ಪಾಕಿಸ್ತಾನದ ವೈಮಾನಿಕ ದಾಳಿಯ ನಂತರ ತಾಲಿಬಾನ್ ಪ್ರತಿದಾಳಿ: 15 ಪಾಕ್ ಸೈನಿಕರು ಸಾವು

ಪಾಕಿಸ್ತಾನದ ವಾಯು ದಾಳಿಗೆ ಪ್ರತಿಯಾಗಿ ಅಫ್ಘಾನಿಸ್ತಾನದ ಹೆಲ್ಮಂಡ್ ಪ್ರಾಂತ್ಯದಲ್ಲಿ ತಾಲಿಬಾನ್ ಪಡೆಗಳು ಪ್ರತಿದಾಳಿ ನಡೆಸಿದ್ದು, ಒಟ್ಟು 15 ಪಾಕಿಸ್ತಾನಿ ಸೈನಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಫ್ಘಾನಿಸ್ತಾನದ ಹೆಲ್ಮಂಡ್ ಪ್ರಾಂತ್ಯದ ಸರ್ಕಾರದ ವಕ್ತಾರ ಮೌಲ್ವಿ ಮೊಹಮ್ಮದ್ ಖಾಸಿಂ ರಿಯಾಜ್ ಅವರು ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, “ಬಹ್ರಾಂಪುರ ಜಿಲ್ಲೆಯಲ್ಲಿನ ಡ್ಯುರಾಂಡ್ ರೇಖೆಯ ಬಳಿ ಕಳೆದ ರಾತ್ರಿ … Continued

ಟ್ರಂಪ್ ಜೊತೆಗೆ ಭೂಮಿ ಮೇಲಿನ ಅಪರೂಪದ ಖನಿಜ ಇದ್ದ ಬಾಕ್ಸ್‌ನ ಚಿತ್ರ ವೈರಲ್ ಆದ ನಂತ್ರ ಪಾಕ್ ಸೇನಾ ಮುಖ್ಯಸ್ಥನಿಗೆ ‘ಸೇಲ್ಸ್‌ ಮ್ಯಾನ್’ ಹಣೆಪಟ್ಟಿ

ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರು ಆರು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ ಮೂರನೇ ಬಾರಿಗೆ ವಾಷಿಂಗ್ಟನ್‌ಗೆ ಭೇಟಿ ನೀಡಿದ ನಂತರ ತಮ್ಮ ದೇಶದಲ್ಲಿಯೇ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಪಾಕಿಸ್ತಾನ ಸೇನಾ ಮುಖ್ಯಸ್ಥ ಮುನೀರ್ ಮತ್ತು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಅಮೆರಿಕದ ಓವಲ್ ಕಚೇರಿಯಲ್ಲಿ ಪಾಕಿಸ್ತಾನದ ಅಪರೂಪದ ಭೂಮಿಯ ಖನಿಜಗಳ ಪೆಟ್ಟಿಗೆಯನ್ನು … Continued

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನೆಗಳು ; ಪಾಕಿಸ್ತಾನ ಸೇನೆಯ ಗುಂಡಿನ ದಾಳಿಗೆ 8 ಮಂದಿ ಸಾವು

ಮುಜಫರಾಬಾದ್ (ಪಿಒಕೆ): ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನ ಸರ್ಕಾರದ ವಿರುದ್ಧ ಸತತ ಮೂರನೇ ದಿನವಾದ ಬುಧವಾರ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಎಂಟು ನಾಗರಿಕರು ಸಾವಿಗೀಡಾಗಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಬಾಗ್ ಜಿಲ್ಲೆಯ ಧೀರ್ಕೋಟ್‌ನಲ್ಲಿ ನಾಲ್ಕು ಜನರು ಸಾವಿಗೀಡಾಗಿದ್ದಾರೆ. ಅಲ್ಲದೆ, ಮುಜಫರಾಬಾದಿನಲ್ಲಿ ಇಬ್ಬರು ಮತ್ತು ಮಿರ್ಪುರದಲ್ಲಿ … Continued

ವೀಡಿಯೊ : ಪಿಒಕೆಯಲ್ಲಿ 2ನೇ ದಿನ ಪ್ರತಿಭಟನೆಗಳು ಮತ್ತಷ್ಟು ತೀವ್ರ ; ಕಂಟೇನರ್‌ಗಳನ್ನು ನದಿಗೆ ಎಸೆದ ಪ್ರತಿಭಟನಾಕಾರರು..!

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಪಾಕಿಸ್ತಾನ ಸರ್ಕಾರದ ವಿರುದ್ಧದ ನಡೆಯುತ್ತಿರುವ ಪ್ರತಿಭಟನೆ ಎರಡನೇ ದಿನವಾದ ಮಂಗಳವಾರ (ಸೆ.30) ತೀವ್ರಗೊಂಡಿದ್ದು, ಪ್ರತಿಭಟನಾಕಾರರು ಬೃಹತ್ ಕಂಟೇನರ್‌ಗಳನ್ನು ನದಿಗೆ ಎಸೆದಿದ್ದಾರೆ. ಹಿಂಸಾತ್ಮಕ ಘರ್ಷಣೆಗಳಲ್ಲಿ ಇಬ್ಬರು ಮೃತಪಟ್ಟು, ಸುಮಾರು ಎರಡು ಡಜನ್ ಜನರು ಗಾಯಗೊಂಡ ಒಂದು ದಿನದ ನಂತರ, ಪ್ರತಿಭಟನಾಕಾರರು ಮುಂದೆ ಸಾಗದಂತೆ ತಡೆಯಲು ಪಾಕಿಸ್ತಾನಿ ಪಡೆಗಳು ಮಂಗಳವಾರ ಬೆಳಿಗ್ಗೆ ಕಂಟೇನರ್‌ಗಳನ್ನು … Continued

ಕ್ವೆಟ್ಟಾದಲ್ಲಿ ಪ್ರಬಲ ಸ್ಫೋಟ : 13 ಮಂದಿ ಸಾವು, 32 ಜನರಿಗೆ ಗಾಯ ; ಆ ಕ್ಷಣದ ವೀಡಿಯೊ ವೈರಲ್‌

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 13 ಜನರು ಸಾವಿಗೀಡಾಗಿದ್ದು, 32 ಜನರು ಗಾಯಗೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ಕ್ವೆಟ್ಟಾದ ಜರ್ಘುನ್ ರಸ್ತೆಯಲ್ಲಿರುವ ಎಫ್‌ಸಿ (ಫ್ರಾಂಟಿಯರ್ ಕಾನ್‌ಸ್ಟಾಬ್ಯುಲರಿ) ಪ್ರಧಾನ ಕಚೇರಿಯ ಮೂಲೆಯಲ್ಲಿ ಬಾಂಬ್ ಸ್ಫೋಟಗೊಂಡಿದೆ. ಪಾಕಿಸ್ತಾನಿ ಮಾಧ್ಯಮ ವರದಿಗಳ ಪ್ರಕಾರ, ಸ್ಫೋಟದ ಶಕ್ತಿ ಎಷ್ಟು ಪ್ರಬಲವಾಗಿತ್ತೆಂದರೆ ಮಾಡೆಲ್ ಟೌನ್ ಮತ್ತು ಪಕ್ಕದ ಪ್ರದೇಶಗಳಲ್ಲಿಯೂ … Continued

ಕೊಳಕುತನ…: ಭಾರತದ ಏಷ್ಯಾ ಕಪ್ ಟ್ರೋಫಿ ತೆಗೆದುಕೊಂಡು ಹೋದ ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ…!

ದುಬೈನಲ್ಲಿ ಭಾನುವಾರ ನಡೆದ ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಚಾಂಪಿಯನ್ ಆದರೂ ಭಾರತದ ಕ್ರಿಕೆಟ್ ತಂಡವು ಪಾಕಿಸ್ತಾನದ ಸಚಿವರೂ ಆಗಿರುವ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ (ACC) ಚೇರ್ಮನ್‌ ಅವರಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಘಟನೆ ನಡೆದಿದೆ. ಇದಕ್ಕೆ ಕಾರಣರಾದವರು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಹಾಗೂ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (PCB) ಮುಖ್ಯಸ್ಥರೂ ಆಗಿರುವ … Continued

ಏಷ್ಯಾ ಕಪ್ ಕ್ರಿಕೆಟ್‌ : ಪಾಕಿಸ್ತಾನದ ಸಚಿವನಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಭಾರತದ ತಂಡ

ದುಬೈನಲ್ಲಿ ನಡೆದ ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಐದು ವಿಕೆಟ್‌ಗಳಿಂದ ಸೋಲಿಸಿದ ಬಳಿಕ, ಭಾರತೀಯ ಕ್ರಿಕೆಟ್ ತಂಡ ಏಷ್ಯಾ ಕಪ್ ಟ್ರೋಫಿಯನ್ನು ಪಾಕಿಸ್ತಾನದ ಸಚಿವರೂ ಆಗಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಮೋಹ್ಸಿನ್ ನಕ್ವಿ ಅವರಿಂದ ಸ್ವೀಕರಿಸಲು ನಿರಾಕರಿಸಿದೆ. ಬಿಸಿಸಿಐ ಈ ಬಗ್ಗೆ ನವೆಂಬರ್‌ನಲ್ಲಿ ನಡೆಯುವ ಐಸಿಸಿ ಸಭೆಯಲ್ಲಿ ತೀವ್ರ ಆಕ್ಷೇಪ ದಾಖಲಿಸಲು ನಿರ್ಧರಿಸಿದೆ … Continued

ಕ್ರಿಕೆಟ್‌ | ತಿಲಕ್ ವರ್ಮಾ ಅಮೋಘ ಆಟ; ರೋಮಾಂಚನಕಾರಿ ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನ ಮಣಿಸಿ ಏಷ್ಯಾ ಕಪ್ ಗೆದ್ದ ಭಾರತ

ದುಬೈ: ದುಬೈನಲ್ಲಿ ನಡೆದ ಫೈನಲ್‌ನಲ್ಲಿ ಭಾರತವು ಪಾಕಿಸ್ತಾನವನ್ನು ಸೋಲಿಸಿ 2025ರ ಏಷ್ಯಾಕಪ್ ಚಾಂಪಿಯನ್ ಆಗಿದೆ. ತಿಲಕ್ ವರ್ಮಾ ಅವರ ಅಜೇಯ ಅರ್ಧಶತಕದ ನೆರವಿನಿಂದ ಹಾಗೂ ಕೊನೆಯಲ್ಲಿ ಶಿವಂ ದುಬೆ ಅವರ ಬಿರುಸಿನ ಬ್ಯಾಟಿಂಗ್‌ನಿಂದ ಭಾರತವು ಪಾಕಿಸ್ತಾನದ ವಿರುದ್ಧ5 ವಿಕೆಟ್‌ಗಳಿಂದ ಜಯಗಳಿಸಿ 2025ರ ಏಷ್ಯಾಕಪ್ ಅನ್ನು ಮುಡಿಗೇರಿಸಿಕೊಂಡಿತು. ಭಾರತದ ಆರಂಭಿಕ ಬ್ಯಾಟಿಂಗ್ ಆರಂಭದಿಂದಲೇ ಆಘಾತ ಅನುಭವಿಸಿದರೂ ಸಂಕಷ್ಟದ … Continued

ಸೆಪ್ಟೆಂಬರ್ 30ರಿಂದ ಐಸಿಸಿ ಮಹಿಳಾ ಏಕದಿನ ಕ್ರಿಕೆಟ್‌ ವಿಶ್ವಕಪ್ 2025 ಆರಂಭ ; ಎಲ್ಲ 8 ತಂಡಗಳ ಆಟಗಾರರ ಪಟ್ಟಿ ಇಲ್ಲಿದೆ…

ನವದೆಹಲಿ:  ಸೆಪ್ಟೆಂಬರ್ 30 ರಂದು ಅಸ್ಸಾಂನ ಗುವಾಹತಿಯಲ್ಲಿ ಸಹ-ಆತಿಥೇಯ ಭಾರತ ಮತ್ತು ಶ್ರೀಲಂಕಾ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಲಿರುವ 2025 ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ನಲ್ಲಿ ಒಟ್ಟು ಎಂಟು ತಂಡಗಳು ಪರಸ್ಪರ ಹೋರಾಡಲಿವೆ. ಆಸ್ಟ್ರೇಲಿಯಾ (7 ಬಾರಿ), ಇಂಗ್ಲೆಂಡ್ (4 ಬಾರಿ) ಮತ್ತು ನ್ಯೂಜಿಲೆಂಡ್ (1 ಬಾರಿ) – ಇದುವರೆಗೆ 50-ಓವರ್ ಮಹಿಳಾ ವಿಶ್ವ … Continued

ವೀಡಿಯೊಗಳು | ನಿಮ್ಮ ನಾಶವಾದ ರನ್‌ ವೇಗಳು ನಿಮಗೆ ʼವಿಜಯʼದಂತೆ ಕಾಣುತ್ತಿವೆಯೇ?”; ಪಾಕ್‌ ಪ್ರಧಾನಿ ಹೇಳಿಕೆಗೆ ಭಾರತ ವ್ಯಂಗ್ಯ

ನವದೆಹಲಿ: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ “ಮತ್ತೊಮ್ಮೆ ಭಯೋತ್ಪಾದನೆಯನ್ನು ವೈಭವೀಕರಿಸಿದ್ದಕ್ಕಾಗಿ” ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರದ್ದು “ಅಸಂಬದ್ಧ ನಾಟಕ” ಎಂದು ಭಾರತ ಶನಿವಾರ ಟೀಕಿಸಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರತ್ಯುತ್ತರ ನೀಡುವ ಹಕ್ಕನ್ನು ಚಲಾಯಿಸುವಾಗ, ಭಾರತದ ರಾಜತಾಂತ್ರಿಕರಾದ ಪೆಟಲ್ ಗಹ್ಲೋಟ್ ಭಯೋತ್ಪಾದನೆ “ಅವರ (ಪಾಕಿಸ್ತಾನದ) ವಿದೇಶಾಂಗ ನೀತಿಯ ಕೇಂದ್ರಬಿಂದುವಾಗಿದೆ” ಎಂದು ಹೇಳಿದರು. ಶುಕ್ರವಾರ ನಡೆದ ವಿಶ್ವಸಂಸ್ಥೆಯ … Continued