ವಿಡಿಯೊ | ಅವರೂ ನಮಗೆ ಭಾರತದಂತೆಯೇ ಶತ್ರುಗಳು ; ಪಿಒಕೆಯಲ್ಲಿ ಪ್ರತಿಭಟನಾಕಾರರ ಹತ್ಯೆಗೆ ಪಾಕಿಸ್ತಾನದ ರಕ್ಷಣಾ ಸಚಿವ ಸಮರ್ಥನೆ

ಇಸ್ಲಾಮಾಬಾದ್/ನವದೆಹಲಿ: ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರ(ಪಿಒಕೆ)ದಲ್ಲಿ ಪ್ರತಿಭಟನೆ ನಡೆಸುತ್ತಿರುವ ಜನರ ಮೇಲೆ ಗುಂಡಿನ ದಾಳಿ ನಡೆಸಿರುವುದನ್ನು ಸಮರ್ಥಿಸಿಕೊಂಡು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಿಒಕೆ ಪ್ರತಿಭಟನಾಕಾರರನ್ನು ಭಾರತಕ್ಕೆ ಸರಿಸಮಾನವಾದ ಶತ್ರುಗಳೆಂದು ಪರಿಗಣಿಸುತ್ತೇನೆ ಎಂದು ಅವರು ಹೇಳಿದ್ದಾರೆ. “ನಾನು ಆಜಾದ್ ಕಾಶ್ಮೀರದ ಪ್ರತಿಭಟನಾಕಾರರನ್ನು ಭಾರತದಂತೆಯೇ ಶತ್ರುಗಳ ವರ್ಗದಲ್ಲಿ ಇಡುತ್ತೇನೆ. … Continued

ವಿಡಿಯೊ | ಕಾರ್ಗಿಲ್ ಯುದ್ಧದಲ್ಲಿ ತಮ್ಮ ಸೈನಿಕರ ಶವಗಳನ್ನೂ ಸ್ವೀಕರಿಸದ ಪಾಕ್ ಸೇನೆ, ಭಾರತ ಸಮಾಧಿ ಮಾಡಿತ್ತು ; ತಮ್ಮ ಸೇನೆಗೇ ಪಾಕ್‌ ನಾಯಕನಿಂದ ಮಂಗಳಾರತಿ

 ಕಾರ್ಗಿಲ್ ಯುದ್ಧದ ವರ್ಷಾಚರಣೆ ಕೆಲವೇ ದಿನಗಳು ಬಾಕಿ ಇರುವಾಗ, ಪಾಕಿಸ್ತಾನದ ರಾಜಕಾರಣಿ ಹಾಗೂ ರಾಷ್ಟ್ರೀಯ ಅಸೆಂಬ್ಲಿ (ಎಂಎನ್‌ಎ) ಸದಸ್ಯ, ಜಮಿಯತ್ ಉಲೇಮಾ-ಎ-ಇಸ್ಲಾಂ (ಜೆ.ಯು.ಐ.) ಅಧ್ಯಕ್ಷ ಮೌಲಾನಾ ಫಜ್ಲುರ್ ರೆಹಮಾನ್ ಅವರು ಪಾಕಿಸ್ತಾನ ಸೇನೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವುದು ಈಗ ಭಾರಿ ಚರ್ಚಿತ ವಿಷಯವಗಿ ಪರಿಣಮಿಸಿದೆ.   1999ರ ಕಾರ್ಗಿಲ್ ಯುದ್ಧದಲ್ಲಿ ಮೃತಪಟ್ಟ ಪಾಕಿಸ್ತಾನಿ ಸೈನಿಕರ … Continued

ʼಆಪರೇಷನ್ ಸಿಂಧೂರʼದಲ್ಲಿ ಭಾರತಕ್ಕೆ ಭಾರಿ ಯಶಸ್ಸು; ತನ್ನ ಸೋಲು ಮುಚ್ಚಿಕೊಳ್ಳಲು ಸುಳ್ಳು ಕಥೆ ಕಟ್ಟಿದ ಪಾಕ್‌ ಸೇನೆ : ನೂರೀನ್ ನಿಯಾಝಿ

ನವದೆಹಲಿ: ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಸಹೋದರಿ ನೂರೀನ್ ನಿಯಾಝಿ ಅವರು, ಭಾರತದ ‘ಆಪರೇಷನ್ ಸಿಂಧೂರ’ ನಂತರ ಪಾಕಿಸ್ತಾನ ಸೇನೆಯು ತನ್ನ ಯುದ್ಧ ವೈಫಲ್ಯಗಳನ್ನು ಮುಚ್ಚಿಹಾಕಲು ‘ನಕಲಿ ವಿಜಯ ಕಥನ’ (Victory Narrative) ಸೃಷ್ಟಿಸಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಭಾರತ ಮತ್ತು ಪಾಕಿಸ್ತಾನ ನಡುವೆ ನಾಲ್ಕು … Continued

38 ಬೇಡಿಕೆಗಳು, 48 ಗಂಟೆಗಳ ಗಡುವು: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಮತ್ತೊಂದು ಮಹಾಸಂಘರ್ಷದ ಮುನ್ಸೂಚನೆ

ನವದೆಹಲಿ: ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ (PoK) ಮತ್ತೊಮ್ಮೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಜಮ್ಮು ಕಾಶ್ಮೀರ ಜಾಯಿಂಟ್ ಅವಾಮಿ ಆಕ್ಷನ್ ಕಮಿಟಿ (JAAC) ಪಾಕಿಸ್ತಾನ ಸರ್ಕಾರಕ್ಕೆ 48 ಗಂಟೆಗಳ ಗಡುವು ನೀಡಿ, ತಮ್ಮ 38 ಅಂಶಗಳ ಬೇಡಿಕೆಗಳಿಗೆ  ಸ್ಪಂದಿಸದಿದ್ದರೆ “ಭಾರೀ ಹಾಗೂ ಅಂತಿಮ ಹಂತದ ಪ್ರತಿಭಟನೆ” ಆರಂಭಿಸುವುದಾಗಿ ಎಚ್ಚರಿಕೆ ನೀಡಿದೆ. ಈ ಬಾರಿಯ ಉದ್ವಿಗ್ನತೆಗೆ … Continued

ಪಾಕಿಸ್ತಾನ ಆಡಳಿತದಿಂದ ದಮನಕಾರಿ ಕ್ರಮ ; ನಮಗೆ ಭಾರತದ ಸಹಾಯ ಬೇಕು ಎಂದು ಪಿಒಕೆ ನಾಯಕರು

ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿ ಮುಂದುವರಿದಿರುವ ಅಶಾಂತಿ ನಡುವೆ, ಇದುವರೆಗೆ ಹಲವಾರು ಮಂದಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ, ಜಂಟಿ ಅವಾಮಿ ಆಕ್ಷನ್ ಸಮಿತಿ (JAAC) ನಾಯಕ ಸರ್ದಾರ್ ಅಮನ್ ಖಾನ್ ಭಾರತ ಜತೆ ನಿಕಟ ಸಂಪರ್ಕ ಬೆಳೆಸುವಂತೆ ಜನತೆಗೆ ಮನವಿ ಮಾಡಿದ್ದಾರೆ. ಪ್ರತಿಭಟನಾಕಾರರ ವಿರುದ್ಧ ಪಾಕಿಸ್ತಾನ ಸರ್ಕಾರ ವ್ಯಾಪಕ ದಮನ ಕಾರ್ಯಾಚರಣೆ ನಡೆಸಿದ ಬಳಿಕ ಪಾಕಿಸ್ತಾನ … Continued

ಉಗ್ರರಿಗೆ ಬೆಂಬಲ ನೀಡೋದು ನಿಲ್ಲುವವರೆಗೂ ಸಿಂಧು ಜಲ ಒಪ್ಪಂದ ಅಮಾನತಿನಲ್ಲೇ ಇರಲಿದೆ : ಪಾಕ್‌ಗೆ ಭಾರತದ ಖಡಕ್ ಸಂದೇಶ

ನವದೆಹಲಿ: ಪಾಕಿಸ್ತಾನದ ತೀವ್ರ ಆಕ್ಷೇಪಗಳ ನಡುವೆಯೂ ಸಿಂಧು ಜಲ ಒಪ್ಪಂದ (Indus Waters Treaty – IWT) ಕುರಿತಂತೆ ಭಾರತದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಭಾರತ ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಗಡಿ ದಾಟಿ ಉಗ್ರ ಚಟುವಟಿಕೆಗಳಿಗೆ ಪಾಕಿಸ್ತಾನ ನೀಡುತ್ತಿರುವ ನಿರಂತರ ಬೆಂಬಲವೇ ಈ ನಿರ್ಧಾರಕ್ಕೆ ಕಾರಣವಾಗಿದ್ದು, ಆ ಬೆಂಬಲವನ್ನು ವಿಶ್ವಾಸಾರ್ಹವಾಗಿ ಮತ್ತು ಶಾಶ್ವತವಾಗಿ … Continued

ಪಾಕಿಸ್ತಾನದಲ್ಲಿ 125 ವರ್ಷದ ಗುರುದ್ವಾರ ಧ್ವಂಸ; ‘ಅತ್ಯಂತ ಖಂಡನೀಯ ಕೃತ್ಯ’ ಎಂದ ಭಾರತ

ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿರುವ 125 ವರ್ಷಗಳಷ್ಟು ಹಳೆಯ ಐತಿಹಾಸಿಕ ಗುರುದ್ವಾರ ಶ್ರೀ ಗುರು ಸಿಂಗ್ ಸಭಾ ಸಾಹಿಬ್ (Gurdwara Sri Guru Singh Sabha Sahib) ಅನ್ನು ಸ್ಥಳೀಯ ಉದ್ಯಮಿಯೊಬ್ಬರು ನೆಲಸಮಗೊಳಿಸಿರುವ ಘಟನೆ ಅಲ್ಪಸಂಖ್ಯಾತ ಸಿಖ್ ಸಮುದಾಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ಇದು ಸಿಖ್ ಧರ್ಮದ ಪವಿತ್ರ … Continued

ವಿಡಿಯೋ | ಪಿಒಕೆ ಪಾಕಿಸ್ತಾನದ ಭಾಗವಲ್ಲ ; ಪಿಒಕೆಯಲ್ಲಿ ಪಾಕ್ ವಿರುದ್ಧ ಭುಗಿಲೆದ್ದ ಆಕ್ರೋಶ ; ಭಾರತದತ್ತ ಮುಖ ಮಾಡ್ತೀವಿ ಎಂದು ಎಚ್ಚರಿಕೆ !

ರಾವಲಕೋಟ್ (ಪಿಒಕೆ): ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಪಾಕಿಸ್ತಾನ ಸರ್ಕಾರದ ದಬ್ಬಾಳಿಕೆ ಮತ್ತು ನಿಯಂತ್ರಣದ ವಿರುದ್ಧ ನಾಗರಿಕರ ಆಕ್ರೋಶ ತಾರಕಕ್ಕೇರಿದೆ. ರಾವಲಕೋಟದಲ್ಲಿ ಪಾಕ್ ಸರ್ಕಾರದ ವಿರುದ್ಧ ನಡೆಯುತ್ತಿರುವ ಬೃಹತ್ ಧರಣಿ ಸತ್ಯಾಗ್ರಹವು ಮಂಗಳವಾರದ ವೇಳೆಗೆ 22ನೇ ದಿನಕ್ಕೆ ಕಾಲಿಟ್ಟಿದ್ದು, ಸಾವಿರಾರು ಪ್ರತಿಭಟನಾಕಾರರು ಬೀದಿಗಿಳಿದು ಪಾಕಿಸ್ತಾನ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾವಲಕೋಟ್‌ನ ಪ್ರಸಿದ್ಧ ಈದ್ಗಾ … Continued

ಪಾಕ್‌ ಕ್ರಿಕೆಟ್‌ ತಂಡದ ಮಾಜಿ ವೇಗಿ ಶೋಯೆಬ್ ಅಖ್ತರ್ ಅಣ್ಣನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿ ; ವಿಡಿಯೋ ವೈರಲ್‌

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಅವರ ಹಿರಿಯ ಸಹೋದರ ಶಾಹಿದ್ ಅಖ್ತರ್ ಅವರ ಅಂತ್ಯಕ್ರಿಯೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (LeT) ಮತ್ತು ಅದರ ರಾಜಕೀಯ ಮುಖವಾಣಿ ಪಾಕಿಸ್ತಾನ್ ಮರ್ಕಝಿ ಮುಸ್ಲಿಂ ಲೀಗ್ (PMML) ನಾಯಕರು ಅಲ್ಲಿ ಕಾಣಿಸಿಕೊಂಡಿರುವುದು ಪಾಕಿಸ್ತಾನದಲ್ಲಿ ಉಗ್ರರಿಗೆ ಸುರಕ್ಷಿತ ಆಶ್ರಯ ದೊರೆಯುತ್ತಿದೆ ಎಂಬ ಆತಂಕವನ್ನು ಮತ್ತೊಮ್ಮೆ ಹೆಚ್ಚಿಸಿದೆ. … Continued

ಪಾಕ್‌ ವಿರುದ್ಧ ಪಿಒಕೆಯಲ್ಲಿ ಭುಗಿಲೆದ್ದ ಆಕ್ರೋಶ : ನಾಲ್ವರು ಪ್ರಮುಖರ ಸುಳಿವು ಕೊಟ್ಟವರಿಗೆ 1 ಕೋಟಿ ರೂ. ಬಹುಮಾನ ಘೋಷಿಸಿದ ಪಾಕಿಸ್ತಾನ

 ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ನಡೆಯುತ್ತಿರುವ ನಾಗರಿಕ ಹಕ್ಕುಗಳ ಪ್ರತಿಭಟನೆಯನ್ನು ಹತ್ತಿಕ್ಕಲು ಪಾಕಿಸ್ತಾನ ಸರ್ಕಾರ ಕ್ರೂರ ದಮನ ನೀತಿಯನ್ನು ಮುಂದುವರಿಸಿದೆ. ಇದರ ಭಾಗವಾಗಿ, ಕಳೆದ ವಾರ ನಿಷೇಧಕ್ಕೊಳಗಾದ ನಾಗರಿಕ ಸಮಾಜದ ಮೈತ್ರಿಕೂಟವಾದ ‘ಜಂಟಿ ಅವಾಮಿ ಆಕ್ಷನ್ ಕಮಿಟಿ’ (JAAC) ಯ ಪ್ರಮುಖ ನಾಲ್ಕು ನಾಯಕರನ್ನು ಬಂಧಿಸಲು ನೆರವಾಗುವ ಮಾಹಿತಿ ನೀಡಿದವರಿಗೆ 1 ಕೋಟಿ ಪಾಕಿಸ್ತಾನಿ ರೂಪಾಯಿ … Continued