‘ಇದು ಸಾಮಾನ್ಯ ಚುನಾವಣೆಯಲ್ಲ’ : ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೂ ಮುನ್ನ ಬಿಜೆಪಿ-ಎನ್‌ಡಿಎ ಅಭ್ಯರ್ಥಿಗಳಿಗೆ ಪತ್ರ ಬರೆದ ಪ್ರಧಾನಿ ಮೋದಿ

ನವದೆಹಲಿ: ಅಭೂತಪೂರ್ವ ಕ್ರಮದಲ್ಲಿ, ಮುಂಬರುವ ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಸ್ಪರ್ಧಿಸುವ ಎಲ್ಲಾ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಅಭ್ಯರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ವೈಯಕ್ತಿಕ ಪತ್ರಗಳನ್ನು ಬರೆದಿದ್ದಾರೆ. ಈ ಉಪಕ್ರಮವು ಬಿಜೆಪಿಯ ಸಮಗ್ರ ಕಾರ್ಯತಂತ್ರದ ಭಾಗವಾಗಿದ್ದು, ಕ್ಷೇತ್ರಗಳಾದ್ಯಂತ ಪ್ರಧಾನಿ ಸಂದೇಶದ ವ್ಯಾಪಕ ಪ್ರಚಾರಕ್ಕಾಗಿ ಈ ಉಪಕ್ರಮ ಬಂದಿದೆ. ಮಾಹಿತಿಯ ಪ್ರಕಾರ, ಅಭ್ಯರ್ಥಿಗಳು ಪತ್ರವನ್ನು ಸ್ವೀಕರಿಸಿದ … Continued

ಏಪ್ರಿಲ್‌ 20ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ, ಎರಡು ಚುನಾವಣಾ ಸಮಾವೇಶದಲ್ಲಿ ಭಾಗಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಏ.20ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಎರಡು ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ. ಸುನೀಲಕುಮಾರ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.20ರಂದು ಮಧ್ಯಾಹ್ನ ಚಿಕ್ಕಬಳ್ಳಾಪುರ ಮತ್ತು ಕೋಲಾರ ಸೇರಿ ಚಿಕ್ಕಬಳ್ಳಾಪುರದಲ್ಲಿ ಸಭೆ, ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ … Continued

ಚುನಾವಣಾ ಬಾಂಡ್, ಉತ್ತರ ಭಾರತ-ದಕ್ಷಿಣ ಭಾರತ ಚರ್ಚೆ, ಸಿಬಿಐ – ಇ.ಡಿ. ದುರ್ಬಳಕೆ ಆರೋಪ, ಬಿಜೆಪಿ ಮಾಡೆಲ್-ಕಾಂಗ್ರೆಸ್‌ ಮಾಡೆಲ್‌ ಬಗ್ಗೆ ಮೋದಿ ಹೇಳಿದ್ದೇನು..?

2047ರ ವೇಳೆಗೆ ವಿಕಸಿತ ಭಾರತದ ಬಗೆಗಿನ ತಮ್ಮ ವಿಶಾಲವಾದ ದೃಷ್ಟಿಕೋನದಿಂದ ಹಿಡಿದು ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮರಳಿ ಕರೆತರುವಲ್ಲಿ ತಮ್ಮ ಮಧ್ಯಸ್ಥಿಕೆಯವರೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ಸುದ್ದಿ ಸಂಸ್ಥೆ ಎಎನ್‌ಐ (ANI)ಗೆ ನೀಡಿದ ಸಂದರ್ಶನದಲ್ಲಿ ಎಲ್ಲಾ ಪ್ರಮುಖ ಘಟನೆಗಳ ಬಗ್ಗೆ ಮಾತನಾಡಿದ್ದಾರೆ. ಕಳೆದ ದಶಕದಲ್ಲಿ ರಾಷ್ಟ್ರದಲ್ಲಿ ಭ್ರಷ್ಟಾಚಾರ ಮತ್ತು ಕಪ್ಪುಹಣ ನಿಭಾಯಿಸುವಲ್ಲಿ ಜಾರಿ … Continued

ಲೋಕಸಭೆ ಚುನಾವಣೆ 2024 : ‘ನ್ಯಾಯ’ ವಿಷಯದ ಹೊಸ ಪ್ರಚಾರ ಗೀತೆ ಬಿಡುಗಡೆ ಮಾಡಿದ ಕಾಂಗ್ರೆಸ್‌ | ವೀಡಿಯೊ ವೀಕ್ಷಿಸಿ

ನವದೆಹಲಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ಕಾಂಗ್ರೆಸ್ ಪಕ್ಷವು ತನ್ನ ಪ್ರಚಾರ ಕಾರ್ಯತಂತ್ರವನ್ನು ಅನಾವರಣಗೊಳಿಸಿದ್ದು, “ನ್ಯಾಯ”ದ ವಿಷಯವನ್ನು ಕೇಂದ್ರೀಕರಿಸಿದೆ. ಸೋಮವಾರ, ಪಕ್ಷವು ಹೆಚ್ಚು ಸಮಾನ ಮತ್ತು ನ್ಯಾಯಯುತ ಭಾರತಕ್ಕಾಗಿ ತನ್ನ ದೃಷ್ಟಿಕೋನವುಳ್ಳ ಪ್ರಚಾರ ಹಾಡನ್ನು ಬಿಡುಗಡೆ ಮಾಡಿದೆ. “ಹಮ್ ಸಾಥ್ ಹೈ ತೋ ಹಾಥ್ ಯೇ ಹಾಲತ್ ಬದಲ್ ದೇಗಾ” ಎಂಬ ಗೀತೆಯನ್ನು ಕಾಂಗ್ರೆಸ್ ಪ್ರಧಾನ … Continued

ಏಪ್ರಿಲ್‌ 14 ರಂದು ರಾಜ್ಯದಲ್ಲಿ ಮೋದಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಏಪ್ರಿಲ್ 14ರಂದು ರಾಜ್ಯದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಮೋದಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ದೇವನಹಳ್ಳಿ ಬಳಿ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ಹೆಬ್ಬಾಳ ಮತ್ತು ಬ್ಯಾಟರಾಯನಪುರದಲ್ಲಿ ರೋಡ್ ಶೋ ನಡೆಯಲಿದೆ.

ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ನಿಧನ

ಕೋಲ್ಕತ್ತಾ : ರಾಮಕೃಷ್ಣ ಮಠ ಮತ್ತು ಮಿಷನ್‌ನ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ಮಹಾರಾಜ ಅವರು ಮಂಗಳವಾರ 95 ನೇ ವಯಸ್ಸಿನಲ್ಲಿ ನಿಧನರಾದರು. ಅವರು ವಯೋಸಹಜ ಕಾಯಿಲೆಗಳಿಂದಾಗಿ ಜನವರಿ 29 ರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಸ್ವಾಮಿ ಆತ್ಮಸ್ಥಾನಂದರ ಮರಣದ ನಂತರ ಸ್ವಾಮಿ ಸ್ಮರಣಾನಂದ ಮಹಾರಾಜ ಅವರು ರಾಮಕೃಷ್ಣ ಮಠ ಮತ್ತು ಮಿಷನ್‌ನ 16 ನೇ ಅಧ್ಯಕ್ಷರಾದರು. ಮೂತ್ರನಾಳದ … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ, ಪ್ರಧಾನಿ ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ

ನವದೆಹಲಿ: ಕಾಂಗ್ರೆಸ್ ಪಕ್ಷವು 46 ಲೋಕಸಭಾ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಶನಿವಾರ ಪ್ರಕಟಿಸಿದ್ದು, ಪಕ್ಷದ ನಾಯಕರಾದ ದಿಗ್ವಿಜಯ ಸಿಂಗ್ ಅಜಯ ರೈ ಮತ್ತು ಕಾರ್ತಿ ಪಿ ಚಿದಂಬರಂ ಅವರು ಸಹ ಈ ಪಟ್ಟಿಯಲ್ಲಿದ್ದಾರೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರನ್ನು ರಾಜ್‌ಗಢ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದ್ದು, ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಜಯ ರೈ … Continued

ಭಾರತದ ವಿರುದ್ಧ ಗುಟುರು ಹಾಕಿ ಈಗ ಮೆತ್ತಗಾದ ಮಾಲ್ಡೀವ್ಸ್ ಅಧ್ಯಕ್ಷ : ಸಾಲ ತೀರಿಸಲು ವಿನಾಯಿತಿ ನೀಡಿ ಎಂದು ಅಂಗಲಾಚಿದ ಮುಯಿಝ್ಝು

ಮಾಲೆ: ಚೀನಾ ಜೊತೆ ಸ್ನೇಹ ಬೆಳೆಸಲು ಭಾರತ ವಿರೋಧಿ ಧೋರಣೆಗಳನ್ನು ಬಲವಾಗಿ ಪ್ರತಿಪಾದಿಸುವ ಮೂಲಕ ಸುದ್ದಿಯಲ್ಲಿದ್ದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝ್ಝು ಈಗ ಮೆತ್ತಗಾದಂತೆ ತೋರುತ್ತಿದೆ. ಭಾರತವು ತನ್ನ ದೇಶದ ‘ಅತಿ ಆಪ್ತ ಮಿತ್ರದೇಶ’ವಾಗಿ ಉಳಿಯಲಿದೆ ಎಂದು ಹೇಳಿರುವ ಮುಯಿಝ್ಝು, ಭಾರತವು ನೀಡಿದ್ದ ಸಾಲದ ಮೇಲೆ ವಿನಾಯಿತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಈ ವರ್ಷದ … Continued

ಲೋಕಸಭೆ ಚುನಾವಣೆ ಬಳಿಕ ಪ್ರಧಾನಿ ಮೋದಿಯನ್ನು ರಷ್ಯಾ-ಉಕ್ರೇನ್‌ ಗೆ ಆಹ್ವಾನಿಸಿದ ಪುತಿನ್, ಝೆಲೆನ್ಸ್ಕಿ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರೊಂದಿಗೆ ಮಾತನಾಡಿದ ಕೆಲವೇ ಗಂಟೆಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತನಾಡಿದ್ದಾರೆ. ಪುತಿನ್ ಅವರು ರಷ್ಯಾದ ಅಧ್ಯಕ್ಷರಾಗಿ ಪುನರಾಯ್ಕೆಯಾದ ಹಿನ್ನೆಲೆಯಲ್ಲಿ ಮತ್ತು ರಷ್ಯಾ-ಉಕ್ರೇನ್ ಯುದ್ಧ ವಿರಾಮದ ಯಾವುದೇ ಲಕ್ಷಣಗಳಿಲ್ಲದ ಹಿನ್ನೆಲೆಯಲ್ಲಿ ಉಭಯ ನಾಯಕರೊಂದಿಗಿನ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಉಭಯ ನಾಯಕರು … Continued

ವೀಡಿಯೊ…| ಚುನಾವಣಾ ರ‍್ಯಾಲಿಯಲ್ಲಿ ಬಿಜೆಪಿ ನಾಯಕನ ನೆನೆದು ಕಣ್ಣೀರಿಟ್ಟ ಪ್ರಧಾನಿ ಮೋದಿ ; ಭಾಷಣ ಕೆಲಕಾಲ ಸ್ಥಗಿತ

ಸೇಲಂ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮಿಳುನಾಡಿನ ಸೇಲಂನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ 2013 ರಲ್ಲಿ ತಮಿಳುನಾಡಿನ ಸೇಲಂನಲ್ಲಿ ಹತ್ಯೆಗೀಡಾದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ‘ಆಡಿಟರ್‌’ ವಿ ರಮೇಶ ಅವರನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. “ಇಂದು, ನಾನು ಆಡಿಟರ್ ರಮೇಶ ಅವರನ್ನು ನೆನಪಿಸಿಕೊಳ್ಳುತ್ತೇನೆ” ಎಂದು ಹೇಳಿದ ಪ್ರಧಾನಿ ಮೋದಿ ಭಾವುಕರಾಗಿ ಒಂದು … Continued