ಪಹಲ್ಗಾಮ್ ದಾಳಿ: ಭೂಸೇನೆ, ನೌಕಾಪಡೆ ಮಾಹಿತಿ ಪಡೆದ ನಂತರ ವಾಯುಪಡೆ ಮುಖ್ಯಸ್ಥರ ಜೊತೆ ಸಭೆ ನಡೆಸಿದ ಪ್ರಧಾನಿ ಮೋದಿ

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾದ ನಂತರ ಭಾರತ ಹಾಗೂ ಪಾಕಿಸ್ತಾನದ ನಡುವೆ ಪರಿಸ್ಥಿತಿ ಹದಗೆಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಭಾನುವಾರ ಭಾರತೀಯ ವಾಯುಪಡೆಯ ಮುಖ್ಯಸ್ಥ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದರು. ಲೋಕ ಕಲ್ಯಾಣ ಮಾರ್ಗದ 7ರಲ್ಲಿರುವ … Continued

ವೀಡಿಯೊ…| ‘ಭಾರತ-ಪಾಕಿಸ್ತಾನ ಮಧ್ಯೆ ಯುದ್ಧ ನಡೆದ್ರೆ ನಾನು ಇಂಗ್ಲೆಂಡ್‌ಗೆ ಹೋಗ್ತೇನೆ..’: ಪಾಕಿಸ್ತಾನಿ ಸಂಸದನ ಹೇಳಿಕೆ ಭಾರಿ ವೈರಲ್

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಬರ್ಬರ ದಾಳಿಯಲ್ಲಿ ಭಯೋತ್ಪಾದಕರು 26 ಪ್ರವಾಸಿಗರನ್ನು ಕೊಂದ ನಂತರ ಭಾರತವು ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಪಾಕಿಸ್ತಾನದ ಎಲ್ಲಾ ಆಮದುಗಳನ್ನು ನಿಲ್ಲಿಸುವುದು ಮತ್ತು ಪಾಕಿಸ್ತಾನ ಒಡೆತನದ ಹಡಗುಗಳ ಡಾಕಿಂಗ್ ಅನ್ನು ನಿಷೇಧಿಸುವುದು ಸೇರಿದಂತೆ ಎರಡನೇ ಹಂತದ ದಂಡನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪಹಲ್ಗಾಮ್ ದಾಳಿಗೆ … Continued

ವೀಡಿಯೊ..| ಅವಕಾಶ ಕೊಟ್ರೆ ದೇವರ ಮೇಲಾಣೆ ಬಾಂಬ್ ಕಟ್ಟಿಕೊಂಡು ಪಾಕ್‌ ಜತೆ ಯುದ್ಧಕ್ಕೆ ಹೋಗ್ತೇನೆ ; ಸಚಿವ ಜಮೀರ್ ಅಹ್ಮದ್ ಹೇಳಿಕೆ ವೈರಲ್

ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವಂತೆಯೇ, ಕರ್ನಾಟಕದ ವಸತಿ ಮತ್ತು ಅಲ್ಪಸಂಖ್ಯಾತ ಸಚಿವ ಜಮೀರ್ ಅಹ್ಮದ್ ಖಾನ್ ಅವರು ನೆರೆಯ ದೇಶದ ವಿರುದ್ಧ ಯುದ್ಧ ನಡೆಸಲು ಆತ್ಮಹತ್ಯಾ ಬಾಂಬ್ ಆಗಿ ಪಾಕಿಸ್ತಾನಕ್ಕೆ ಹೋಗಲು ಸಿದ್ಧ ಎಂದು ಹೇಳಿರುವುದು ವೈರಲ್‌ ಆಗಿದೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವೇಳೆ ಸಚಿವ … Continued

ಜನಸಂಖ್ಯಾ ಸಮೀಕ್ಷೆಯಲ್ಲಿ ಜಾತಿ ಗಣತಿ ಸೇರ್ಪಡೆ: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

ನವದೆಹಲಿ: ಜಾತಿ ಜನಗಣತಿಯು ಮುಂದಿನ ರಾಷ್ಟ್ರೀಯ ಜನಗಣತಿದ ಭಾಗವಾಗಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ಪ್ರಕಟಿಸಿದ್ದಾರೆ. ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. “ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯು ಮುಂಬರುವ ಜನಗಣತಿಯಲ್ಲಿ ಜಾತಿ ಎಣಿಕೆಯನ್ನು ಸೇರಿಸಲು ನಿರ್ಧರಿಸಿದೆ” ಎಂದು ಕೇಂದ್ರ ಸಚಿವರು ಬುಧವಾರ … Continued

ಪಹಲ್ಗಾಮ್‌ ಭಯೋತ್ಪಾದಕ ದಾಳಿ | ಭಯೋತ್ಪಾಕರ ಮಟ್ಟ ಹಾಕಲು ಸೇನೆಗೆ ಸಂಪೂರ್ಣ ಅಧಿಕಾರ ನೀಡಿದ ಪ್ರಧಾನಿ ಮೋದಿ

ನವದೆಹಲಿ : ಪಹಲ್ಗಾಮ್‌ ಭಯೋತ್ಪಾದಕರ ದಾಳಿಗೆ ತಕ್ಕ ಉತ್ತರ ನೀಡಲು ಸಜ್ಜಾಗಿರುವ ಭಾರತ ಅವರ ವಿರುದ್ಧದ ಕಾರ್ಯಾಚರಣೆಗೆ ಸಂಬಂಧಿಸಿ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಭಯೋತ್ಪಾದಕರಿಗೆ ತಕ್ಕ ಉತ್ತರ ನೀಡುವ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಭಾರತೀಯ ಸಶಸ್ತ್ರ ಪಡೆಗಳಿಗೆ ಕಾರ್ಯಾಚರಣೆ ನಡೆಸಲು … Continued

ವೀಡಿಯೊ..| ಭಯೋತ್ಪಾದಕರಿಗೆ, ಹಿಂದಿದ್ದವರಿಗೆ ಭಾರತದ ಖಡಕ್‌ ವಾರ್ನಿಂಗ್‌ ಜಗತ್ತಿಗೆ ಗೊತ್ತಾಗಲೆಂದು ಇಂಗ್ಲಿಷಿಗೆ ಭಾಷಣ ಬದಲಾಯಿಸಿದ ಪ್ರಧಾನಿ ಮೋದಿ

ನವದೆಹಲಿ: ಪಹಲ್ಗಾಮ್ ದಾಳಿಕೋರರಿಗೆ ಪ್ರಧಾನಿ ಮೋದಿ ಖಡಕ್‌ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟದ ಬಲವಾದ ಸಂದೇಶವನ್ನು ಸಾರ್ವಜನಿಕ ವೇದಿಕೆಯಿಂದ ಇಡೀ ಜಗತ್ತಿಗೆ ರವಾನಿಸಲು ಹಿಂದಿಯಲ್ಲಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಇಂಗ್ಲಿಷ್‌ಗೆ ಬದಲಾಯಿಸಿಕೊಂಡರು. “ಬಿಹಾರದ ಮಣ್ಣಿನಿಂದ, ನಾನು … Continued

ವೀಡಿಯೊ | ವಕ್ಫ್ ತಿದ್ದುಪಡಿ ಕಾಯ್ದೆ ; ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ದಾವೂದಿ ಬೊಹ್ರಾ ಮುಸ್ಲಿಂ ನಾಯಕರು

ನವದೆಹಲಿ: ದಾವೂದಿ ಬೊಹ್ರಾ ಮುಸ್ಲಿಂ ಸಮುದಾಯದ ನಿಯೋಗ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಯಿತು, ವಕ್ಫ್ (ತಿದ್ದುಪಡಿ) ಕಾಯ್ದೆ-2025 ಅಂಗೀಕಾರವಾಗಿದ್ದಕ್ಕೆ ನಿಯೋಗದ ಸದಸ್ಯರು ಪ್ರಧಾನಿಗೆ ಧನ್ಯವಾದ ಅರ್ಪಿಸಿದರು. ವಕ್ಫ್‌ ತಿದ್ದುಪಡಿಯು ಸಮುದಾಯದ ಬಹುಕಾಲದ ಬೇಡಿಕೆಯಾಗಿರುವುದರಿಂದ ಈ ಸಭೆ ಮಹತ್ವದ್ದಾಗಿತ್ತು ಎಂದು ಅಧಿಕೃತ ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ನಡೆದ ಸಂವಾದದ ಸಂದರ್ಭದಲ್ಲಿ, ದಾವೂದಿ ಬೋಹ್ರಾ ಸಮುದಾಯದ … Continued

ಪ್ರಧಾನಿ ಮೋದಿ ಖಾಸಗಿ ಕಾರ್ಯದರ್ಶಿಯಾಗಿ ಯುವ ಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿ ನೇಮಕ ; ಯಾರು ಈ ಅಧಿಕಾರಿ..?

ನವದೆಹಲಿ: ಯುವ ಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಖಾಸಗಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಅವರು 2014 ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆಗಳ ಅಧಿಕಾರಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಖಾಸಗಿ ಕಾರ್ಯದರ್ಶಿಯಾಗಿ ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್) ಅಧಿಕಾರಿಯಾದ ನಿಧಿ ತಿವಾರಿ ಅವರನ್ನು ನೇಮಕ ಮಾಡಲಾಗಿದೆ … Continued

ಛತ್ತೀಸಗಢ | ಪ್ರಧಾನಿ ಮೋದಿ ಭೇಟಿ ನೀಡುವ ಕೆಲವೇ ಗಂಟೆಗಳ ಮೊದಲು ಶರಣಾದ 50 ನಕ್ಸಲೀಯರು

ರಾಯ್ಪುರ : ಛತ್ತೀಸ್‌ಗಢದ ಬಿಲಾಸಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಮುನ್ನ 50 ಮಾವೋವಾದಿಗಳು ಶರಣಾಗಿದ್ದಾರೆ, ಇದು ಕೇಂದ್ರ ಮತ್ತು ರಾಜ್ಯ ಅಧಿಕಾರಿಗಳ ನೇತೃತ್ವದಲ್ಲಿ ನಡೆಯುತ್ತಿರುವ ನಕ್ಸಲ್ ವಿರೋಧಿ ಕಾರ್ಯಾಚರಣೆ ಮತ್ತು ಮನೆಗೆ ಹಿಂತಿರುಗಿ ಅಭಿಯಾನಕ್ಕೆ ಮಹತ್ವದ ಯಶಸ್ಸು ಎಂದು ಪರಿಗಣಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ 33,700 ಕೋಟಿ ರೂ.ಗೂ ಹೆಚ್ಚು ಮೊತ್ತದ … Continued

ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್‌ ಎಸ್‌ಎಸ್‌ ಕಚೇರಿಗೆ ಮೋದಿ ಭೇಟಿ; ಸಂಘದ ಸಂಸ್ಥಾಪಕರಿಗೆ ಪುಷ್ಪ ನಮನ

ನಾಗ್ಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ ನಾಗ್ಪುರದ ಡಾ.ಹೆಡಗೆವಾರ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸಂಸ್ಥಾಪಕ ಕೇಶವ ಬಲಿರಾಮ ಹೆಡಗೆವಾರ ಮತ್ತು ಮಶಧವ ರಾವ್‌ ಗೋಳ್ವಾಲ್ಕರ್ ಅವರ ಸ್ಮಾರಕಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಆರ್‌ಎಸ್‌ಎಸ್‌ನ ಆಡಳಿತ ಕೇಂದ್ರ ಕಚೇರಿಯಾದ ರೇಶಿಂಬಾಗ್‌ನಲ್ಲಿರುವ ಸ್ಮೃತಿ ಮಂದಿರಕ್ಕೆ ಮೋದಿ ಭೇಟಿ … Continued