ದ್ವೇಷ ಭಾಷಣ : ಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗ ; ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

ಚೆನ್ನೈ: ಲೋಕಸಭಾ ಚುನಾವಣೆ ವೇಳೆ ದ್ವೇಷ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿವರಣೆ ಪಡೆಯುವಂತೆ ಭಾರತ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ತಮಿಳುನಾಡು ಕಾಂಗ್ರೆಸ್‌ ಸಮಿತಿ (ಟಿಎನ್‌ಸಿಸಿ) ಮದ್ರಾಸ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಧಾನಿ ಮೋದಿಯವರ ದ್ವೇಷ ಭಾಷಣಗಳ ವಿರುದ್ಧ ಚುನಾವಣಾ ಆಯೋಗಕ್ಕೆ ಹಲವು ದೂರುಗಳನ್ನು ಸಲ್ಲಿಸಿದ್ದರೂ, ನೇರವಾಗಿ ನರೇಂದ್ರ … Continued

ವೀಡಿಯೊ..| ದಕ್ಷಿಣ ಭಾರತದವರು ಆಫ್ರಿಕನ್ನರಂತೆ, ಪೂರ್ವ ಭಾರತದವರು ಚೀನಿಗಳಂತೆ ಕಾಣ್ತಾರೆ….: ಭಾರೀ ವಿವಾದ ಸೃಷ್ಟಿಸಿದ ಪಿತ್ರೋಡಾ ಹೇಳಿಕೆ ; ಕಾಂಗ್ರೆಸ್ಸಿಗೆ ಮುಜುಗರ

ನವದೆಹಲಿ : ಸಾಗರೋತ್ತರ ಕಾಂಗ್ರೆಸ್​ ಅಧ್ಯಕ್ಷ ಸ್ಯಾಮ್ ಪಿತ್ರೋಡಾ(Sam Pitroda) ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ‘‘ಪೂರ್ವ ಭಾರತದವರು, ಚೀನೀಯರಂತೆಯೂ ದಕ್ಷಿಣ ಭಾರತದವರು ಆಫ್ರಿಕನ್ನರಂತೆಯೂ ಹಾಗೂ ಪಶ್ಚಿಮ ಭಾರತದವರು ಅರಬ್ಬರಂತೆಯೂ ಕಾಣುತ್ತಾರೆ’’ ಎಂದು ಆಂಗ್ಲ ಪತ್ರಿಕೆ ದಿ ಸ್ಟೇಟ್ಸ್‌ಮನ್‌ಗೆ ನೀಡಿದ ಸಂದರ್ಶನದಲ್ಲಿ ಸ್ಯಾಮ್ ಪಿತ್ರೋಡಾ ಹೇಳಿರುವುದು ಈಗ ಲೋಕಸಭಾ ಚುನಾವಣೆ ಮಧ್ಯೆ ಭಾರೀ ವಿವಾದ ಸೃಷ್ಟಿಸಿದೆ. … Continued

ವೀಡಿಯೊ | ಜನವರಿಯಲ್ಲಿ ಉದ್ಘಾಟನೆಯಾದ ನಂತರ ಅಯೋಧ್ಯೆ ರಾಮಮಂದಿರದಲ್ಲಿ ಇದೇ ಮೊದಲ ಬಾರಿಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

ಅಯೋಧ್ಯಾ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಜನವರಿಯಲ್ಲಿ ಮಂದಿರ ಉದ್ಘಾಟನೆಯ ನಂತರ ಇದು ಅವರ ಮೊದಲ ಭೇಟಿಯಾಗಿದೆ. ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನದ ಎರಡು ದಿನಗಳ ಮೊದಲು ದೂರದರ್ಶನದಲ್ಲಿ ಪ್ರಸಾರವಾದ ಸಮಾರಂಭದಲ್ಲಿ, ಪ್ರಧಾನಿ ಮೋದಿ ಅವರು ರಾಮಲಲ್ಲಾ ವಿಗ್ರಹಕ್ಕೆ ಸಾಷ್ಟಾಂಗ ನಮಸ್ಕಾರ ಮಾಡುತ್ತಿರುವುದು ಕಂಡುಬಂದಿದೆ. … Continued

ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ರಾಜು ಕಾಗೆಗೆ ಚುನಾವಣೆ ಆಯೋಗದಿಂದ ನೋಟಿಸ್‌

ಬೆಳಗಾವಿ : ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ ಹಾಗೂ ಕಾಂಗ್ರೆಸ್‌ಗೆ ಮತ ನೀಡದಿದ್ದರೆ ವಿದ್ಯುತ್‌ ಕಡಿತ ಮಾಡುವ ಹೇಳಿಕೆ ನೀಡಿದ ಶಾಸಕ ಭರಮಗೌಡ (ರಾಜು) ಕಾಗೆ ಅವರಿಗೆ ಚಿಕ್ಕೊಡಿ ಜಿಲ್ಲಾ ಚುನಾವಣಾಧಿಕಾರಿ ‘ನೀತಿ ಸಂಹಿತೆ ಉಲ್ಲಂಘನೆ’ ಅಡಿ ಬುಧವಾರ ನೋಟಿಸ್‌ ನೀಡಿದ್ದಾರೆ. ತಮ್ಮ ಎರಡೂ ಹೇಳಿಕೆಗಳ ಕುರಿತು 24 ಗಂಟೆಯೊಳಗೆ ವಿವರಣೆ ಕೊಡಬೇಕು ಎಂದು ಕಾಗವಾಡ … Continued

ಜಗತ್ತಿಗೆ ಹೇಳುವ ಮೊದಲೇ ಪಾಕಿಸ್ತಾನಕ್ಕೆ ತಿಳಿಸಿದ್ದೆ ; ಬಾಲಾಕೋಟ್ ಸ್ಟ್ರೈಕ್ ಬಗ್ಗೆ ಬಿಚ್ಚಿಟ್ಟ ಪ್ರಧಾನಿ ಮೋದಿ

ಬಾಗಲಕೋಟೆ : ಐದು ವರ್ಷದ ಹಿಂದೆ ಪಾಕಿಸ್ತಾನದ ಬಾಲಾಕೋಟ್ ಮೇಲೆ ಭಾರತದ ವಾಯುದಾಳಿ (Balakot airstrike) ನಡೆದ ಘಟನೆಯ ಬಗ್ಗೆ ನರೇಂದ್ರ ಮೋದಿ ರಹಸ್ಯ ವಿಚಾರ ಬಹಿರಂಗ ಪಡಿಸಿದ್ದಾರೆ. 2019ರ ಬಾಲಾಕೋಟ್ ಏರ್​ಸ್ಟ್ರೈಕ್ ನಡೆದ ಬಳಿಕ ಆ ಘಟನೆ ಬಗ್ಗೆ ಪ್ರಪಂಚಕ್ಕೆ ತಿಳಿಸುವ ಮೊದಲು ಅಧಿಕೃತವಾಗಿ ಮೊದಲು ತಿಳಿಸಿದ್ದು ಪಾಕಿಸ್ತಾನಕ್ಕೆ ಎಂದು ಪ್ರಧಾನಿ ನರೇಂದ್ರ ಮೋದಿ … Continued

ಕಾಂಗ್ರೆಸ್‌ ಆಡಳಿತ ಬಂದ ನಂತರ ಅಪರಾಧಗಳು ಹೆಚ್ಚಳ, ವಿಧಾನಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ.. ಕಾಂಗ್ರೆಸ್‌ ಅನ್ನು ತಿರಸ್ಕರಿಸಬೇಡವೇ : ಶಿರಸಿಯಲ್ಲಿ ಮತದಾರರಿಗೆ ಮೋದಿ ಪ್ರಶ್ನೆ

ಶಿರಸಿ : ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ರಾಜ್ಯಾದ್ಯಂತ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಸಮಾಜಘಾತುಕ ಶಕ್ತಿಗಳು ಹಾಗೂ ದೇಶದ್ರೋಹಿ ಚಟುವಟಿಕೆಗಳ ಮನಸ್ಥಿತಿಗೆ ಕಾಂಗ್ರೆಸ್‌ ಸರ್ಕಾರದ ನೀತಿಗಳು ಪುಷ್ಟಿ ನೀಡುತ್ತಿರುವಂತೆ ಕಾಣುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು. ಶಿರಸಿ ನಗರದ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಬಿಜೆಪಿಯ ಬೃಹತ್‌ ಚುನಾವಣಾ ಸಮಾವೇಶದಲ್ಲಿ ಮಾತನಾಡಿದರ … Continued

ತಪ್ಪು ಮಾಹಿತಿ ನೀಡಲಾಗಿದೆ : ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಮೋದಿ ಭೇಟಿಗೆ ಸಮಯಾವಕಾಶ ಕೋರಿ ಬಹಿರಂಗ ಪತ್ರ ಬರೆದ ಖರ್ಗೆ

ನವದೆಹಲಿ : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನಂತರ ನಡೆದಿರುವ ಭಾರೀ ಚರ್ಚೆಯ ನಡುವೆಯೇ ಕಾಂಗ್ರೆಸ್‌ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯವರಿಗೆ ಪತ್ರ ಬರೆದಿದ್ದು, ನಮ್ಮ ನ್ಯಾಯ ಪತ್ರವನ್ನು ವಿವರಿಸಲು ನಿಮ್ಮನ್ನು ಖುದ್ದಾಗಿ ಭೇಟಿಯಾಗಲು ಸಮಯ ಕೊಡಿ ಎಂದು ಕೇಳಿದ್ದಾರೆ. ಕಾಂಗ್ರೆಸ್‌ ಮೇಲೆ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್ ಸಂಪತ್ತು … Continued

ಮೋದಿ, ರಾಹುಲ್ ಗಾಂಧಿಯಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಉತ್ತರ ನೀಡಲು ಚುನಾವಣಾ ಆಯೋಗ ಸೂಚನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಏಪ್ರಿಲ್ 29 ರೊಳಗೆ ಉತ್ತರಿಸುವಂತೆ ಕಾಂಗ್ರೆಸ್ ಮತ್ತು ಬಿಜೆಪಿಗೆ ನೋಟಿಸ್‌ ಜಾರಿ ಮಾಡಿದೆ. ಧರ್ಮ, ಜಾತಿ, ಸಮುದಾಯ ಅಥವಾ ಭಾಷೆಯ ಆಧಾರದ ಮೇಲೆ ದ್ವೇಷ ಮತ್ತು ವಿಭಜನೆಯನ್ನು … Continued

ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

1961 ರಲ್ಲಿ ಪೋರ್ಚುಗೀಸ್ ಆಳ್ವಿಕೆಯಿಂದ ವಿಮೋಚನೆಗೊಂಡ ನಂತರ ಗೋವಾ ಮೇಲೆ ಭಾರತೀಯ ಸಂವಿಧಾನವನ್ನು “ಬಲವಂತವಾಗಿ” ಹೇರಲಾಗಿದೆ ಎಂದು ಕಾಂಗ್ರೆಸ್‌ನ ದಕ್ಷಿಣ ಗೋವಾದ ಅಭ್ಯರ್ಥಿ ವಿರಿಯಾಟೊ ಫೆರ್ನಾಂಡಿಸ್ ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ. 2019 ರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜೊತೆಗಿನ ಸಂಭಾಷಣೆಯನ್ನು ಉಲ್ಲೇಖಿಸಿ ಫೆರ್ನಾಂಡಿಸ್ ಹೇಳಿಕೆಗಳನ್ನು ನೀಡಿದ್ದಾರೆ. “ನಾವು (ಗಾಂಧಿಯವರೊಂದಿಗಿನ ಸಭೆಯ … Continued

“ನನ್ನ 90 ಸೆಕೆಂಡುಗಳ ಭಾಷಣವು ಕಾಂಗ್ರೆಸ್, ಇಂಡಿಯಾ ಮೈತ್ರಿಕೂಟದಲ್ಲಿ ತಲ್ಲಣ ಮೂಡಿಸಿದೆ” : ಪ್ರಧಾನಿ ಮೋದಿ

ಟೋಂಕ್: ‘ಕಾಂಗ್ರೆಸ್ ಪಕ್ಷವು ಮಹಿಳೆಯರ ಮಂಗಳಸೂತ್ರ ಕಸಿಯಲು ಬಯಸಿದೆ’ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯ ಬಗ್ಗೆ ಚರ್ಚೆಯ ನಡುವೆಯೇ, ನಿಮ್ಮ ಆಸ್ತಿಯನ್ನು ಕಿತ್ತುಕೊಂಡು ಅದರ ವಿಶೇಷ ಜನರಿಗೆ ಹಂಚಲು ಕಾಂಗ್ರೆಸ್ ಬಲವಾದ ಸಂಚು ರೂಪಿಸುತ್ತಿದೆ ಎಂಬ ಸತ್ಯವನ್ನು ದೇಶದ ಮುಂದೆ ಇಟ್ಟಿದ್ದೇನೆ ಎಂದು ಪ್ರಧಾನಿ ಮಂಗಳವಾರ ಪುನರುಚ್ಚರಿಸಿದ್ದಾರೆ. ಮಂಗಳವಾರ ಇಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ … Continued