ವೀಡಿಯೊ…| ‘ಪ್ರಾಣ ಪ್ರತಿಷ್ಠೆ’ಯ ನಂತರ ಅಯೋಧ್ಯೆಯ ರಾಮ ಮಂದಿರದಲ್ಲಿ ಭಾರೀ ಸಂಖ್ಯೆಯ ಭಕ್ತರ ನೂಕುನುಗ್ಗಲು

ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿಯವರ ಯಜಮಾನತ್ವದಲ್ಲಿ ಮತ್ತು ಸಾಧು-ಸಂತರು, ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳ ಸಮ್ಮುಖದಲ್ಲಿ ವಿಧಿವತ್ತಾಗಿ ನಡೆದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಒಂದು ದಿನದ ನಂತರ ಅಯೋಧ್ಯೆಯ ರಾಮಮಂದಿರವನ್ನು ಇಂದು, ಮಂಗಳವಾರ ಬೆಳಿಗ್ಗೆ ಸಾರ್ವಜನಿಕರಿಗೆ ತೆರೆಯಲಾಗುತ್ತಿದೆ. ತೆರೆಯುವ ಮುನ್ನವೇ ದೇವಸ್ಥಾನದ ಮುಂಭಾಗದಲ್ಲಿ ಜನಸಾಗರವೇ ಕಂಡುಬಂತು. ಬೆಳಗಿನ ಜಾವ 3 ಗಂಟೆಯಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನದ … Continued

ಅಯೋಧ್ಯೆ ರಾಮಮಂದಿರದ ರಾಮಲಲ್ಲಾ ವಿಗ್ರಹದ ಮೇಲೆ ಯಾವೆಲ್ಲ ಆಭರಣಗಳಿವೆ…?

ಅಯೋಧ್ಯೆ: ರಾಮ ಮಂದಿರದಲ್ಲಿ ಭಗವಾನ್‌ ರಾಮ ಲಲ್ಲಾ ವಿಗ್ರಹ ‘ಪ್ರಾಣ ಪ್ರತಿಷ್ಠೆ’ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅದ್ಧೂರಿ ಸಮಾರಂಭದಲ್ಲಿ ನೆರವೇರಿಸಿದರು. ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ನಡೆದ ಐತಿಹಾಸಿಕ ಕಾರ್ಯಕ್ರಮದಲ್ಲಿ ಸಾವಿರಾರು ಸಂತರು, ಕಲಾವಿದರು, ಸೆಲೆಬ್ರಿಟಿಗಳು, ಉದ್ಯಮಿಗಳು, ರಾಜಕಾರಣಿಗಳು ಸೇರಿದಂತೆ ಏಳು ಸಾವಿರಕ್ಕೂ ಹೆಚ್ಚು ವಿಶೇಷ ಆಹ್ವಾನಿತರು ಭಾಗವಹಿಸಿದ್ದರು. ಜನವರಿ 23 ರಿಂದ ಭಕ್ತರಿಗಾಗಿ ದೇವಾಲಯವನ್ನು … Continued

ವೀಡಿಯೊ..| ವೇದಘೋಷ-ಮಂಗಳವಾದ್ಯಗಳ ನಡುವೆ ರಾಮಲಲ್ಲಾ ವಿಗ್ರಹಕ್ಕೆ ಪ್ರಾಣಪ್ರತಿಷ್ಠಾಪನೆ, ಅಯೋಧ್ಯೆ ರಾಮಮಂದಿರ ಉದ್ಘಾಟನೆ

ಅಯೋಧ್ಯೆ: 5 ಶತಮಾನಗಳ ಹೋರಾಟ ಮತ್ತು ದಶಕಗಳ ಕಾಯುವಿಕೆ ಮುಕ್ತಾಯವಾಗಿದ್ದು, ಅಯೋಧ್ಯೆ ರಾಮಮಂದಿರ ಉದ್ಘಾಟನೆಯಾಗಿ, ರಾಮಲಲ್ಲಾ ವಿಗ್ರಹಕ್ಕೆ ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಸುಮಾರು ಐದುನೂರು ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ ಕನಸು ನನಸಾಗಿದೆ. ಪ್ರಧಾನಿ ಮೋದಿ ಅವರು ಅಭಿಜಿತ್ ಲಗ್ನದಲ್ಲಿ ಪೂಜಾ ವಿಧಿ ವಿಧಾನ ನಡೆಸಿದರು. ದೇಶ, ವಿದೇಶಗಳಲ್ಲಿ ಈ ಸುಂದರ ಕ್ಷಣಗಳನ್ನು ಭಕ್ತರು … Continued

ಪ್ರಧಾನಿ ಮೋದಿ ಅಯೋಧ್ಯೆ ಕಾರ್ಯಕ್ರಮದ ವೇಳಾಪಟ್ಟಿ ಹೀಗಿದೆ….ರಾಮ ಮಂದಿರ ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರ ಇಲ್ಲಿ ನೋಡಿ

ಅಯೋಧ್ಯೆ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಲೈವ್‌  [  ಅಯೋಧ್ಯಾ : ಅಯೋಧ್ಯೆಯಲ್ಲಿ ಪೂಜಾ ಕೈಂಕರ್ಯಗಳು ಪ್ರಾರಂಭವಾಗಿದ್ದು ಪೂಜಾರಿಗಳು ವಿವಿಧ ಪೂಜಾ ವಿಧಿ ವಿಧಾನಗಳನ್ನು ಶಾಸ್ತ್ರೊಕ್ತವಾಗಿ ನೆರವೇರಿಸುತ್ತಿದ್ದಾರೆ. ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಾಧು ಸಂತರು, ಪ್ರಮುಖ ಕೈಗಾರಿಕೋದ್ಯಮಿಗಳು, ಬಾಲಿವುಡ್‌ ತಾರೆಯರು ಸೇರಿದಂತೆ ಸುಮಾರು ಎಂಟು ಸಾವಿರ ಗಣ್ಯರು ಭಾಗಿಯಾಗುತ್ತಿದ್ದಾರೆ. ಬಾಲರಾಮನ … Continued

ರಾಮ ಮಂದಿರ ಉದ್ಘಾಟನೆಗೂ ಮುನ್ನ ರಾಮೇಶ್ವರಂನ ಪವಿತ್ರ ಅಗ್ನಿ ತೀರ್ಥ’ ಸಮುದ್ರದಲ್ಲಿ ಮುಳುಗೆದ್ದ ಪ್ರಧಾನಿ ಮೋದಿ | ವೀಕ್ಷಿಸಿ

ರಾಮೇಶ್ವರಂ: ‘ಅಗ್ನಿತೀರ್ಥ’ ಕಡಲತೀರದಲ್ಲಿ ಪುಣ್ಯಸ್ನಾನ ಮಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಇಲ್ಲಿನ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ರುದ್ರಾಕ್ಷಿ ಮಾಲೆ ಧರಿಸಿದ ಪ್ರಧಾನಿ ಮೋದಿ ತಮಿಳುನಾಡಿನ ಪುರಾತನ ಶಿವ ದೇವಾಲಯವಾದ ರಾಮನಾಥಸ್ವಾಮಿ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅವರಿಗೆ ಪುರೋಹಿತರಿಂದ ಸಾಂಪ್ರದಾಯಿಕ ಗೌರವಗಳನ್ನು ನೀಡಲಾಯಿತು. ದೇಗುಲದಲ್ಲಿ ನಡೆಯುತ್ತಿದ್ದ ‘ಭಜನೆ’ಯಲ್ಲೂ ಪಾಲ್ಗೊಂಡರು. ತಮಿಳುನಾಡಿನ ರಾಮನಾಥಪುರಂ … Continued

ಬೆಂಗಳೂರಲ್ಲಿ ಬೋಯಿಂಗ್ ತಂತ್ರಜ್ಞಾನ ಕ್ಯಾಂಪಸ್‌ ಉದ್ಘಾಟಸಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ದೇವನಹಳ್ಳಿ ಸಮೀಪ ಬೋಯಿಂಗ್‌ ಇಂಡಿಯಾ ಎಂಜಿನಿಯರಿಂಗ್‌ ಮತ್ತು ಟೆಕ್ನಾಲಜಿ ಸೆಂಟರ್‌ (BIETC) ಕ್ಯಾಂಪಸ್‌ (BIETC Campus) ಶುಕ್ರವಾರ ಲೋಕಾರ್ಪಣೆ ಮಾಡಿದರು. ಪ್ರಧಾನಿ ಮೋದಿ ಅವರು ಇದೇ ಕಾರ್ಯಕ್ರಮದಲ್ಲಿ ಬೋಯಿಂಗ್‌ ಸುಕನ್ಯಾ (Boeing sukanya programme) ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುಮಾರು 1600 ಕೋಟಿ ರೂಪಾಯಿ ವೆಚ್ಚದಲ್ಲಿ 43 … Continued

ರಾಮ ಮಂದಿರ ಪ್ರಾಣ ಪ್ರತಿಷ್ಠೆ : 11 ದಿನಗಳ ಕಠಿಣ ನಿಯಮ ಪಾಲಿಸುತ್ತಿರುವ ಪ್ರಧಾನಿ ಮೋದಿ, ಬರೀ ನೆಲದ ಮೇಲೆ ಮಲಗುತ್ತಾರೆ, ಎಳೆ ನೀರು ಮಾತ್ರ ಸೇವಿಸ್ತಾರೆ….

ನವದೆಹಲಿ: ಜನವರಿ 22 ರಂದು ನಡೆಯಲಿರುವ ಅಯೋಧ್ಯೆ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ನಿಯಮಗಳು ಮತ್ತು ಆಚರಣೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದಾರೆ. ಪ್ರಧಾನಿ ಮೋದಿ ವ್ರತಾಚರಣೆಗಳಿಗಾಗಿ “ಯಮ-ನಿಯಮಗಳನ್ನು” ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ. ಜನವರಿ 12 ರಂದು ಮೋದಿ ವ್ರತಾಚರಣೆ ಆರಂಭಿಸಿದ್ದು, ಪ್ರಾಣ ಪ್ರತಿಷ್ಠೆಯ “ಐತಿಹಾಸಿಕ” … Continued

ಪ್ರಧಾನಿ ಮೋದಿ ಪದವಿ ವಿವಾದ: ಅರವಿಂದ ಕೇಜ್ರಿವಾಲ್, ಸಂಜಯ ಸಿಂಗ್ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗೆ ಸಂಬಂಧಿಸಿದ ಹೇಳಿಕೆಗಳಿಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಸಂಸದ ಸಂಜಯ್ ಸಿಂಗ್ ವಿರುದ್ಧ ಹೂಡಲಾಗಿದ್ದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ. ಈ ವೇಳೆ ಮಧ್ಯಂತರ ಪರಿಹಾರ ಕೋರಿ ಈ ಇಬ್ಬರೂ ಸಲ್ಲಿಸಿರುವ ಮನವಿಯನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ನ್ಯಾಯಮೂರ್ತಿಗಳಾದ ಬಿ.ಆರ್‌. … Continued

‘ಪೂಜಿಸಲೆಂದೇ ಹೂಗಳ ತಂದೆ….’ ಕನ್ನಡದ ಹಾಡಿಗೆ ಮೆಚ್ಚಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ‘ಪೂಜಿಸಲೆಂದೇ ಹೂಗಳ ತಂದೆ’ ಎಂಬ ಕನ್ನಡದ ಜನಪ್ರಿಯ ಹಾಡಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರು ಶಿವಶ್ರೀ ಸ್ಕಂದ ಪ್ರಸಾದ ಎಂಬ ಯುವ ಗಾಯಕಿ ಹಾಡಿರುವ ಹಾಡಿನ ಯೂಟ್ಯೂಬ್ ಲಿಂಕ್ ಪೋಸ್ಟ್ ಅನ್ನು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಕನ್ನಡದಲ್ಲಿ ಶಿವಶ್ರೀ ಸ್ಕಂದಪ್ರಸಾದ ಅವರ ಈ ಗಾಯನವು ಪ್ರಭು ಶ್ರೀ ರಾಮನ … Continued

ಭಾರತ-ಪ್ರಧಾನಿ ಮೋದಿಗೆ ಅವಹೇಳನ : ಮಾಲ್ಡೀವ್ಸ್ ಪ್ರವಾಸ ರದ್ದುಗೊಳಿಸಿದ ನಟ ನಾಗಾರ್ಜುನ, ಲಕ್ಷದ್ವೀಪಕ್ಕೆ ಹೋಗ್ತೇನೆ ಎಂದ ತೆಲುಗು ಸೂಪರ್‌ ಸ್ಟಾರ್‌

ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಲ್ಡೀವ್ಸ್‌ನ ಮೂವರು ಮಂತ್ರಿಗಳು ಅವಹೇಳನಕಾರಿ ಹೇಳಿಕೆ ನೀಡಿದ ನಂತರ ಮಾಲ್ಡೀವ್ಸ್ ಪ್ರವಾಸ ರದ್ದುಗೊಳಿಸಿದವರ ಸಂಖ್ಯೆ ಏರುತ್ತಿದ್ದು, ಆ ಪಟ್ಟಿಗೆ ಈಗ ತೆಲುಗು ಮೆಗಾಸ್ಟಾರ್ ಅಕ್ಕಿನೇನಿ ನಾಗಾರ್ಜುನ ಸೇರ್ಪಡೆಯಾಗಿದ್ದಾರೆ. ಮಾಲ್ಡೀವ್ಸ್‌ಗೆ ತನ್ನ ಯೋಜಿತ ಪ್ರವಾಸವನ್ನು ರದ್ದುಗೊಳಿಸಿರುವುದಾಗಿ ನಾಗಾರ್ಜುನ ಬಹಿರಂಗಪಡಿಸಿದ್ದಾರೆ ಮತ್ತು ಈಗ ಲಕ್ಷದ್ವೀಪಕ್ಕೆ ಭೇಟಿ ನೀಡಲು ಬಯಸುತ್ತಿದ್ದಾರೆ. 2019 … Continued