ಪ್ರಧಾನಿ ಮೋದಿ-ಬಿಜೆಪಿ ಉನ್ನತ ನಾಯಕರ ಮಹತ್ವದ ಸಭೆ ; ಶೀಘ್ರವೇ ಕೇಂದ್ರ ಸಂಪುಟ-ಪಕ್ಷದ ಸಂಘಟನೆಯ ಪುನರ್ರಚನೆ ?

ನವದೆಹಲಿ: ಬಹುನಿರೀಕ್ಷಿತ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇಂದ್ರ ಸಂಘಟನೆಯ ಪುನರ್ರಚನೆಗೆ ಶೀಘ್ರದಲ್ಲೇ ಅಂತಿಮ ರೂಪ ಸಿಗುವ ಸಾಧ್ಯತೆಗಳು ದಟ್ಟವಾಗಿವೆ. ಈ ಸಂಬಂಧ ಬುಧವಾರ ತಡರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್. … Continued

2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಡೆಯುವ ಪ್ರಯತ್ನಗಳಲ್ಲಿ ಭಾರತದ ಪಾತ್ರವನ್ನು ಪೋಲೆಂಡ್ ಪ್ರಶಂಸಿಸಿದೆ. ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಗಂಭೀರವಾಗಿ ಪರಿಗಣಿಸುವ ಕೆಲವೇ ವಿಶ್ವ ನಾಯಕರಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಒಬ್ಬರಾಗಿದ್ದು, ಅವರ ಮಾತಿಗೆ ಪುತಿನ್ ವಿಶೇಷ ಮಹತ್ವ ನೀಡುತ್ತಾರೆ ಎಂದು ಪೋಲೆಂಡ್‌ನ ಉಪ ವಿದೇಶಾಂಗ ಸಚಿವ ವ್ಲಾಡಿಸ್ಲಾವ್ ತಿಯೋಫಿಲ್ … Continued

ಇಂಡೋನೇಷ್ಯಾ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜು ಪಟ್ನಾಯಕ್ ಪಾತ್ರ ಕೊಂಡಾಡಿದ ಪ್ರಧಾನಿ ಮೋದಿ : ಇದರ ಹಿಂದಿದೆ ಸಾಹಸದ ಕಥೆ

ನವದೆಹಲಿ: ಇಂಡೋನೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಮಾತನಾಡುವ ವೇಳೆ ಒಡಿಶಾದ ಮಾಜಿ ಮುಖ್ಯಮಂತ್ರಿ ಹಾಗೂ ಖ್ಯಾತ ನಾಯಕ ದಿವಂಗತ ಬಿಜು ಪಟ್ನಾಯಕ್ ಅವರ ಸಾಹಸ ಮತ್ತು ಇಂಡೋನೇಷ್ಯಾದ ಸ್ವಾತಂತ್ರ್ಯ ಹೋರಾಟದಲ್ಲಿ ಅವರು ವಹಿಸಿದ್ದ ಮಹತ್ವದ ಪಾತ್ರವನ್ನು ಕೊಂಡಾಡಿದ್ದಾರೆ. ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ, “ಇಂಡೋನೇಷ್ಯಾ 1945ರಲ್ಲಿ ಮತ್ತು ಭಾರತ … Continued

ನೀಟ್ ಮರುಪರೀಕ್ಷೆ : ವಿದ್ಯಾರ್ಥಿಗಳ ಸುಗಮ ಸಂಚಾರಕ್ಕಾಗಿ ದೆಹಲಿ ಏರ್‌ಪೋರ್ಟ್‌ನಲ್ಲೇ 45 ನಿಮಿಷ ಕಾಯ್ದ ಪ್ರಧಾನಿ ಮೋದಿ !

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಧ್ಯಾಹ್ನ ದೆಹಲಿ ವಿಮಾನ ನಿಲ್ದಾಣದಲ್ಲಿ ಸುಮಾರು 45 ನಿಮಿಷಗಳ ಕಾಲ ಕಾಯುವ ಮೂಲಕ, ನೀಟ್-ಯುಜಿ (NEET-UG) ಮರುಪರೀಕ್ಷೆ ಬರೆಯಲು ಹೊರಟಿದ್ದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಂಡಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ತಮ್ಮ ಸಂಚಾರದಿಂದಾಗಿ ಅಡ್ಡಿಯಾಗಬಾರದು ಮತ್ತು ಸಂಚಾರ ದಟ್ಟಣೆ ಸುಗಮವಾಗಿರಬೇಕು ಎಂಬ ಉದ್ದೇಶದಿಂದ ಪ್ರಧಾನಿ ಈ … Continued

ನೆಹರು ಹಿಂದಿಕ್ಕಿ ಭಾರತದಲ್ಲಿ ಅತಿ ದೀರ್ಘಾವಧಿ ಅಧಿಕಾರ ನಡೆಸಿದ ‘ಚುನಾಯಿತ ಪ್ರಧಾನಿ’ ಎಂಬ ಮೈಲಿಗಲ್ಲು ಸ್ಥಾಪಿಸಿದ ಪ್ರಧಾನಿ ಮೋದಿ

 ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು (10 ಜೂನ್ 2026)  ಭಾರತದ ರಾಜಕೀಯ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿಗೆ ಸೇವೆ ಸಲ್ಲಿಸಿದ ‘ಚುನಾಯಿತ ಪ್ರಧಾನಿ’ ಎಂಬ ಅಭೂತಪೂರ್ವ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಇದರೊಂದಿಗೆ ಅವರು ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಹೆಸರಿನಲ್ಲಿದ್ದ ಸುದೀರ್ಘಾವಧಿಯ ದಾಖಲೆಯನ್ನು ಮುರಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು … Continued

ಒಳನುಸುಳುವಿಕೆ, ಇತರ ಕಾರಣಗಳಿಂದಾಗಿ ‘ಅಸ್ವಾಭಾವಿಕ ಜನಸಂಖ್ಯಾ ಬದಲಾವಣೆ’ ಪರಿಶೀಲಿಸಲು ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ

ನವದೆಹಲಿ: ಕೇಂದ್ರ ಸರ್ಕಾರವು ದೇಶದಲ್ಲಿನ ಅಕ್ರಮ ನುಸುಳುವಿಕೆ ಹಾಗೂ ಇತರ ಕಾರಣಗಳಿಂದ ಉಂಟಾಗುತ್ತಿರುವ “ಅಸ್ವಾಭಾವಿಕ ಜನಸಂಖ್ಯೆ ಬದಲಾವಣೆ”ಯನ್ನು (ಡೆಮೋಗ್ರಫಿಕ್ ಚೇಂಜ್) ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದೆ. 2025ರ ಆಗಸ್ಟ್ 15ರಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದ ಈ ಪ್ರಮುಖ ನಿರ್ಧಾರದ ಅನುಷ್ಠಾನದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ … Continued

ಪ್ರಧಾನಿ ಮೋದಿಯನ್ನು ‘ಹಾವಾಡಿಗ’ನಂತೆ ಬಿಂಬಿಸಿ ʼಜನಾಂಗೀಯ ನಿಂದನೆʼಯ ಕಾರ್ಟೂನ್ ಪ್ರಕಟಿಸಿದ ನಾರ್ವೆ ಪತ್ರಿಕೆ

ಓಸ್ಲೋ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಾರ್ವೆ ಪ್ರವಾಸ ಹಾಗೂ ಮಾಧ್ಯಮ ಸ್ವಾತಂತ್ರ್ಯದ ಕುರಿತಾದ ಚರ್ಚೆಗಳ ಬೆನ್ನಲ್ಲೇ, ನಾರ್ವೆಯ ಮುಂಚೂಣಿಯ ದಿನಪತ್ರಿಕೆಯೊಂದು ಪ್ರಧಾನಿ ಮೋದಿ ಅವರನ್ನು ‘ಹಾವಾಡಿಗ’ನಂತೆ ಬಿಂಬಿಸುವ ಜನಾಂಗೀಯ ನಿಂದನೆಯ ಕಾರ್ಟೂನ್ ಪ್ರಕಟಿಸಿ ಜಾಗತಿಕ ಮಟ್ಟದಲ್ಲಿ ಭಾರಿ ಆಕ್ರೋಶಕ್ಕೆ ಗುರಿಯಾಗಿದೆ. ಪ್ರಧಾನಿ ಮೋದಿ ಅವರು ನಾರ್ವೆಯ ರಾಜಧಾನಿ ಓಸ್ಲೋದಲ್ಲಿ ಇಳಿಯುವುದಕ್ಕೂ ಕೆಲವೇ ಗಂಟೆಗಳ … Continued

1000 ವರ್ಷಗಳ ಹಳೆಯ ಚೋಳರ ಕಾಲದ ತಾಮ್ರದ ಶಾಸನಗಳನ್ನು ಭಾರತಕ್ಕೆ ಮರಳಿ ನೀಡಿದ ನೆದರ್ಲ್ಯಾಂಡ್ಸ್

ನವದೆಹಲಿ/ಆಮ್ಸ್ಟರ್‌ಡ್ಯಾಮ್: ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಮರಳಿ ತರುವ ನಿಟ್ಟಿನಲ್ಲಿ ಮತ್ತೊಂದು ಐತಿಹಾಸಿಕ ಯಶಸ್ಸು ಸಿಕ್ಕಿದೆ. ನೆದರ್ಲ್ಯಾಂಡ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ, 11ನೇ ಶತಮಾನದ ಚೋಳರ ಕಾಲದ ಅತ್ಯಂತ ಅಪರೂಪದ ತಾಮ್ರದ ಶಾಸನಗಳನ್ನು (ಕಾಪರ್ ಪ್ಲೇಟ್ಸ್) ನೆದರ್ಲ್ಯಾಂಡ್ಸ್ ಸರ್ಕಾರವು ಶನಿವಾರ ಅಧಿಕೃತವಾಗಿ ಭಾರತಕ್ಕೆ ಹಸ್ತಾಂತರಿಸಿದೆ. ಐರೋಪ್ಯ ದೇಶಗಳಲ್ಲಿ ‘ಲೈಡನ್ ಪ್ಲೇಟ್ಸ್’ (Leiden Plates) … Continued

ಇಂಧನ ಉಳಿತಾಯಕ್ಕೆ ಮೋದಿ ಹೆಜ್ಜೆ : ಪ್ರಧಾನಿ ಬೆಂಗಾವಲು ವಾಹಗಳ ಸಂಖ್ಯೆ ಶೇ.50 ಕಡಿತ ; ಬಿಜೆಪಿ ಸಿಎಂಗಳಿಗೂ ಸೂಚನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಬೆಂಗಾವಲು ಪಡೆಯಲ್ಲಿರುವ ವಾಹನಗಳ ಸಂಖ್ಯೆಯನ್ನು ಶೇಕಡಾ 50 ರಷ್ಟು ಕಡಿಮೆ ಮಾಡಲು ಸೂಚಿಸಿದ್ದಾರೆ.   ಪ್ರಸ್ತುತ ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ಇದು  ಆಡಳಿತಾತ್ಮಕ ಮಿತವ್ಯಯವನ್ನು ಉತ್ತೇಜಿಸುವುದು  ಹಾಗೂ ಇಂಧನ ಬಳಕೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಅಲ್ಲದೆ, ತಾವು ನುಡಿದಂತೆ ದೇಶದ ನಾಗರಿಕರ ಮುಂದೆ ನಡೆದುಕೊಳ್ಳುವುದು ಪ್ರಧಾನಿ … Continued

“ಪೆಟ್ರೋಲ್‌-ಡೀಸೆಲ್‌ ಉಳಿಸಿ, ವರ್ಕ್ ಫ್ರಮ್ ಹೋಮ್‌ಗೆ ಆದ್ಯತೆ ನೀಡಿ, 1 ವರ್ಷ ಚಿನ್ನ ಖರೀದಿಸಬೇಡಿ”: ಇರಾನ್‌-ಅಮೆರಿಕ ಯುದ್ಧದ ನಡುವೆ ಪ್ರಧಾನಿ ಮೋದಿ ಕರೆ

ಹೈದರಾಬಾದ್‌: ಇರಾನ್‌-ಅಮೆರಿಕ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಜಾಗತಿಕವಾಗಿ ತೈಲ ಬೆಲೆ ಏರಿಕೆಯಾಗುತ್ತಿದ್ದು, ದೇಶದ ವಿದೇಶಿ ವಿನಿಮಯವನ್ನು ಉಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ವಿಶೇಷ ಮನವಿ ಮಾಡಿದ್ದಾರೆ. ಭಾನುವಾರ ನಗರದಲ್ಲಿ ಆಯೋಜಿಸಿದ್ದ ಬೃಹತ್‌ ರ್ಯಾಲಿಯಲ್ಲಿ ಮಾತನಾಡಿದ ಅವರು, ಇಂಧನ ಬಳಕೆ ಕಡಿಮೆ ಮಾಡಲು ಮತ್ತೆ ‘ವರ್ಕ್ ಫ್ರಮ್ ಹೋಮ್’ ಅನ್ನು ಜಾರಿಗೆ … Continued