ಅಮೆರಿಕ ಅಧ್ಯಕ್ಷ ಟ್ರಂಪ್ ಹೆಸರನ್ನು ನೊಬೆಲ್ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ ಪಾಕಿಸ್ತಾನ…!

2025 ರ ಭಾರತ-ಪಾಕಿಸ್ತಾನ ಸಂಘರ್ಷದ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ “ನಿರ್ಣಾಯಕ ರಾಜತಾಂತ್ರಿಕ ತೊಡಗಿಕೊಳ್ಳುವಿಕೆ ಮತ್ತು ನಾಯಕತ್ವ”ವನ್ನು ಗುರುತಿಸಿ ಪಾಕಿಸ್ತಾನ ಸರ್ಕಾರ ಅಧಿಕೃತವಾಗಿ ಅವರನ್ನು 2026 ರ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದೆ. ಎರಡು ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರಗಳ ನಡುವಿನ ಸಂಭಾವ್ಯ ವಿನಾಶಕಾರಿ ಸಂಘರ್ಷವನ್ನು ತಪ್ಪಿಸುವಲ್ಲಿ ಟ್ರಂಪ್ ಅವರ ಮಧ್ಯಸ್ಥಿಕೆಗೆ ಪಾಕಿಸ್ತಾನ … Continued

ವೀಡಿಯೊ…| ತನ್ನ ವಾಯುನೆಲೆಗಳ ಮೇಲೆ ಭಾರತ ದಾಳಿ ನಡೆಸಿದ್ದನ್ನು ಕೊನೆಗೂ ಬಹಿರಂಗವಾಗಿ ಒಪ್ಪಿಕೊಂಡ ಪಾಕಿಸ್ತಾನ…!

ನವದೆಹಲಿ: ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆ ವೇಳೆ ಭಾರತವು ತನ್ನ ಪ್ರಮುಖ ವಾಯುನೆಲೆಗಳ ಮೇಲಿನ ದಾಳಿ ನಡೆಸಿದೆ ಎಂದು ಪಾಕಿಸ್ತಾನವು ಮತ್ತೊಮ್ಮೆ ಬಹಿರಂಗವಾಗಿ ಒಪ್ಪಿಕೊಂಡಿದೆ. ಭಾರತವು ಅಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಸಿದ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ದೇಶದ ಗಮನಾರ್ಹ ವಾಯು ನೆಲೆಗಳು ಹಾನಿಗೊಳಗಾಗಿವೆ ಎಂದು ಪಾಕಿಸ್ತಾನ ದೃಢಪಡಿಸಿದೆ. ಪಾಕಿಸ್ತಾನದ ಉಪ ಪ್ರಧಾನಿ … Continued

ವೀಡಿಯೊಗಳು | ‘ನಿಮಗೆ ನಾಚಿಕೆಯಾಗಬೇಕು, ಸಾಮೂಹಿಕ ಕೊಲೆಗಾರ’: ವಾಷಿಂಗ್ಟನ್‌ನಲ್ಲಿ ಅಸಿಮ್ ಮುನೀರ್ ಗೆ ಪ್ರತಿಭಟನೆಯ ಬಿಸಿ-ವೀಕ್ಷಿಸಿ

ಪಾಕಿಸ್ತಾನಿ ಜನರಲ್ ಸೈಯದ್ ಅಸಿಮ್ ಮುನೀರ್ ವಾಷಿಂಗ್ಟನ್‌ನಲ್ಲಿದ್ದಾಗ ಅವರನ್ನು ನಿಂದಿಸಲಾಯಿತು. ಕೆಲವು ಪಾಕಿಸ್ತಾನಿ ಪ್ರತಿಭಟನಾಕಾರರು ಮತ್ತು ಪಾಕಿಸ್ತಾನಿ ಮೂಲದ ಜನರು ಮುನೀರ್ ಅವರ ಹೋಟೆಲ್ ಹೊರಗೆ ಜಮಾಯಿಸಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಮುನೀರ್ ಹೋಟೆಲ್‌ನಿಂದ ಹೊರಬರುವಾಗ ಪ್ರತಿಭಟನಾಕಾರರು – “ಪಾಕಿಸ್ತಾನಿಯೋಂ ಕೆ ಕಾತಿಲ್,” “ನೀವು ಹೇಡಿ,” ಮತ್ತು “ನಿಮಗೆ ನಾಚಿಕೆಯಾಗಬೇಕು” – ಎಂಬ ಘೋಷಣೆಗಳನ್ನು … Continued

ವೀಡಿಯೊ | ನಾವು ಭಾರತದ ಐಪಿಎಲ್ ಫ್ಲಡ್‌ಲೈಟ್‌ ಆಫ್‌ ಮಾಡಿದ್ದೇವೆ : ವಿಚಿತ್ರ ಹೇಳಿಕೆಯಿಂದ ನಗೆಪಾಟಲಿಗೀಡಾದ ಪಾಕ್ ರಕ್ಷಣಾ ಸಚಿವ-ವೀಕ್ಷಿಸಿ

ನವದೆಹಲಿ: ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರು ತಮ್ಮ ವಿಲಕ್ಷಣ ಹೇಳಿಕೆಗಳಿಂದ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಈ ಬಾರಿ “ಐಪಿಎಲ್ ಫ್ಲಡ್‌ಲೈಟ್‌ಗಳನ್ನು ಪಾಕಿಸ್ತಾನದವರು ಹ್ಯಾಕಿಂಗ್ ಮಾಡಿದ್ದರು” ಎಂದು ಹೇಳುವ ಮೂಲಕ ಮತ್ತೊಮ್ಮೆ ನಗೆಪಾಟಲಿಗೀಡಾಗಿದ್ದಾರೆ. ಪಾಕಿಸ್ತಾನದ ಸಂಸತ್ತಿನಲ್ಲಿ ಮಾತನಾಡಿದ ಖವಾಜಾ ಆಸಿಫ್ ಅವರು , ತಮ್ಮ ದೇಶದ “ಸೈಬರ್ ವಾರಿಯರ್ಸ್” ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದ … Continued

ವೀಡಿಯೊ…| ಟಿವಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಪಾಕಿಸ್ತಾನಕ್ಕೆ ಭಯೋತ್ಪಾದನೆ ಜೊತೆ ನಂಟಿತ್ತು ಎಂಬುದನ್ನು ಒಪ್ಪಿಕೊಂಡ ಪಾಕ್‌ ಸೆನೆಟರ್ ಶೆರ್ರಿ ರೆಹಮಾನ್

ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಉಪಾಧ್ಯಕ್ಷೆ ಶೆರ್ರಿ ರೆಹಮಾನ್ ಅವರು ಅಲ್-ಖೈದಾಗೆ ಸಂಬಂಧಿಸಿದ ಬ್ರಿಗೇಡ್ 313 ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುವಾಗ ಪಾಕಿಸ್ತಾನದ ಭೂತಕಾಲವು ಭಯೋತ್ಪಾದನೆ ಜೊತೆ ನಂಟು ಇತ್ತು ಎಂಬುದನ್ನು ಒಪ್ಪಿಕೊಂಡಿದ್ದಾರೆ. . “ನೀವು ಭೂತಕಾಲದ ಬಗ್ಗೆ ಮಾತನಾಡುತ್ತಲೇ ಇರುತ್ತೀರಿ ಏಕೆಂದರೆ ಅದು ಹಾಗೆ ಇತ್ತು” ಎಂದು ಅವರು ಸ್ಕೈ ನ್ಯೂಸ್ ಪತ್ರಕರ್ತೆ ಯಾಲ್ಡಾ ಹಕೀಮ್ … Continued

ಭಾರತದ ವಾಯುನೆಲೆ ಹೊಡೆದಿದ್ದೇವೆ ಎಂದ ಪಾಕಿಸ್ತಾನದ ಹಸಿ ಸುಳ್ಳು ಬಯಲಿಗೆ …! ಅದು ನಕಲಿ ಉಪಗ್ರಹ ಚಿತ್ರ, ಕಟ್ಟು ಕಥೆ ಎಂದ ಡೇಮಿಯನ್ ಸೈಮನ್

ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯಡಿ ಪಾಕಿಸ್ತಾನ ವಾಯು ನೆಲೆಗಳ ಮೇಲೆ ಭಾರತದ ನಿಖರವಾದ ದಾಳಿ ನಡೆಸಿದ ನಂತರ ಪಾಕಿಸ್ತಾನ ನಕಲಿ ಉಪಗ್ರಹ ಚಿತ್ರಗಳು, ಫೋಟೋಗಳನ್ನು ಹಂಚಿಕೊಂಡು ಭಾರತದ ಮೇಲೆ ದಾಳಿ ನಡೆಸಿದ್ದೇವೆ ಎಂದು ತಪ್ಪು ಮಾಹಿತಿ ನೀಡುತ್ತಿರುವುದು ಈಗ ಬಯಲಾಗಿದೆ. ಪಂಜಾಬ್‌ನ … Continued

ಪಾಕಿಸ್ತಾನದಲ್ಲಿ ಜಲ ಬಿಕ್ಕಟ್ಟು | ಸಿಂಧೂ ಜಲ ಒಪ್ಪಂದ ಅಮಾನತು ಬೇಡ ; ಭಾರತಕ್ಕೆ 4 ಪತ್ರ ಬರೆದ ಪಾಕಿಸ್ತಾನ…!

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾದ ನಂತರ ಸಿಂಧೂ ಜಲ ಒಪ್ಪಂದವನ್ನು (ಐಡಬ್ಲ್ಯೂಟಿ) ಸ್ಥಗಿತಗೊಳಿಸಿದ ನಿರ್ಧಾರವನ್ನು ಭಾರತವು ಮರುಪರಿಶೀಲಿಸಬೇಕು ಎಂದು ಕೋರಿ ಪಾಕಿಸ್ತಾನವು ಒಂದರ ನಂತರ ಒಂದರಂತೆ ನಾಲ್ಕು ಪತ್ರಗಳನ್ನು ಬರೆದಿದೆ ಎಂದು ವರದಿಯಾಗಿದೆ. ಪಾಕಿಸ್ತಾನವು ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿದೆ ಮತ್ತು ಹತಾಶವಾಗಿರುವಂತೆ ತೋರುತ್ತಿದೆ ಎಂದು ಈ … Continued

ಆಪರೇಶನ್‌ ಸಿಂಧೂರ | 30 ಕ್ಷಿಪಣಿಗಳು, 6 ಯುದ್ಧ ವಿಮಾನಗಳು, 2 ಎಡಬ್ಲ್ಯುಎಸಿಎಸ್‌ ವಿಮಾನ, ಹಲವು ಮಾನವ ರಹಿತ ವೈಮಾನಿಕ ವಾಹನ ಕಳೆದುಕೊಂಡ ಪಾಕಿಸ್ತಾನ ; ವರದಿ

ನವದೆಹಲಿ : ಕಳೆದ ತಿಂಗಳು ಭಾರತದ ಜೊತೆಗಿನ ನಾಲ್ಕು ದಿನಗಳ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನ ಆರು ಯುದ್ಧ ವಿಮಾನಗಳು, ಎರಡು ವಾಯುಗಾಮಿ ಎಚ್ಚರಿಕೆ ಮತ್ತು ನಿಯಂತ್ರಣ ವ್ಯವಸ್ಥೆ (AWACS), ಒಂದು C-130 ಸಾರಿಗೆ ವಿಮಾನ, ಕನಿಷ್ಠ 30 ಕ್ಷಿಪಣಿಗಳು ಮತ್ತು ಹಲವಾರು ಮಾನವರಹಿತ ವೈಮಾನಿಕ ವಾಹನಗಳನ್ನು ಕಳೆದುಕೊಂಡಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಕಾರ್ಯಾಚರಣೆಯ … Continued

ಭಾರತದಲ್ಲಿನ ಅನೇಕ ಭಯೋತ್ಪಾದಕ ದಾಳಿಗಳ ಮಾಸ್ಟರ್‌ ಮೈಂಡ್‌, ಕುಖ್ಯಾತ ಉಗ್ರ ಅಬ್ದುಲ್ ಅಜೀಜ್ ಎಸಾರ್ ಪಾಕಿಸ್ತಾನದಲ್ಲಿ ನಿಗೂಢ ಸಾವು: ವರದಿ

ಇಸ್ಲಾಮಾಬಾದ್ : ಭಾರತದ ಮತ್ತೊಬ್ಬ ಶತ್ರು ಮತ್ತು ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಸಂಘಟನೆಯ ಉನ್ನತ ಕಮಾಂಡರ್ ಹಾಗೂ ಖ್ಯಾತ ಭಯೋತ್ಪಾದಕ ಮೌಲಾನಾ ಅಬ್ದುಲ್ ಅಜೀಜ್ ಎಸಾರ್ ಪಾಕಿಸ್ತಾನದ ಪಂಜಾಬ್ ಜಿಲ್ಲೆಯಲ್ಲಿ ನಿಗೂಢವಾಗಿ ಸಾವಿಗೀಡಾಗಿದ್ದಾನೆ ಎಂದು ಹಲವಾರು ಮಾಧ್ಯಮ ವರದಿಗಳು ತಿಳಿಸಿವೆ. ಎಸಾರ್ ಸಾವಿನ ವೀಡಿಯೊ ಹಲವಾರು ವಿದೇಶಿ ಮಾಧ್ಯಮಗಳಲ್ಲಿಯೂ ಕಾಣಿಸಿಕೊಂಡಿದೆ. ಆತ ಭಾರತದಲ್ಲಿ ನಡೆದ ಅನೇಕ … Continued

ಪಾಕಿಸ್ತಾನ ‘ಭಿಕ್ಷಾ ಪಾತ್ರೆ’ ಹಿಡಿದು ಜಗತ್ತಿನಾದ್ಯಂತ ಸುತ್ತುತ್ತಿದೆ ಎಂದು ಒಪ್ಪಿಕೊಂಡ ಪಾಕ್‌ ಪ್ರಧಾನಿ : ಆದರೆ….

ಕ್ವೆಟ್ಟಾ: ಅಂತಾರಾಷ್ಟ್ರೀಯ ಸಮುದಾಯವು ಪಾಕಿಸ್ತಾನವು ತಮ್ಮ ಮುಂದೆ ‘ಭಿಕ್ಷಾ ಪಾತ್ರೆ’ಯೊಂದಿಗೆ ಬರುವುದನ್ನು ನಿರೀಕ್ಷೆ ಮಾಡುವುದಿಲ್ಲ. ಬದಲಿಗೆ ವ್ಯಾಪಾರ, ಹೂಡಿಕೆ ಮತ್ತು ನಾವೀನ್ಯತೆಯಲ್ಲಿ ಸಮಾನ ಪಾಲುದಾರಿಕೆಯ ಆಧಾರದ ಮೇಲೆ ಸಂಬಂಧಗಳನ್ನು ಮುಂದುವರಿಸಲು ಪ್ರಯತ್ನಿಸುತ್ತದೆ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಶನಿವಾರ ಹೇಳಿದ್ದಾರೆ. ಈ ಮೂಲಕ ಅವರು ಪರೋಕ್ಷವಾಗಿ ಪಾಕಿಸ್ತಾನ ಭಿಕ್ಷಾ ಪಾತ್ರೆ ಹಿಡಿದು ವಿವಿಧ ದೇಶಗಳನ್ನು … Continued