ಪಹಲ್ಗಾಮ ದಾಳಿ | ಮೋದಿ ಸೇನೆಗೆ ಮುಕ್ತ ಅಧಿಕಾರ ಕೊಟ್ಟ ನಂತ್ರ ಬೆಚ್ಚಿಬಿದ್ದ ಪಾಕಿಸ್ತಾನ ; ಮಧ್ಯರಾತ್ರಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಪಾಕ್‌ ಸಚಿವ..!

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಬಂಧಗಳು ಹದಗೆಟ್ಟಿದೆ. ಈ ಮಧ್ಯೆ ಭಾರತವು ಮುಂದಿನ 24-36 ಗಂಟೆಗಳಲ್ಲಿ ಮಿಲಿಟರಿ ದಾಳಿ ನಡೆಸುವ ಬಗ್ಗೆ ಯೋಜಿಸುತ್ತಿದೆ ಎಂಬ “ವಿಶ್ವಾಸಾರ್ಹ ಮಾಹಿತಿ” ತನ್ನಲ್ಲಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಬೆಳಗಿನ ಜಾವ 2 ಗಂಟೆಗೆ ಕರೆದ ತುರ್ತು ಪತ್ರಿಕಾಗೋಷ್ಠಿಯಲ್ಲಿ, ಮಾಹಿತಿ ಸಚಿವ ಅತ್ತೌಲ್ಲಾ ತರಾರ್, … Continued

ಒನ್-ವೇ ಟ್ರಾಫಿಕ್…”: ಪಹಲ್ಗಾಮ್‌ ದಾಳಿಯ ನಂತರ ಭಾರತದಲ್ಲಿ ಪಾಕ್ ಕಲಾವಿದರ ಪ್ರದರ್ಶನದ ಬಗ್ಗೆ ಜಾವೇದ್ ಅಖ್ತರ್

ನವದೆಹಲಿ: ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಕಾಶ್ಮೀರಿ ಪೋನಿವಾಲ್ಲಾ ಸಾವಿಗೀಡಾದ ನಂತರ, ಪಾಕಿಸ್ತಾನಿ ನಟ ಫವಾದ್ ಖಾನ್ ನಟಿಸಿದ ಚಲನಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡಲಾಗುವುದಿಲ್ಲ ಮತ್ತು ಇದು ಸರಿಯಾದ ಕ್ರಮವೇ ಎಂಬ ಬಗ್ಗೆ ಚರ್ಚೆಗಳು ನಡೆದಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ … Continued

ಪಹಲ್ಗಾಮ್‌ ಭಯೋತ್ಪಾದಕ ದಾಳಿ | ಭಯೋತ್ಪಾಕರ ಮಟ್ಟ ಹಾಕಲು ಸೇನೆಗೆ ಸಂಪೂರ್ಣ ಅಧಿಕಾರ ನೀಡಿದ ಪ್ರಧಾನಿ ಮೋದಿ

ನವದೆಹಲಿ : ಪಹಲ್ಗಾಮ್‌ ಭಯೋತ್ಪಾದಕರ ದಾಳಿಗೆ ತಕ್ಕ ಉತ್ತರ ನೀಡಲು ಸಜ್ಜಾಗಿರುವ ಭಾರತ ಅವರ ವಿರುದ್ಧದ ಕಾರ್ಯಾಚರಣೆಗೆ ಸಂಬಂಧಿಸಿ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಭಯೋತ್ಪಾದಕರಿಗೆ ತಕ್ಕ ಉತ್ತರ ನೀಡುವ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಭಾರತೀಯ ಸಶಸ್ತ್ರ ಪಡೆಗಳಿಗೆ ಕಾರ್ಯಾಚರಣೆ ನಡೆಸಲು … Continued

ಭಾರತದ ಜೊತೆ ಘರ್ಷಣೆಗೆ ಇಳಿದು ತೊಂದರೆಗೆ ಸಿಲುಕಿಕೊಳ್ಳಬೇಡಿ; ಪಾಕ್ ಪ್ರಧಾನಿ ಶೆಹಬಾಜ್ ಷರೀಫ್‌ ಗೆ ಮಾಜಿ ಪ್ರಧಾನಿ ನವಾಜ್ ಎಚ್ಚರಿಕೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ, ಪಾಕಿಸ್ತಾನ ಮುಸ್ಲಿಂ ಲೀಗ್ – ನವಾಜ್ (ಪಿಎಂಎಲ್-ಎನ್) ಮುಖ್ಯಸ್ಥ ನವಾಜ್ ಷರೀಫ್ ತಮ್ಮ ಸಹೋದರ ಮತ್ತು ಪ್ರಧಾನಿ ಶೆಹಬಾಜ್ ಷರೀಫ್ ಅವರಿಗೆ ರಾಜತಾಂತ್ರಿಕ ನಿರ್ಣಯವನ್ನು ಅನುಸರಿಸಲು ಮತ್ತು ಭಾರತದೊಂದಿಗೆ ಉದ್ವಿಗ್ನತೆ ಹೆಚ್ಚಾಗುವುದನ್ನು ತಪ್ಪಿಸಲು … Continued

‘ಭಾರತದ ಮಿಲಿಟರಿ ದಾಳಿ ಸನ್ನಿಹಿತ, ನಮ್ಮ ಶಕ್ತಿ ಬಲಪಡಿಸಿದ್ದೇವೆ’: ಪಹಲ್ಗಾಮ್ ಉದ್ವಿಗ್ನತೆಯ ಮಧ್ಯೆ ಪಾಕಿಸ್ತಾನ ರಕ್ಷಣಾ ಸಚಿವ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ಭಾರತದ ಮಿಲಿಟರಿ ಆಕ್ರಮಣವು “ಸನ್ನಿಹಿತವಾಗಿದೆ” ಎಂದು ಸೋಮವಾರ ಹೇಳಿದ್ದಾರೆ. ಅಲ್ಲದೆ, ಇಸ್ಲಾಮಾಬಾದ್ ತನ್ನ ಪಡೆಗಳನ್ನು ಬಲಪಡಿಸಿದೆ ಎಂದು ಹೇಳಿದ್ದಾರೆ. ಕಳೆದ ವಾರ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಸುಂದರವಾದ ಬೈಸರನ್ ಕಣಿವೆಯಲ್ಲಿ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ … Continued

“ಅವರು ನಿಮ್ಮ ತಾಯಿಗೆ ಗುಂಡು ಹಾರಿಸಿದಾಗ ಮಾತ್ರ ಭಯೋತ್ಪಾದನೆ…ನಮ್ಮವರ ಮೇಲೆ ಗುಂಡು ಹಾರಿಸಿದಾಗ ಅಲ್ಲವೇ ?”: ಪಾಕಿಸ್ತಾನದ ಬಿಲಾವಲ್ ಭುಟ್ಟೋಗೆ ತಿವಿದ ಓವೈಸಿ

ನವದೆಹಲಿ: ಪಾಕಿಸ್ತಾನದ ಪೀಪಲ್‌ ಪಾರ್ಟಿ ನಾಯಕ ಬಿಲಾವಲ್ ಭುಟ್ಟೋ ಜರ್ದಾರಿ ಅವರ “ರಕ್ತ ಹರಿಯುತ್ತದೆ” ಎಂಬ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಎಐಎಂಐಎಂ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ, ಪಾಕಿಸ್ತಾನ ಪೀಪಲ್ಸ್ ಪಾರ್ಟಿ ನಾಯಕ ತನ್ನ ತಾಯಿ ಮತ್ತು ಪಾಕಿಸ್ತಾನದ ಮಾಜಿ ಪ್ರಧಾನಿ ಬೆನಜೀರ್ ಭುಟ್ಟೋ ಮತ್ತು ಅವರ ಅಜ್ಜ ಮತ್ತು ದೇಶದ ಮಾಜಿ … Continued

ಪಹಲ್ಗಾಮ್ ದಾಳಿ | ಪಾಕಿಸ್ತಾನ ಸೇನೆಯಲ್ಲಿ ದಂಗೆ ? ಯುದ್ಧ ಭೀತಿ ನಡುವೆ ಸೇನೆಯಲ್ಲಿ ಸಾಮೂಹಿಕ ರಾಜೀನಾಮೆ ಬಗ್ಗೆ ರಹಸ್ಯ ಅಡ್ವೈಸರಿಯಲ್ಲಿ ಎಚ್ಚರಿಕೆ…!

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ,  ಪಾಕಿಸ್ತಾನದ ಸೇನೆಯೊಳಗೆ ಹೆಚ್ಚುತ್ತಿರುವ ಅಶಾಂತಿಯ ಬಗ್ಗೆ ಸೋರಿಕೆಯಾಗಿದ್ದು ಎನ್ನಲಾದ  ಅಲ್ಲಿನ ಸೇನೆಯ ರಹಸ್ಯ ಅಡ್ವೈಸರಿ ಆತಂಕ ವ್ಯಕ್ತಪಡಿಸಿದೆ. ಪಾಕಿಸ್ತಾನ ಸೇನೆಯೊಳಗಿನದ್ದು ಎನ್ನಲಾದ ಈಗ ವೈರಲ್‌ ಆಗಿರುವ ಒಂದು ರಹಸ್ಯ ಅಡ್ವೈಸರಿಯು ಕಳೆದ ವಾರ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ ಭಾರತದ ಜೊತೆ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿ : ಭಾರತದಲ್ಲಿ 16 ಪಾಕಿಸ್ತಾನದ ಯೂಟ್ಯೂಬ್ ಚಾನೆಲ್‌ಗಳ ನಿಷೇಧ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು ಹರಡಿದ್ದಕ್ಕಾಗಿ ಒಟ್ಟು 6.3 ಕೋಟಿ ಚಂದಾದಾರರನ್ನು ಹೊಂದಿರುವ 16 ಪಾಕಿಸ್ತಾನಿ ಯೂಟ್ಯೂಬ್ (YouTube) ಚಾನೆಲ್‌ಗಳನ್ನು ಭಾರತದಲ್ಲಿ ನಿಷೇಧಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಸಚಿವಾಲಯದ ಶಿಫಾರಸುಗಳ ಮೇರೆಗೆ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಲಾಗಿದೆ. ನಿಷೇಧಿತ ವೇದಿಕೆಗಳಲ್ಲಿ ಡಾನ್, ಸಮಾ ಟಿವಿ, … Continued

ಭಾರತದಿಂದ ಹೊರಹೋಗದ ಪಾಕಿಸ್ತಾನಿ ಪ್ರಜೆಗಳಿಗೆ 3 ವರ್ಷ ಜೈಲು ಶಿಕ್ಷೆ, 3 ಲಕ್ಷ ರೂ. ದಂಡ

ನವದೆಹಲಿ: ಸರ್ಕಾರ ನಿಗದಿಪಡಿಸಿದ ಗಡುವಿನ ಪ್ರಕಾರ ಭಾರತವನ್ನು ತೊರೆಯಲು ವಿಫಲರಾದ ಯಾವುದೇ ಪಾಕಿಸ್ತಾನಿ ವ್ಯಕ್ತಿಯನ್ನು ಬಂಧಿಸಲಾಗುತ್ತದೆ, ವಿಚಾರಣೆಗೆ ಒಳಪಡಿಸಲಾಗುತ್ತದೆ ಮತ್ತು ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ಗರಿಷ್ಠ 3 ಲಕ್ಷ ರೂ. ದಂಡ ಅಥವಾ ಎರಡನ್ನೂ ಎದುರಿಸಬೇಕಾಗುತ್ತದೆ ಎಂದು ತಿಳಿಸಲಾಗಿದೆ. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕಿಸ್ತಾನದ ಜೊತೆ ಸಂಬಂಧ … Continued

“ಅಲ್ಲಿ ಯಾರೂ ಇಲ್ಲ”..: 35 ವರ್ಷಗಳಿಂದ ಭಾರತದಲ್ಲಿ ವಾಸಿಸುತ್ತಿರುವ ಪಾಕ್ ಮಹಿಳೆಗೆ ವಾಪಸ್ ಹೋಗಲು ಸೂಚನೆ ; ಆಕೆಯ ಗಂಡ, ಮಕ್ಕಳು ಭಾರತದ ಪ್ರಜೆಗಳು…!

ನವದೆಹಲಿ: 35 ವರ್ಷಗಳಿಗೂ ಹೆಚ್ಚು ಕಾಲ ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆ ಶಾರದಾ ಬಾಯಿ ಅವರಿಗೆ ಒಡಿಶಾ ಪೊಲೀಸರು ತಕ್ಷಣ ಭಾರತ ಬಿಟ್ಟು ಹೋಗುವಂತೆ ಸೂಚಿಸಿದ್ದಾರೆ. ಪಹಲ್ಗಾಮ್ ಹತ್ಯಾಕಾಂಡದ ನಂತರ ಪಾಕಿಸ್ತಾನದ ವಿರುದ್ಧ ತೆಗೆದುಕೊಂಡ ಕ್ರಮಗಳ ಸರಣಿಯ ಭಾಗವಾಗಿ ಪೊಲೀಸ್ ಕ್ರಮ ಕೈಗೊಳ್ಳಲಾಗಿದೆ. ಶಾರದಾ ಬಾಯಿ ಅವರ ವೀಸಾವನ್ನು ರದ್ದುಗೊಳಿಸಲಾಗಿದೆ ಮತ್ತು ಅವರಿಗೆ ತಕ್ಷಣವೇ ಪಾಕಿಸ್ತಾನಕ್ಕೆ … Continued