ಪಾಕಿಸ್ತಾನ್ ಮುರ್ದಾಬಾದ್ ಎಂದ ಬಾಲಕನಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು…

ಶಹಜಹಾನಪುರ : ಪಾಕಿಸ್ತಾನದಲ್ಲಿನ ಭಯೋತ್ಪಾದಕ ಕೇಂದ್ರಗಳ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ ವೈಮಾನಿಕ ದಾಳಿಯ ನಂತರ, ಉತ್ತರ ಪ್ರದೇಶದ ಶಹಜಹಾನಪುರ ಜಿಲ್ಲೆಯ ಹಳ್ಳಿಯಲ್ಲಿ ನಡೆದ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರದ ಮೇಲೆ ಭಾರತ ನಡೆಸಿದ ವಾಯುದಾಳಿಯ ನಂತರ ಸಾರ್ವಜನಿಕರ ಸಂಭ್ರಮದ ವೇಳೆ ಎಂಟು ವರ್ಷದ … Continued

ಆಪರೇಷನ್ ಸಿಂಧೂರ | ಪಹಲ್ಗಾಮ್‌, ಪುಲ್ವಾಮಾ, ಪಠಾಣಕೋಟ್, ಮುಂಬೈ…ಅನೇಕ ಭಯೋತ್ಪಾದಕ ದಾಳಿಗಳಿಗೆ ಭಾರತ ಸೇಡು ತೀರಿಸಿಕೊಂಡಿದ್ದು ಹೇಗೆ..?

ನವದೆಹಲಿ: 26/11 ಮುಂಬೈ ದಾಳಿಯಿಂದ ಹಿಡಿದು 2024 ರ ಗುಲ್ಮಾರ್ಗ್ ದಾಳಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯವರೆಗಿನ ಪಾಕಿಸ್ತಾನದ ಭಯೋತ್ಪಾದಕ ತರಬೇತಿ ಸ್ಥಳಗಳನ್ನು ಭಾರತವು ಗುರಿಯಾಗಿಸಿ ದಾಳಿ ಮಾಡಿದೆ, ಈ ಸ್ಥಳಗಳಲ್ಲಿಯೇ ಹಲವಾರು ದಾಳಿಗಳನ್ನು ಯೋಜಿಸಲಾಗಿದೆ ಮತ್ತು ಕಾರ್ಯಗತಗೊಳಿಸಲಾಗಿದೆ ಎಂಬ ಮಾಹಿತಿ ಆದಾರದ ಮೇಲೆ ಈ ಸ್ಥಳಗಳ ಮೇಲೆ ಭಾರತದ ಸೈನ್ಯ ವಾಯು ದಾಳಿ ನಡೆಸಿದೆ. ಆಪರೇಷನ್ … Continued

ವೀಡಿಯೊ…| ಭಾರತದ ದಾಳಿಯಲ್ಲಿ ಸತ್ತ ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನ ಸೇನೆ ಭಾಗಿ ; ಉಗ್ರರ ಶವಗಳ ಮೇಲೆ ಪಾಕ್‌ ಧ್ವಜ…!

ಲಾಹೋರ್‌: ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಕ್ಯಾಂಪ್‌ಗಳ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ(Operation Sindoor) ಹೆಸರಿನ ವಾಯು ದಾಳಿಯಲ್ಲಿ ಹತರಾದ ಹಲವಾರು ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಬುಧವಾರ ಪಾಕಿಸ್ತಾನ ಸೇನಾ ಸಿಬ್ಬಂದಿ ಮತ್ತು ನಿಷೇಧಿತ ಹಫೀಜ್ ಸಯೀದ್ ಜಮಾತ್-ಉದ್-ದವಾ (JDU) ಸದಸ್ಯರು ಭಾಗವಹಿಸಿದ್ದರು. ಭಾರತದ ಸಶಸ್ತ್ರ ಪಡೆಗಳು … Continued

ಪಾಕಿಸ್ತಾನ, ಪಾಕ್‌ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲಿನ ಕ್ಷಿಪಣಿ ದಾಳಿಗಳ ವೀಡಿಯೊ ಹಂಚಿಕೊಂಡ ಭಾರತೀಯ ಸೈನ್ಯ | ವೀಕ್ಷಿಸಿ

ನವದೆಹಲಿ: ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ಬುಧವಾರ ಬೆಳಗಿನ ಜಾವ ನಡೆಸಿದ ದಾಳಿಯ ವೀಡಿಯೊಗಳನ್ನು ಭಾರತೀಯ ಸೇನೆ ಬಿಡುಗಡೆ ಮಾಡಿದೆ. ಇದು ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್‌ನಂತಹ ಭಯೋತ್ಪಾದಕ ಗುಂಪುಗಳು ಭಯೋತ್ಪಾದಕರ ತರಬೇತಿಗೆ ಬಳಸುತ್ತಿದ್ದ ಸ್ಥಳಗಳ ಮೇಲೆ ನಿಖರವಾದ ದಾಳಿಗಳನ್ನು ನಡೆಸಿದೆ. ದಾಳಿಯ ನಂತರ, ಭಾರತೀಯ ಸೇನೆಯ ಅಧಿಕೃತ ಹ್ಯಾಂಡಲ್ … Continued

ಭಾರತದ ದಾಳಿಯಲ್ಲಿ ಉಗ್ರ ಸಂಘಟನೆ ಜೈಷ್ ಮುಖ್ಯಸ್ಥ-ಮುಂಬೈ ದಾಳಿ ಮಾಸ್ಟರ್‌ ಮೈಂಡ್‌ ಮಸೂದ್ ಅಜರ್ 10 ಸಂಬಂಧಿಗಳ ಸಾವು

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತ ನಡೆಸಿದ ವಾಯುದಾಳಿಯಲ್ಲಿ ತನ್ನ ಕುಟುಂಬದ 10 ಸದಸ್ಯರು ಮತ್ತು ತನ್ನ ನಾಲ್ವರು ಸಹಾಯಕರು ಸಾವಿಗೀಡಾಗಿದ್ದಾರೆ ಎಂದು ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಹಾಗೂ ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರರ ಮೈಂಡ್‌ ಮೌಲಾನಾ ಮಸೂದ್ ಅಜರ್ ಹೇಳಿಕೊಂಡಿದ್ದಾನೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ … Continued

ವೀಡಿಯೊಗಳು..| ಆಪರೇಶನ್‌ ಸಿಂಧೂರ್‌ : ಪಾಕಿಸ್ತಾನ, ಪಿಒಕೆಯ 9 ಭಯೋತ್ಪಾಕರ ನೆಲೆ ಮೇಲೆ ಭಾರತ ಸೇನೆಯಿಂದ ಕ್ಷಿಪಣಿ ದಾಳಿ, 80ಕ್ಕೂ ಹೆಚ್ಚು ಉಗ್ರರು ಸಾವು..?

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತವು ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿದೆ. ಇದಕ್ಕೆ ʼಆಪರೇಷನ್ ಸಿಂಧೂರ್ʼ (‌Operation Sindoor) ಎಂದು ಹೆಸರಿಡಲಾಗಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕರ ತಾಣಗಳ ಮೇಲೆ ಬುಧವಾರ ಬೆಳಗಿನ ಜಾವ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿದೆ ಎಂದು ರಕ್ಷಣಾ ಸಚಿವಾಲಯ … Continued

ವೀಡಿಯೊ | ಭಾರತ ಪಾಕ್‌ ಮೇಲೆ ದಾಳಿ ಮಾಡಿದ್ರೆ ನೀವು ಭಾರತದ ಸೇನೆ ಬೆಂಬಲಿಸಿ ; ಪಾಕಿಸ್ತಾನ ಪಶ್ತೂನ್‌ ಮುಸ್ಲಿಮರಿಗೆ ಕರೆ ನೀಡಿದ ಧರ್ಮಗುರು..!

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದ ಇಸ್ಲಾಮಿಕ್ ಧರ್ಮಗುರುವಿನ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ಪಶ್ತೂನ್ ಸಮುದಾಯವು ಭಾರತೀಯ ಸೇನೆಯ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಭಾರತೀಯ ಪ್ರವಾಸಿಗರು ಸಾವಿಗೀಡಾದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚಿದ ಉದ್ವಿಗ್ನತೆಯ … Continued

ವೀಡಿಯೊ | ‘ಯುದ್ಧ ನಡೆದ್ರೆ ನೀವು ಪಾಕಿಸ್ತಾನ ಬೆಂಬಲಿಸ್ತೀರಾ..’-ಪಾಕಿಸ್ತಾನದ ಲಾಲ್‌ ಮಸೀದಿ ಇಮಾಂ ಪ್ರಶ್ನೆಗೆ ಪಾಕ್‌ ಪರ ಕೈ ಎತ್ತುವವರೇ ಇಲ್ಲ..!

ಪಾಕಿಸ್ತಾನವು ತನ್ನ ಜನರ ಮೇಲೆ ಭಾರತಕ್ಕಿಂತ ಹೆಚ್ಚು ದಬ್ಬಾಳಿಕೆ ನಡೆಸುತ್ತಿದೆ, ಆದ್ದರಿಂದ ಭಾರತದ ಜೊತೆ ಯುದ್ಧ ನಡೆದರೆ ಪಾಕಿಸ್ತಾನವನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ ಎಂದು ಪಾಕಿಸ್ತಾನದ ಪ್ರಮುಖ ಧರ್ಮಗುರು ಹೇಳಿದ್ದಾರೆ. ಕಳೆದ ತಿಂಗಳು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಿದ ಹಿನ್ನೆಲೆಯಲ್ಲಿ ಪಾಕಿಸ್ತಾನಿ ಸೇನೆ ಭಾರತದ ವಿರುದ್ಧ … Continued

“ಕೆಲವು ಸಾಮಾಜಿಕ ಮಾಧ್ಯಮ ಪ್ರಭಾವಿಗಳಿಂದ ಭಾರತದ ಹಿತಾಸಕ್ತಿಗೆ ವಿರುದ್ಧ ಕೆಲಸ “: ಕೇಂದ್ರಕ್ಕೆ ತಿಳಿಸಿದ ಸದನ ಸಮಿತಿ

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ “ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಲಾದ ಕೆಲವು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು ವೇದಿಕೆಗಳ ವಿರುದ್ಧ ತೆಗೆದುಕೊಂಡ ಕ್ರಮಗಳ ಕುರಿತು ಕೇಂದ್ರದಿಂದ ವಿವರಗಳನ್ನು ಸಂಸತ್ತಿನ ಸಮಿತಿ ಕೇಳಿದೆ. “ದೇಶದಲ್ಲಿನ ಕೆಲವು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು … Continued

ವೀಡಿಯೊ…| ಭಯೋತ್ಪಾದಕ ದಾಳಿಯ ನಂತರ ತಲ್ಲಣಗೊಂಡ ಪಹಲ್ಗಾಮ್ ಮಾರುಕಟ್ಟೆಯ ಹೊಸ ಸಿಸಿಟಿವಿ ದೃಶ್ಯ ವೈರಲ್‌…

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬೈಸರನ್ ಕಣಿವೆಯ ಸುಂದರವಾದ ಪಹಲ್ಗಾಮ್ ಹುಲ್ಲುಗಾವಲಿನಿಂದ ಇಳಿಜಾರಿನಲ್ಲಿರುವ ಮಾರುಕಟ್ಟೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಭಯೋತ್ಪಾದಕ ದಾಳಿ ಪ್ರಾರಂಭವಾದ ಒಂದು ಗಂಟೆಯ ನಂತರ, ಮಕ್ಕಳು ಸೇರಿದಂತೆ ಕೆಲ ಪ್ರವಾಸಿಗರು ಓಡುತ್ತಿರುವುದನ್ನು ಮತ್ತು ವಾಹನಗಳು ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿರುವುದು ಕಂಡುಬಂದಿದೆ. ದೃಶ್ಯಗಳ ಸಮಯ ಏಪ್ರಿಲ್ 22 ರಂದು ಸಮಯಕ್ಕೆ ಹೊಂದಿಕೆಯಾಗುತ್ತದೆ, ಅಂದರೆ ಗಡಿಯಾಚೆಗಿನ ಸಂಪರ್ಕ … Continued