ವೀಡಿಯೊ | ಈಗ ಯೂ ಟರ್ನ್‌ ; ಪಾಕಿಸ್ತಾನ ಸೇನೆ ವಾಯುನೆಲೆಗಳ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪ್ರಧಾನಿ ಶೆಹಬಾಜ್ ಷರೀಫ್…!

ನವದೆಹಲಿ : ಹಲವು ದಿನಗಳಿಂದಲೂ ನಿರಾಕರಿಸುತ್ತಲೇ ಬಂದಿದ್ದ ಕೊನೆಗೂ ಭಾರತದ ಸೇನೆಯು ತನ್ನ ವಾಯುನೆಲೆಗಳ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದೆ ಎಂಬುದನ್ನು ಪಾಕಿಸ್ತನವು ಬಹಿರಂಗವಾಗಿ ಒಪ್ಪಿಕೊಂಡಿದೆ. ಸ್ವತಃ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಮೇ 10 ರಂದು ಆಪರೇಶನ್‌ ಸಿಂದೂರ ಅಡಿಯಲಲಿ ಹಾರಿಸಲಾದ ಭಾರತದ ಕ್ಷಿಪಣಿಗಳು ಪಾಕಿಸ್ತಾನದ ಸೇನೆಯ ವಾಯುನೆಲೆಗಳ ದಾಳಿ ಮಾಡಿದೆ ಎಂದು ಒಪ್ಪಿಕೊಂಡಿದ್ದಾರೆ. … Continued

‘ಅಂತಾರಾಷ್ಟ್ರೀಯ ಭಯೋತ್ಪಾದಕ ಮಸೂದ್ ಅಜರಗೆ ಪಾಕಿಸ್ತಾನದಿಂದ 14 ಕೋಟಿ ರೂ…’: ಪಾಕ್ ಭಯೋತ್ಪಾದನಾ ಯೋಜನೆಗಳ ಬಗ್ಗೆ ರಾಜನಾಥ ಸಿಂಗ್

ನವದೆಹಲಿ:ಪಾಕಿಸ್ತಾನ ಸರ್ಕಾರವು “ತನ್ನ ನಾಗರಿಕರಿಂದ ಸಂಗ್ರಹಿಸಿದ ತೆರಿಗೆಯನ್ನು ಖರ್ಚು ಮಾಡಿ ಘೋಷಿತ ಭಯೋತ್ಪಾದಕ ಮಸೂದ್ ಅಜರ್‌ಗೆ 14 ಕೋಟಿ ರೂ.ಗಳನ್ನು ನೀಡುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಹೇಳಿದ್ದಾರೆ ಹಾಗೂ” ಯೋಜನೆಗಳ ಬಗ್ಗೆ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ವಿಶ್ವಸಂಸ್ಥೆಯು ‘ಅಂತರರಾಷ್ಟ್ರೀಯ ಭಯೋತ್ಪಾದಕ’ ಎಂದು ಘೋಷಿಸಿದ ಹಾಗೂ 2019 ರ ಪುಲ್ವಾಮಾ ಮತ್ತು … Continued

ಭಾರತದ ವಿರುದ್ಧ ಪಾಕಿಸ್ತಾನದ ದಾಳಿಗಳಿಗೆ ಚೀನಾದ ಬೆಂಬಲ ; ಇಲ್ಲಿವೆ ಪ್ರಮುಖ ಪುರಾವೆಗಳು…

ನವದೆಹಲಿ: ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ವಿರುದ್ಧ ಭಾರತೀಯ ವಾಯುದಾಳಿಗಳನ್ನು ಒಳಗೊಂಡ ಆಪರೇಷನ್ ಸಿಂಧೂರದ ನಂತರ ವಿವಿಧ ವರದಿಗಳು ಚೀನಾ ಸರಬರಾಜು ಮಾಡಿದ PL-15 ಕ್ಷಿಪಣಿಗಳು ಮತ್ತು ಟರ್ಕಿಶ್ UAV ಗಳ ಬಳಕೆ ಸೇರಿದಂತೆ ಪಾಕಿಸ್ತಾನಕ್ಕೆ ಚೀನಾದ ಮಿಲಿಟರಿ ಬೆಂಬಲದ ವ್ಯಾಪ್ತಿಯನ್ನು ಎತ್ತಿ ತೋರಿಸಿದೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ನಡೆದ ನಾಲ್ಕು ದಿನಗಳ ಸಂಘರ್ಷದಲ್ಲಿ ಭಾರತದ … Continued

ಭಾರತ-ಪಾಕಿಸ್ತಾನ ಸಂಬಂಧ ಹದಗೆಟ್ಟ ಮಧ್ಯೆ ಪಾಕ್‌ ಜತೆ ಟ್ರಂಪ್ ಕುಟುಂಬದ ರಹಸ್ಯ ಕ್ರಿಪ್ಟೋ ಒಪ್ಪಂದ…! ಇದಕ್ಕೆ ಪಾಕ್‌ ಸೇನಾ ಮುಖ್ಯಸ್ಥರ ಮಧ್ಯಸ್ಥಿಕೆ ?!

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಶಾಂತಿ ಒಪ್ಪಂದಕ್ಕೆ ತಾನು ಮಧ್ಯವರ್ತಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡ ಕೆಲವು ದಿನಗಳ ನಂತರ, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಕೆಲವು ದಿನಗಳ ಮೊದಲು ಪಾಕಿಸ್ತಾನದಲ್ಲಿ ಸಹಿ ಹಾಕಲಾದ ಒಪ್ಪಂದವು ಟ್ರಂಪ್ ಅವರ ಕುಟುಂಬ ಮತ್ತು ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರನ್ನು ಒಳಗೊಂಡಿತ್ತು ಎಂದು … Continued

ಪಹಲ್ಗಾಮ್ ದಾಳಿ : ಭಯೋತ್ಪಾದಕ ಗುಂಪು ಲಷ್ಕರ್ ಅಂಗಸಂಸ್ಥೆ ಟಿಆರ್‌ಎಫ್ ವಿರುದ್ಧ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಪುರಾವೆ ಸಲ್ಲಿಸಲಿರುವ ಭಾರತ

ನವದೆಹಲಿ: ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾದ ಉಪ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಬೇಕೆಂದು ಒತ್ತಾಯಿಸಿ ಭಾರತ ಗುರುವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ 1267 ನಿರ್ಬಂಧ ಸಮಿತಿಗೆ ಹೊಸ ಪುರಾವೆಗಳನ್ನು ಸಲ್ಲಿಸಲಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ‘ದಿ ರೆಸಿಸ್ಟೆನ್ಸ್ ಫ್ರಂಟ್’ (TRF) ಹೊಣೆ ಹೊತ್ತುಕೊಂಡಿದ್ದು, ಈಗ ವಿಶ್ವಸಂಸ್ಥೆಯ ಭದ್ರತಾ … Continued

ಪಾಕಿಸ್ತಾನ ತುಂಡಾಗುತ್ತಾ..? ಪಾಕ್‌ ನಿಂದ ಸ್ವಾತಂತ್ರ್ಯ ಘೋಷಿಸಿಕೊಂಡ ಬಲೂಚ್ ನಾಯಕರು…! ಮಾನ್ಯತೆ ನೀಡಲು ಭಾರತ, ವಿಶ್ವಸಂಸ್ಥೆಗೆ ಒತ್ತಾಯ

ಕ್ವೆಟ್ಟಾ: ದಶಕಗಳ ಕಾಲದ ಹಿಂಸಾಚಾರ, ಬಲವಂತದ ಕಣ್ಮರೆಗಳು ಮತ್ತು ಈ ಪ್ರದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಉಲ್ಲೇಖಿಸಿ, ಬಲೂಚಿಸ್ತಾನ ಪಾಕಿಸ್ತಾನದಿಂದ ಸ್ವಾತಂತ್ರ್ಯ ಪಡೆದಿದೆ ಎಂದು ಬಲೂಚಿಸ್ತಾನ ನಾಯಕ ಮೀರ್ ಯಾರ್ ಬಲೂಚ್ ಘೋಷಿಸಿದ್ದಾರೆ. ಭಾರತೀಯ ನಾಗರಿಕರು, ವಿಶೇಷವಾಗಿ ಮಾಧ್ಯಮಗಳು, ಯೂಟ್ಯೂಬರ್‌ಗಳು ಮತ್ತು ಬುದ್ಧಿಜೀವಿಗಳು ಬಲೂಚಿಸ್ತಾನದವರನ್ನು “ಪಾಕಿಸ್ತಾನಿಗಳು” ಎಂದು ಕರೆಯುವುದು ಬೇಡ ಎಂದು ಒತ್ತಾಯಿಸಿದ್ದಾರೆ. ನಾವು ಪಾಕಿಸ್ತಾನದವರಲ್ಲ … Continued

ಆಪರೇಷನ್ ಸಿಂಧೂರ | ಷೇರು ಮಾರುಕಟ್ಟೆಯಲ್ಲಿ ಭಾರತದ ರಕ್ಷಣಾ ಕಂಪನಿಗಳಿಗೆ ಹೆಚ್ಚಿದ ಬೇಡಿಕೆ, ಚೀನಾ-ಟರ್ಕಿ ಕಂಪನಿಗಳ ಬೇಡಿಕೆ ಕುಸಿತ…!

ನವದೆಹಲಿ: ನವದೆಹಲಿ: ಪಾಕಿಸ್ತಾನದೊಂದಿಗಿನ ಸಂಘರ್ಷದ ಸಮಯದಲ್ಲಿ ಭಾರತದ ವಾಯು ರಕ್ಷಣಾ ವ್ಯವಸ್ಥೆಯು ಕ್ಷಿಪಣಿಯನ್ನು ಯಶಸ್ವಿಯಾಗಿ ತಡೆದು ನಾಶಪಡಿಸಿದ ನಂತರ, PL-15 ಕ್ಷಿಪಣಿಯನ್ನು ತಯಾರಿಸುವ ಚೀನಾದ ರಕ್ಷಣಾ ಕಂಪನಿಯಾದ ಝುಝೌ ಹಾಂಗ್ಡಾ ಎಲೆಕ್ಟ್ರಾನಿಕ್ಸ್ ಕಾರ್ಪ್ ಲಿಮಿಟೆಡ್‌ನ ಷೇರುಗಳು ಮಂಗಳವಾರ ಶೇ. 6.42 ರಷ್ಟು ಕುಸಿದು 37.33 ಯುವಾನ್‌ಗೆ ತಲುಪಿದೆ. ಟರ್ಕಿಯ ಕಂಪನಿಗಳ ಷೇರುಗಳಲ್ಲಿ ಕುಸಿತ ಕಂಡಿದೆ ಎಂದು … Continued

ಏಪ್ರಿಲ್ 23 ರಂದು ಪಾಕಿಸ್ತಾನ ಬಂಧಿಸಿದ್ದ ಬಿಎಸ್‌ಎಫ್ ಯೋಧ ಬಿಡುಗಡೆ

ನವದೆಹಲಿ: ಕಳೆದ ತಿಂಗಳು ಭಾರತ-ಪಾಕಿಸ್ತಾನದ ಮಧ್ಯದ ಅಂತಾರಾಷ್ಟ್ರೀಯ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಪಾಕಿಸ್ತಾನ ರೇಂಜರ್‌ಗಳಿಂದ ಬಂಧಿಸಲ್ಪಟ್ಟ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಯ ಯೋಧ ಪೂರ್ಣಂಕುಮಾರ ಶಾ ಅವರನ್ನು ಇಂದು, ಬುಧವಾರ ಅಟ್ಟಾರಿಯ ಚೆಕ್ ಪೋಸ್ಟ್‌ನಲ್ಲಿ ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು. ಏಪ್ರಿಲ್ 23, 2025 ರಿಂದ ಪಾಕಿಸ್ತಾನ ರೇಂಜರ್‌ಗಳ ವಶದಲ್ಲಿದ್ದ ಬಿಎಸ್‌ಎಫ್ ಜವಾನ್ ಪೂರ್ಣಂಕುಮಾರ ಶಾ … Continued

ಭಾರತದ ಜೊತೆ ಪಾಕಿಸ್ತಾನದ ಕದನ ವಿರಾಮದ ಬಗ್ಗೆ ಚೀನಾ ಅಸಮಾಧಾನ? ಇದಕ್ಕೆ ಕಾರಣ ಏನು ಗೊತ್ತೆ…?

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಯೋತ್ಪಾದಕರು ಮತ್ತು ಅವರ ಬೆಂಬಲಿಗರನ್ನು ಗುರಿಯಾಗಿಸಿಕೊಂಡು ಭಾರತ ನಡೆಸಿದ ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಹಲವಾರು ವಾಯುನೆಲೆಗಳು ಮತ್ತು ಇತರ ಮಿಲಿಟಿರಿ ನೆಲೆಗಳು ಹಾನಿಗೊಳಗಾದವು. ಅದರ ನಂತರ ಪಾಕಿಸ್ತಾನ ಅಮೆರಿಕಕ್ಕೆ ಮಧ್ಯಪ್ರವೇಶಿಸುವಂತೆ ದುಂಬಾಲು ಬಿದ್ದ ನಂತರ ಕದನ ವಿರಾಮ ಘೋಷಣೆಯಾಯಿತು. ಅಮೆರಿಕ ಈ ಕದನ ವಿರಾಮದ ಕ್ರೆಡಿಟ್‌ … Continued

ಆಪರೇಶನ್‌ ಸಿಂಧೂರ : ಪಾಕಿಸ್ತಾನದ ವಾಯುನೆಲೆಗಳ ಮೇಲಿನ ದಾಳಿಯಲ್ಲಿ 20% ಮೂಲಸೌಕರ್ಯ; ಹಲವಾರು ಯುದ್ಧ ವಿಮಾನಗಳು ನಾಶ…!

ನವದೆಹಲಿ: ಮೇ 10 ರಂದು ಪಾಕಿಸ್ತಾನದ 11 ವಾಯುನೆಲೆಗಳ ಮೇಲೆ ಭಾರತ ನಡೆಸಿದ ದಾಳಿಯಲ್ಲಿ ಅದರ ವಾಯುಪಡೆಯ ಮೂಲಸೌಲಭ್ಯಗಳಲ್ಲಿ ಶೇಕಡಾ 20 ರಷ್ಟು ನಾಶವಾಗಿದೆ ಮತ್ತು ಸ್ಕ್ವಾಡ್ರನ್ ಲೀಡರ್‌ ಸೇರಿದಂತೆ 50 ಕ್ಕೂ ಹೆಚ್ಚು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ ಎಂದು ಸರ್ಕಾರದ ಉನ್ನತ ಮೂಲಗಳನ್ನು ಉಲ್ಲೇಖಿಸಿದ ಕೆಲವು ವರದಿಗಳು ತಿಳಿಸಿವೆ. ಈ ದಾಳಿಯು ಪಾಕಿಸ್ತಾನದ ಪ್ರಮುಖ ಶಸ್ತ್ರಾಸ್ತ್ರ … Continued