ವೀಡಿಯೊ..| ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾದ ಬಿಜೆಪಿಯ ಓಂ ಬಿರ್ಲಾ

ನವದೆಹಲಿ: ಇಂದು ಬುಧವಾರ (ಜೂನ್‌ ೨೬) ನಡೆದ ಚುನಾವಣೆಯಲ್ಲಿ ಬಿಜೆಪಿಯ ಓಂ ಬಿರ್ಲಾ ಅವರು ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಓಂ ಬಿರ್ಲಾ ಅವರನ್ನು ಲೋಕಸಭೆಯ ಸ್ಪೀಕರ್ ಕುರ್ಚಿಗೆ ಕರೆದೊಯ್ದರು. ಲೋಕಸಭೆ ಸ್ಪೀಕರ್ ಆಯ್ಕೆಗೆ ಮೊದಲ ಬಾರಿಗೆ ಮತದಾನ ನಡೆದಿದೆ. ಅವಿರೋಧವಾಗಿ … Continued

ವೀಡಿಯೊ..| ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕಾಗೇರಿ

ನವದೆಹಲಿ : ನೂತನ ಲೋಕಸಭಾ ಸದಸ್ಯರು ಸೋಮವಾರ ಸಂಸತ್ತಿನ ಮೊದಲ ಅಧಿವೇಶನದಲ್ಲಿ ಕನ್ನಡ ಸೇರಿದಂತೆ ಸಂಸ್ಕೃತ, ಹಿಂದಿ ಸೇರಿದಂತೆ ಹಲವು ಪ್ರಾದೇಶಿಕ ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸದರು. ಕೆಲವರು ಇಂಗ್ಲೀಷ್‌ನಲ್ಲೂ ಪ್ರಮಾಣ ವಚನ ಸ್ವೀಕರಿಸಿದರು.  ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನಸೆಳೆದರು. ಎಲ್ಲ ಸಂಸದರಿಗೂ … Continued

ಬಿಜೆಪಿಯ ಭರ್ತೃಹರಿ ಮಹತಾಬ್ ಲೋಕಸಭೆಯ ಹಂಗಾಮಿ ಸ್ಪೀಕರ್

ನವದೆಹಲಿ: ಏಳು ಅವಧಿಯ ಲೋಕಸಭಾ ಸದಸ್ಯ ಭರ್ತೃಹರಿ ಮಹತಾಬ್ ಅವರನ್ನು ಗುರುವಾರ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಈ ವಿಷಯ ತಿಳಿಸಿದ್ದಾರೆ. ಹಂಗಾಮಿ ಸ್ಪೀಕರ್ ಲೋಕಸಭೆ ಚುನಾವಣೆಯ ನಂತರ ಸಂಸತ್ತಿನ ಕೆಳಮನೆಯ ಮೊದಲ ಸಭೆಯ ಅಧ್ಯಕ್ಷತೆ ವಹಿಸುತ್ತಾರೆ, ಜೊತೆಗೆ ಅದು ಹೊಸದಾಗಿ ರಚಿತವಾದ ಸದನವಾಗಿದ್ದರೆ ಸ್ಪೀಕರ್ ಮತ್ತು … Continued

ಇತ್ತೀಚಿನ ಚುನಾವಣೆಯ ನಂತರ ರಾಜ್ಯಸಭೆಯಲ್ಲಿ ಬಹುಮತ ಪಡೆಯಲು ಎನ್‌ಡಿಎಗೆ ಕೇವಲ 3 ಸ್ಥಾನದ ಕೊರತೆ

ನವದೆಹಲಿ : ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯಲ್ಲಿ ಬಹುಮತ ಪಡೆಯಲು ಬಿಜೆಪಿ ನೇತೃತ್ವದ ಎನ್‌ಡಿಎಗೆ ಕೇವಲ ಮೂರು ಸ್ಥಾನಗಳು ಕಡಿಮೆ ಸ್ಥಾನಗಳು ಕಡಿಮೆಯಾಗಲಿವೆ. ಈ ತಿಂಗಳು ನಡೆದ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಯ ನಂತರ ಬಿಜೆಪಿ ಏಕಾಂಗಿಯಾಗಿ ಹತ್ತಿರ ಹತ್ತಿರ 100 ಸ್ಥಾನಗಳಿಗೆ ತಲುಪಿದೆ. ಒಟ್ಟಾರೆಯಾಗಿ, ಈ ಸುತ್ತಿನ ಚುನಾವಣೆಯಲ್ಲಿ 56 ಸ್ಥಾನಗಳಲ್ಲಿ ಬಿಜೆಪಿ 30 ಸ್ಥಾನಗಳನ್ನು … Continued

10 ವರ್ಷಗಳಲ್ಲಿ ದೇಶದ ಆರ್ಥಿಕತೆ ನಿಷ್ಕ್ರಿಯಗೊಳಿಸಿದ ಯುಪಿಎ ಸರ್ಕಾರ : ಮೋದಿ ಸರ್ಕಾರದ ಶ್ವೇತಪತ್ರ

ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರ್ಮನ್ ಅವರು ಗುರುವಾರ (ಫೆಬ್ರವರಿ 8) ಲೋಕಸಭೆಯಲ್ಲಿ ‘ಭಾರತೀಯ ಆರ್ಥಿಕತೆಯ ಶ್ವೇತಪತ್ರ’ದ ಪ್ರತಿಯನ್ನು ಮಂಡಿಸಿದ್ದಾರೆ. ಯುಪಿಎ ಅವಧಿಯ 10 ವರ್ಷಗಳಲ್ಲಿ ಇದ್ದ ದೇಶದ ಆರ್ಥಿಕ ಪರಿಸ್ಥಿತಿ ಹಾಗೂ ಮೋದಿ ಸರ್ಕಾರ ಬಂದ ನಂತರ ಈವರೆಗಿನ 10 ವರ್ಷಗಳಲ್ಲಿನ ದೇಶದ ಆರ್ಥಿಕ ಪರಿಸ್ಥಿತಿಯ ವಿಶ್ಲೇಷಣಾ ವರದಿಯೊಂದನ್ನು ಕೇಂದ್ರ ಸರ್ಕಾರ ಶ್ವೇತಪತ್ರದ … Continued

ಲೋಕಸಭೆಯಲ್ಲಿ ಸಾರ್ವಜನಿಕ ಪರೀಕ್ಷೆ ವಿಧೇಯಕ 2024 ಮಂಡನೆ : ಪರೀಕ್ಷೆ ಅಕ್ರಮಕ್ಕೆ ಗರಿಷ್ಠ 10 ವರ್ಷ ಜೈಲು, 1 ಕೋಟಿ ರೂ.ದಂಡ

ನವದೆಹಲಿ: ಯುಪಿಎಸ್‌ಸಿ, ನೀಟ್‌, ಜೆಇಇ, ಇತರ ಸರ್ಕಾರಿ ನೇಮಕಾತಿ ಪರೀಕ್ಷೆಗಳು ಸೇರಿದಂತೆ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಪೇಪರ್ ಸೋರಿಕೆ ಮತ್ತು ನಕಲಿ ವೆಬ್‌ಸೈಟ್‌ಗಳಂತಹ ಅವ್ಯವಹಾರಗಳನ್ನು ಪರಿಶೀಲಿಸಲು ಕೇಂದ್ರವು ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆ (ಅಕ್ರಮಗಳ ತಡೆ) ವಿಧೇಯಕ- 2024 ಅನ್ನು ಮಂಡಿಸಿದೆ.  ಮಸೂದೆಯು ಕನಿಷ್ಠ ಮೂರರಿಂದ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ.ವರೆಗೆ … Continued

‘ಎಂದಿಗೂ ಸಹಿಸುವುದಿಲ್ಲ…’: ಸ್ವಪಕ್ಷದ ಸಂಸದ ಡಿ.ಕೆ.ಸುರೇಶ ‘ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ’ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ

ನವದೆಹಲಿ: ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ ಅವರ, ‘ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಬೇಡಿಕೆ’ ಎಂಬ ಹೇಳಿಕೆ ಇಂದು, ಶುಕ್ರವಾರ ರಾಜ್ಯಸಭೆಯಲ್ಲಿ ಚರ್ಚೆಗೆ ಕಾರಣವಾಯಿತು. ದೇಶ ಒಡೆಯುವ ಬಗ್ಗೆ ಮಾತನಾಡುವವರು ಅವರು ಯಾವ ಪಕ್ಷದವರೇ ಆಗಲಿ ಸಹಿಸುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ತಮ್ಮ ಪಕ್ಷದ ಸಂಸದ ಡಿ.ಕೆ.ಸುರೇಶ ಅವರ ವಿವಾದಾತ್ಮಕ ಹೇಳಿಕೆಗೆ … Continued

ಕಲಾಪಕ್ಕೆ ಅಡ್ಡಿ: ಡಿ.ಕೆ ಸುರೇಶ ಸೇರಿದಂತೆ ಮೂವರು ಕಾಂಗ್ರೆಸ್ ಸಂಸದರ ಅಮಾನತು

ನವದೆಹಲಿ : ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಮೂವರು ಕಾಂಗ್ರೆಸ್ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಗುರುವಾರ( ಡಿಸೆಂಬರ್‌ 21) ಸಂಸತ್ತಿನಿಂದ ಅಮಾನತುಗೊಳಿಸಲಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಅಮಾನತಿಗೆ ಪ್ರಸ್ತಾವನೆ ಮಂಡಿಸಿದರು. ನಂತರ ಕಾಂಗ್ರೆಸ್ ಸಂಸದರಾದ ಡಿ.ಕೆ.ಸುರೇಶ, ದೀಪಕ ಬೈಜ್ ಮತ್ತು ನಕುಲ ನಾಥ ಅವರನ್ನು ಅಮಾನತುಗೊಳಿಸಲಾಗಿದೆ. ಹೀಗಾಗಿ ಲೋಕಸಭೆಯಿಂದ ಅಮಾನತುಗೊಂಡ … Continued

ವೀಡಿಯೊ…| ಉಪರಾಷ್ಟ್ರಪತಿಯವರ ʼಅನುಕರಣೆʼ ಮಾಡಿ ಅಣಕಿಸಿದ ಟಿಎಂಸಿ ಸಂಸದ: ವೀಡಿಯೊ ಚಿತ್ರೀಕರಿಸಿದ ರಾಹುಲ್ ಗಾಂಧಿ

ನವದೆಹಲಿ : ರಾಜ್ಯಸಭೆ ಹಾಗೂ ಲೋಕಸಭೆಯಿಂದ ಅಮಾನತುಗೊಂಡ ಸಂಸದರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸುತ್ತಿರುವ ವೇಳೆ, ಟಿಎಂಸಿ ಸಂಸದರಾದ ಕಲ್ಯಾಣ ಬ್ಯಾನರ್ಜಿ ಅವರು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭೆ ಚೇರ್ಮನ್‌ ಜಗದೀಪ ಧನಕರ್ ಅವರನ್ನು ಅಣಕಿಸಿದ್ದಾರೆ. ಇದನ್ನು ಕಾಂಗ್ರೆಸ್ ನಾಯಕ ಅದರ ಚಿತ್ರೀಕರಿಸಿದ್ದಾರೆ. ಈ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಉಪರಾಷ್ಟ್ರಪತಿ ಧನಕರ್‌ ಅವರು ಇದು … Continued

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣ: ಆರೋಪಿಗಳ ಬಳಕೆ ಮಾಡಿದ್ದ ಸುಟ್ಟ ಫೋನ್ ಗಳ ಭಾಗಗಳು ರಾಜಸ್ಥಾನದಲ್ಲಿ ಪತ್ತೆ

ನವದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಸಂಸತ್‌ ಭದ್ರತಾ ಉಲ್ಲಂಘನೆ ಪ್ರಕರಣದ ಪ್ರಮುಖ ಆರೋಪಿ ಲಲಿತ್‌ ಝಾ ನಾಶಪಡಿಸಿದ್ದ ಮೊಬೈಲ್‌ ಫೋನ್‌ಗಳ ಭಾಗಗಳನ್ನು ದೆಹಲಿ ಪೊಲೀಸರು ಭಾನುವಾರ ರಾಜಸ್ಥಾನದಲ್ಲಿ ವಶಪಡಿಸಿಕೊಂಡಿದ್ದಾರೆ. ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ಎಲ್ಲಾ ಫೋನ್‌ಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ. ಲೋಕಸಭೆ ಭದ್ರತಾ ಉಲ್ಲಂಘನೆ ಘಟನೆಯ ಮಾಸ್ಟರ್ ಮೈಂಡ್ ಲಲಿತ್ ಝಾ ಎಲ್ಲಾ ಆರೋಪಿಗಳ … Continued