ವೀಸಾ ರದ್ದುಗೊಳಿಸಿದ ನಂತರ ಪಾಕಿಸ್ತಾನಿಗಳನ್ನು ಭಾರತದಿಂದ ಹೊರಹಾಕಲು ಎಲ್ಲ ರಾಜ್ಯಗಳಿಗೆ ಅಮಿತ್ ಶಾ ನಿರ್ದೇಶನ

ನವದೆಹಲಿ: ಪಾಕಿಸ್ತಾನಿ ಪ್ರಜೆಗಳಿಗೆ ಭಾರತ ನೀಡಿರುವ ಎಲ್ಲಾ ವೀಸಾಗಳನ್ನು ರದ್ದುಗೊಳಿಸಿದ ಒಂದು ದಿನದ ನಂತರ, ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ಪಾಕಿಸ್ತಾನದ ನಾಗರಿಕರನ್ನು ಗುರುತಿಸಿ ಆಯಾ ರಾಜ್ಯಗಳಿಂದ ತಕ್ಷಣವೇ ಹೊರಹೋಗುವಂತೆ ಸೂಚನೆ ನೀಡಬೇಕು ಎಂದು ಶುಕ್ರವಾರ ಎಲ್ಲಾ ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಿದ್ದಾರೆ. ಉನ್ನತ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯ ನಂತರ, ಅಮಿತ್ ಶಾ … Continued

ವೀಡಿಯೊ…| ಭಯೋತ್ಪಾದಕ ಗುಂಪುಗಳಿಗೆ ಹಣಕಾಸು ನೆರವು ನೀಡುವುದನ್ನು ಒಪ್ಪಿಕೊಂಡ ಪಾಕಿಸ್ತಾನ ರಕ್ಷಣಾ ಸಚಿವ…!

ನವದೆಹಲಿ: ಪಾಕಿಸ್ತಾನ ಭಯೋತ್ಪಾದಕ ಗುಂಪುಗಳಿಗೆ ಹಣಕಾಸು ಒದಗಿಸುವ ಮತ್ತು ಬೆಂಬಲ ನೀಡುವ ಇತಿಹಾಸವನ್ನು ಹೊಂದಿದೆಯೇ ಎಂದು ಪ್ರಶ್ನೆಗೆ ಪಾಕಿಸ್ತಾನದ ರಕ್ಷಣಾ ಸಚಿವರು ಅಮೆರಿಕ ಮತ್ತು ಪಶ್ಚಿಮ ದೇಶಗಳ ಪರವಾಗಿ “ಕೊಳಕು ಕೆಲಸ” ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಬ್ರಿಟಿಷ್ ಸುದ್ದಿ ಜಾಲ ಸ್ಕೈ ನ್ಯೂಸ್ ಜೊತೆಗಿನ ಸಂದರ್ಶನದಲ್ಲಿ “ಪಾಕಿಸ್ತಾನವು ಈ ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವ, ತರಬೇತಿ ನೀಡುವ ಮತ್ತು … Continued

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕ್ ವಿರುದ್ಧ ಭಾರತದ 7 ಪ್ರಮುಖ ಕ್ರಮಗಳು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಜನರನ್ನು ಬಲಿ ತೆಗೆದುಕೊಂಡ ಭೀಕರ ಭಯೋತ್ಪಾದಕ ದಾಳಿಯ ನಂತರ ಭಾರತ ಪಾಕಿಸ್ತಾನದ ವಿರುದ್ಧ ಏಳು ಕ್ರಮಗಳನ್ನು ತೆಗೆದುಕೊಂಡಿದೆ. ಈ ದಾಳಿಯಲ್ಲಿ ಗಡಿಯಾಚೆಗಿನ ಸಂಪರ್ಕಗಳ ಕುರಿತು ಚರ್ಚಿಸಿದ ನಂತರ ಸರ್ಕಾರ ಬುಧವಾರ ಐದು ಕ್ರಮಗಳನ್ನು ಮತ್ತು ಗುರುವಾರ ಇನ್ನೂ ಎರಡು ಕ್ರಮಗಳನ್ನು ಘೋಷಿಸಿತು. ಭಯೋತ್ಪಾದನಾ ದಾಳಿಯ ಕುರಿತು ಭಾರತ … Continued

ವೀಡಿಯೊ..| ಭಯೋತ್ಪಾದಕರಿಗೆ, ಹಿಂದಿದ್ದವರಿಗೆ ಭಾರತದ ಖಡಕ್‌ ವಾರ್ನಿಂಗ್‌ ಜಗತ್ತಿಗೆ ಗೊತ್ತಾಗಲೆಂದು ಇಂಗ್ಲಿಷಿಗೆ ಭಾಷಣ ಬದಲಾಯಿಸಿದ ಪ್ರಧಾನಿ ಮೋದಿ

ನವದೆಹಲಿ: ಪಹಲ್ಗಾಮ್ ದಾಳಿಕೋರರಿಗೆ ಪ್ರಧಾನಿ ಮೋದಿ ಖಡಕ್‌ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟದ ಬಲವಾದ ಸಂದೇಶವನ್ನು ಸಾರ್ವಜನಿಕ ವೇದಿಕೆಯಿಂದ ಇಡೀ ಜಗತ್ತಿಗೆ ರವಾನಿಸಲು ಹಿಂದಿಯಲ್ಲಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಇಂಗ್ಲಿಷ್‌ಗೆ ಬದಲಾಯಿಸಿಕೊಂಡರು. “ಬಿಹಾರದ ಮಣ್ಣಿನಿಂದ, ನಾನು … Continued

ಭಾರತದ ಕ್ರಮದ ನಂತರ ಸಿಮ್ಲಾ ಒಪ್ಪಂದ ಸ್ಥಗಿತಗೊಳಿಸಿದ ಪಾಕಿಸ್ತಾನ ; ಭಾರತದ ವಿಮಾನಗಳಿಗೆ ಅದರ ವಾಯುಪ್ರದೇಶ ಬಂದ್‌, ವ್ಯಾಪಾರ ಸ್ಥಗಿತ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿ ರಾಜತಾಂತ್ರಿಕ ಸಂಬಂಧಗಳನ್ನು ಕಡಿಮೆಮಟ್ಟಕ್ಕೆ ಇಳಿಸುವ ಭಾರತದ ಕ್ರಮಕ್ಕೆ ಪ್ರತೀಕಾರದ ಕ್ರಮದಲ್ಲಿ ಪಾಕಿಸ್ತಾನವು ಗುರುವಾರ ಭಾರತದ ಜೊತೆಗಿನ ತನ್ನ ಎಲ್ಲಾ ದ್ವಿಪಕ್ಷೀಯ ಒಪ್ಪಂದಗಳು ಮತ್ತು ವ್ಯಾಪಾರ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ ಮತ್ತು ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚುವುದಾಗಿ ಪ್ರಕಟಿಸಿದೆ. 1971 ರ ಭಾರತ-ಪಾಕಿಸ್ತಾನ ಯುದ್ಧದ … Continued

ಪಹಲ್ಗಾಮ್‌ ದಾಳಿಯ ನಂತರ ʼಸಿಂಧೂ ನದಿ ನೀರು ಒಪ್ಪಂದʼ ಸ್ಥಗಿತಗೊಳಿಸಿದ ಭಾರತ ; ಇದರಿಂದ ಪಾಕಿಸ್ತಾನಕ್ಕೆ ಆಗುವ ತೊಂದರೆ ಏನು..?

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ದಿಟ್ಟ ರಾಜತಾಂತ್ರಿಕ ದಾಳಿಯಲ್ಲಿ, ಭದ್ರತೆ ಕುರಿತ ಕ್ಯಾಬಿನೆಟ್ ಸಮಿತಿ (CCS) 1960 ರ ಸಿಂಧೂ ಜಲ ಒಪ್ಪಂದವನ್ನು (IWT) ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಭದ್ರತೆಯ … Continued

ವೀಡಿಯೊ..| 6 ದಿನದ ಹಿಂದಷ್ಟೇ ಮದುವೆಯಾಗಿದ್ದ, ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತ ನೌಕಾಪಡೆ ಅಧಿಕಾರಿಗೆ ಕಣ್ಣೀರಿನ ವಿದಾಯ ಹೇಳಿದ ಪತ್ನಿ

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದ 26 ಜನರಲ್ಲಿ ಒಬ್ಬರಾದ ನೌಕಾ ಅಧಿಕಾರಿ ವಿನಯ ನರ್ವಾಲ್ ಅವರ ಪತ್ನಿ ಹಿಮಾಂಶಿ ನರ್ವಾಲ್ ಅವರು ಹೃದಯ ವಿದ್ರಾವಕ ದೃಶ್ಯದಲ್ಲಿ ತಮ್ಮ ಪತಿಗೆ ಭಾವನಾತ್ಮಕ ವಿದಾಯ ಹೇಳಿದರು. ನೌಕಾಪಡೆಯ ಐಟಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಲೆಫ್ಟಿನೆಂಟ್ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಯಾರು..? ದಿ ರೆಸಿಸ್ಟೆನ್ಸ್ ಫ್ರಂಟ್ ಉಗ್ರ ಸಂಘಟನೆಯ ದಾಳಿಯನ್ನು ಯಾರು ಮುನ್ನಡೆಸಿದವರು…?

ನವದೆಹಲಿ : 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ಇದಾಗಿದ್ದು, ಪಹಲ್ಗಾಮದ ಬೈಸರನ್ ಹುಲ್ಲುಗಾವಲಿನಲ್ಲಿ ಮಂಗಳವಾರ ಭಯೋತ್ಪಾದಕರ ಗುಂಪು ಪ್ರವಾಸಿಗರ ಮೇಲೆ ಗುಂಡು ಹಾರಿಸಿ ಕನಿಷ್ಠ 26 ಜನರನ್ನು ಸಾಯಿಸಿದೆ. ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್‌ಇಟಿ) ನ ಒಂದು ಭಾಗವಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) … Continued

ಪಹಲ್ಗಾಮ್‌ ದಾಳಿ | ಭಾರತದ ರಾಜತಾಂತ್ರಿಕ ಯುದ್ಧ: ಪಾಕ್‌ ಗೆ ನೀರುಣಿಸುವ ʼಸಿಂಧೂ ಜಲ ಒಪ್ಪಂದʼ ರದ್ದು ; ಪಾಕ್ ಪ್ರಜೆಗಳಿಗೆ ದೇಶ ತೊರೆಯಲು ಸೂಚನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ತನಿಖೆಯಲ್ಲಿ “ಗಡಿಯಾಚೆಗಿನ ಸಂಪರ್ಕ” ದ ಬಗ್ಗೆ ರಾಷ್ಟ್ರೀಯ ಭದ್ರತೆಯ ಕುರಿತಾದ ದೇಶದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಭದ್ರತೆಯ ಕುರಿತಾದ ಸಂಪುಟ ಸಮಿತಿ (CCS) ಪಾಕಿಸ್ತಾನದ ವಿರುದ್ಧ ಕೆಲವು ಕಠಿಣ ಮತ್ತು ಶಿಕ್ಷಾರ್ಹ ಕ್ರಮಗಳನ್ನು ತೆಗೆದುಕೊಂಡಿದೆ. ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭೀಕರ ಭಯೋತ್ಪಾದಕ … Continued

ದಂಗೆಯ ಸನಿಹದಲ್ಲಿ ಪಾಕಿಸ್ತಾನ ಸೇನೆ ? : ಪಾಕ್‌ ಸೇನಾ ಮುಖ್ಯಸ್ಥರ ರಾಜೀನಾಮೆಗೆ ಕಿರಿಯ ಅಧಿಕಾರಿಗಳು, ಕರ್ನಲ್‌ಗಳ ಪಟ್ಟು…!

ಪಾಕಿಸ್ತಾನಿ ಸೇನೆಯ ಕಿರಿಯ ಅಧಿಕಾರಿಗಳು, ಕರ್ನಲ್‌ಗಳು, ಮೇಜರ್‌ಗಳು ಮತ್ತು ಮಾಜಿ ಜನರಲ್‌ಗಳು ಪ್ರಸ್ತುತ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರಿಗೆ ರಾಜೀನಾಮೆ ನೀಡಿ ತಮ್ಮ ಸ್ಥಾನದಿಂದ ಕೆಳಗಿಳಿಯುವಂತೆ ಒತ್ತಾಯಿಸಿದ್ದು, ಇದು ಪಾಕಿಸ್ತಾನ್ ಸೇನೆಯ ಆಂತರಿಕ ಅರಾಜಕ ಸ್ಥಿತಿಯನ್ನು ಹೇಳುತ್ತಿರುವಂತೆ ತೋರುತ್ತಿದೆ. ವರದಿಗಳ ಪ್ರಕಾರ, ಮುನೀರ್ ಸೇಡು ತೀರಿಸಿಕೊಳ್ಳುವ ಸಂದರ್ಭದಲ್ಲಿ ಪಾಕಿಸ್ತಾನ ಸೇನೆಯನ್ನು ರಾಜಕೀಯ ದಬ್ಬಾಳಿಕೆಯ … Continued