ಅಮಿತ್ ಶಾ ವಿರುದ್ಧದ ಹೇಳಿಕೆ: ರಾಹುಲ್ ಗಾಂಧಿಗೆ ಹಕ್ಕುಚ್ಯುತಿ ನೋಟಿಸ್, ಆ.28ರೊಳಗೆ ಉತ್ತರಿಸಲು ಲೋಕಸಭೆ ಸಚಿವಾಲಯ ಸೂಚನೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಲೋಕಸಭೆಯಲ್ಲಿ ಮಾಡಿರುವ ಹೇಳಿಕೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ (LoP) ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದರಾದ ಅನುರಾಗ ಠಾಕೂರ್ ಮತ್ತು ಸಂಜಯ ಜೈಸ್ವಾಲ್ ಸಲ್ಲಿಸಿರುವ ಪ್ರತ್ಯೇಕ ಹಕ್ಕುಚ್ಯುತಿ ದೂರುಗಳ ಕುರಿತು ಲೋಕಸಭೆ ಕಾರ್ಯಾಲಯ ಸ್ಪಷ್ಟನೆ ಕೇಳಿದ್ದು, ಆಗಸ್ಟ್ 28ರೊಳಗೆ ಉತ್ತರ … Continued

ಸಂಸತ್ತಿನಲ್ಲಿ ಪೇಪರ್ ಸೋರಿಕೆ ತಡೆ ಮಸೂದೆ ಅಂಗೀಕಾರ; ರಾಷ್ಟ್ರಪತಿ ಅಂಕಿತದ ಬಳಿಕ ಕಾನೂನಾಗಿ ಜಾರಿ

ನವದೆಹಲಿ : ಸಾರ್ವಜನಿಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಇತರೆ ಅಕ್ರಮಗಳನ್ನು ಕಟ್ಟುನಿಟ್ಟಾಗಿ ತಡೆಯುವ ಉದ್ದೇಶದಿಂದ ತರಲಾಗಿರುವ ಸಾರ್ವಜನಿಕ ಪರೀಕ್ಷೆ (ಅನ್ಯಾಯ ವಿಧಾನಗಳ ತಡೆ) ತಿದ್ದುಪಡಿ ಮಸೂದೆ-2026ಕ್ಕೆ ಸಂಸತ್ತಿನ ಉಭಯ ಸದನಗಳೂ ಅನುಮೋದನೆ ನೀಡಿವೆ.ಇದನ್ನು ಈಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆಗಾಗಿ ಕಳುಹಿಸಲಾಗುತ್ತದೆ. ಅವರ ಅಂಕಿದ ನಂತರ ಅದು ಕಾನೂನಾಗಿ ಜಾರಿಗೆ ಬರಲಿದೆ. ಈ … Continued

ಇ20 ಪೆಟ್ರೋಲ್‌ನಿಂದ ಎಂಜಿನ್ ಹಾನಿ, ಮೈಲೇಜ್ ಕಡಿಮೆಯಾಗೋದು ಯಾವ ಅಧ್ಯಯನದಲ್ಲೂ ಕಂಡುಬಂದಿಲ್ಲ ; ಸಂಸತ್ತಿಗೆ ತಿಳಿಸಿದ ಕೇಂದ್ರ

ನವದೆಹಲಿ : ಇ20 (E20) ಪೆಟ್ರೋಲ್ ಬಳಕೆಯಿಂದ ವಾಹನಗಳ ಎಂಜಿನ್‌ಗೆ ಹಾನಿಯಾಗುತ್ತದೆ ಅಥವಾ ಇಂಧನ ದಕ್ಷತೆ (ಮೈಲೇಜ್) ಕಡಿಮೆಯಾಗುತ್ತದೆ ಎಂಬ ಆತಂಕಗಳಿಗೆ ಈವರೆಗೆ ಯಾವುದೇ ವೈಜ್ಞಾನಿಕ ಅಧ್ಯಯನದಲ್ಲಿಯೂ ದೃಢೀಕರಣ ದೊರೆತಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ ಸ್ಪಷ್ಟಪಡಿಸಿದೆ. ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, … Continued

ಮೇಕೆದಾಟು ಯೋಜನೆಗೆ ತಮಿಳುನಾಡು ಸೇರಿ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ : ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ : ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಪ್ರಸ್ತಾವಿತ ಮೇಕೆದಾಟು ಸಮತೋಲನ ಜಲಾಶಯ (Balancing Reservoir) ನಿರ್ಮಾಣಕ್ಕೆ ಕರ್ನಾಟಕವು ಕೆಳಹರಿವು ರಾಜ್ಯಗಳಾದ ತಮಿಳುನಾಡು, ಕೇರಳ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ (ಜುಲೈ 27) ಸಂಸತ್ತಿನಲ್ಲಿ ಸ್ಪಷ್ಟಪಡಿಸಿದೆ. ಈ ಕುರಿತು 2018ರಲ್ಲಿ ಸುಪ್ರೀಂ ಕೋರ್ಟ್ ನೀಡಿದ … Continued

ಪರೀಕ್ಷಾ ಅಕ್ರಮ ತಡೆಗೆ ಲೋಕಸಭೆಯಲ್ಲಿ ತಿದ್ದುಪಡಿ ಮಸೂದೆ ಮಂಡನೆ; 2024ರ ಕಾಯ್ದೆಗಿಂತ ಇದರಲ್ಲಿ ಏನೆಲ್ಲ ಬದಲಾವಣೆ ?

ನವದೆಹಲಿ: ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಹಾಗೂ ಇದರ ಮೇಲೆ ಸಾರ್ವಜನಿಕ ವಿಶ್ವಾಸವನ್ನು ಮರುಸ್ಥಾಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಈಗಾಗಲೇ ಜಾರಿಯಲ್ಲಿರುವ ಕಾನೂನುಗಳನ್ನು ಇನ್ನಷ್ಟು ಕಠಿಣಗೊಳಿಸುವ ಉದ್ದೇಶದಿಂದ ʼಸಾರ್ವಜನಿಕ ಪರೀಕ್ಷೆಗಳು (ಅಕ್ರಮ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ)ಯನ್ನು ಸೋಮವಾರ ಲೋಕಸಭೆಯಲ್ಲಿ ಕೇಂದ್ರ ಸಚಿವ ಜಿತೇಂದ್ರ … Continued

ʼವಂದೇ ಮಾತರಂ’ಗೆ ಅವಮಾನಿಸಿದರೆ ಜೈಲು ಶಿಕ್ಷೆ: ಸಂಸತ್ತಿನಲ್ಲಿ ಮಸೂದೆ ಮಂಡಿಸಲಿರುವ ಅಮಿತ್ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನ ಮುಂಗಾರು ಅಧಿವೇಶನದ ಸೋಮವಾರದ ಕಲಾಪದಲ್ಲಿ ‘ಪ್ರಿವೆನ್ಷನ್ ಆಫ್ ಇನ್ಸಲ್ಟ್ಸ್ ಟು ನ್ಯಾಷನಲ್ ಹಾನರ್ (ತಿದ್ದುಪಡಿ) ಮಸೂದೆ, 2026’ ಅನ್ನು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಮಸೂದೆಯ ಕಾನೂನು ಮತ್ತು ನ್ಯಾಯಾಂಗ ರಕ್ಷಣೆಗಳನ್ನು ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ನೀಡುವ ಉದ್ದೇಶ ಹೊಂದಿದೆ. ಕೇಂದ್ರ … Continued

ಜುಲೈ 20ರಿಂದ ಸಂಸತ್ತಿನ ಮಳೆಗಾಲ ಅಧಿವೇಶನ; ಮಹತ್ವದ ಮಸೂದೆಗಳನ್ನು ಮಂಡಿಸಲಿದೆಯೇ ಸರ್ಕಾರ ?

ನವದೆಹಲಿ: ಸಂಸತ್ತಿನ ಮಳೆಗಾಲ (ಮಾನ್ಸೂನ್) ಅಧಿವೇಶನವು 2026ರ ಜುಲೈ 20ರಿಂದ ಆರಂಭವಾಗಿ ಆಗಸ್ಟ್ 13ರ ವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು ಶನಿವಾರ ಪ್ರಕಟಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ರಿಜಿಜು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇಂದ್ರ ಸರ್ಕಾರದ ಶಿಫಾರಸಿನ ಮೇರೆಗೆ … Continued

ದೀದಿ ಪಕ್ಷದಲ್ಲಿ ‘ಮಹಾಬಂಡಾಯ’ | ಸ್ಪೀಕರ್‌ಗೆ 20 ಟಿಎಂಸಿ ಸಂಸದರ ಪತ್ರ ; ಪ್ರತ್ಯೇಕ ಪಕ್ಷ ರಚಿಸುವ ಸಾಧ್ಯತೆ ; ಎನ್‌ಡಿಎ ಒಕ್ಕೂಟ ಸೇರಲು ಸಜ್ಜು !

ನವದೆಹಲಿ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಭಾರಿ ರಾಜಕೀಯ ಭೂಕಂಪ ಸಂಭವಿಸಿದೆ.  ಟಿಎಂಸಿ ಪಕ್ಷದ 20ಕ್ಕೂ ಹೆಚ್ಚು ಲೋಕಸಭಾ ಸದಸ್ಯರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಟಿಎಂಸಿಯ ಪ್ರತ್ಯೇಕ ಬಣವೊಂದು ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದ್ದು, ಸೂಕ್ತ ಸಮಯದಲ್ಲಿ ಅಂತಿಮ ನಿರ್ಧಾರ ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದೊಳಗಿನ ಭಿನ್ನಮತ … Continued

ಕಾಂಗ್ರೆಸ್ ಜೊತೆ ದೋಸ್ತಿ ಕಟ್: ಲೋಕಸಭೆಯಲ್ಲಿ ಪ್ರತ್ಯೇಕ ಆಸನಕ್ಕೆ ಡಿಎಂಕೆ ಮನವಿ

ನವದೆಹಲಿ: ತಮಿಳುನಾಡಿನ ರಾಜಕೀಯ ಸಮೀಕರಣಗಳಲ್ಲಿನ ಭಾರಿ ಬದಲಾವಣೆಯ ಬೆನ್ನಲ್ಲೇ, ದ್ರಾವಿಡ ಮುನ್ನೇತ್ರ ಕಳಗಂ (DMK) ಸಂಸದೆ ಕನಿಮೊಳಿ ಕರುಣಾನಿಧಿ ಅವರು ತಮ್ಮ ಪಕ್ಷದ ಸದಸ್ಯರಿಗೆ ಲೋಕಸಭೆಯಲ್ಲಿ ಹೊಸ ಆಸನ ವ್ಯವಸ್ಥೆ ಕಲ್ಪಿಸುವಂತೆ ಸ್ಪೀಕರ್‌ ಅವರಿಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ಡಿಎಂಕೆ ಅಧಿಕೃತವಾಗಿ ಕಡಿದುಕೊಂಡಿರುವುದರಿಂದ, ಸದನದಲ್ಲಿ ಡಿಎಂಕೆ ಹಾಗೂ ಕಾಂಗ್ರೆಸ್‌ ಪಕ್ಷಗಳ ಸದಸ್ಯರು ಅಕ್ಕಪಕ್ಕದಲ್ಲಿ … Continued

ಅಪರೂಪದ ದೃಶ್ಯ : ರಾಜಕೀಯ ವೈರಿಗಳಾದ ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಧ್ಯೆ ಸೌಹಾರ್ದಯುತ ಮಾತುಕತೆ ; ವಿಡಿಯೋ ವೈರಲ್!

ನವದೆಹಲಿ: ಸಂಸತ್ತಿನಲ್ಲಿ ಅಪರೂಪದ ವಿದ್ಯಮಾನವೊಂದರಲ್ಲಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಡುವೆ ನಡೆದ ಸೌಹಾರ್ದಯುತ ಸಂಭಾಷಣೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಇವರಿಬ್ಬರ ನಡುವಿನ ಸಂವಾದ ಕಡಿಮೆ ಅವಧಿಯದ್ದಾಗಿದ್ದರೂ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಆಗಾಗ್ಗೆ ನಡೆಯುವ ವಾಗ್ಯುದ್ಧಗಳ ಮಧ್ಯೆ ಇದು ಸಾಕಷ್ಟು … Continued