ಪಹಲ್ಗಾಮ್‌ ದಾಳಿ | ಭಾರತದ ರಾಜತಾಂತ್ರಿಕ ಯುದ್ಧ: ಪಾಕ್‌ ಗೆ ನೀರುಣಿಸುವ ʼಸಿಂಧೂ ಜಲ ಒಪ್ಪಂದʼ ರದ್ದು ; ಪಾಕ್ ಪ್ರಜೆಗಳಿಗೆ ದೇಶ ತೊರೆಯಲು ಸೂಚನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ತನಿಖೆಯಲ್ಲಿ “ಗಡಿಯಾಚೆಗಿನ ಸಂಪರ್ಕ” ದ ಬಗ್ಗೆ ರಾಷ್ಟ್ರೀಯ ಭದ್ರತೆಯ ಕುರಿತಾದ ದೇಶದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಭದ್ರತೆಯ ಕುರಿತಾದ ಸಂಪುಟ ಸಮಿತಿ (CCS) ಪಾಕಿಸ್ತಾನದ ವಿರುದ್ಧ ಕೆಲವು ಕಠಿಣ ಮತ್ತು ಶಿಕ್ಷಾರ್ಹ ಕ್ರಮಗಳನ್ನು ತೆಗೆದುಕೊಂಡಿದೆ. ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭೀಕರ ಭಯೋತ್ಪಾದಕ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದ ಉಗ್ರರ ಭೀಕರ ದಾಳಿಯಲ್ಲಿ ಮೂವರು ಕನ್ನಡಿಗರು ಸೇರಿದಂತೆ 28 ಮಂದಿ ಮೃತಪಟ್ಟಿದ್ದಾರೆ. ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಪ್ರಕಟಿಸಿದ್ದಾರೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ … Continued

ಪಹಲ್ಗಾಮ್‌ ಭಯೋತ್ಪಾದಕ ದಾಳಿ, 28 ಜನರು ಸಾವು ; ಹತ್ಯಾಕಾಂಡಕ್ಕೂ ಮೊದಲು ಪ್ರವಾಸಿಗರ ಧರ್ಮ ಪರಿಶೀಲಿಸಿ ನಂತರ ಕೊಂದರು…

ನವದೆಹಲಿ : ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಆಘಾತಕಾರಿ ವಿವರಗಳನ್ನು ಪ್ರತ್ಯಕ್ಷದರ್ಶಿಗಳು ನೀಡಿದ್ದಾರೆ. ಭಯೋತ್ಪಾದಕರು ಪ್ರವಾಸಿಗರ ಧರ್ಮವನ್ನು ಪರಿಶೀಲಿಸಿ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅವರು ಭದ್ರತಾ ಪಡೆಗಳಿಗೆ ತಿಳಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಹಲವಾರು ವರದಿಗಳು ಹೇಳಿವೆ. 26/11 ಮುಂಬೈನಲ್ಲಿ ನಡೆದ ನಂತರ ನಾಗರಿಕರ ಮೇಲೆ ನಡೆದ ಅತ್ಯಂತ … Continued

ಕಾಶ್ಮೀರ | ಅತ್ಯಂತ ಭೀಕರ ಭಯೋತ್ಪಾದಕ ದಾಳಿಯಲ್ಲಿ 28 ಮಂದಿ ಪ್ರವಾಸಿಗರು ಸಾವು ; ಸೌದಿಯಿಂದ ಪ್ರಧಾನಿ ಮೋದಿ ಭಾರತಕ್ಕೆ ವಾಪಸ್

ಕಾಶ್ಮೀರ : ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಪ್ರವಾಸಿಗರ ಗುಂಪಿನ ಮೇಲೆ ಲಷ್ಕರ್-ಎ-ತೈಬಾ (ಎಲ್‌ಇಟಿ) ಗೆ ಸಂಬಂಧಿಸಿದ ಭಯೋತ್ಪಾದಕರ ಗುಂಪೊಂದು ದಾಳಿ ನಡೆಸಿ 28 ಜನರನ್ನು ಕೊಂದು, ಹಲವರನ್ನು ಗಾಯಗೊಳಿಸಿದೆ ಹಾಗೂ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ ಇಬ್ಬರು ವಿದೇಶಿ ಪ್ರಜೆಗಳು ಸಹ ಮೃತಪಟ್ಟಿದ್ದಾರೆ.ಎಂದು ವರದಿಗಳು ತಿಳಿಸಿವೆ. ದಿ ರೆಸಿಸ್ಟೆನ್ಸ್ ಫ್ರಂಟ್ ಎಂಬ ಗುಂಪು ಸಾಮಾಜಿಕ … Continued