ಪೈಶಾಚಿಕ ಕೃತ್ಯ | ಪಂಚಾಯತ ಚುನಾವಣೆ ಸ್ಪರ್ಧಿಸಲು ಮಗಳನ್ನೇ ಕಾಲುವೆಗೆ ಎಸೆದು ಕೊಂದ ತಂದೆ…!
ಹೈದರಾಬಾದ್: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುವ ಹಪಾಹಪಿಗೆ ಬಿದ್ದ ವ್ಯಕ್ತಿಯೊಬ್ಬ, ತನ್ನ ಆಸೆಗೆ ಅಡ್ಡಿಯಾಗಿದ್ದ ಆರು ವರ್ಷದ ಮಗಳನ್ನೇ ತೆಲಂಗಾಣದ ಕಾಲುವೆಯೊಂದಕ್ಕೆ ಎಸೆದು ಹತ್ಯೆ ಮಾಡಿರುವ ಘೋರ ಘಟನೆ ನಡೆದಿದೆ. ಮಹಾರಾಷ್ಟ್ರದ ಚುನಾವಣಾ ನಿಯಮದ ಪ್ರಕಾರ ಇಬ್ಬರಿಗಿಂತ ಹೆಚ್ಚು ಮಕ್ಕಳಿದ್ದರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿಲ್ಲ ಎಂಬ ಕಾರಣಕ್ಕೆ ಈ ಕೃತ್ಯ ಎಸಗಲಾಗಿದೆ … Continued