38 ಬೇಡಿಕೆಗಳು, 48 ಗಂಟೆಗಳ ಗಡುವು: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಮತ್ತೊಂದು ಮಹಾಸಂಘರ್ಷದ ಮುನ್ಸೂಚನೆ

ನವದೆಹಲಿ: ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ (PoK) ಮತ್ತೊಮ್ಮೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಜಮ್ಮು ಕಾಶ್ಮೀರ ಜಾಯಿಂಟ್ ಅವಾಮಿ ಆಕ್ಷನ್ ಕಮಿಟಿ (JAAC) ಪಾಕಿಸ್ತಾನ ಸರ್ಕಾರಕ್ಕೆ 48 ಗಂಟೆಗಳ ಗಡುವು ನೀಡಿ, ತಮ್ಮ 38 ಅಂಶಗಳ ಬೇಡಿಕೆಗಳಿಗೆ  ಸ್ಪಂದಿಸದಿದ್ದರೆ “ಭಾರೀ ಹಾಗೂ ಅಂತಿಮ ಹಂತದ ಪ್ರತಿಭಟನೆ” ಆರಂಭಿಸುವುದಾಗಿ ಎಚ್ಚರಿಕೆ ನೀಡಿದೆ. ಈ ಬಾರಿಯ ಉದ್ವಿಗ್ನತೆಗೆ … Continued

ವಿಡಿಯೋ | ಪಿಒಕೆ ಪಾಕಿಸ್ತಾನದ ಭಾಗವಲ್ಲ ; ಪಿಒಕೆಯಲ್ಲಿ ಪಾಕ್ ವಿರುದ್ಧ ಭುಗಿಲೆದ್ದ ಆಕ್ರೋಶ ; ಭಾರತದತ್ತ ಮುಖ ಮಾಡ್ತೀವಿ ಎಂದು ಎಚ್ಚರಿಕೆ !

ರಾವಲಕೋಟ್ (ಪಿಒಕೆ): ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಪಾಕಿಸ್ತಾನ ಸರ್ಕಾರದ ದಬ್ಬಾಳಿಕೆ ಮತ್ತು ನಿಯಂತ್ರಣದ ವಿರುದ್ಧ ನಾಗರಿಕರ ಆಕ್ರೋಶ ತಾರಕಕ್ಕೇರಿದೆ. ರಾವಲಕೋಟದಲ್ಲಿ ಪಾಕ್ ಸರ್ಕಾರದ ವಿರುದ್ಧ ನಡೆಯುತ್ತಿರುವ ಬೃಹತ್ ಧರಣಿ ಸತ್ಯಾಗ್ರಹವು ಮಂಗಳವಾರದ ವೇಳೆಗೆ 22ನೇ ದಿನಕ್ಕೆ ಕಾಲಿಟ್ಟಿದ್ದು, ಸಾವಿರಾರು ಪ್ರತಿಭಟನಾಕಾರರು ಬೀದಿಗಿಳಿದು ಪಾಕಿಸ್ತಾನ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾವಲಕೋಟ್‌ನ ಪ್ರಸಿದ್ಧ ಈದ್ಗಾ … Continued

ಪಾಕ್‌ ವಿರುದ್ಧ ಪಿಒಕೆಯಲ್ಲಿ ಭುಗಿಲೆದ್ದ ಆಕ್ರೋಶ : ನಾಲ್ವರು ಪ್ರಮುಖರ ಸುಳಿವು ಕೊಟ್ಟವರಿಗೆ 1 ಕೋಟಿ ರೂ. ಬಹುಮಾನ ಘೋಷಿಸಿದ ಪಾಕಿಸ್ತಾನ

 ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ನಡೆಯುತ್ತಿರುವ ನಾಗರಿಕ ಹಕ್ಕುಗಳ ಪ್ರತಿಭಟನೆಯನ್ನು ಹತ್ತಿಕ್ಕಲು ಪಾಕಿಸ್ತಾನ ಸರ್ಕಾರ ಕ್ರೂರ ದಮನ ನೀತಿಯನ್ನು ಮುಂದುವರಿಸಿದೆ. ಇದರ ಭಾಗವಾಗಿ, ಕಳೆದ ವಾರ ನಿಷೇಧಕ್ಕೊಳಗಾದ ನಾಗರಿಕ ಸಮಾಜದ ಮೈತ್ರಿಕೂಟವಾದ ‘ಜಂಟಿ ಅವಾಮಿ ಆಕ್ಷನ್ ಕಮಿಟಿ’ (JAAC) ಯ ಪ್ರಮುಖ ನಾಲ್ಕು ನಾಯಕರನ್ನು ಬಂಧಿಸಲು ನೆರವಾಗುವ ಮಾಹಿತಿ ನೀಡಿದವರಿಗೆ 1 ಕೋಟಿ ಪಾಕಿಸ್ತಾನಿ ರೂಪಾಯಿ … Continued

ʼಆಪರೇಷನ್ ಸಿಂಧೂರ’ ವೇಳೆ ಸಹಾಯ ಮಾಡಲು ಪಾಕ್ ವಾಯುನೆಲೆಗಳಲ್ಲಿದ್ದ ಚೀನಾ ತಜ್ಞರ ತಂಡ : ಮೊದಲ ಬಾರಿಗೆ ಒಪ್ಪಿಕೊಂಡ ಚೀನಾ !

ನವದೆಹಲಿ : ಭಾರತ ಮತ್ತು ಪಾಕಿಸ್ತಾನ ನಡುವೆ ಕಳೆದ ವರ್ಷ ನಡೆದ ಸೇನಾ ಸಂಘರ್ಷದ ವೇಳೆ ತಾನು ಪಾಕಿಸ್ತಾನಕ್ಕೆ ನೇರವಾಗಿ ‘ಆನ್-ಸೈಟ್’ ತಾಂತ್ರಿಕ ನೆರವು ನೀಡಿದ್ದಾಗಿ ಚೀನಾ ಮೊದಲ ಬಾರಿಗೆ ಬಹಿರಂಗವಾಗಿ ಒಪ್ಪಿಕೊಂಡಿದೆ. ಭಾರತವು ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ನಡೆಸಿದ್ದ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆಯ ಸಂದರ್ಭದಲ್ಲಿ ಚೀನಾದ ತಜ್ಞರ ತಂಡವು ಪಾಕಿಸ್ತಾನ ಸೇನೆಗೆ ಬೆಂಬಲವಾಗಿ … Continued

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನೆಗಳು ; ಪಾಕಿಸ್ತಾನ ಸೇನೆಯ ಗುಂಡಿನ ದಾಳಿಗೆ 8 ಮಂದಿ ಸಾವು

ಮುಜಫರಾಬಾದ್ (ಪಿಒಕೆ): ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನ ಸರ್ಕಾರದ ವಿರುದ್ಧ ಸತತ ಮೂರನೇ ದಿನವಾದ ಬುಧವಾರ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಎಂಟು ನಾಗರಿಕರು ಸಾವಿಗೀಡಾಗಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಬಾಗ್ ಜಿಲ್ಲೆಯ ಧೀರ್ಕೋಟ್‌ನಲ್ಲಿ ನಾಲ್ಕು ಜನರು ಸಾವಿಗೀಡಾಗಿದ್ದಾರೆ. ಅಲ್ಲದೆ, ಮುಜಫರಾಬಾದಿನಲ್ಲಿ ಇಬ್ಬರು ಮತ್ತು ಮಿರ್ಪುರದಲ್ಲಿ … Continued

ವೀಡಿಯೊ…| ಭಾರತದ ದಾಳಿಯಲ್ಲಿ ಸತ್ತ ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನ ಸೇನೆ ಭಾಗಿ ; ಉಗ್ರರ ಶವಗಳ ಮೇಲೆ ಪಾಕ್‌ ಧ್ವಜ…!

ಲಾಹೋರ್‌: ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಕ್ಯಾಂಪ್‌ಗಳ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ(Operation Sindoor) ಹೆಸರಿನ ವಾಯು ದಾಳಿಯಲ್ಲಿ ಹತರಾದ ಹಲವಾರು ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಬುಧವಾರ ಪಾಕಿಸ್ತಾನ ಸೇನಾ ಸಿಬ್ಬಂದಿ ಮತ್ತು ನಿಷೇಧಿತ ಹಫೀಜ್ ಸಯೀದ್ ಜಮಾತ್-ಉದ್-ದವಾ (JDU) ಸದಸ್ಯರು ಭಾಗವಹಿಸಿದ್ದರು. ಭಾರತದ ಸಶಸ್ತ್ರ ಪಡೆಗಳು … Continued

ಭಾರತದ ಸೇನಾ ದಾಳಿಯ ಭೀತಿ ; ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಎಲ್ಲ ವಿಮಾನ ರದ್ದುಗೊಳಿಸಿದ ಪಾಕಿಸ್ತಾನ : ವರದಿ

ನವದೆಹಲಿ: ಭಾರತೀಯ ಒಡೆತನದ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಎಲ್ಲಾ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಸ್ಥಗಿತಗೊಳಿಸಿದ ಕೆಲವು ದಿನಗಳ ನಂತರ, ಪಾಕಿಸ್ತಾನ ಬುಧವಾರ (ಏಪ್ರಿಲ್‌ 30) ಪಾಕ್ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಲ್ತಿಸ್ತಾನ್ ಪ್ರದೇಶಕ್ಕೆ ಹೋಗಲು ತನ್ನ ಸ್ವಂತ ವಿಮಾನಗಳನ್ನು ರದ್ದುಗೊಳಿಸಿದೆ…! ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾದ ನಂತರ … Continued

ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಚಾಂಪಿಯನ್ಸ್ ಟ್ರೋಫಿ ಕೊಂಡೊಯ್ಯಲು ಪಾಕಿಸ್ತಾನ ಕ್ರಿಕೆಟ್‌ ನಿಯಂತ್ರಣ ಮಂಡಳಿಗೆ ನಿರ್ಬಂಧಿಸಿದ ಐಸಿಸಿ : ವರದಿ

ಭಾರತವನ್ನು ಕೆರಳಿಸುವ ಕೆಲಸಕ್ಕೆ ಮುಂದಾಗಿದ್ದ ಪಾಕಿಸ್ತಾನಕ್ಕೆ, ಐಸಿಸಿ ಖಡಕ್ ಎಚ್ಚರಿಕೆ ನೀಡಿದೆ. ಅದರಂತೆ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ವಿವಾದಿತ ಪ್ರದೇಶವಾದ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಕೊಂಡೊಯ್ಯುವಂತಿಲ್ಲ ಎಂದು ಪಾಕಿಸ್ತಾನಕ್ಕೆ ಐಸಿಸಿ ನಿರ್ಬಂಧಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) 2025 ರ ಚಾಂಪಿಯನ್ಸ್ ʼಟ್ರೋಫಿ ಪ್ರವಾಸʼವನ್ನು ‘ಪಾಕಿಸ್ತಾನ ಆಕ್ರಮಿತ ಕಾಶ್ಮೀರ’ದ ಮೂರು ನಗರಗಳಲ್ಲಿಯೂ ಆಯೋಜಿಸುವ, … Continued