ಕನ್ನಡದ ಖ್ಯಾತ ಸಾಹಿತಿ ಎಚ್‌.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ

ಬೆಂಗಳೂರು: ಕನ್ನಡದ ಖ್ಯಾತ ಕವಿ, ನಾಟಕ ರಚನೆ ಕಾರರು, ಸಾಹಿತಿಯಾಗಿರುವ ಎಚ್‌ ಎಸ್ ವೆಂಕಟೇಶ ಮೂರ್ತಿ ನಿಧನರಾಗಿದ್ದಾರೆ. ಕವಿ, ನಾಟಕಕಾರ, ವಿಮರ್ಶಕ, ಪ್ರಾಧ್ಯಾಪಕ, ಭಾವಗೀತ ರಚನಕಾರ, ಚಲನಚಿತ್ರ ನಿರ್ದೇಶಕ, ಕತೆಗಾರ, ಚಿತ್ರಗೀತ ರಚನೆಕಾರ ಆಗಿದ್ದ ಅವರು ಅಲ್ಪಕಾಲದ ಅಸೌಖ್ಯದ ಬಳಿಕ ಇಂದು, ಶುಕ್ರವಾರ (ಮೇ 30) ನಿಧನರಾಗಿದ್ದಾರೆ. 81 ವರ್ಷ ವಯಸ್ಸಿನ ಎಚ್‌ಎಸ್‌ವಿ ಎಂದೇ ಕರೆಯಲ್ಪಡುತ್ತಿದ್ದ … Continued

ಕನ್ನಡದ ಖ್ಯಾತ ಕಿರುತೆರೆ ನಟ ಶ್ರೀಧರ ನಾಯಕ ನಿಧನ

ಬೆಂಗಳೂರು: ಕನ್ನಡ ಕಿರುತೆರೆಯ (Kannada Serial) ಖ್ಯಾತ ನಟ ಶ್ರೀಧರ್ ನಾಯಕ (47) ಮೇ 26ರ ರಾತ್ರಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರು ಎಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಮೃತ ಶರೀರವನ್ನು ಇಡಲಾಗಿದೆ. ‘ವಧು’ ಸೀರಿಯಲ್‌ನಲ್ಲಿ ನಟಿಸುತ್ತಿದ್ದ ಶ್ರೀಧರ ಅವರು ಏಕಾಏಕಿ ಅನಾರೋಗ್ಯಕ್ಕೀಡಾಗಿದ್ದರು. ಇನ್‌ಫೆಕ್ಷನ್‌ನಿಂದ ತೀವ್ರ … Continued

ಕನ್ನಡದ ಹಿರಿಯ ನಟ ಬ್ಯಾಂಕ್‌ ಜನಾರ್ಧನ ನಿಧನ

ಬೆಂಗಳೂರು: 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ  (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2:30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ ನಿಧನರಾಗಿದ್ದಾರೆ. ಸುಲ್ತಾನ್‌ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 … Continued

ಹಿರಿಯ ಸಾಹಿತಿ, ಬಹು ಭಾಷಾ ಪಂಡಿತ ಡಾ. ಪಂಚಾಕ್ಷರಿ ಹಿರೇಮಠ ವಿಧಿವಶ

ಧಾರವಾಡ : ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ, ಬಹು ಭಾಷಾ ಪಂಡಿತ, ಹಿರಿಯ ಸಾಹಿತಿ, ವಿದ್ಯಾವಾಚಸ್ಪತಿ ಡಾ. ಪಂಚಾಕ್ಷರಿ ಹಿರೇಮಠ (92) ) ಶುಕ್ರವಾರ (ಮಾರ್ಚ್ 14) ನಗರದಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಪ್ಪಳ ಜಿಲ್ಲೆಯ ಬಿಸರಹಳ್ಳಿಯಲ್ಲಿ 1933 ಜನವರಿ 6ರಂದು ಜನಿಸಿದರು. … Continued

ಹೃದಯ ಸ್ತಂಭನ : 48ನೇ ವಯಸ್ಸಿನಲ್ಲಿ ಜನಪ್ರಿಯ ಹಿಂದಿ ಕಿರುತೆರೆ ನಟ ವಿಕಾಸ್ ಸೇಥಿ ನಿಧನ

ಮುಂಬೈ: 48ರ ವಯಸ್ಸಿನಲ್ಲೇ ಖ್ಯಾತ ಕಿರುತೆರೆ ನಟ ನಟ ವಿಕಾಸ್ ಸೇಥಿ (Vikas Sethi) ನಿಧನರಾಗಿದ್ದಾರೆ. ಅವರು ಹೃದಯ ಸ್ತಂಭನದಿಂದ ಭಾನುವಾರ(ಸೆ.8ರಂದು) ಮಲಗಿದ್ದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತ ದೇಹವನ್ನು ಕೂಪರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತರು ಪತ್ನಿ ಜಾನ್ವಿ ಸೇಥಿ ಮತ್ತು ಅವರ ಅವಳಿ ಮಕ್ಕಳನ್ನು ಅಗಲಿದ್ದಾರೆ. 2000 ಇಸವಿಯ ಆರಂಭದಲ್ಲಿ ಹಿಂದಿ ಕಿರುತೆರೆಯಲ್ಲಿ … Continued