ಟಿ20 ವಿಶ್ವಕಪ್: ಪಾಕ್ ವಿರುದ್ಧ ಭಾರತಕ್ಕೆ 61 ರನ್‌ಗಳ ಭರ್ಜರಿ ಜಯ; ಸೂಪರ್-8 ಹಂತಕ್ಕೆ ಲಗ್ಗೆ ಇಟ್ಟ ಟೀಮ್ ಇಂಡಿಯಾ

ಕೊಲಂಬೊ: ಭಾನುವಾರ ಶ್ರೀಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಇಶಾನ್ ಕಿಶನ್ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಭಾರತದ ಬೌಲರ್‌ಗಳ ಮಾರಕ ಬೌಲಿಂಗ್ ದಾಳಿಗೆ ಪಾಕಿಸ್ತಾನ ಮಣಿದಿದೆ. ಪಾಕ್ ವಿರುದ್ಧ 61 ರನ್‌ಗಳ ಬೃಹತ್ ಜಯ ದಾಖಲಿಸಿದ ಭಾರತ, ಟಿ20 ವಿಶ್ವಕಪ್‌ನ ಸೂಪರ್-8 ಹಂತವನ್ನು ಅಧಿಕೃತವಾಗಿ ಖಚಿತಪಡಿಸಿಕೊಂಡಿದೆ. ಈ ಗೆಲುವಿನ ಮೂಲಕ ಟಿ20 ವಿಶ್ವಕಪ್ … Continued

ವೀಡಿಯೊ..| ‘ನಿಲ್ಲಿ, ನಿಮ್ಮ ಗುರುತಿನ ಚೀಟಿ ಎಲ್ಲಿ..? ‘: ಮ್ಯೂನಿಚ್ ಸಮ್ಮೇಳನದಲ್ಲಿ ಪಾಕ್ ಸೇನಾ ಮುಖ್ಯಸ್ಥಗೆ ಐಡಿ ಕಾರ್ಡ್ ಕೇಳಿದ ಭದ್ರತಾ ಸಿಬ್ಬಂದಿ..!

ಮ್ಯೂನಿಚ್: ಪಾಕಿಸ್ತಾನದಲ್ಲಿ ಅಪಾರ ಅಧಿಕಾರ ಹೊಂದಿರುವ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರಿಗೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ತೀವ್ರ ಮುಖಭಂಗವಾಗಿದೆ. ಜರ್ಮನಿಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ‘ಮ್ಯೂನಿಚ್ ಭದ್ರತಾ ಸಮ್ಮೇಳನ’ಕ್ಕೆ (MSC) ಆಹ್ವಾನಿತರಾಗಿ ತೆರಳಿದ್ದ ಅವರಿಗೆ ಭದ್ರತಾ ತಪಾಸಣೆಯ ವೇಳೆ ಶಿಷ್ಟಾಚಾರದ (Protocol) ಗೌರವ ಸಿಗದೇ ಇರುವುದು ಈಗ ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಮ್ಮೇಳನದ … Continued

ಪಾಕಿಸ್ತಾನಕ್ಕೆ ಹಾಕಿ ತಂಡಕ್ಕೆ ಮುಜುಗರ : ಹೋಟೆಲ್ ಬಿಲ್ ಪಾವತಿಸದ ಕಾರಣ ರಸ್ತೆಯಲ್ಲೇ ಕಾಲ ಕಳೆದ ಆಟಗಾರರು…!

ಕ್ಯಾನ್ಬೆರಾ: ಎಫ್‌ಐಎಚ್ (FIH) ಪ್ರೊ ಲೀಗ್‌ನ ಎರಡನೇ ಚರಣದಲ್ಲಿ ಭಾಗವಹಿಸಲು ಆಸ್ಟ್ರೇಲಿಯಾಕ್ಕೆ ತಲುಪಿರುವ ಪಾಕಿಸ್ತಾನದ ರಾಷ್ಟ್ರೀಯ ಹಾಕಿ ತಂಡಕ್ಕೆ ತೀವ್ರ ಅವಮಾನ ಎದುರಾಗಿದೆ. ಹೋಟೆಲ್ ಬುಕಿಂಗ್ ಹಣ ಪಾವತಿಸದ ಕಾರಣ, ಆಟಗಾರರು ಗಂಟೆಗಟ್ಟಲೆ ರಸ್ತೆಯಲ್ಲೇ ಕಾಯಬೇಕಾದ ದುಸ್ಥಿತಿ ಎದುರಾಗಿತ್ತು. ಪಾಕಿಸ್ತಾನ ಕ್ರೀಡಾ ಮಂಡಳಿ (PSB) ಮತ್ತು ಪಾಕಿಸ್ತಾನ ಹಾಕಿ ಫೆಡರೇಶನ್ (PHF) ಆಟಗಾರರಿಗೆ ಕ್ಯಾನ್ಬೆರಾದ ಪಂಚತಾರಾ … Continued

ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಅದರ ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ

ವಿಶ್ವಸಂಸ್ಥೆ: ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ (JeM), ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಮೇಲೆ ನಡೆದ ಭೀಕರ ದಾಳಿಯಲ್ಲಿ ಭಾಗಿಯಾಗಿರುವುದನ್ನು ವಿಶ್ವಸಂಸ್ಥೆಯ ಭಯೋತ್ಪಾದನಾ ನಿಗ್ರಹ ಕಣ್ಗಾವಲು ತಂಡವು ದೃಢಪಡಿಸಿದೆ. ಅಲ್ಲದೆ, ಈ ಸಂಘಟನೆಯು ತನ್ನ ಕಾರ್ಯಾಚರಣೆಯ ತಂತ್ರಗಳನ್ನು ಬದಲಾಯಿಸುತ್ತಿದ್ದು, ಉಗ್ರ ಚಟುವಟಿಕೆಗಳಿಗೆ ಬೆಂಬಲ ನೀಡಲು ಪ್ರತ್ಯೇಕ ಮಹಿಳಾ ಘಟಕವನ್ನು ರಚಿಸಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ ಎಂದು … Continued

ವೀಡಿಯೊ | ನಮ್ಮನ್ನು ‘ಟಾಯ್ಲೆಟ್ ಪೇಪರ್’ ನಂತೆ ಬಳಸಿ ಎಸೆದ ಅಮೆರಿಕ : ದೊಡ್ಡಣ್ಣನ ವಿರುದ್ಧ ಉರಿದುಬಿದ್ದ ಪಾಕ್ ರಕ್ಷಣಾ ಸಚಿವ…!

ಇಸ್ಲಾಮಾಬಾದ್: ಅಮೆರಿಕದ ಜೊತೆಗಿನ ಪಾಕಿಸ್ತಾನದ ಹಿಂದಿನ ಸಂಬಂಧಗಳ ಕುರಿತು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅತ್ಯಂತ ಕಠಿಣ ಮಾತುಗಳಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಮೆರಿಕವು ತನ್ನ ಕಾರ್ಯತಂತ್ರದ ಹಿತಾಸಕ್ತಿಗಳಿಗಾಗಿ ಪಾಕಿಸ್ತಾನವನ್ನು “ದುರುಪಯೋಗಪಡಿಸಿಕೊಂಡಿದೆ” ಮತ್ತು ಉದ್ದೇಶ ಈಡೇರಿದ ನಂತರ ನಮ್ಮನ್ನು “ಟಾಯ್ಲೆಟ್ ಪೇಪರ್‌ನಂತೆ ಬಳಸಿ ಎಸೆದಿದೆ” ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ. ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ … Continued

ಟಿ20 ವಿಶ್ವಕಪ್‌ 2026 : ಭಾರತದ ವಿರುದ್ಧದ ಪಂದ್ಯ ಆಡಲ್ಲ ಎಂದಿದ್ದ ಪಾಕಿಸ್ತಾನ ಯೂ ಟರ್ನ್‌ ಹೊಡೆಯಲು ಕಾರಣಗಳೇನು..?

ಕಳೆದ ಕೆಲವು ದಿನಗಳಿಂದ ಜಾಗತಿಕ ಕ್ರಿಕೆಟ್ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಅನಿಶ್ಚಿತತೆ ಕೊನೆಗೊಂಡಿದೆ. ಫೆಬ್ರವರಿ 15 ರಂದು ನಡೆಯಲಿರುವ ಭಾರತ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ಪ್ರಸ್ತಾವಿತ ನಿರ್ಧಾರದಿಂದ ಪಾಕಿಸ್ತಾನ ಸರ್ಕಾರ ಹಿಂದೆ ಸರಿದಿದೆ. ರಾಜತಾಂತ್ರಿಕ ಸಂಘರ್ಷ ಮತ್ತು ಬಹಿಷ್ಕಾರದ ಎಚ್ಚರಿಕೆ ನೀಡಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ … Continued

ಟಿ20 ವಿಶ್ವಕಪ್ : ಯು-ಟರ್ನ್ ಹೊಡೆದ ಪಾಕಿಸ್ತಾನ ; ಭಾರತದ ವಿರುದ್ಧದ ಪಂದ್ಯ ಆಡಲು ನಿರ್ಧಾರ…!

ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB)  ಯೂ ಟರ್ನ್‌ ಹೊಡೆದಿದೆ. ಐಸಿಸಿ (ICC) ಅಧಿಕಾರಿಗಳೊಂದಿಗೆ ನಡೆದ ಸುದೀರ್ಘ ಚರ್ಚೆಯ ನಂತರ, ಅದು ತಾನು ಈ ಹಿಂದೆ  ಘೋಷಿಸಿದ್ದ ಭಾರತದ ವಿರುದ್ಧದ ಪಂದ್ಯದ ಬಹಿಷ್ಕಾರದ ನಿರ್ಧಾರದಿಂದ ಹಿಂದೆ ಸರಿದಿದೆ. ಈ ಮೂಲಕ 2026ರ ಟಿ20 ವಿಶ್ವಕಪ್‌ನಲ್ಲಿ ನಿಗದಿಯಂತೆ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ನಡೆಯುವುದು ಖಚಿತವಾಗಿದೆ. ಪಾಕಿಸ್ತಾನ … Continued

ಟಿ20 ವಿಶ್ವಕಪ್ : ಭಾರತದ ವಿರುದ್ಧದ ಪಂದ್ಯ ಬಹಿಷ್ಕಾರ ; ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮೂರು ಪ್ರಮುಖ ಬೇಡಿಕೆಗಳನ್ನು ತಿರಸ್ಕರಿಸಿದ ಐಸಿಸಿ

ಕೊಲಂಬೊ/ಲಾಹೋರ್: ಫೆಬ್ರವರಿ 15ರಂದು ಶ್ರೀಲಂಕಾದ ಕೊಲಂಬೊದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಆಡಲು ನಿರಾಕರಿಸಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (PCB) ಹಠಮಾರಿ ಧೋರಣೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಬಿಸಿ ಮುಟ್ಟಿಸಿದೆ. ಬಿಕ್ಕಟ್ಟು ಶಮನಗೊಳಿಸಲು ಪಿಸಿಬಿ ಮಂಡಿಸಿದ್ದ ಮೂರು ಪ್ರಮುಖ ಬೇಡಿಕೆಗಳನ್ನು ಐಸಿಸಿ ನೇರವಾಗಿ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಭಾನುವಾರ ಲಾಹೋರ್‌ನಲ್ಲಿ ನಡೆದ … Continued

ಸಂಪೂರ್ಣ ಕಾಶ್ಮೀರವೂ ಭಾರತದ್ದೇ ಅವಿಭಾಜ್ಯ ಅಂಗ; ವ್ಯಾಪಾರ ಒಪ್ಪಂದದಲ್ಲಿ ಪಾಕಿಸ್ತಾನಕ್ಕೆ ‘ಶಾಕ್’ ನೀಡಿದ ಅಮೆರಿಕ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂಬ ಸತ್ಯವನ್ನು ಅಮೆರಿಕ ಈಗ ಅಧಿಕೃತವಾಗಿ ಎತ್ತಿಹಿಡಿದಿದೆ. ಪಾಕಿಸ್ತಾನದ ವಾದಗಳಿಗೆ ವಿರುದ್ಧವಾಗಿ, ಜಗತ್ತಿನ ದೊಡ್ಡಣ್ಣ ಅಮೆರಿಕ ಭಾರತದ ರಾಜಕೀಯ ಭೂಪಟವನ್ನು ಅಂಗೀಕರಿಸುವ ಮೂಲಕ ಪಾಕಿಸ್ತಾನಕ್ಕೆ ಪ್ರಬಲ ರಾಜತಾಂತ್ರಿಕ ಏಟು ನೀಡಿದೆ. ಅಮೆರಿಕದ ವ್ಯಾಪಾರ ಪ್ರತಿನಿಧಿ ಕಚೇರಿ (USTR) ಬಿಡುಗಡೆ ಮಾಡಿರುವ ಭಾರತದ ನೂತನ ಭೂಪಟದಲ್ಲಿ, ಜಮ್ಮು … Continued

ಪಾಕಿಸ್ತಾನ: ಇಸ್ಲಾಮಾಬಾದ್‌ನ ಮಸೀದಿಯಲ್ಲಿ ಭೀಕರ ಆತ್ಮಹತ್ಯಾ ದಾಳಿ: 30 ಮಂದಿ ಸಾವು, 160ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್‌ : ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಶಹಜಾದ್ ಟೌನ್ ಪ್ರದೇಶದಲ್ಲಿರುವ ತರ್ಲೈ ಇಮಾಂಬರ್ಗಾ (Tarlai Imambargah) ಎಂಬ ಶಿಯಾ ಮಸೀದಿಯೊಳಗೆ ಆತ್ಮಹತ್ಯಾ ಬಾಂಬರ್ ಒಬ್ಬ ಸ್ಫೋಟಿಸಿಕೊಂಡ ಪರಿಣಾಮ ಕನಿಷ್ಠ 30 ಜನರು ಸಾವಿಗೀಡಾಗಿದ್ದಾರೆ ಮತ್ತು 160ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇಸ್ಲಾಮಾಬಾದ್‌ನ ಶಹಜಾದ್ ಟೌನ್‌ನಲ್ಲಿರುವ ಶಿಯಾ ಪ್ರಾರ್ಥನಾ ಮಂದಿರದ ಮುಖ್ಯ ದ್ವಾರದ ಬಳಿ … Continued