ಭಾರತದ ಸೇನಾ ದಾಳಿಯ ಭೀತಿ ; ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಎಲ್ಲ ವಿಮಾನ ರದ್ದುಗೊಳಿಸಿದ ಪಾಕಿಸ್ತಾನ : ವರದಿ

ನವದೆಹಲಿ: ಭಾರತೀಯ ಒಡೆತನದ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಎಲ್ಲಾ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಸ್ಥಗಿತಗೊಳಿಸಿದ ಕೆಲವು ದಿನಗಳ ನಂತರ, ಪಾಕಿಸ್ತಾನ ಬುಧವಾರ (ಏಪ್ರಿಲ್‌ 30) ಪಾಕ್ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಲ್ತಿಸ್ತಾನ್ ಪ್ರದೇಶಕ್ಕೆ ಹೋಗಲು ತನ್ನ ಸ್ವಂತ ವಿಮಾನಗಳನ್ನು ರದ್ದುಗೊಳಿಸಿದೆ…! ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾದ ನಂತರ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿ : ಭಾರತದಲ್ಲಿ 16 ಪಾಕಿಸ್ತಾನದ ಯೂಟ್ಯೂಬ್ ಚಾನೆಲ್‌ಗಳ ನಿಷೇಧ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು ಹರಡಿದ್ದಕ್ಕಾಗಿ ಒಟ್ಟು 6.3 ಕೋಟಿ ಚಂದಾದಾರರನ್ನು ಹೊಂದಿರುವ 16 ಪಾಕಿಸ್ತಾನಿ ಯೂಟ್ಯೂಬ್ (YouTube) ಚಾನೆಲ್‌ಗಳನ್ನು ಭಾರತದಲ್ಲಿ ನಿಷೇಧಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಸಚಿವಾಲಯದ ಶಿಫಾರಸುಗಳ ಮೇರೆಗೆ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಲಾಗಿದೆ. ನಿಷೇಧಿತ ವೇದಿಕೆಗಳಲ್ಲಿ ಡಾನ್, ಸಮಾ ಟಿವಿ, … Continued

ಭಾರತದಿಂದ ಹೊರಹೋಗದ ಪಾಕಿಸ್ತಾನಿ ಪ್ರಜೆಗಳಿಗೆ 3 ವರ್ಷ ಜೈಲು ಶಿಕ್ಷೆ, 3 ಲಕ್ಷ ರೂ. ದಂಡ

ನವದೆಹಲಿ: ಸರ್ಕಾರ ನಿಗದಿಪಡಿಸಿದ ಗಡುವಿನ ಪ್ರಕಾರ ಭಾರತವನ್ನು ತೊರೆಯಲು ವಿಫಲರಾದ ಯಾವುದೇ ಪಾಕಿಸ್ತಾನಿ ವ್ಯಕ್ತಿಯನ್ನು ಬಂಧಿಸಲಾಗುತ್ತದೆ, ವಿಚಾರಣೆಗೆ ಒಳಪಡಿಸಲಾಗುತ್ತದೆ ಮತ್ತು ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ಗರಿಷ್ಠ 3 ಲಕ್ಷ ರೂ. ದಂಡ ಅಥವಾ ಎರಡನ್ನೂ ಎದುರಿಸಬೇಕಾಗುತ್ತದೆ ಎಂದು ತಿಳಿಸಲಾಗಿದೆ. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕಿಸ್ತಾನದ ಜೊತೆ ಸಂಬಂಧ … Continued

“ಅಲ್ಲಿ ಯಾರೂ ಇಲ್ಲ”..: 35 ವರ್ಷಗಳಿಂದ ಭಾರತದಲ್ಲಿ ವಾಸಿಸುತ್ತಿರುವ ಪಾಕ್ ಮಹಿಳೆಗೆ ವಾಪಸ್ ಹೋಗಲು ಸೂಚನೆ ; ಆಕೆಯ ಗಂಡ, ಮಕ್ಕಳು ಭಾರತದ ಪ್ರಜೆಗಳು…!

ನವದೆಹಲಿ: 35 ವರ್ಷಗಳಿಗೂ ಹೆಚ್ಚು ಕಾಲ ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆ ಶಾರದಾ ಬಾಯಿ ಅವರಿಗೆ ಒಡಿಶಾ ಪೊಲೀಸರು ತಕ್ಷಣ ಭಾರತ ಬಿಟ್ಟು ಹೋಗುವಂತೆ ಸೂಚಿಸಿದ್ದಾರೆ. ಪಹಲ್ಗಾಮ್ ಹತ್ಯಾಕಾಂಡದ ನಂತರ ಪಾಕಿಸ್ತಾನದ ವಿರುದ್ಧ ತೆಗೆದುಕೊಂಡ ಕ್ರಮಗಳ ಸರಣಿಯ ಭಾಗವಾಗಿ ಪೊಲೀಸ್ ಕ್ರಮ ಕೈಗೊಳ್ಳಲಾಗಿದೆ. ಶಾರದಾ ಬಾಯಿ ಅವರ ವೀಸಾವನ್ನು ರದ್ದುಗೊಳಿಸಲಾಗಿದೆ ಮತ್ತು ಅವರಿಗೆ ತಕ್ಷಣವೇ ಪಾಕಿಸ್ತಾನಕ್ಕೆ … Continued

ಪಹಲ್ಗಾಮ್‌ ದಾಳಿ; ಸೇನೆಯ ಸಿಡಿಎಸ್‌ ಜೊತೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮಹತ್ವದ ಮಾತುಕತೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಭಾನುವಾರ (ಏ. 27) ಭಾರತೀಯ ಸೇನೆಯ ಚೀಫ್‌ ಆಫ್‌ ಜನರಲ್ ಸ್ಟಾಫ್ (CDS) ಜನರಲ್ ಅನಿಲ್ ಚೌಹಾಣ ಅವರೊಂದಿಗೆ ಸಭೆ ನಡೆಸಿದರು. ಏ. 22ರಂದು ಪಾಕಿಸ್ತಾನದ ಉಗ್ರರು … Continued

ಭಾರತದ ಜೊತೆ ವ್ಯಾಪಾರ ಸ್ಥಗಿತ : ನೀರಿನ ನಂತರ ಈಗ ಔಷಧಕ್ಕಾಗಿ ಹೆಣಗಾಡುತ್ತಿರುವ ಪಾಕಿಸ್ತಾನ…!

ಇಸ್ಲಾಮಾಬಾದ್ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದೊಂದಿಗಿನ ವ್ಯಾಪಾರ ಸಂಬಂಧಗಳನ್ನು ಸ್ಥಗಿತಗೊಳಿಸಿದ ನಂತರ, ಪಾಕಿಸ್ತಾನ ಈಗ ತುರ್ತು ಅಗತ್ಯದ ಔಷಧದ ಕೊರತೆಯ ಸವಾಲುಗಳನ್ನು ಎದುರಿಸಬೇಕಾಗಿದೆ. ಯಾಕೆಂದರೆ ಪಾಕಿಸ್ತಾನವು ಭಾರತದ ಔಷಧದ ಪೂರೈಕೆಯನ್ನು ಹೆಚ್ಚು ಅವಲಂಬಿಸಿದೆ. ಹೀಗಾಗಿ ಪಾಕಿಸ್ತಾನದ ಆರೋಗ್ಯ ಅಧಿಕಾರಿಗಳು ಪರ್ಯಾಯ ಮೂಲಗಳಿಂದ ಔಷಧ ಸರಬರಾಜುಗಳನ್ನು ಪಡೆಯಲು ತುರ್ತು ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ. ಈ ಮಧ್ಯೆ … Continued

ಪಹಲ್ಗಾಮ್‌ ದಾಳಿ: ತಮ್ಮ ಪ್ರಾಣ ಪಣಕ್ಕಿಟ್ಟು ಭಯೋತ್ಪಾದಕರಿಂದ ಪ್ರವಾಸಿಗರನ್ನು ಕಾಪಾಡಿದ ಕುದರೆ ಸವಾರಿ ನಿರ್ವಾಹಕರು, ಸ್ಥಳೀಯರು…

ನವದೆಹಲಿ: ನವದೆಹಲಿ: ತನ್ನ ತಾಯ್ನಾಡಿಗೆ ಭೇಟಿ ನೀಡುವವರನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಪೋನಿವಾಲಾ (ಕುದುರೆ ರೈಡರ್), 11 ಜನರ ಕುಟುಂಬವನ್ನು ರಕ್ಷಿಸಿದ ಟೂರಿಸ್ಟ್‌ ಗೈಡ್‌, ಅಸಂಖ್ಯಾತ ಸ್ಥಳೀಯರು ಮಂಗಳವಾರ ಮಧ್ಯಾಹ್ನ ಪಹಲ್ಗಾಮ್ನಲ್ಲಿ ಭಯೋತ್ಪಾದನೆ ಸಂಭವಿಸಿದಾಗ ಪ್ರವಾಸಿಗರ ನೆರವಿಗೆ ಧಾವಿಸಿ ಕಾಶ್ಮೀರದ ಆತಿಥ್ಯಕ್ಕೆ ಮತ್ತೊಂದು ಆಯಾಮವನ್ನು ತಂದುಕೊಟ್ಟವರಲ್ಲಿ ಸೇರಿದ್ದಾರೆ. .2019 ರಲ್ಲಿ ಪುಲ್ವಾಮಾ ದಾಳಿಯ ನಂತರ … Continued

ವೀಡಿಯೊ..| ಭಯೋತ್ಪಾದಕರಿಗೆ, ಹಿಂದಿದ್ದವರಿಗೆ ಭಾರತದ ಖಡಕ್‌ ವಾರ್ನಿಂಗ್‌ ಜಗತ್ತಿಗೆ ಗೊತ್ತಾಗಲೆಂದು ಇಂಗ್ಲಿಷಿಗೆ ಭಾಷಣ ಬದಲಾಯಿಸಿದ ಪ್ರಧಾನಿ ಮೋದಿ

ನವದೆಹಲಿ: ಪಹಲ್ಗಾಮ್ ದಾಳಿಕೋರರಿಗೆ ಪ್ರಧಾನಿ ಮೋದಿ ಖಡಕ್‌ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟದ ಬಲವಾದ ಸಂದೇಶವನ್ನು ಸಾರ್ವಜನಿಕ ವೇದಿಕೆಯಿಂದ ಇಡೀ ಜಗತ್ತಿಗೆ ರವಾನಿಸಲು ಹಿಂದಿಯಲ್ಲಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಇಂಗ್ಲಿಷ್‌ಗೆ ಬದಲಾಯಿಸಿಕೊಂಡರು. “ಬಿಹಾರದ ಮಣ್ಣಿನಿಂದ, ನಾನು … Continued

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮನಕಲಕುವ ವೀಡಿಯೊ : ಉಗ್ರರು ಪ್ರವಾಸಿಗರ ಹತ್ತಿರ ಹೋಗಿ ಗುಂಡು ಹಾರಿಸಿದರು…

ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ಕ್ಷಣವನ್ನು ತೋರಿಸುವ ಮನಕಲಕುವ ದೃಶ್ಯಗಳು ಹೊರಬಂದಿವೆ. ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಹುಲ್ಲುಗಾವಲಿನಲ್ಲಿ ರಜಾದಿನಗಳನ್ನು ಆನಂದಿಸುತ್ತಿದ್ದ 26 ಅಮಾಯಕ ಪ್ರವಾಸಿಗರನ್ನು ಕೊಂದರು. ಈಗ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡು ಹಾರಿಸಿದ ಆಘಾತಕಾರಿ ಕ್ಷಣದ ವೀಡಿಯೊ ಹೊರಬಿದ್ದಿದೆ. ಈ ವೀಡಿಯೊದಲ್ಲಿ, ಗುಲ್ಮಾರ್ಗ್‌ನ … Continued

ಪಹಲ್ಗಾಮ್‌ ದಾಳಿಯ ನಂತರ ʼಸಿಂಧೂ ನದಿ ನೀರು ಒಪ್ಪಂದʼ ಸ್ಥಗಿತಗೊಳಿಸಿದ ಭಾರತ ; ಇದರಿಂದ ಪಾಕಿಸ್ತಾನಕ್ಕೆ ಆಗುವ ತೊಂದರೆ ಏನು..?

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ದಿಟ್ಟ ರಾಜತಾಂತ್ರಿಕ ದಾಳಿಯಲ್ಲಿ, ಭದ್ರತೆ ಕುರಿತ ಕ್ಯಾಬಿನೆಟ್ ಸಮಿತಿ (CCS) 1960 ರ ಸಿಂಧೂ ಜಲ ಒಪ್ಪಂದವನ್ನು (IWT) ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಭದ್ರತೆಯ … Continued