ಲೋಕಸಭೆ ಚುನಾವಣೆ : ಬಿಜೆಪಿಯ 195 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ, ವಾರಣಾಸಿಯಿಂದ ಮೋದಿ ಕಣಕ್ಕೆ, ಸುಷ್ಮಾ ಸ್ವರಾಜ್‌ ಪುತ್ರಿಗೆ ಟಿಕೆಟ್‌

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಭಾರೀ ತಯಾರಿ ನಡೆಸಿರುವ ಬಿಜೆಪಿ ಇಂದು, ಮಂಗಳವಾರ (ಮಾರ್ಚ್‌ 2) ಪಕ್ಷದ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣಾ ಆಯೋಗವು ಲೋಕಸಭೆಗೆ ಚುನಾವಣಾ ಘೋಷಣೆ ದಿನಾಂಕ ಘೋಷಿಸುವ ಮೊದಲೇ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಾಯಕರು ಲೋಕಸಭೆ … Continued

25 ಖಾಸಗಿ ವಲಯದ ತಜ್ಞರನ್ನು ಪ್ರಮುಖ ಹುದ್ದೆಗಳಿಗೆ ನೇಮಿಸಲು ಯೋಜಿಸಿದ ಮೋದಿ ಸರ್ಕಾರ

ನವದೆಹಲಿ : ಆಡಳಿತವನ್ನು ಇನ್ನಷ್ಟು ಸುಧಾರಿಸಲು ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ಇಪ್ಪತ್ತೈದು ಖಾಸಗಿ ವಲಯದ ತಜ್ಞರು ಶೀಘ್ರದಲ್ಲೇ ಕೇಂದ್ರದ ಪ್ರಮುಖ ಹುದ್ದೆಗಳಿಗೆ ಸೇರಿಕೊಳ್ಳಲಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್ ನೇಮಕಾತಿ ಸಮಿತಿ (ಎಸಿಸಿ)ಯು ಮೂರು ಜಂಟಿ ಕಾರ್ಯದರ್ಶಿಗಳು ಮತ್ತು 22 ನಿರ್ದೇಶಕರು/ಉಪ ಕಾರ್ಯದರ್ಶಿಗಳನ್ನು ಕೇಂದ್ರ ಸರ್ಕಾರದ … Continued

ಭಾರತದ ರಾಕೆಟ್ ಮೇಲೆ ಚೀನಿ ಧ್ವಜ ಇರುವ ಜಾಹೀರಾತು ನೀಡಿ ತಮಿಳುನಾಡು ಸಚಿವರಿಂದ ಪ್ರಮಾದ…! ಎಲ್ಲ ಮಿತಿ ದಾಟಿದ್ದಾರೆ ಎಂದು ಮೋದಿ ವಾಗ್ದಾಳಿ

ಚೆನ್ನೈ: ತಮಿಳುನಾಡಿನ ಕುಲಶೇಖರಪಟ್ಟಣಂನಲ್ಲಿ ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋಗೆ ಎರಡನೇ ಉಡಾವಣಾ ಪ್ಯಾಡ್‌ನ ನಿರ್ಮಾಣ ಮಾಡುವುದನ್ನು ಶ್ಲಾಘಿಸುವ ಪತ್ರಿಕೆಯ ಜಾಹೀರಾತು ಪೋಸ್ಟರ್‌ನಲ್ಲಿ ರಾಕೆಟ್‌ನಲ್ಲಿ ಚೀನಾದ ಧ್ವಜದ ಚಿತ್ರವು ಪ್ರಮುಖವಾಗಿ ಕಾಣಿಸಿಕೊಂಡ ನಂತರ ಇದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಜಾಹೀರಾತನ್ನು ತಮಿಳುನಾಡಿನ ಪಶುಸಂಗೋಪನಾ ಸಚಿವೆ ಅನಿತಾ ರಾಧಾಕೃಷ್ಣನ್ ಅವರು ಹಾಕಿಸಿದ್ದಾರೆ, ಅವರು ತಮ್ಮ ವೈಯಕ್ತಿಕ ಸಾಮರ್ಥ್ಯದಲ್ಲಿ … Continued

ಇದು 22 ವರ್ಷಗಳ ಹಿಂದೆ ನರೇಂದ್ರ ಮೋದಿಯ ರಾಜಕೀಯ ಜೀವನದ ದಿಕ್ಕನ್ನೇ ಬದಲಾಯಿಸಿದ ದಿನದ ವೀಡಿಯೊ | ವೀಕ್ಷಿಸಿ

ನವದೆಹಲಿ: ರಾಜ್‌ಕೋಟಕ್ಕೆ ನನ್ನ ಹೃದಯದಲ್ಲಿ ಯಾವಾಗಲೂ ವಿಶೇಷ ಸ್ಥಾನವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೋಟ್‌ ನಗರದಲ್ಲಿ ತಮ್ಮ ಮೊದಲ ಚುನಾವಣಾ ಕದನದ ಪ್ರಚಾರದ ಥ್ರೋಬ್ಯಾಕ್ ವೀಡಿಯೊವನ್ನು ಇಂದು, ಶನಿವಾರ ಹಂಚಿಕೊಂಡಿದ್ದಾರೆ. ಇದು ನರೇಂದ್ರ ಮೋದಿಯವರ ರಾಜಕೀಯ ಜೀವನವನ್ನೇ ಬದಲಿಸಿದ ದಿನವಾಗಿದೆ. ಹೀಗಾಗಿಯೇ ಅವರು ಈ ವೀಡಿಯೊ ಹಂಚಿಕೊಂಡಿದ್ದಾರೆ. 2002ರ ಇದೇ ಫೆ.24ರ ದಿನ, … Continued

12 ಭಾರತೀಯ ಯುವಕರನ್ನು ವಂಚಿಸಿ ರಷ್ಯಾದ ಪರ ಯುದ್ಧದಲ್ಲಿ ಹೋರಾಡಲು ಕಳುಹಿಸಿದ ಏಜೆಂಟರು : ಸರ್ಕಾರದ ಸಹಾಯ ಕೋರಿದ ಓವೈಸಿ

ನವದೆಹಲಿ: ರಷ್ಯಾದಲ್ಲಿ ಸಿಕ್ಕಿಬಿದ್ದಿರುವ ಯುವಕರನ್ನು ಸುರಕ್ಷಿತವಾಗಿ ಭಾರತಕ್ಕೆ ಸುರಕ್ಷಿತವಾಗಿ ಕರೆತರಲು ರಷ್ಯಾ ಸರ್ಕಾರದೊಂದಿಗೆ ಮಾತುಕತೆ ನಡೆಸುವಂತೆ ಹೈದರಾಬಾದ್ ಸಂಸದ ಅಸಾದುದ್ದೀನ್‌ ಓವೈಸಿ ಅವರು, ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ ಅವರನ್ನು ವಿನಂತಿಸಿದ್ದಾರೆ. ಹೈದರಾಬಾದ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಒವೈಸಿ, ಕರ್ನಾಟಕ, ತೆಲಂಗಾಣ, ಗುಜರಾತ್, ಜಮ್ಮು ಮತ್ತು ಕಾಶ್ಮೀರ ಮತ್ತು ಉತ್ತರ ಪ್ರದೇಶಕ್ಕೆ ಸೇರಿದ … Continued

ವೀಡಿಯೊಗಳು…| ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯ ಉದ್ಘಾಟಿಸಿದ ಮೋದಿ : ‘ಯುಎಇ 140 ಕೋಟಿ ಭಾರತೀಯರ ಹೃದಯ ಗೆದ್ದಿದೆ’ ಎಂದ ಭಾರತದ ಪ್ರಧಾನಿ

ಅಬುಧಾಬಿ : ಯುನೈಟೆಡ್‌ ಅರಬ್‌ ಎಮಿರೇಟ್ಸ್‌(ಯುಎಇ) ಅಬುಧಾಬಿಯಲ್ಲಿ ಬೋಚಸನ್‌ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ (ಬಿಎಪಿಎಸ್) ಸೊಸೈಟಿ ನಿರ್ಮಿಸಿರುವ ವಿಸ್ತಾರವಾದ ಹಿಂದೂ ದೇವಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು. ಪ್ರಧಾನಿ ಮೋದಿ ಕೂಡ ಅರ್ಚಕರೊಂದಿಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಉದ್ಘಾಟನೆಯ ನಂತರ, ಪ್ರಧಾನಿ ಮೋದಿ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅವರಿಗೆ … Continued

ಪ್ರಧಾನಿ ಭೇಟಿಯಾದ ಕೆಲವೇ ದಿನಗಳಲ್ಲಿ ಹಿರಿಯ ನಾಯಕ ಪ್ರಮೋದ ಕೃಷ್ಣಂ ಅವರನ್ನು ಪಕ್ಷದಿಂದ ಉಚ್ಚಾಟಿಸಿದ ಕಾಂಗ್ರೆಸ್‌…!

ನವದೆಹಲಿ : ಪಕ್ಷದ ವಿರುದ್ಧ ಅಶಿಸ್ತು ಮತ್ತು ಪಕ್ಷಕ್ಕೆ ಮುಜುಗರ ತರುವ ಪುನರಾವರ್ತಿತ ಹೇಳಿಕೆಗಳ ಬಗ್ಗೆ ಬಂದ ಆಕ್ಷೇಪಗಳನ್ನು ಗಮನದಲ್ಲಿಟ್ಟುಕೊಂಡು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ (ಫೆಬ್ರವರಿ 10) ಪಕ್ಷದ ಹಿರಿಯ ನಾಯಕ ಪ್ರಮೋದ ಕೃಷ್ಣಂ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಿದ್ದಾರೆ. ಪ್ರಮೋದ ಕೃಷ್ಣಂ ಅವರನ್ನು ಪಕ್ಷದಿಂದ ಹೊರಹಾಕಬೇಕೆಂಬ ಉತ್ತರ ಪ್ರದೇಶ … Continued

ಲೋಕಸಭೆ ಚುನಾವಣೆಗೂ ಮುನ್ನವೇ ಸಿಎಎ ಜಾರಿ : ಅಮಿತ್ ಶಾ

ನವದೆಹಲಿ : 2019 ರಲ್ಲಿ ಜಾರಿಗೊಳಿಸಲಾದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಈ ಸಂಬಂಧ ನಿಯಮಗಳನ್ನು ಹೊರಡಿಸಿದ ನಂತರ ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ. ET NOW ಜಾಗತಿಕ ವ್ಯಾಪಾರ ಶೃಂಗಸಭೆ 2024ರಲ್ಲಿ ಮಾತನಾಡಿದ ಅವರು, “ನಮ್ಮ ಮುಸ್ಲಿಂ ಸಹೋದರರನ್ನು ದಾರಿತಪ್ಪಿಸಲಾಗುತ್ತಿದೆ … Continued

“ನಾನು ನಿಮ್ಮನ್ನು ಶಿಕ್ಷಿಸಲಿದ್ದೇನೆ….”: ಸಂಸತ್ತಿನ ಕ್ಯಾಂಟೀನ್‌ನಲ್ಲಿ ಸಂಸದರೊಂದಿಗೆ ಪ್ರಧಾನಿ ಮೋದಿ ಊಟ-ತಮಾಷೆ-ಮಾತುಕತೆ

ನವದೆಹಲಿ: ಕನಿಷ್ಠ ಎಂಟು ಸಂಸದರಿಗೆ ಶುಕ್ರವಾರ ಮಧ್ಯಾಹ್ನ ಪ್ರಧಾನಿ ಕಾರ್ಯಾಲಯದಿಂದ ಕರೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿಯವರು ತಮ್ಮನ್ನು ಸಂಸತ್ತಿನಲ್ಲಿ ಭೇಟಿಯಾಗಲು ಬಯಸಿದ್ದಾರೆ ಎಂದು ಹೇಳಿದ್ದು ಅವರಿಗೆ ಅಚ್ಚರಿ ಮೂಡಿಸಿದೆ. ಸಂಸದರಲ್ಲಿ ಕೇಂದ್ರ ಸಚಿವ ಎಲ್ ಮುರುಗನ್, ಬಿಜೆಡಿ ರಾಜ್ಯಸಭಾ ಸಂಸದ ಸಸ್ಮಿತ್ ಬಾತ್ರಾ, ಲೋಕಸಭೆಯ ಹಿರಿಯ ಸಂಸದ ಎನ್‌.ಕೆ. ಪ್ರೇಮ ಚಂದ್ರನ್, ಟಿಡಿಪಿ ಸಂಸದ … Continued

ವೀಡಿಯೊ…| ನಾವು ಅಯೋಧ್ಯೆಯಲ್ಲಿ ಏನು ನೋಡಿದ್ದೇವೆ…”: ರಾಮ ಮಂದಿರ ಕಾರ್ಯಕ್ರಮದ ಮಿಂಚು ನೋಟ ಹಂಚಿಕೊಂಡ ಪ್ರಧಾನಿ ಮೋದಿ

ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಸೋಮವಾರ ಉದ್ಘಾಟನೆ ಮಾಡಿದ ಕುರಿತಾದ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ ಮತ್ತು “ಮುಂದಿನ ವರ್ಷಗಳಲ್ಲಿ ಇದು ನಮ್ಮ ನೆನಪಿನಲ್ಲಿ ಉಳಿಯುತ್ತದೆ” ಎಂದು ಹೇಳಿದ್ದಾರೆ. ಮೂರು ನಿಮಿಷಗಳ ವೀಡಿಯೊದಲ್ಲಿ, ಮಡಚಿದ ಕೆಂಪು ದುಪಟ್ಟಾದಲ್ಲಿ ಬೆಳ್ಳಿಯ ಛತ್ರಿಯನ್ನು ಹಿಡಿದುಕೊಂಡು ಪ್ರಧಾನಿ ದೇವಾಲಯದ ಗರ್ಭಗುಡಿಗೆ ಕಾಲಿಡುತ್ತಿರುವುದನ್ನು ಕಾಣಬಹುದು. ನೂತನವಾಗಿ ನಿರ್ಮಿಸಲಾದ … Continued