ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣ : ಎಲ್‌ಇಟಿ ಉಗ್ರ ಹಫೀಜ್ ಸಯೀದ್ ವಿರುದ್ಧ ಜಾಮೀನು ರಹಿತ ವಾರಂಟ್

ನವದೆಹಲಿ: ಜಮ್ಮುವಿನ ಎನ್‌ಐಎ ವಿಶೇಷ ನ್ಯಾಯಾಲಯವು ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ (ಎಲ್‌ಇಟಿ) ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ವಿರುದ್ಧ ಜಾಮೀನು ರಹಿತ ವಾರಂಟ್ (ಎನ್‌ಬಿಡಬ್ಲ್ಯು) ಹೊರಡಿಸಿದೆ. ಪಹಲ್ಗಾಮ್ ಉಗ್ರ ದಾಳಿಯ ತನಿಖೆಗೆ ಸಂಬಂಧಿಸಿದ ಪೂರಕ ಆರೋಪಪಟ್ಟಿಯಲ್ಲಿ (Supplementary Chargesheet) ಹಫೀಜ್ ಸಯೀದ್ ನನ್ನು ಎನ್‌ಐಎ ಹೆಸರಿಸಿದ್ದು, … Continued

ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?

ಶ್ರೀನಗರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಹತ್ಯಾಕಾಂಡ (ಏಪ್ರಿಲ್ 22, 2025) ನಡೆದು ಇಂದಿಗೆ  ಒಂದು ವರ್ಷ. 26 ಅಮಾಯಕರ ಜೀವ ಬಲಿಪಡೆದ ಈ ದಾಳಿಯ ತನಿಖೆಯು ಈಗ ಕೇವಲ ಸ್ಥಳೀಯ ಕಾರ್ಯಾಚರಣೆಯಾಗಿ ಉಳಿದಿಲ್ಲ; ಬದಲಿಗೆ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಯಲಿಗೆಳೆದಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನೇತೃತ್ವದಲ್ಲಿ ನಡೆದ ಈ ತನಿಖೆಯು … Continued

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದವರು ಹೇಗೆ ಬಹಿರಂಗವಾಯ್ತು..? ಹತ ಭಯೋತ್ಪಾದಕರ ಬಳಿ ಸಿಕ್ಕ ಯಾವ ದಾಖಲೆಗಳು ಇದನ್ನು ಪುಷ್ಟೀಕರಿಸಿವೆ..?

ನವದೆಹಲಿ: ಜುಲೈ 28 ರಂದು ನಡೆದ ಆಪರೇಷನ್ ಮಹಾದೇವ ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ ಮೂವರು ಭಯೋತ್ಪಾದಕರು ಪಾಕಿಸ್ತಾನಿ ಪ್ರಜೆಗಳು ಎಂದು ಭದ್ರತಾ ಸಂಸ್ಥೆಗಳು ದೃಢಪಡಿಸಿವೆ. ಬಯೋಮೆಟ್ರಿಕ್ ಪುರಾವೆಗಳು ಮತ್ತು ಪಾಕಿಸ್ತಾನ ಸರ್ಕಾರ ನೀಡಿದ ದಾಖಲೆಗಳನ್ನು ಉಲ್ಲೇಖಿಸಿ, ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಭಯೋತ್ಪಾದಕ ಸಂಘಟನೆಯ ಹಿರಿಯ ಸದಸ್ಯರೆಂದು ಗುರುತಿಸಲ್ಪಟ್ಟ ಹತ್ಯೆಗೀಡಾದ ವ್ಯಕ್ತಿಗಳನ್ನು ಶ್ರೀನಗರದ ಹೊರವಲಯದಲ್ಲಿರುವ ‘ಆಪರೇಷನ್ ಮಹಾದೇವ’ ಸಮಯದಲ್ಲಿ ಕೊಲ್ಲಲಾಯಿತು. … Continued

ಪಹಲ್ಗಾಮ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ | ದಾಳಿಯಲ್ಲಿ ಭಾಗಿಯಾಗಿದ್ದ ಪಾಕ್ ಎಲ್‌ಇಟಿ ಭಯೋತ್ಪಾದಕರಿಗೆ ಆಶ್ರಯ : ಇಬ್ಬರ ಬಂಧನ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣದ ಪ್ರಮುಖ ಬೆಳವಣಿಗೆಯಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯು 26 ಪ್ರವಾಸಿಗರನ್ನು ಕೊಂದುಹಾಕಿದ ಮತ್ತು 16 ಜನರನ್ನು ತೀವ್ರವಾಗಿ ಗಾಯಗೊಳಿಸಿದ ಕ್ರೂರ ಪಹಲ್ಗಾಮ್‌ ದಾಳಿಗೆ ಕಾರಣರಾದ ಲಷ್ಕರ್-ಎ-ತೊಯ್ಬಾ (LeT) ಭಯೋತ್ಪಾದಕರಿಗೆ ಆಶ್ರಯ ನೀಡಿದ್ದಕ್ಕಾಗಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ 26 ಅಮಾಯಕ ಭಾರತೀಯರ … Continued

ಆಪರೇಶನ್‌ ಸಿಂಧೂರ : ಪಾಕಿಸ್ತಾನದ ವಾಯುನೆಲೆಗಳ ಮೇಲಿನ ದಾಳಿಯಲ್ಲಿ 20% ಮೂಲಸೌಕರ್ಯ; ಹಲವಾರು ಯುದ್ಧ ವಿಮಾನಗಳು ನಾಶ…!

ನವದೆಹಲಿ: ಮೇ 10 ರಂದು ಪಾಕಿಸ್ತಾನದ 11 ವಾಯುನೆಲೆಗಳ ಮೇಲೆ ಭಾರತ ನಡೆಸಿದ ದಾಳಿಯಲ್ಲಿ ಅದರ ವಾಯುಪಡೆಯ ಮೂಲಸೌಲಭ್ಯಗಳಲ್ಲಿ ಶೇಕಡಾ 20 ರಷ್ಟು ನಾಶವಾಗಿದೆ ಮತ್ತು ಸ್ಕ್ವಾಡ್ರನ್ ಲೀಡರ್‌ ಸೇರಿದಂತೆ 50 ಕ್ಕೂ ಹೆಚ್ಚು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ ಎಂದು ಸರ್ಕಾರದ ಉನ್ನತ ಮೂಲಗಳನ್ನು ಉಲ್ಲೇಖಿಸಿದ ಕೆಲವು ವರದಿಗಳು ತಿಳಿಸಿವೆ. ಈ ದಾಳಿಯು ಪಾಕಿಸ್ತಾನದ ಪ್ರಮುಖ ಶಸ್ತ್ರಾಸ್ತ್ರ … Continued

ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆ ನಂತರ ಬ್ರಹ್ಮೋಸ್ ಕ್ಷಿಪಣಿಗೆ ಬಂತು ಭಾರೀ ಬೇಡಿಕೆ ; ಖರೀದಿಸಲು 17 ದೇಶಗಳು ಕ್ಯೂನಲ್ಲಿ…!

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವನ್ನು ತಲುಪಿಸಲು   ಆಪರೇಷನ್ ಸಿಂಧೂರ ಸೈನ್ಯ ಕಾರ್ಯಾಚರಣೆ ನಡೆಸಲಾಗಿದ್ದು, ಇದರಲ್ಲಿ ಸೂಪರ್‌ಸಾನಿಕ್‌ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿ ಪ್ರಮುಖ ಪಾತ್ರ ವಹಿಸಿತು. ಇದರ ಯಶಸ್ವಿ ಬಳಕೆಯು ಭಾರತದ ನಿಖರ-ದಾಳಿ ಸಾಮರ್ಥ್ಯಗಳನ್ನು ಎತ್ತಿ ತೋರಿಸಿತು ಮತ್ತು ಪಾಕಿಸ್ತಾನ ಮತ್ತು ಅದರಲ್ಲಿ ಒಳಗೊಂಡಿರುವ ಭಯೋತ್ಪಾದಕ ಜಾಲಗಳಿಗೆ ಬಲವಾದ ಪೆಟ್ಟುಕೊಟ್ಟಿತು. ಈಗ … Continued

ಆಪರೇಷನ್ ಸಿಂಧೂರ | ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಮಿಲಿಟರಿ ಸಂಘರ್ಷದ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಇಂದು ಸೋಮವಾರ (ಮೇ 12) ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಭೂಮಿ, ವಾಯು ಮತ್ತು ಸಮುದ್ರದಾದ್ಯಂತ ಎಲ್ಲಾ ಮಿಲಿಟರಿ ದಾಳಿಗಳನ್ನು ನಿಲ್ಲಿಸಲು ಎರಡೂ ದೇಶಗಳು ಪರಸ್ಪರ ಒಪ್ಪಂದಕ್ಕೆ ಬಂದ ಕೆಲವೇ ದಿನಗಳ ನಂತರ ಅವರು … Continued

“ಪ್ರತಿಯೊಂದು ದುಸ್ಸಾಹಸವೂ…ಯಾವುದೇ ಭಯೋತ್ಪಾದಕ ಕೃತ್ಯವೂ…”: ಕದನ ವಿರಾಮ ಘೋಷಣೆ ನಂತ್ರ ಪಾಕಿಸ್ತಾನಕ್ಕೆ ಗಂಭೀರ ಎಚ್ಚರಿಕೆ ನೀಡಿದ ಭಾರತ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಒಪ್ಪಿಕೊಂಡಿರುವ ಕದನ ವಿರಾಮಕ್ಕೆ ಬದ್ಧವಾಗಿರಬೇಕು. ಆದರೆ ಭಾರತ “ಸಂಪೂರ್ಣವಾಗಿ ಸಿದ್ಧವಾಗಿದೆ” ಮತ್ತು “ಸದಾ ಜಾಗರೂಕವಾಗಿದೆ. ಮತ್ತು ಪಾಕಿಸ್ತಾನದಿಂದ ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುವುದು ಎಂದು ಭಾರತ ಎಚ್ಚರಿಸಿದೆ ಮತ್ತು ಅದಕ್ಕೆ ತಕ್ಕ ಉತ್ತರ ನೀಡುವುದಾಗಿ ಸ್ಪಷ್ಟವಾಗಿ ತಿಳಿಸಿದೆ. ಭಾರತ ಕದನ ವಿರಾಮ ನಿರ್ಧಾರವನ್ನು ಘೋಷಿಸಿದ … Continued

ವೀಡಿಯೊ…| ಭಯೋತ್ಪಾದಕ ದಾಳಿಯ ನಂತರ ತಲ್ಲಣಗೊಂಡ ಪಹಲ್ಗಾಮ್ ಮಾರುಕಟ್ಟೆಯ ಹೊಸ ಸಿಸಿಟಿವಿ ದೃಶ್ಯ ವೈರಲ್‌…

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬೈಸರನ್ ಕಣಿವೆಯ ಸುಂದರವಾದ ಪಹಲ್ಗಾಮ್ ಹುಲ್ಲುಗಾವಲಿನಿಂದ ಇಳಿಜಾರಿನಲ್ಲಿರುವ ಮಾರುಕಟ್ಟೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಭಯೋತ್ಪಾದಕ ದಾಳಿ ಪ್ರಾರಂಭವಾದ ಒಂದು ಗಂಟೆಯ ನಂತರ, ಮಕ್ಕಳು ಸೇರಿದಂತೆ ಕೆಲ ಪ್ರವಾಸಿಗರು ಓಡುತ್ತಿರುವುದನ್ನು ಮತ್ತು ವಾಹನಗಳು ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿರುವುದು ಕಂಡುಬಂದಿದೆ. ದೃಶ್ಯಗಳ ಸಮಯ ಏಪ್ರಿಲ್ 22 ರಂದು ಸಮಯಕ್ಕೆ ಹೊಂದಿಕೆಯಾಗುತ್ತದೆ, ಅಂದರೆ ಗಡಿಯಾಚೆಗಿನ ಸಂಪರ್ಕ … Continued

ಅದು ನಮ್ಮ ಅಭಿಪ್ರಾಯವಲ್ಲ…’: ಪಹಲ್ಗಾಮ್ ದಾಳಿಯ ಬಗ್ಗೆ ತನ್ನ ಕೆಲ ನಾಯಕರ ಹೇಳಿಕೆಗಳ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಕಾಂಗ್ರೆಸ್ ನಾಯಕರು ವ್ಯಕ್ತಪಡಿಸಿದ ಭಿನ್ನ ಹೇಳಿಕೆಗಳ ನಡುವೆ, ಸೋಮವಾರ, ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯಲ್ಲಿ ವಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಅಧಿಕೃತ ಎಐಸಿಸಿ ಪದಾಧಿಕಾರಿಗಳ ಅಭಿಪ್ರಾಯಗಳು ಮಾತ್ರ ಪಕ್ಷದ ಅಧಿಕೃತ ನಿಲುವನ್ನು ಪ್ರತಿನಿಧಿಸುತ್ತವೆ ಎಂದು ಪಕ್ಷ ಹೇಳಿದೆ. “ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಏಪ್ರಿಲ್ 24ರಂದು … Continued