ಹಿಂದಿ ಸಿನೆಮಾದ ಖ್ಯಾತ ನಟ-ನಿರ್ದೇಶಕ ಮನೋಜಕುಮಾರ ನಿಧನ

ಮುಂಬೈ: ದಾದಾ ಸಾಹೇಬ ಪ್ರಶಸ್ತಿ ಪುರಸ್ಕೃತ ಹಿಂದಿ ಚಿತ್ರರಂಗದ ಹಿರಿಯ ನಟ ಮತ್ತು ಚಲನಚಿತ್ರ ನಿರ್ದೇಶಕರಾದ ಮನೋಜಕುಮಾರ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ನಟ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಮನೋಜಕುಮಾರ ಅವರು ನಿಧನರಾಗಿದ್ದನ್ನು ಅವರ ಪುತ್ರ ಕುನಾಲ್ ಗೋಸ್ವಾಮಿ ದೃಢಪಡಿಸಿದ್ದಾರೆ ಎಂದು ಎಎನ್‌ಐಗೆ ಸುದ್ದಿ ವರದಿ ಮಾಡಿದೆ. … Continued

ಕನ್ನಡದ ಖ್ಯಾತ ನಟ ಸರಿಗಮ ವಿಜಿ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ (ವಿಜಯಕುಮಾರ ಆರ್‌.) ಅವರು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಸರಿಗಮ ವಿಜಿ ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಯಶವಂತಪುರದ ಮಣಿಪಾಲ್‌ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಒಂದು ವಾರದಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ … Continued

ಖ್ಯಾತ ಸಿನೆಮಾ ನಿರ್ದೇಶಕ ಶ್ಯಾಮ್ ಬೆನಗಲ್ ಇನ್ನಿಲ್ಲ

ಮುಂಬೈ: ಖ್ಯಾತ ನಿರ್ದೇಶಕ ಹಾಗೂ 1970 ಮತ್ತು 1980ರ ದಶಕದಲ್ಲಿ ಭಾರತೀಯ ಸಮಾನಾಂತರ ಸಿನಿಮಾಕ್ಕೆ ನಾಂದಿ ಹಾಡಿದ್ದ ಶ್ಯಾಂ ಬೆನಗಲ್ 90 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಪತ್ನಿ ನೀರಾ ಬೆನಗಲ್ ಮತ್ತು ಪುತ್ರಿ ಪಿಯಾ ಬೆನಗಲ್ ಅವರನ್ನು ಅಗಲಿದ್ದಾರೆ. ಡಿಸೆಂಬರ್ 14 ರಂದು 90 ವರ್ಷಕ್ಕೆ ಕಾಲಿಟ್ಟ ಕೆಲವೇ ದಿನಗಳಲ್ಲಿ ಅವರನ್ನು ಮುಂಬೈನ ವೊಕಾರ್ಡ್ … Continued

ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಕೆ.ಎಚ್‌.ಶ್ರೀನಿವಾಸ ನಿಧನ

ಬೆಂಗಳೂರು : ಮಾಜಿ ಸಚಿವ, ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸ ಕೆ.ಎಚ್‌. ಶ್ರೀನಿವಾಸ (86) ನಿಧನರಾಗಿದ್ದಾರೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ ಅವರು ಮೊದಲು ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಆನಂತರದಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ನಲ್ಲಿಯೂ ಇದ್ದರು.. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಅವರು ಸಾಂಸ್ಕೃತಿಕ ವಲಯದಲ್ಲೂ … Continued

ಬಯೋಕಾನ್ ಕಾರ್ಯಕಾರಿ ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ ಪತಿ ಜಾನ್ ಶಾ ನಿಧನ

ಬೆಂಗಳೂರು: ಬಯೋಕಾನ್ ಕಾರ್ಯಕಾರಿ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಅವರ ಪತಿ ಜಾನ್ ಶಾ ಅವರು ಸೋಮವಾರ 72 ನೇ ವಯಸ್ಸಿನಲ್ಲಿ ನಿಧನರಾದರು. ಅವರನ್ನು ಇಂದು, ಸೋಮವಾರ ವಿಲ್ಸನ್ ಗಾರ್ಡನ್ಸ್ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಲೈವ್‌ಮಿಂಟ್ ವರದಿ ಮಾಡಿದೆ. ಅವರು ಬಯೋಕಾನ್‌ನ ಮಾಜಿ ಉಪಾಧ್ಯಕ್ಷರಾಗಿದ್ದರು. ಬಯೋಕಾನ್‌ನ ಅಧಿಕೃತ ವೆಬ್‌ಸೈಟ್ ಪ್ರಕಾರ, ಜಾನ್ ಶಾ ಅವರು … Continued

ಭಾರತೀಯ ಪಿಎಸ್‌ಯುಗಳ ರೂವಾರಿ, ದಂತಕಥೆ ವಿ. ಕೃಷ್ಣಮೂರ್ತಿ ನಿಧನ

ಚೆನ್ನೈ: ಬಿಎಚ್‌ಇಎಲ್, ಮಾರುತಿ ಉದ್ಯೋಗ್, ಎಸ್‌ಎಐಎಲ್ (SAIL) ಮತ್ತು ಗೇಲ್ (ಇಂಡಿಯಾ) ನಂತಹ ಹಲವಾರು ಭಾರತೀಯ ಕಾರ್ಪೊರೇಟ್ ಸಂಸ್ಥೆಗಳ ಟರ್ನ್‌ರೌಂಡ್ ಮ್ಯಾನ್ ಎಂದು ಪರಿಗಣಿಸಲ್ಪಟ್ಟಿರುವ ವೆಂಕಟರಮಣ ಕೃಷ್ಣಮೂರ್ತಿ (97 ವರ್ಷ) ಭಾನುವಾರ ನಿಧನರಾದರು. ಕೃಷ್ಣಮೂರ್ತಿ ಅವರು ಚೆನ್ನೈನಲ್ಲಿರುವ ಅವರ ಮನೆಯಲ್ಲಿ ನಿಧನರಾದರು ಎಂದು ಅವರ ಮಾಜಿ ಸಹೋದ್ಯೋಗಿಯೊಬ್ಬರು ತಿಳಿಸಿದ್ದಾರೆ. ಅವರ ಅಂತಿಮ ಸಂಸ್ಕಾರ ಸೋಮವಾರ ನಡೆಯಲಿದೆ. … Continued