ಭಾರತೀಯ ಚಿತ್ರರಂಗದ ಮಧುರ ಧ್ವನಿ ಸುಮನ್ ಕಲ್ಯಾಣಪುರ ಇನ್ನಿಲ್ಲ

ಮುಂಬೈ: ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಭಾವಂತ ಹಾಗೂ ಜನಪ್ರಿಯ ಹಿನ್ನೆಲೆ ಗಾಯಕಿ, ಪದ್ಮಭೂಷಣ ಪುರಸ್ಕೃತೆ ಸುಮನ್ ಕಲ್ಯಾಣಪುರ (89) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ಸಂಜೆ ಮುಂಬೈನ ಲೋಖಂಡ್‌ವಾಲಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರ ಆಪ್ತ ಒಡನಾಡಿ ಹಾಗೂ ಲೇಖಕಿ ಮಂಗಲಾ ಖಾಡಿಲ್ಕರ ಈ ವಿಷಯವನ್ನು ಖಚಿತಪಡಿಸಿದ್ದು, ಭಾನುವಾರ ರಾತ್ರಿ ಸುಮಾರು 8 ಗಂಟೆಯ ಸುಮಾರಿಗೆ … Continued

ಪಶ್ಚಿಮ ಬಂಗಾಳದ ‘ರಾಜಕೀಯ ಚಾಣಕ್ಯ’ ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸ್ಥಾಪಕ ಸದಸ್ಯ ಹಾಗೂ ಮಾಜಿ ಕೇಂದ್ರ ರೈಲ್ವೆ ಸಚಿವ ಮುಕುಲ್ ರಾಯ್ (71) ಅವರು ಸೋಮವಾರ ಮುಂಜಾನೆ ಸಾಲ್ಟ್ ಲೇಕ್‌ನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅತ್ಯಂತ ನಂಬಿಕಸ್ತ ಒಡನಾಡಿ ಹಾಗೂ ಪಕ್ಷದ ಪ್ರಧಾನ ತಂತ್ರಗಾರ ಎಂದೇ ಗುರುತಿಸಿಕೊಂಡಿದ್ದ ಮುಕುಲ್‌ ರಾಯ್, … Continued

ಮಾಜಿ ಸಚಿವ, ಶತಾಯುಷಿ ಡಾ.ಭೀಮಣ್ಣ ಖಂಡ್ರೆ ನಿಧನ

ಬೀದರ: ಕಲ್ಯಾಣ ಕರ್ನಾಟಕದ ಹಿರಿಯ ನಾಯಕ, ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಸಚಿವ ಡಾ. ಭೀಮಣ್ಣ ಖಂಡ್ರೆ (103) ಅವರು ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.  ವಯೋಸಹಜವಾದ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೀದರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಭಾಲ್ಕಿಯ ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಅವರು ಶುಕ್ರವಾರ ರಾತ್ರಿ … Continued

ಭಾರತ-ಚೀನಾ ಯುದ್ಧದ ಸಮಯದಲ್ಲಿ ದೇಶಕ್ಕೆ 600 ಕೆಜಿ ಚಿನ್ನ, 3 ಖಾಸಗಿ ವಿಮಾನ ನೀಡಿದ್ದ ದರ್ಬಾಂಗ ಮಹಾರಾಣಿ ನಿಧನ

ದರ್ಬಾಂಗ (ಬಿಹಾರ): ಬಿಹಾರದ ಖ್ಯಾತ ದರ್ಬಾಂಗ ರಾಜಮನೆತನದ ಮಹಾರಾಣಿ ಕಾಮಸುಂದರಿ ದೇವಿ ಅವರು ಸೋಮವಾರ ತಮ್ಮ 94ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ದರ್ಬಾಂಗದಲ್ಲಿರುವ ಐತಿಹಾಸಿಕ ಕಲ್ಯಾಣಿ ನಿವಾಸದಲ್ಲಿ ಅವರು ಕೊನೆಯುಸಿರೆಳೆದರು. ಕಳೆದ ಕೆಲವು ದಿನಗಳಿಂದ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ನಿಧನದೊಂದಿಗೆ ದರ್ಬಾಂಗ ರಾಜಮನೆತನ ಮಾತ್ರವಲ್ಲದೆ, ಇಡೀ ಮಿಥಿಲಾಂಚಲದ ದೇಶಪ್ರೇಮ ಹಾಗೂ ಸೇವೆಯ ಒಂದು ಗತವೈಭವದ … Continued

ಪಶ್ಚಿಮ ಘಟ್ಟಗಳ ಧ್ವನಿ, ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ಇನ್ನಿಲ್ಲ

ಪುಣೆ: ಭಾರತದ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನವಿಡೀ ಹೋರಾಡಿದ, ಹಿರಿಯ ಪರಿಸರ ವಿಜ್ಞಾನಿ ಮತ್ತು ಪರಿಸರ ತಜ್ಞ ಮಾಧವ ಗಾಡ್ಗೀಳ್ (83) ಅವರು ಬುಧವಾರ ರಾತ್ರಿ (ಜನವರಿ 7) ಪುಣೆಯಲ್ಲಿ ನಿಧನರಾದರು. ಅವರು ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಗಾಡ್ಗೀಳ್ ಅವರ ಪುತ್ರ ಸಿದ್ಧಾರ್ಥ ಗಾಡ್ಗೀಳ್ ಅವರು ಈ ದುಃಖದ ಸುದ್ದಿಯನ್ನು ಅಧಿಕೃತವಾಗಿ ಹಂಚಿಕೊಂಡಿದ್ದಾರೆ. ಪಶ್ಚಿಮ ಘಟ್ಟಗಳ … Continued

ಹಿರಿಯ ಹಿಂದಿ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ವಿನೋದಕುಮಾರ ಶುಕ್ಲಾ ನಿಧನ

ನವದೆಹಲಿ: ಹಿಂದಿ ಸಾಹಿತ್ಯ ಲೋಕದ ದಿಗ್ಗಜ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ವಿನೋದಕುಮಾರ ಶುಕ್ಲಾ (89) ಅವರು ವಯೋಸಹಜ ಕಾಯಿಲೆಯಿಂದಾಗಿ ಮಂಗಳವಾರ ಸಂಜೆ ರಾಯ್ಪುರದಲ್ಲಿ ನಿಧನರಾದರು. ಛತ್ತೀಸ್‌ಗಢ ಮೂಲದವರಾದ ಶುಕ್ಲಾ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಡಿಸೆಂಬರ್ 2 ರಂದು ಅವರನ್ನು ರಾಯ್‌ಪುರದ ಏಮ್ಸ್ (AIIMS) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ 4:48ಕ್ಕೆ … Continued

ಕಾಂಗ್ರೆಸ್​​​​​ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು: ಕರ್ನಾಟಕ ವಿಧಾನಸಭೆ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಶಂಕಪ್ಪ ಅವರು ಸ್ಪರ್ಷ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಭಾನುವಾರ ಸಂಜೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 95 ನೇ ವಯಸ್ಸಿನ‌ ಶಾಮನೂರ ಶಿವಶಂಕರಪ್ಪ ಅವರು … Continued

ರತನ್ ಟಾಟಾ ಮಲತಾಯಿ ಸಿಮೋನ್ ಟಾಟಾ ನಿಧನ

ಮುಂಬೈ: ಲಕ್ಮೆ (Lakmé) ಮತ್ತು ವೆಸ್ಟ್‌ಸೈಡ್ (Westside) ನಂತಹ ಜನಪ್ರಿಯ ಬ್ರ್ಯಾಂಡ್‌ಗಳನ್ನು ಟಾಟಾ ಸಮೂಹದ ಅಡಿಯಲ್ಲಿ ಜನಪ್ರಿಯಗೊಳಿಸಲು ಸಹಾಯ ಮಾಡಿದ ಸಿಮೋನ್ ಟಾಟಾ ಅವರು ವಯೋಸಹಜ ಅನಾರೋಗ್ಯದ ಕಾರಣ ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಅವರು ದಿವಂಗತ ರತನ್ ಟಾಟಾ ಅವರ ಮಲತಾಯಿ ಮತ್ತು ಹಾಲಿ ಟಾಟಾ ಸನ್ಸ್‌ ಅಧ್ಯಕ್ಷ  ನೋಯೆಲ್ ಟಾಟಾ … Continued

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ‌ ಉಮೇಶ ಇನ್ನಿಲ್ಲ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್ ಉಮೇಶ (umesh) ಇಂದು (ನ.30) ಬೆಳಿಗ್ಗೆ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.  ಇತ್ತೀಚೆಗೆ ನಟ ಉಮೇಶ  ಮನೆಯಲ್ಲೇ ಕಾಲು ಜಾರಿ ಬಿದ್ದು ಆಸ್ಪತ್ರೆಗೆ (Hospital) ದಾಖಲಾಗಿದ್ದರು. ಪರೀಕ್ಷೆ ವೇಳೆ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಆದರೆ … Continued

ಬಾಲಿವುಡ್ ‘ಹೀ-ಮ್ಯಾನ್’, ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

ಮುಂಬೈ : ಬಾಲಿವುಡ್‌ ಹೀ ಮ್ಯಾನ್‌ ಎಂದೇ ಖ್ಯಾತಿ ಪಡೆದ, ಹಿರಿಯ ನಟ ಧರ್ಮೇಂದ್ರ (Dharmendra) ಸೋಮವಾರ (ನವೆಂಬರ್‌ 24) ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಧರ್ಮೇಂದ್ರ ಅವರನ್ನು ಕೆಲವು ದಿನಗಳ ಹಿಂದೆ ಮುಂಬೈಯ ಬ್ರೀಜ್‌ ಕ್ಯಾಂಡ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೇತರಿಸಿಕೊಂಡ ಅವರನ್ನು ಡಿಸ್‌ಚಾರ್ಚ್‌ ಮಾಡಲಾಗಿತ್ತು. ಧರ್ಮೇಂದ್ರ ಅವರು ಇಬ್ಬರು ಪತ್ನಿಯರಾದ ಪ್ರಕಾಶ್ ಕೌರ್ … Continued