ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕನಿಗೆ ಪಾಕಿಸ್ತಾನದಲ್ಲಿ ಗುಂಡಿಕ್ಕಿ ಹತ್ಯೆ

ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಮಾಜಿ ಕಮಾಂಡರ್ ಅಕ್ರಮ್ ಖಾನ್ ಎಂಬಾತನನ್ನು ಪಾಕಿಸ್ತಾನದಲ್ಲಿ ಗುರುವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ವಿವರಗಳ ಪ್ರಕಾರ, ಅಕ್ರಮ್ ಗಾಜಿ ಎಂಬ ಹೆಸರಿನಿಂದಲೂ ಕರೆಯಲ್ಪಡುವ ಅಕ್ರಮ್ ಖಾನ್, ಬಜೌರ್ ಜಿಲ್ಲೆಯಲ್ಲಿ (ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ) ಅಪರಿಚಿತ ದಾಳಿಕೋರರಿಂದ ಗುಂಡಿಕ್ಕಿ ಕೊಲ್ಲಲ್ಪಟ್ಟಿದ್ದಾನೆ. 2018 ರಿಂದ 2020ರ ವರೆಗೆ ಎಲ್ಇಟಿ ನೇಮಕಾತಿ ಸೆಲ್ … Continued

ಕ್ರಿಕೆಟ್ ವಿಶ್ವಕಪ್ 2023 : ಶ್ರೀಲಂಕಾ ವಿರುದ್ಧ ಗೆಲುವಿನಿಂದ ನ್ಯೂಜಿಲೆಂಡಿಗೆ ಹೆಚ್ಚಿದ ಸೆಮಿಫೈನಲ್‌ ಅವಕಾಶ, ಪಾಕಿಸ್ತಾನಕ್ಕೆ ಇದು ಸಾಧ್ಯವಿದೆಯೇ..? ಲೆಕ್ಕಾಚಾರ ಹೀಗಿದೆ….

ಬೆಂಗಳೂರು: ಗುರುವಾರ ನಡೆದ ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ಐದು ವಿಕೆಟ್‌ಗಳ ಜಯ ಸಾಧಿಸಿದೆ. ಆ ಮೂಲಕ 2023 ರ ಕ್ರಿಕೆಟ್ ವಿಶ್ವಕಪ್ ಸೆಮಿಫೈನಲ್‌ ಪ್ರವೇಶದ ಓಟದಲ್ಲಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಎರಡೂ ತಂಡಗಳು ಭಾರಿ ಕಠಿಣ ಸವಾಲು ನೀಡಿದೆ. ನ್ಯೂಜಿಲೆಂಡ್ ಈಗ 9 ಪಂದ್ಯಗಳಿಂದ 10 ಅಂಕಗಳನ್ನು +0.743 ರ ನಿವ್ವಳ ರನ್ ರೇಟ್‌ ಹೊಂದಿದೆ. … Continued

ಇಸ್ರೇಲ್‌ ‘ಐರನ್ ಡೋಮ್’ ಮಾದರಿಯಲ್ಲಿ ಕ್ಷಿಪಣಿ ನಾಶಕ ‘ವಾಯು ರಕ್ಷಣಾ ವ್ಯವಸ್ಥೆʼ ಅಭಿವೃದ್ಧಿಪಡಿಸುತ್ತಿದೆ ಭಾರತ : ಹೇಗೆ ರಕ್ಷಣೆ ಮಾಡುತ್ತದೆ..? ಇಲ್ಲಿದೆ…

ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧವು ಇಸ್ರೇಲ್‌ನ ಐರನ್ ಡೋಮ್ ವಾಯು ರಕ್ಷಣಾ ವ್ಯವಸ್ಥೆ ಗಮನಾರ್ಹ ಗಮನ ಸೆಳೆದಿದೆ. ಆರಂಭದಲ್ಲಿ ಈ ಅತ್ಯಾಧುನಿಕ ರಾಕೆಟ್ ರಕ್ಷಣಾ ವ್ಯವಸ್ಥೆಯನ್ನು ಬಹುತೇಕ ಭೇದಿಸಿ ರಾಕೆಟ್‌ ಒಳ ಹೋಗಲಾರದು ಎಂದು ನಂಬಲಾಗಿತ್ತು, ಆದರೆ ಅಕ್ಟೋಬರ್ 7 ರಂದು ಪ್ಯಾಲೇಸ್ತಿನಿಯನ್ ಉಗ್ರಗಾಮಿ ಗುಂಪು ಹಮಾಸ್ ಕೇವಲ 20 ನಿಮಿಷಗಳಲ್ಲಿ ಸುಮಾರು 5,000 ರಾಕೆಟ್‌ಗಳನ್ನು ಹಾರಿಸುವ … Continued

ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನ ಕಾನೂನುಬದ್ಧ ಪಕ್ಷವಲ್ಲ : ಬ್ರಿಟಿನ್‌ ಸಂಸತ್ತಿನಲ್ಲಿ ಪಿಒಕೆ ಸಾಮಾಜಿಕ ಕಾರ್ಯಕರ್ತ ಪ್ರತಿಪಾದನೆ

ಲಂಡನ್‌: ಜಮ್ಮು ಮತ್ತು ಕಾಶ್ಮೀರದ ವಿವಾದದ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಪಾಕಿಸ್ತಾನ ಕಾನೂನುಬದ್ಧ ಪಾಲುದಾರ ಪಕ್ಷವಲ್ಲ ಎಂದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಸಾಮಾಜಿಕ ಕಾರ್ಯಕರ್ತ ಪ್ರೊ. ಸಜ್ಜದ್‌ ರಾಜಾ ಪ್ರತಿಪಾದಿಸಿದ್ದಾರೆ. ಬ್ರಿಟನ್ನಿನ ಸಂಸತ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ದಿನಾಚರಣೆ (ಅ.26.1947 ರಂದು ಭಾರತಕ್ಕೆ ಸೇರ್ಪಡೆಯಾದ 76ನೇ ವರ್ಷಾಚರಣೆ) ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ”ಪಾಕ್‌ … Continued

ವಿಶ್ವಕಪ್ : ರೋಚಕ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ 1 ವಿಕೆಟ್‌ ಗೆಲುವು

ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಮೈದಾನದಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದವರು ಪಾಕಿಸ್ತಾನ ತಂಡದ ವಿರುದ್ಧ 1 ವಿಕೆಟ್‌ ರೋಚಕ ಗೆಲುವು ದಾಖಲಿಸಿದರು. ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದೆ ಹಾಗೂ ಸತತ ನಾಲ್ಕು ಪಂದ್ಯ ಸೋಲು ಕಂಡ ಪಾಕಿಸ್ತಾನ ತಂಡವು ಸೆಮಿಫೈನಲ್ ಪ್ರವೇಶಿಸುವ … Continued

ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಹೀನಾಯ ಸೋಲು : ಪಾಕಿಸ್ತಾನದ ಆಟಗಾರರಿಗೆ ʼ8 ಕೆಜಿ ಮಟನ್ʼ ಟೀಕೆ ಮಾಡಿದ ವಾಸಿಂ ಅಕ್ರಂ | ವೀಕ್ಷಿಸಿ

ಭಾರತದಲ್ಲಿ ನಡೆಯುತ್ತಿರುವ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಾಕಿಸ್ತಾನ ಕ್ರಿಕೆಟ್ ತಂಡವು ಅವರ ಕಳಪೆ ಪ್ರದರ್ಶನ ನೀಡಿ ಹೀನಾಯವಾಗಿ ಸೋತ ನಂತರ ತನ್ನ ತವರಿನಲ್ಲಿ ಸಾಕಷ್ಟು ಟೀಕೆಗೆ ಒಳಗಾಗುತ್ತಿದೆ. ಪಾಕಿಸ್ತಾನ ತಂಡದ ಆಟಗಾರರ ಫಿಟ್‌ನೆಸ್ ಮಟ್ಟಗಳಿಗಾಗಿ ಐಕಾನಿಕ್ ವೇಗಿ ವಾಸಿಂ ಅಕ್ರಂ ತಮ್ಮ ದೇಶದ ಆಟಗಾರನ್ನು ಹಿಗ್ಗಾಮುಗ್ಗಾ ಟೀಕಿಸಿದ್ದಾರೆ. ಪಾಕಿಸ್ತಾನ ಮೂಲದ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನಡೆದ ಪಂದ್ಯದ … Continued

ಪಾಕಿಸ್ತಾನದಿಂದ ಅಫ್ಘಾನಿಸ್ತಾನಕ್ಕೆ ಗಡಿಪಾರಾದವರಿಗೆ ʼಪಂದ್ಯ ಆಟಗಾರʼ ಪ್ರಶಸ್ತಿ ಅರ್ಪಣೆ : ಅಫ್ಘಾನಿಸ್ತಾನ ಬ್ಯಾಟರ್ ಇಬ್ರಾಹಿಂ ಜದ್ರಾನ್ ಬಹುದೊಡ್ಡ ಹೇಳಿಕೆ

ಚೆನ್ನೈ: ಭಾರತದಲ್ಲಿ ನಡೆಯುತ್ತಿರುವ 2023ರ ಐಸಿಸಿ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಗೆಲುವಿನ ಬ್ಯಾಟಿಂಗ್‌ ಮಾಡಿದ ನಂತರ, ಅಫ್ಘಾನಿಸ್ತಾನ ಬ್ಯಾಟರ್ ಇಬ್ರಾಹಿಂ ಝದ್ರಾನ್ 87 ರನ್‌ಗಳ ಭರ್ಜರಿ ಬ್ಯಾಟಿಂಗ್‌ಗಾಗಿ ಪಂದ್ಯ ಪುರುಷ (POTM) ಪ್ರಶಸ್ತಿಗೆ ಭಾಜನರಾದ ನಂತರ ಬಹುದೊಡ್ಡ ಹೇಳಿಕೆ ನೀಡಿದ್ದಾರೆ. ಝದ್ರಾನ್ ತಮ್ಮ ಪಂದ್ಯ ಪುರುಷ ಪ್ರಶಸ್ತಿಯನ್ನು ಪಾಕಿಸ್ತಾನದಿಂದ ಗಡಿಪಾರು ಮಾಡಿದ ಆಫ್ಘನ್ನರಿಗೆ ಅರ್ಪಿಸುವುದಾಗಿ ಹೇಳಿದ್ದಾರೆ. … Continued

ಸತತ ಮೂರನೇ ಸೋಲು : ಪಾಕಿಸ್ತಾನ ವಿಶ್ವಕಪ್ 2023ರ ಸೆಮಿಫೈನಲ್‌ಗೆ ಅರ್ಹತೆ ಪಡೆಯಬಹುದೇ ? ಪಾಕಿಸ್ತಾನಕ್ಕಿರುವ ಸವಾಲುಗಳು…

ಚೆನ್ನೈ : ಸೋಮವಾರ ಚೆನ್ನೈನಲ್ಲಿ ನಡೆದ ಮೂರನೇ ಸತತ ಸೋಲುಂಡು ಪಾಕಿಸ್ತಾನವು ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾರೀ ಆಘಾತ ಅನುಭವಿಸಿತು. ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ವಿರುದ್ಧದ ಸೋಲಿನ ನಂತರ ಈಗ ಬಾಲಂಗೋಚಿ ತಂಡ ಎಂದು ಪರಿಗಣಿಸಲ್ಪಟ್ಟಿದ್ದ ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ಹೀನಾಯವಾಗಿ ಸೋತಿತು. ಸೆಮಿಫೈನಲ್ಲಿಗೆ ಹೋಗುವ ತಮ್ಮ ಅವಕಾಶಗಳನ್ನು ಹೆಚ್ಚಿಸಲು ಅಫ್ಘಾನಿಸ್ತಾನದ ವಿರುದ್ಧ … Continued

ಕ್ರಿಕೆಟ್‌ ವಿಶ್ವಕಪ್ 2023: ರೋಚಕ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಆಘಾತ ; ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ

ಚೆನ್ನೈ: ಸೋಮವಾರ (ಅಕ್ಟೋಬರ್ 23) ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ತಮ್ಮ ಲೀಗ್ ಮುಖಾಮುಖಿಯಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಅಫ್ಘಾನಿಸ್ತಾನವು ವಿಶ್ವಕಪ್‌ನಲ್ಲಿ ತಮ್ಮ ಬಲಾಢ್ಯ ತಂಡ ಮಣಿಸುವ ಅಭಿಯಾನವನ್ನು ಮುಂದುವರೆಸಿದೆ. 283 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಅಫ್ಘಾನಿಸ್ತಾನ ಬ್ಯಾಟ್ಸ್‌ಮನ್‌ಗಳು ರಹಮತ್ ಶಾ (77*) ಮತ್ತು ಹಶ್ಮತುಲ್ಲಾ ಶಾಹಿದಿ (48*)ಅವರೊಂದಿಗೆ ರಹಮಾನುಲ್ಲಾ ಗುರ್ಬಾಜ್ (65) ಮತ್ತು … Continued

ದಾಖಲೆ ಸೋರಿಕೆ ಪ್ರಕರಣ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಶಾ ಮಹಮೂದ್ ಖುರೇಷಿ ವಿರುದ್ಧ ದೋಷಾರೋಪ

ಇಸ್ಲಾಮಾಬಾದ್‌ : ದೇಶದ ರಹಸ್ಯ ಕಾನೂನುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಪಾಕಿಸ್ತಾನದ ವಿಶೇಷ ನ್ಯಾಯಾಲಯವು ಸೋಮವಾರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಉಪಾಧ್ಯಕ್ಷ ಶಾ ಮಹಮೂದ್ ಖುರೇಷಿ ವಿರುದ್ಧ ದೋಷಾರೋಪ ಹೊರಿಸಿದೆ. ಈ ಪ್ರಕರಣದಲ್ಲಿ ಖಾನ್ ಮತ್ತು ಖುರೇಷಿ ಇಬ್ಬರೂ ತಾವು ನಿರ್ದೋಷಿಗಳೆಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನದ … Continued