‘ಟ್ರಂಪ್ ನನ್ನನ್ನು ಭೋಜನಕ್ಕೆ ಆಹ್ವಾನಿಸಿದರು, ಆದರೆ…’: ಒಡಿಶಾದಲ್ಲಿ, ಅಮೆರಿಕಕ್ಕೆ ಭೇಟಿ ನೀಡದಿರುವುದಕ್ಕೆ ಕಾರಣ ನೀಡಿದ ಪ್ರಧಾನಿ ಮೋದಿ

ಭುವನೇಶ್ವರ: “ಜಗನ್ನಾಥ ಮಹಾಪ್ರಭುಗಳ ಭೂಮಿಗೆ ಬರಲು” ಬಯಸಿದ್ದರಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕಕ್ಕೆ ಭೇಟಿ ನೀಡುವ ಆಹ್ವಾನವನ್ನು ತಿರಸ್ಕರಿಸಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ. ಒಡಿಶಾದಲ್ಲಿ ಬಿಜೆಪಿ ಸರ್ಕಾರದ ಒಂದು ವರ್ಷದ ಸ್ಮರಣಾರ್ಥ ಭುವನೇಶ್ವರದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, “ಕೇವಲ ಎರಡು ದಿನಗಳ ಹಿಂದೆ, ನಾನು ಜಿ … Continued

ವೀಡಿಯೊ..| ಜಾಗ್ರೆಬ್‌ : ಭಾರತೀಯ ಉಡುಗೆ ತೊಟ್ಟು ಗಾಯತ್ರಿ ಮಂತ್ರ-ಸಂಸ್ಕೃತ ಶ್ಲೋಕದ ಮೂಲಕ ಮೋದಿಗೆ ಸ್ವಾಗತಕೋರಿದ ಕ್ರೊಯೇಷಿಯನ್ನರು…!

ಜಾಗ್ರೆಬ್‌: ಕೆನಡಾದ ಭೇಟಿ ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi) ಬುಧವಾರ ಕ್ರೊಯೇಷಿಯಾದ ಜಾಗ್ರೆಬ್‌ಗೆ ಭೇಟಿ ನೀಡಿದ್ದಾರೆ. nIwiಬೆಳಸಿದ್ದಾರೆ. ಪ್ರಧಾನಿ ಮೋದಿಗೆ ಅಲ್ಲಿ ಆತ್ಮೀಯ ಸ್ವಾಗತ ದೊರೆಯಿತು. ಭಾರತೀಯ ಪ್ರಧಾನಿಯೊಬ್ಬರು ಈ ದೇಶಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಅವರು ಹೊಟೇಲಿಗೆ ಆಗಮಿಸಿದಾಗ ಪ್ರಧಾನಿ ಮೋದಿ ಅವರನ್ನು ವಂದೇ ಮಾತರಂ ” ಮತ್ತು ” … Continued

‘ನೀವು ಅತ್ಯುತ್ತಮ, ನಾನು ನಿಮ್ಮಂತಾಗಲು ಪ್ರಯತ್ನಿಸುತ್ತಿದ್ದೇನೆ’ : ಜಿ7ನಲ್ಲಿ ಪ್ರಧಾನಿ ಮೋದಿಗೆ ಹೇಳಿದ ಇಟಲಿ ಪ್ರಧಾನಿ ಮೆಲೋನಿ-ವೀಡಿಯೊ ವೈರಲ್‌

ಕೆನಡಾದಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಭೇಟಿಯಾದರು. ಇಬ್ಬರೂ ನಾಯಕರು ಪರಸ್ಪರ ಹಸ್ತಲಾಘವ ಮಾಡಿದ ನಂತರ ಪ್ರಧಾನಿ ಮೋದಿ ಅವರು “ಇಟಲಿಯೊಂದಿಗಿನ ಭಾರತದ ಸ್ನೇಹವು ಮತ್ತಷ್ಟು ಬಲಗೊಳ್ಳುತ್ತದೆ” ಎಂದು ಹೇಳಿದರು. ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ, ಇಬ್ಬರು ನಾಯಕರು ಭೇಟಿಯಾಗಿ ಪರಸ್ಪರ ಕೈಕುಲುಕುತ್ತ … Continued

ಆಪರೇಶನ್‌ ಸಿಂಧೂರ ವೇಳೆ ಭಾರತ ಅಮೆರಿಕದ ಮಧ್ಯಸ್ಥಿಕೆ ಕೋರಿಲ್ಲ : ದೂರವಾಣಿ ಕರೆ ವೇಳೆ ಟ್ರಂಪ್‌ ಗೆ ಪ್ರಧಾನಿ ಮೋದಿ

ನವದೆಹಲಿ: ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ದೂರವಾಣಿ ಕರೆಯಲ್ಲಿ ಮಾತನಾಡಿದಾಗ, ಭಾರತವು ಇತ್ತೀಚೆಗೆ ನಡೆಸಿದ ‘ಆಪರೇಷನ್ ಸಿಂಧೂರ’ ಸಂದರ್ಭದಲ್ಲಿ ಅಮೆರಿಕದ ಮಧ್ಯಸ್ಥಿಕೆ ಕೋರಿಲ್ಲ ಅಥವಾ ವ್ಯಾಪಾರದ ಬಗ್ಗೆ ಚರ್ಚಿಸಿಲ್ಲ ಎಂದು ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ನಾಲ್ಕು ದಿನಗಳ ಸಂಘರ್ಷವನ್ನು ವ್ಯಾಪಾರವನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಕೊನೆಗೊಳಿಸಿದೆ … Continued

ವೀಡಿಯೊ.| ಸೈಪ್ರಸ್‌ ಭೇಟಿ ವೇಳೆ ಪ್ರಧಾನಿ ಮೋದಿ ಪಾದ ಮುಟ್ಟಿ ನಮಸ್ಕರಿಸಿ ಗೌರವ ಸೂಚಿಸಿದ ಅಲ್ಲಿನ ನಾಯಕಿ…!

ನವದೆಹಲಿ: ಸೈಪ್ರಸ್ ದೇಶದ ನಿಕೋಸಿಯಾ ಕೌನ್ಸಿಲ್ ಸದಸ್ಯೆ ಮೈಕೆಲಾ ಕೈಥ್ರಿಯೋಟಿ ಮ್ಲಾಪಾ ಅವರು ಗೌರವ ಸೂಚಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದಾರೆ. ಐತಿಹಾಸಿಕ ನಿಕೋಸಿಯಾ ಕೇಂದ್ರದಲ್ಲಿ ಮ್ಲಾಪಾ ಅವರು ಪ್ರಧಾನಿ ಮೋದಿಯವರನ್ನು ಸ್ವಾಗತಿಸುತ್ತಿದ್ದರು ಈ ವೇಳೆ ಅವರು ಪ್ರಧಾನಿ ಮೋದಿ ಅವರ ಪಾದಕ್ಕೆರಗಿ ನಮಸ್ಕರಿಸಿದ್ದಾರೆ. ಇದನ್ನು ಹೆಚ್ಚಾಗಿ ಭಾರತೀಯ ಸಂಪ್ರದಾಯದಲ್ಲಿ ಅನುಸರಿಸುತ್ತಾರೆ. … Continued

ಈ ತಿಂಗಳು ಕೆನಡಾದಲ್ಲಿ ನಡೆಯಲಿರುವ ಜಿ 7 ಶೃಂಗಸಭೆಗೆ ಮೋದಿಗೆ ಆಹ್ವಾನ ನೀಡಿದ ಪ್ರಧಾನಿ ಮಾರ್ಕ್ ಕಾರ್ನಿ

ನವದೆಹಲಿ: ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ನೇತೃತ್ವದಲ್ಲಿ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದ್ದ ಭಾರತ-ಕೆನಡಾ ಸಂಬಂಧಗಳು ಚೇತರಿಸಿಕೊಳ್ಳುತ್ತಿರುವ ದೊಡ್ಡ ಸಂಕೇತವಾಗಿ, ಅವರ ಉತ್ತರಾಧಿಕಾರಿ ಹಾಲಿ ಪ್ರಧಾನಿ ಮಾರ್ಕ್ ಕಾರ್ನಿ ಕೆನಡಾದಲ್ಲಿ ನಡೆಯಲಿರುವ ಜಿ7 ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಿದ್ದಾರೆ. ಜೂನ್ 15 ರಿಂದ 17 ರವರೆಗೆ ನಡೆಯಲಿರುವ ಶೃಂಗಸಭೆಯಲ್ಲಿ ಭಾಗವಹಿಸುವುದಾಗಿ ಪ್ರಧಾನಿ ಮೋದಿ … Continued

ವೀಡಿಯೊ | ಈಗ ಯೂ ಟರ್ನ್‌ ; ಪಾಕಿಸ್ತಾನ ಸೇನೆ ವಾಯುನೆಲೆಗಳ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪ್ರಧಾನಿ ಶೆಹಬಾಜ್ ಷರೀಫ್…!

ನವದೆಹಲಿ : ಹಲವು ದಿನಗಳಿಂದಲೂ ನಿರಾಕರಿಸುತ್ತಲೇ ಬಂದಿದ್ದ ಕೊನೆಗೂ ಭಾರತದ ಸೇನೆಯು ತನ್ನ ವಾಯುನೆಲೆಗಳ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದೆ ಎಂಬುದನ್ನು ಪಾಕಿಸ್ತನವು ಬಹಿರಂಗವಾಗಿ ಒಪ್ಪಿಕೊಂಡಿದೆ. ಸ್ವತಃ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಮೇ 10 ರಂದು ಆಪರೇಶನ್‌ ಸಿಂದೂರ ಅಡಿಯಲಲಿ ಹಾರಿಸಲಾದ ಭಾರತದ ಕ್ಷಿಪಣಿಗಳು ಪಾಕಿಸ್ತಾನದ ಸೇನೆಯ ವಾಯುನೆಲೆಗಳ ದಾಳಿ ಮಾಡಿದೆ ಎಂದು ಒಪ್ಪಿಕೊಂಡಿದ್ದಾರೆ. … Continued

ಆಪರೇಷನ್ ಸಿಂಧೂರ | ಸಂಸದ ತರೂರ್ ನಿಲುವಿಗೆ ಕಾಂಗ್ರೆಸ್‌ ಅತೃಪ್ತಿ ; ಆದ್ರೆ ಪಾಕ್ ಭಯೋತ್ಪಾದನೆ ವಿರುದ್ಧ ಸರ್ಕಾರದ ಜಾಗತಿಕ ಸಂಪರ್ಕ ಯೋಜನೆಯಲ್ಲಿ ಪ್ರಮುಖ ಪಾತ್ರ..?

ನವದೆಹಲಿ: ಆಪರೇಷನ್ ಸಿಂಧೂರ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಹೇಳಿಕೆಗಳು ಪಕ್ಷದ ನಾಯಕರು ‘ಲಕ್ಷ್ಮಣ ರೇಖೆ’ಯನ್ನು ಮೀರಿದೆ ಎಂದು ಹೇಳಿದ ನಂತರ, ಶಶಿ ತರೂರ ಅವರಿಗೆ ಪಾಕಿಸ್ತಾನದಲ್ಲಿ ಭಯೋತ್ಪಾದನೆ ವಿರುದ್ಧದ ಭಾರತದ ಅಭಿಯಾನದಲ್ಲಿ ಜಾಗತಿಕ ಮಟ್ಟದಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿ ಅವರ ರಾಜತಾಂತ್ರಿಕ ಪ್ರಯತ್ನಕ್ಕಾಗಿ … Continued

ಭಾರತದ ಜೊತೆ ಪಾಕಿಸ್ತಾನದ ಕದನ ವಿರಾಮದ ಬಗ್ಗೆ ಚೀನಾ ಅಸಮಾಧಾನ? ಇದಕ್ಕೆ ಕಾರಣ ಏನು ಗೊತ್ತೆ…?

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಯೋತ್ಪಾದಕರು ಮತ್ತು ಅವರ ಬೆಂಬಲಿಗರನ್ನು ಗುರಿಯಾಗಿಸಿಕೊಂಡು ಭಾರತ ನಡೆಸಿದ ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಹಲವಾರು ವಾಯುನೆಲೆಗಳು ಮತ್ತು ಇತರ ಮಿಲಿಟಿರಿ ನೆಲೆಗಳು ಹಾನಿಗೊಳಗಾದವು. ಅದರ ನಂತರ ಪಾಕಿಸ್ತಾನ ಅಮೆರಿಕಕ್ಕೆ ಮಧ್ಯಪ್ರವೇಶಿಸುವಂತೆ ದುಂಬಾಲು ಬಿದ್ದ ನಂತರ ಕದನ ವಿರಾಮ ಘೋಷಣೆಯಾಯಿತು. ಅಮೆರಿಕ ಈ ಕದನ ವಿರಾಮದ ಕ್ರೆಡಿಟ್‌ … Continued

ಆಪರೇಷನ್ ಸಿಂಧೂರ | ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಮಿಲಿಟರಿ ಸಂಘರ್ಷದ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಇಂದು ಸೋಮವಾರ (ಮೇ 12) ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಭೂಮಿ, ವಾಯು ಮತ್ತು ಸಮುದ್ರದಾದ್ಯಂತ ಎಲ್ಲಾ ಮಿಲಿಟರಿ ದಾಳಿಗಳನ್ನು ನಿಲ್ಲಿಸಲು ಎರಡೂ ದೇಶಗಳು ಪರಸ್ಪರ ಒಪ್ಪಂದಕ್ಕೆ ಬಂದ ಕೆಲವೇ ದಿನಗಳ ನಂತರ ಅವರು … Continued