನ ಭಯೋತ್ಪಾದಕ ಕೇಂದ್ರಗಳ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ ವೈಮಾನಿಕ ದಾಳಿಯ ನಂತರ, ಉತ್ತರ ಪ್ರದೇಶದ ಶಹಜಹಾನಪುರ ಜಿಲ್ಲೆಯ ಹಳ್ಳಿಯಲ್ಲಿ ನಡೆದ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರದ ಮೇಲೆ ಭಾರತ ನಡೆಸಿದ ವಾಯುದಾಳಿಯ ನಂತರ ಸಾರ್ವಜನಿಕರ ಸಂಭ್ರಮದ ವೇಳೆ ಎಂಟು ವರ್ಷದ … Continued

ಆಪರೇಷನ್ ಸಿಂಧೂರ | ಪಹಲ್ಗಾಮ್‌, ಪುಲ್ವಾಮಾ, ಪಠಾಣಕೋಟ್, ಮುಂಬೈ…ಅನೇಕ ಭಯೋತ್ಪಾದಕ ದಾಳಿಗಳಿಗೆ ಭಾರತ ಸೇಡು ತೀರಿಸಿಕೊಂಡಿದ್ದು ಹೇಗೆ..?

ನವದೆಹಲಿ: 26/11 ಮುಂಬೈ ದಾಳಿಯಿಂದ ಹಿಡಿದು 2024 ರ ಗುಲ್ಮಾರ್ಗ್ ದಾಳಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯವರೆಗಿನ ಪಾಕಿಸ್ತಾನದ ಭಯೋತ್ಪಾದಕ ತರಬೇತಿ ಸ್ಥಳಗಳನ್ನು ಭಾರತವು ಗುರಿಯಾಗಿಸಿ ದಾಳಿ ಮಾಡಿದೆ, ಈ ಸ್ಥಳಗಳಲ್ಲಿಯೇ ಹಲವಾರು ದಾಳಿಗಳನ್ನು ಯೋಜಿಸಲಾಗಿದೆ ಮತ್ತು ಕಾರ್ಯಗತಗೊಳಿಸಲಾಗಿದೆ ಎಂಬ ಮಾಹಿತಿ ಆದಾರದ ಮೇಲೆ ಈ ಸ್ಥಳಗಳ ಮೇಲೆ ಭಾರತದ ಸೈನ್ಯ ವಾಯು ದಾಳಿ ನಡೆಸಿದೆ. ಆಪರೇಷನ್ … Continued

ಪಾಕಿಸ್ತಾನ, ಪಾಕ್‌ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲಿನ ಕ್ಷಿಪಣಿ ದಾಳಿಗಳ ವೀಡಿಯೊ ಹಂಚಿಕೊಂಡ ಭಾರತೀಯ ಸೈನ್ಯ | ವೀಕ್ಷಿಸಿ

ನವದೆಹಲಿ: ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ಬುಧವಾರ ಬೆಳಗಿನ ಜಾವ ನಡೆಸಿದ ದಾಳಿಯ ವೀಡಿಯೊಗಳನ್ನು ಭಾರತೀಯ ಸೇನೆ ಬಿಡುಗಡೆ ಮಾಡಿದೆ. ಇದು ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್‌ನಂತಹ ಭಯೋತ್ಪಾದಕ ಗುಂಪುಗಳು ಭಯೋತ್ಪಾದಕರ ತರಬೇತಿಗೆ ಬಳಸುತ್ತಿದ್ದ ಸ್ಥಳಗಳ ಮೇಲೆ ನಿಖರವಾದ ದಾಳಿಗಳನ್ನು ನಡೆಸಿದೆ. ದಾಳಿಯ ನಂತರ, ಭಾರತೀಯ ಸೇನೆಯ ಅಧಿಕೃತ ಹ್ಯಾಂಡಲ್ … Continued