ಬೆಂಗಳೂರು : ಖ್ಯಾತ ಪತ್ರಕರ್ತ ಟಿಜೆಎಸ್ ಜಾರ್ಜ್ ನಿಧನ

ಬೆಂಗಳೂರು : ಪದ್ಮಭೂಷಣ ಪುರಸ್ಕೃತ ಪತ್ರಕರ್ತ ಹಾಗೂ ಲೇಖಕ ಥಯ್ಯಲ್ ಜಾಕೋಬ್ ಸೋನಿ ಜಾರ್ಜ್(ಟಿಜೆಎಸ್‌ ಜಾರ್ಜ್‌) ಅವರು ಶುಕ್ರವಾರ (ಅಕ್ಟೋಬರ್ 3) ನಿಧನರಾಗಿದ್ದಾರೆ. ಅವರಿಗೆ 97 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಅಸ್ವಸ್ಥರಾಗಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಟಿಜೆಎಸ್ ಜಾರ್ಜ್ 1928ರ ಮೇ 7ರಂದು ಕೇರಳದಲ್ಲಿ ಪತ್ತನಂತಿಟ್ಟ ಜಿಲ್ಲೆಯ ತುಂಬಮಣಿ ಎಂಬಲ್ಲಿ ಜನಿಸಿದ್ದರು. … Continued

ಕುಮಟಾ : ಇತಿಹಾಸ ತಜ್ಞ ಡಾ. ಎಲ್. ಜಿ. ಭಟ್ಟ ನಿಧನ

ಕುಮಟಾ : ನಿವೃತ್ತ ಪ್ರಾಧ್ಯಾಪಕ ಹಾಗೂ ಇತಿಹಾಸ ಮತ್ತು ಶಿಕ್ಷಣ ತಜ್ಞರಾದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರಿನ ಡಾ. ಎಲ್. ಜಿ. ಭಟ್ಟ (83) ಗುರುವಾರ ರಾತ್ರಿ ನಿಧನರಾಗಿದ್ದಾರೆ. ಕಾರ್ಕಳದ ಭುವನೇಂದ್ರ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ತಮ್ಮ ವೃತ್ತಿಜೀವನ ಆರಂಭಿಸಿದ ಅವರು ವರ್ಗಾವಣೆ ನಂತರ ಹೊನ್ನಾವರದ ಎಸ್. ಡಿ. ಎಂ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ … Continued

ಗಟ್ಟಿಮೇಳ ಖ್ಯಾತಿಯ ಹಿರಿಯ ನಟಿ ಕಮಲಶ್ರೀ ನಿಧನ

ಬೆಂಗಳೂರು : ಗಟ್ಟಿಮೇಳ ಧಾರಾವಾಹಿಯ ಮೂಲಕ ಕರ್ನಾಟಕದ ಜನರ ಮನಗೆದ್ದಿದ್ದ ಹಿರಿಯ ನಟಿ ಕಮಲಶ್ರೀ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ನಟಿ ಕಮಲಶ್ರೀ ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಅವರು ಮಂಗಳವಾರ (ಸೆಪ್ಟೆಂಬರ್‌ 30) ಮೃತಪಟ್ಟಿದ್ದಾರೆ. ಕಮಲಶ್ರೀ ಅವರು ಜನಪ್ರಿಯ ಧಾರಾವಾಹಿಯಾದ ‘ಗಟ್ಟಿಮೇಳ’ ದಲ್ಲಿ ಅಜ್ಜಿಯ … Continued

ಖ್ಯಾತ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ

ಬೆಂಗಳೂರು : ಕನ್ನಡದ ರಂಗಭೂಮಿಯ ಹಿರಿಯ ಕಲಾವಿದ ಯಶವಂತ ಸರದೇಶಪಾಂಡೆ ಅವರು ಇಂದು, ಸೋಮವಾರ (ಸೆಪ್ಟೆಂಬರ್‌ ೨೯) ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಯಶವಂತ ಸರದೇಶಪಾಂಡೆ ಅವರಿಗೆ ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತ ಉಂಟಾಯಿತು. ಅವರನ್ನು ಫೋರ್ಟಿಸ್ ಆಸ್ಪತ್ರೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರು … Continued

ಬಾಲ್ಯದಲ್ಲಿ ತಾಯಿ, ಅಣ್ಣ, ಅಕ್ಕ, ತಂಗಿ ಪ್ಲೇಗ್‌ ನಿಂದ ಸಾವು….ತಮ್ಮನ ಶವ ಒಬ್ಬನೇ ಹೊತ್ತೊಯ್ದು ಅಂತ್ಯಕ್ರಿಯೆ ಮಾಡಿದ್ದ ಬಾಲಕ ಭೈರಪ್ಪ

ಖ್ಯಾತ ಕಾದಂಬರಿಕಾರ, ಎಸ್‌.ಎಲ್‌. ಭೈರಪ್ಪ SL Bhyrappa)ಅವರು 94ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಆದರೆ ಭೈರಪ್ಪ ( ಅವರ ಬಾಲ್ಯ ಅತ್ಯಂತ ದುರಂತದಿಂದ ಕೂಡಿತ್ತು. ಅವರು ಬಾಲ್ಯದಲ್ಲಿ ಪ್ಲೇಗ್‌ಗೆ ತುತ್ತಾಗಿದ್ದರು. ಹೇಗೋ ಅದರಿಂದ ಪಾರಾದರು. ಆದರೆ ಅವರ ಕುಟುಂಬದ ಸದಸ್ಯರನ್ನು ಹೆಮ್ಮಾರಿ ಪ್ಲೇಗ್‌ ಬಲಿ ತೆಗೆದುಕೊಂಡಿತ್ತು. ಈ ಬಗ್ಗೆ ಅವರು ತಮ್ಮ ಆತ್ಮಕಥನ ಭಿತ್ತಿಯಲ್ಲಿಯೂ ಬರೆದಿದ್ದಾರೆ. ಅವರ … Continued

ಕನ್ನಡದ ಹಿರಿಯ ನಟಿ ಬಿ. ಸರೋಜಾದೇವಿ ಇನ್ನಿಲ್ಲ

ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ. ಸರೋಜಾದೇವಿ (87) ಇಂದು ವಿಧಿವಶರಾಗಿದ್ದಾರೆ. ಸ್ಯಾಂಡಲ್‌ವುಡ್‌ನ ಅಭಿನಯ ಶಾರದೆ ಎಂದು ಹೆಸರು ಪಡೆದಿದ್ದ ಇವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು ಹಲವು ಭಾಷೆಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದ ಇವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಸರೋಜಾದೇವಿ ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ … Continued

ಕನ್ನಡದ ಖ್ಯಾತ ಸಾಹಿತಿ ಎಚ್‌.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ

ಬೆಂಗಳೂರು: ಕನ್ನಡದ ಖ್ಯಾತ ಕವಿ, ನಾಟಕ ರಚನೆ ಕಾರರು, ಸಾಹಿತಿಯಾಗಿರುವ ಎಚ್‌ ಎಸ್ ವೆಂಕಟೇಶ ಮೂರ್ತಿ ನಿಧನರಾಗಿದ್ದಾರೆ. ಕವಿ, ನಾಟಕಕಾರ, ವಿಮರ್ಶಕ, ಪ್ರಾಧ್ಯಾಪಕ, ಭಾವಗೀತ ರಚನಕಾರ, ಚಲನಚಿತ್ರ ನಿರ್ದೇಶಕ, ಕತೆಗಾರ, ಚಿತ್ರಗೀತ ರಚನೆಕಾರ ಆಗಿದ್ದ ಅವರು ಅಲ್ಪಕಾಲದ ಅಸೌಖ್ಯದ ಬಳಿಕ ಇಂದು, ಶುಕ್ರವಾರ (ಮೇ 30) ನಿಧನರಾಗಿದ್ದಾರೆ. 81 ವರ್ಷ ವಯಸ್ಸಿನ ಎಚ್‌ಎಸ್‌ವಿ ಎಂದೇ ಕರೆಯಲ್ಪಡುತ್ತಿದ್ದ … Continued

ಕನ್ನಡದ ಖ್ಯಾತ ಕಿರುತೆರೆ ನಟ ಶ್ರೀಧರ ನಾಯಕ ನಿಧನ

ಬೆಂಗಳೂರು: ಕನ್ನಡ ಕಿರುತೆರೆಯ (Kannada Serial) ಖ್ಯಾತ ನಟ ಶ್ರೀಧರ್ ನಾಯಕ (47) ಮೇ 26ರ ರಾತ್ರಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರು ಎಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಮೃತ ಶರೀರವನ್ನು ಇಡಲಾಗಿದೆ. ‘ವಧು’ ಸೀರಿಯಲ್‌ನಲ್ಲಿ ನಟಿಸುತ್ತಿದ್ದ ಶ್ರೀಧರ ಅವರು ಏಕಾಏಕಿ ಅನಾರೋಗ್ಯಕ್ಕೀಡಾಗಿದ್ದರು. ಇನ್‌ಫೆಕ್ಷನ್‌ನಿಂದ ತೀವ್ರ … Continued

ಕನ್ನಡದ ಹಿರಿಯ ನಟ ಬ್ಯಾಂಕ್‌ ಜನಾರ್ಧನ ನಿಧನ

ಬೆಂಗಳೂರು: 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ  (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2:30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ ನಿಧನರಾಗಿದ್ದಾರೆ. ಸುಲ್ತಾನ್‌ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 … Continued

ಹಿರಿಯ ಸಾಹಿತಿ, ಬಹು ಭಾಷಾ ಪಂಡಿತ ಡಾ. ಪಂಚಾಕ್ಷರಿ ಹಿರೇಮಠ ವಿಧಿವಶ

ಧಾರವಾಡ : ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ, ಬಹು ಭಾಷಾ ಪಂಡಿತ, ಹಿರಿಯ ಸಾಹಿತಿ, ವಿದ್ಯಾವಾಚಸ್ಪತಿ ಡಾ. ಪಂಚಾಕ್ಷರಿ ಹಿರೇಮಠ (92) ) ಶುಕ್ರವಾರ (ಮಾರ್ಚ್ 14) ನಗರದಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಪ್ಪಳ ಜಿಲ್ಲೆಯ ಬಿಸರಹಳ್ಳಿಯಲ್ಲಿ 1933 ಜನವರಿ 6ರಂದು ಜನಿಸಿದರು. … Continued