ವಿಡಿಯೋ | ಬಂಗಾಳ ಸಿಎಂ ಪದಗ್ರಹಣ ಸಮಾರಂಭಲ್ಲಿ 98 ವರ್ಷದ ಮಖನ್‌ಲಾಲ ಸರ್ಕಾರ ಪಾದಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ : ಇವರು ಯಾರು ?

ಕೋಲ್ಕತ್ತಾ: ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಶನಿವಾರ ಬೆಳಿಗ್ಗೆ ನಡೆದ ಸುವೇಂದು ಅಧಿಕಾರಿ ಅವರ ನೇತೃತ್ವದ ರಾಜ್ಯದ ಮೊತ್ತಮೊದಲ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಒಂದು ಭಾವುಕ ಕ್ಷಣಕ್ಕೆ ಸಾಕ್ಷಿಯಾಯಿತು. ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಜನಸಂಘದ ಕಾಲದ ಹಿರಿಯ ನಾಯಕ, 98 ವರ್ಷದ ಮಾಖನ್‌ಲಾಲ್ ಸರ್ಕಾರ ಅವರ ಪಾದ … Continued

ಪಶ್ಚಿಮ ಬಂಗಾಳದ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ: ಸಚಿವರಾಗಿ ಐವರಿಂದ ಪ್ರಮಾಣ ವಚನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು, ಶನಿವಾರ ಬಿಜೆಪಿಯ ಯುಗ ಆರಂಭವಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಸುವೇಂದು ಅಧಿಕಾರಿ ಅವರು ಶನಿವಾರ ಬೆಳಗ್ಗೆ 11 ಗಂಟೆಗೆ ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರ ಜೊತೆ ಐವರು ಶಾಕಸರು ಸಚಿವರಾಗಿ … Continued

ಪಶ್ಚಿಮ ಬಂಗಾಳದಲ್ಲಿ ದೀದಿ ಕೋಟೆಯಲ್ಲಿ ಕಮಲ ಅರಳಿಸಿದ ‘5 M’ ಮಂತ್ರ ! ಫಲಿತಾಂಶ ಬದಲಿಸಿದ ಆ ಐದು ʼMʼ ಯಾವುವು?

ಪಶ್ಚಿಮ ಬಂಗಾಳದಲ್ಲಿ ಬದಲಾದ ರಾಜಕೀಯ ಗಾಳಿ: ತೃಣಮೂಲಕ್ಕೆ ಮುಳುವಾಯಿತೇ ‘5-M’ ತಂತ್ರ? ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಗತಿಯಲ್ಲಿದ್ದು, ಬಿಜೆಪಿ ಭರ್ಜರಿ ಗೆಲುವಿನತ್ತ ದಾಪುಗಾಲು ಹಾಕುತ್ತಿದೆ. ಸದ ಲಭ್ಯವಿರುವ ಟ್ರೆಂಡ್‌ಗಳ ಪ್ರಕಾರ ಭಾರತೀಯ ಜನತಾ ಪಾರ್ಟಿ (BJP) 190ರ ಆಸುಪಾಸು ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸ್ಪಷ್ಟ ಬಹುಮತದತ್ತ (ಮ್ಯಾಜಿಕ್ … Continued

ಪಶ್ಚಿಮ ಬಂಗಾಳ ಚುನಾವಣೆ ; ಹೊರಬಿದ್ದ ಮತ್ತೊಂದು ಎಕ್ಸಿಟ್‌ ಪೋಲ್‌; ಈ ಬಾರಿ ಬಿಜೆಪಿ ಸುನಾಮಿ ಎಂದ ಟುಡೇಸ್ ಚಾಣಕ್ಯ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಅಬ್ಬರ ಮುಗಿದು ಈಗ ಫಲಿತಾಂಶದ ಕುತೂಹಲ ಮನೆಮಾಡಿದೆ. ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ನಡೆದ ಮತದಾನದ ನಂತರ ಹೊರಬಿದ್ದಿರುವ ಮತಗಟ್ಟೆ ಸಮೀಕ್ಷೆಗಳು (Exit Polls) ರಾಜ್ಯದಲ್ಲಿ ದೊಡ್ಡ ರಾಜಕೀಯ ಕಂಪನದ ಮುನ್ಸೂಚನೆ ನೀಡಿವೆ. ವಿಶೇಷವಾಗಿ ಗುರುವಾರ ಹೊರಬಿದ್ದ ‘ಟುಡೇಸ್ ಚಾಣಕ್ಯ’ ಸಮೀಕ್ಷೆಯು ರಾಜ್ಯದಲ್ಲಿ ಬಿಜೆಪಿ … Continued

ಪ್ರಧಾನಿ ಮೋದಿ ವಿರುದ್ಧ ‘ಭಯೋತ್ಪಾದಕ’ ಪದ ಬಳಕೆ: ಕಾಂಗ್ರೆಸ್ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ‘ಭಯೋತ್ಪಾದಕ’ ಎಂಬ ಪದವನ್ನು ಬಳಸಿದ ಆರೋಪದ ಮೇಲೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇಂದ್ರ ಚುನಾವಣಾ ಆಯೋಗವು ಬುಧವಾರ ನೋಟಿಸ್ ಜಾರಿ ಮಾಡಿದೆ. ತಮಿಳುನಾಡಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಖರ್ಗೆ, ಎಐಎಡಿಎಂಕೆ (AIADMK) ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿರುವುದನ್ನು ಟೀಕಿಸುವ ಸಂದರ್ಭದಲ್ಲಿ ಈ ವಿವಾದಾತ್ಮಕ … Continued

ಪ್ರಧಾನಿ ಮೋದಿ ವಿರುದ್ಧ ‘ಭಯೋತ್ಪಾದಕ’ ಪದ ಬಳಕೆ : ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ‘ಭಯೋತ್ಪಾದಕ’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಂಗಳವಾರ ಚುನಾವಣಾ ಆಯೋಗಕ್ಕೆ (EC) ದೂರು ನೀಡಿದೆ. ಖರ್ಗೆ ಅವರು ತಮ್ಮ ಹೇಳಿಕೆಗೆ ಬಹಿರಂಗ ಕ್ಷಮೆಯಾಚಿಸುವಂತೆ ನಿರ್ದೇಶನ ನೀಡಬೇಕು ಎಂದು ಬಿಜೆಪಿ … Continued

ವಿಡಿಯೊ..| ಪ್ರಧಾನಿ ಮೋದಿ ಒಬ್ಬ ‘ಭಯೋತ್ಪಾದಕ’ : ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ; ನಂತರ ಸ್ಪಷ್ಟೀಕರಣ

ಚೆನ್ನೈ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಭಯೋತ್ಪಾದಕ’ ಎಂದು ಕರೆದಿದ್ದು, ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ತಮಿಳುನಾಡು ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಎಐಎಡಿಎಂಕೆಯನ್ನು (AIADMK) ಪ್ರಶ್ನಿಸುವ ಸಂದರ್ಭದಲ್ಲಿ ಖರ್ಗೆ ಈ ಹೇಳಿಕೆ ನೀಡಿದ್ದಾರೆ. “ಅಣ್ಣಾದೊರೈ ಅವರ ಫೋಟೋ ಹಾಕಿಕೊಳ್ಳುವ ಎಐಎಡಿಎಂಕೆ … Continued

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

 ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ವೇತನ ಶ್ರೇಣಿಯ ಪುನರ್ರಚನೆಗೆ ಒತ್ತಾಯ ಕೇಳಿಬರುತ್ತಿರುವ ಬೆನ್ನಲ್ಲೇ, ಕೇಂದ್ರ ಸಚಿವ ಸಂಪುಟವು ಶನಿವಾರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (DA) ಶೇಕಡಾ 2ರಷ್ಟು ಹೆಚ್ಚಿಸಲು ಒಪ್ಪಿಗೆ ನೀಡಿದೆ. ಈ ಹೆಚ್ಚಳವು ಜುಲೈ 1, 2025 ರಿಂದಲೇ ಅನ್ವಯವಾಗಲಿದ್ದು, ಬಾಕಿ ಹಣದ (Arrears) ಸಮೇತ ಪಾವತಿಸಲಾಗುತ್ತದೆ. ಇದರಿಂದ ಹಾಲಿ ನೌಕರರು ಹಾಗೂ ನಿವೃತ್ತ … Continued

ಪ್ರಧಾನಿ ಮೋದಿಗೆ ಕರೆ ಮಾಡಿದ ಅಮೆರಿಕ ಅಧ್ಯಕ್ಷ ಟ್ರಂಪ್: ಹಾರ್ಮುಜ್ ಜಲಸಂಧಿ-ದ್ವಿಪಕ್ಷೀಯ ಸಹಕಾರದ ಕುರಿತು ಚರ್ಚೆ

ನವದೆಹಲಿ: ಇರಾನ್‌ ಮತ್ತು ಅಮೆರಿಕದ ನಡುವೆ ತಾತ್ಕಾಲಿಕ ಕದನ ವಿರಾಮ ಒಪ್ಪಂದ ಏರ್ಪಟ್ಟ ನಂತರ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮೊದಲ ಬಾರಿಗೆ ದೂರವಾಣಿ ಮೂಲಕ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಸುಮಾರು 40 ನಿಮಿಷಗಳ ಕಾಲ ನಡೆದ ಈ ಸಂಭಾಷಣೆಯಲ್ಲಿ ಪಶ್ಚಿಮ ಏಷ್ಯಾದ ಪ್ರಸ್ತುತ ಸ್ಥಿತಿಗತಿ ಮತ್ತು ಭಾರತ-ಅಮೆರಿಕ … Continued

ಅಪರೂಪದ ದೃಶ್ಯ : ರಾಜಕೀಯ ವೈರಿಗಳಾದ ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಧ್ಯೆ ಸೌಹಾರ್ದಯುತ ಮಾತುಕತೆ ; ವಿಡಿಯೋ ವೈರಲ್!

ನವದೆಹಲಿ: ಸಂಸತ್ತಿನಲ್ಲಿ ಅಪರೂಪದ ವಿದ್ಯಮಾನವೊಂದರಲ್ಲಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಡುವೆ ನಡೆದ ಸೌಹಾರ್ದಯುತ ಸಂಭಾಷಣೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಇವರಿಬ್ಬರ ನಡುವಿನ ಸಂವಾದ ಕಡಿಮೆ ಅವಧಿಯದ್ದಾಗಿದ್ದರೂ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಆಗಾಗ್ಗೆ ನಡೆಯುವ ವಾಗ್ಯುದ್ಧಗಳ ಮಧ್ಯೆ ಇದು ಸಾಕಷ್ಟು … Continued