ವೀಡಿಯೊಗಳು | ಲಾಹೋರ್‌ ರ‍್ಯಾಲಿಯಲ್ಲಿ ಪಹಲ್ಗಾಮ್‌ ದಾಳಿ ಸಂಚುಕೋರ ಸೈಫುಲ್ಲಾ ಕಸೂರಿ ಪ್ರತ್ಯಕ್ಷ : ಉಗ್ರ ಹಫೀಜ್ ಸಯೀದ್ ಪುತ್ರ ಸಹ ಭಾಗಿ

ಲಾಹೋರ್:26 ಅಮಾಯಕರ ಜೀವಗಳನ್ನು ಬಲಿತೆಗೆದುಕೊಂಡ ಪಹಲ್ಗಾಮ್ ದಾಳಿಯ ಯೋಜನೆ ರೂಪಿಸಿದ್ದ ಲಷ್ಕರ್-ಎ-ತೈಬಾ (ಎಲ್‌ಇಟಿ)ಯ ಹಿರಿಯ ಕಮಾಂಡರ್ ಸೈಫುಲ್ಲಾ ಕಸೂರಿ, ಲಾಹೋರ್‌ನಲ್ಲಿ ನಡೆದ ರ್ಯಾಲಿಯಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾನೆ. ಮಾಧ್ಯಮ ವರದಿಗಳ ಪ್ರಕಾರ, ಪಾಕಿಸ್ತಾನದ ಪರಮಾಣು ಪರೀಕ್ಷೆಗಳ ವರ್ಷಾಚರಣೆ ಅಂಗವಾಗಿ ಪಾಕಿಸ್ತಾನ ಮರ್ಕಾಜಿ ಮುಸ್ಲಿಂ ಲೀಗ್ (ಪಿಎಂಎಂಎಲ್) ಈ ರ್ಯಾಲಿಯನ್ನು ಆಯೋಜಿಸಿತ್ತು. ಭಾರತದಿಂದ ಗೊತ್ತುಪಡಿಸಿದ ಭಯೋತ್ಪಾದಕ ಎಂದು ಘೋಷುಸಲ್ಪಟ್ಟ, … Continued

ಐಎಸ್‌ಐ ಪರ ಬೇಹುಗಾರಿಕೆ, ಪಾಕಿಸ್ತಾನಕ್ಕೆ 7 ಬಾರಿ ಭೇಟಿ : ಸರ್ಕಾರಿ ನೌಕರನ ಬಂಧನ…

ಜೈಸಲ್ಮೇರ್‌ : ಮೇ 7-10 ರಂದು ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ನಂತರ ದೇಶಾದ್ಯಂತ ಬೇಹುಗಾರಿಕೆ ಜಾಲಗಳ ಮೇಲೆ ದಾಳಿ ನಡೆಸಲಾಗುತ್ತಿದ್ದು, ಪಾಕಿಸ್ತಾನದ ಐಎಸ್‌ಐ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಜಸ್ಥಾನ ಸರ್ಕಾರಿ ನೌಕರನನ್ನು ಜೈಸಲ್ಮೇರ್‌ನಲ್ಲಿ ಬಂಧಿಸಲಾಗಿದೆ. ಬಂಧಿತ ಉದ್ಯೋಗಿಯನ್ನು ಶಕುರ್ ಖಾನ್ ಮಂಗನಿಯಾರ್ ಎಂದು ಗುರುತಿಸಲಾಗಿದ್ದು, ಆತನನ್ನು ಜೈಸಲ್ಮೇರ್‌ನಲ್ಲಿರುವ ಆತನ ಕಚೇರಿಯಲ್ಲಿ ಸಿಐಡಿ … Continued

ಭಾರತದ ಸಾಮರ್ಥ್ಯ ಬಹಿರಂಗ…| ಪಾಕಿಸ್ತಾನದ ಮುರಿದ್ ಸೇನಾ ನೆಲೆಯ ಭೂಗತ ಸೌಲಭ್ಯಗಳ ಮೇಲೆ ದಾಳಿ ನಡೆಸಿದ್ದನ್ನು ತೋರಿಸಿದ ಉಪಗ್ರಹ ಚಿತ್ರಗಳು…!

ನವದೆಹಲಿ: ಭಾರತದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಮುರಿಯದ್ ವಾಯುನೆಲೆಯ ಮೇಲೆ ನಡೆದ ವಾಯುದಾಳಿಗಳು ಭೂಗತ ಮಿಲಿಟರಿ ಸೌಲಭ್ಯವನ್ನು ಗುರಿಯಾಗಿರಿಸಿಕೊಂಡಿರಬಹುದು ಎಂದು ಹೊಸದಾಗಿ ಬಿಡುಗಡೆಯಾದ ಹೈ-ರೆಸಲ್ಯೂಶನ್ ಉಪಗ್ರಹ ಚಿತ್ರಗಳು ತೋರಿಸಿವೆ. ಬುಧವಾರದ ಹೈ-ರೆಸಲ್ಯೂಶನ್ ಉಪಗ್ರಹ ಚಿತ್ರಗಳು ಪಾಕಿಸ್ತಾನದ ಮುರಿಯದ್ ವಾಯುನೆಲೆಗೆ ವ್ಯಾಪಕ ಹಾನಿಯನ್ನು ಬಹಿರಂಗಪಡಿಸಿವೆ, ಪಾಕಿಸ್ತಾನ ವಾಯುಪಡೆಯ ಭೂಮಿ ಅಡಿಯ ಮಿಲಿಟರಿ ಸೌಲಭ್ಯದಿಂದ … Continued

ಭಾರತದ ವಿರುದ್ಧ ತನ್ನ ಸೇನಾ ಕಾರ್ಯಾಚರಣೆ ಫೋಟೊ ಎಂದು ಪಾಕ್‌ ಸೇನಾ ಮುಖ್ಯಸ್ಥರಿಗೆ ‘ಚೀನಾ ಸೇನೆ ಕವಾಯತು ಚಿತ್ರ’ ಗಿಫ್ಟ್‌ ನೀಡಿ ಅಪಹಾಸ್ಯಕ್ಕೀಡಾದ ಪಾಕ್ ಪ್ರಧಾನಿ…!

ನವದೆಹಲಿ: ಅಪಹಾಸ್ಯದ ಮತ್ತೊಂದು ವಿದ್ಯಮಾನದಲ್ಲಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಭಾರತದ ಆಪರೇಶನ್‌ ಸಿಂಧೂರಕ್ಕೆ ಪ್ರತೀಕಾರವಾಗಿ ತಾನು ಭಾರತದ ವಿರುದ್ಧ ನಡೆಸಿದ ಆಪರೇಷನ್ ಬನ್ಯಾನ್ ಅಲ್-ಮಾರ್ಸಸ್ ಕಾರ್ಯಾಚರಣೆ ಚಿತ್ರವೆಂದು ಹೇಳಿಕೊಂಡು ಪಾಕ್‌ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರಿಗೆ ವರ್ಣಚಿತ್ರವೊಂದನ್ನು ಉಡುಗೊರೆಯಾಗಿ ನೀಡಿ ವ್ಯಾಪಕವಾಗಿ ನಗೆಪಾಟಲಿಗೀಡಾಗಿದ್ದಾರೆ. ಯಾಕೆಂದರೆ ಭಾರತದ ವಿರುದ್ಧದ ಮಿಲಿಟರಿ ಕಾರ್ಯಾಚರಣೆಯ ಫೋಟೋ … Continued

ಪಾಕಿಸ್ತಾನಕ್ಕೆ ಭಾರತದ ಹೆದರಿಕೆ ; ಚೀನಾ ಜೊತೆ ಸೇರಿ ಪರಮಾಣು ಶಸ್ತ್ರಾಸ್ತ್ರಗಳ ಆಧುನೀಕರಣ : ಅಮೆರಿಕ ಗುಪ್ತಚರ ವರದಿ

ನವದೆಹಲಿ: ಪಾಕಿಸ್ತಾನವು ಭಾರತವನ್ನು “ಅಸ್ತಿತ್ವಕ್ಕೆ ಬೆದರಿಕೆ” ಎಂದು ಪರಿಗಣಿಸುತ್ತದೆ, ಆದರೆ ಭಾರತವು ಚೀನಾವನ್ನು ತನ್ನ “ಪ್ರಾಥಮಿಕ ಎದುರಾಳಿ” ಪರಿಗಣಿಸುತ್ತದೆ ಹಾಗೂ ಪಾಕಿಸ್ತಾನವನ್ನು ನಿರ್ವಹಿಸಬೇಕಾದ “ಭದ್ರತಾ ಸಮಸ್ಯೆ” ಎಂದು ಪರಿಗಣಿಸುತ್ತದೆ ಎಂದು ಅಮೆರಿಕದ ರಕ್ಷಣಾ ಗುಪ್ತಚರ ಸಂಸ್ಥೆ 2025 ರ ತನ್ನ ವಿಶ್ವಾದ್ಯಂತ ಬೆದರಿಕೆ ಮೌಲ್ಯಮಾಪನ ವರದಿಯಲ್ಲಿ ತಿಳಿಸಿದೆ. 2025ರ ಮೇ 25ರಂದು ಬಿಡುಗಡೆಯಾದ ಅಮೆರಿಕ ಡಿಫೆನ್ಸ್ … Continued

ವೀಡಿಯೊ | ನೀವು ನಮ್ಮ ನೀರು ನಿಲ್ಲಿಸಿದ್ರೆ ನಾವು ನಿಮ್ಮ…; ಉಗ್ರ ಹಫೀಜ್ ಸಯೀದ್ ಧಾಟಿಯಲ್ಲೇ ಭಾರತಕ್ಕೆ ಪಾಕಿಸ್ತಾನ ಮಿಲಿಟರಿ ವಕ್ತಾರನ ಬೆದರಿಕೆ !

ಪಾಕಿಸ್ತಾನಿ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಇತ್ತೀಚೆಗೆ ಭಾರತದ ವಿರುದ್ಧ ದ್ವೇಷ ತುಂಬಿದ ಭಾವನೆಗಳನ್ನು ಹೊರಹಾಕಿದ್ದಾರೆ, ಇದು ಹಿಂದೆ ಜಾಗತಿಕ ಭಯೋತ್ಪಾದಕ ಹಫೀಜ್ ಸಯೀದ್ ವ್ಯಕ್ತಪಡಿಸಿದಂತೆಯೇ ಇದೆ ಎಂಬುದು ಹಲವರ ಅಭಿಪ್ರಾಯವಾಗಿದೆ. 2008 ರ ಮುಂಬೈ ಭಯೋತ್ಪಾದಕ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಎಂದು ವರದಿಯಾಗಿರುವ ಹಫೀಜ್ ಸಯೀದ್, ಭಾರತ ಮತ್ತು … Continued

ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲಿ ಇಂಡಿಗೋ ವಿಮಾನವು ಅದರ ವಾಯುಪ್ರದೇಶ ಬಳಸಲು ಮಾಡಿದ ಮನವಿ ತಿರಸ್ಕರಿಸಿದ ಪಾಕಿಸ್ತಾನ

 ನವದೆಹಲಿ: ದೆಹಲಿಯಿಂದ ಶ್ರೀನಗರಕ್ಕೆ ಹಾರುತ್ತಿದ್ದ ಇಂಡಿಗೋ ವಿಮಾನವು, ಆಕಾಶದಲ್ಲಿ ತೀವ್ರ ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ತುತ್ತಾದ ನಂತರ ಪ್ರಕ್ಷುಬ್ಧತೆ ತಪ್ಪಿಸಲು ಪಾಕಿಸ್ತಾನದ ವಾಯುಪ್ರದೇಶವನ್ನು ಸ್ವಲ್ಪ ಸಮಯ ಪ್ರವೇಶಿಸಲು ಅನುಮತಿ ಕೋರಿತ್ತು, ಆದರೆ ಪಾಕಿಸ್ತಾನದ ಲಾಹೋರ್ ವಾಯು ಸಂಚಾರ ನಿಯಂತ್ರಣವು ತುರ್ತು ಸಂದರ್ಭದ ಈ ಮನವಿಯನ್ನು ತಿರಸ್ಕರಿಸಿದೆ ಎಂದು ಪಿಟಿಐ ಗುರುವಾರ ವರದಿ ಮಾಡಿದೆ. 6E … Continued

ಪಾಕಿಸ್ತಾನದ ಪರ ಬೇಹುಗಾರಿಕೆ, ಸೂಕ್ಷ್ಮ ಮಾಹಿತಿ ಹಂಚಿಕೆ ಆರೋಪದ ಮೇಲೆ ವ್ಯಕ್ತಿಯ ಬಂಧನ

ನವದೆಹಲಿ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ, ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ(ಉತ್ತರ ಪ್ರದೇಶ ಎಟಿಎಸ್)ವು ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ವಾರಾಣಸಿಯ ವ್ಯಕ್ತಿಯನ್ನು ಬಂಧಿಸಿದೆ. ತುಫೈಲ್ ಎಂದು ಗುರುತಿಸಲಾದ ಆರೋಪಿಯು ಭಾರತದ ಬಗ್ಗೆ ಸೂಕ್ಷ್ಮ ಮತ್ತು ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದನೆಂದು ವರದಿಯಾಗಿದೆ. ವಾರಾಣಸಿಯ ನಿವಾಸಿ ತುಫೈಲ್ ಹಲವಾರು ಪಾಕಿಸ್ತಾನಿ ಪ್ರಜೆಗಳೊಂದಿಗೆ ಸಂಪರ್ಕದಲ್ಲಿದ್ದ … Continued

ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಐಎಸ್‌ಐ ಗೂಢಚಾರದ ಜಾಲ ಭೇದಿಸಿದ ಗುಪ್ತಚರ ಸಂಸ್ಥೆಗಳು ; ಇಬ್ಬರ ಬಂಧನ

ನವದೆಹಲಿ: ಭಾರತೀಯ ಗುಪ್ತಚರ ಸಂಸ್ಥೆಗಳು ಪಾಕಿಸ್ತಾನದ ಐಎಸ್‌ಐ ಜೊತೆ ಸಂಪರ್ಕ ಹೊಂದಿರುವ ಬೇಹುಗಾರಿಕೆ ಜಾಲವನ್ನು ಭೇದಿಸಿವೆ, ಇದರಿಂದಾಗಿ ದೆಹಲಿಯನ್ನು ಗುರಿಯಾಗಿಸಿಕೊಂಡು ನಡೆಸಲು ಉದ್ದೇಶಿಸಲಾಗಿದ್ದ ಭಯೋತ್ಪಾದಕ ಸಂಚನ್ನು ವಿಫಲಗೊಳಿಸಲಾಗಿದೆ. ಮೂರು ತಿಂಗಳ ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ದೇಶದಲ್ಲಿ ಹುದುಗಿರುವ ಪಾಕಿಸ್ತಾನಿ ಗೂಢಚಾರ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಬಹಳ ಹಿಂದೆಯೇ, … Continued

ಪಾಕಿಸ್ತಾನ ಹೈಕಮಿಷನ್ ನ ಮತ್ತೊಬ್ಬ ಅಧಿಕಾರಿಗೆ 24 ಗಂಟೆಯೊಳಗೆ ಭಾರತ ತೊರೆಯಲು ಆದೇಶ

ನವದೆಹಲಿ : ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನಲ್ಲಿರುವ ಮತ್ತೊಬ್ಬ ಅಧಿಕಾರಿಗೆ “24 ಗಂಟೆಗಳ ಒಳಗೆ ದೇಶ ತೊರೆಯುವಂತೆ ಆದೇಶಿಸಲಾಗಿದೆ ಈ ಸಂಬಂಧ ಪಾಕಿಸ್ತಾನ ಹೈಕಮಿಷನ್‌ನ ಚಾರ್ಜ್ ಡಿ’ಅಫೇರ್ಸ್‌ಗೆ ಡಿಮಾರ್ಚ್ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಪತ್ರಿಕಾ ಪ್ರಕಟಣೆ ತಿಳಿಸಿದೆ. ಪಾಕಿಸ್ತಾನ ಹೈಕಮಿಷನ್‌ನಲ್ಲಿರುವ ಮತ್ತೊಬ್ಬ ಅಧಿಕಾರಿಗೆ ಅಧಿಕೃತ ಸ್ಥಾನಮಾನಕ್ಕೆ ಅನುಗುಣವಾಗಿಲ್ಲದ ಚಟುವಟಿಕೆಗಳಿಗಾಗಿ” ಭಾರತ ಸರ್ಕಾರ ಬುಧವಾರ “ಪರ್ಸಾನಾ ನಾನ್‌ … Continued