ರಾಜತಾಂತ್ರಿಕ ಗದ್ದಲದ ನಡುವೆ ಮಾರ್ಚ್ 15ರೊಳಗೆ ತನ್ನ ಸೈನ್ಯ ಹಿಂತೆಗೆದುಕೊಳ್ಳುವಂತೆ ಭಾರತಕ್ಕೆ ಹೇಳಿದ ಮಾಲ್ಡೀವ್ಸ್

ನವದೆಹಲಿ: ಭಾರತ ಸರ್ಕಾರವು ಮಾರ್ಚ್ 15ಕ್ಕಿಂತ ಮೊದಲು ದ್ವೀಪಸಮೂಹ ರಾಷ್ಟ್ರವಾದ ಮಾಲ್ಡೀವ್ಸ್‌ನಿಂದ ತನ್ನ ಮಿಲಿಟರಿ ಉಪಸ್ಥಿತಿಯನ್ನು ಹಿಂತೆಗೆದುಕೊಳ್ಳುವಂತೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಪ್ರಸ್ತಾಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಮಾಲ್ಡೀವ್ಸ್‌ನ ಮೂವರು ಸಚಿವರು ಇತ್ತೀಚಿನ ಅವಹೇಳನಕಾರಿ ಹೇಳಿಕೆಗಳಿಂದ ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಸಂಬಂಧಗಳು ಹದಗೆಟ್ಟಿರುವ ಮಧ್ಯೆ ಭಾರತವು ತನ್ನ ದೇಶದಲ್ಲಿರುವ ಮಿಲಿಟರಿಯನ್ನು … Continued

‘ನಮ್ಮನ್ನು ಬೆದರಿಸಲು ನಿಮಗೆ ಪರವಾನಗಿ ನೀಡಿಲ್ಲ’: ಭಾರತದೊಂದಿಗೆ ಗದ್ದಲದ ನಡುವೆ ಮಾಲ್ಡೀವ್ಸ್ ಅಧ್ಯಕ್ಷ

ಮಾಲೆ: ತನ್ನ ಐದು ದಿನಗಳ ಚೀನಾ ಭೇಟಿಯನ್ನು ಮುಕ್ತಾಯಗೊಳಿಸಿದ ನಂತರ, ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು ಶನಿವಾರ, ಮಾಲ್ಡೀವ್ಸ್‌ ಗೆ “ಬೆದರಿಸುವ” ಹಕ್ಕು ಯಾವ ದೇಶಕ್ಕೂ ಇಲ್ಲ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ಲಕ್ಷದ್ವೀಪ ಭೇಟಿಯ ವಿರುದ್ಧ ಮಾಲ್ಡೀವ್ಸ್ ರಾಜಕಾರಣಿಗಳು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ನಂತರ ಭಾರತ ಮತ್ತು ಮಾಲ್ಡೀವ್ಸ್ ನಡುವಿನ ರಾಜತಾಂತ್ರಿಕ ಗದ್ದಲದ … Continued

ವೀಡಿಯೊ…| ನಾಸಿಕದ ಕಲಾರಾಮ ಮಂದಿರದಲ್ಲಿ ನೆಲ ಒರೆಸಿ, ರಾಮ ಭಜನೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

ನಾಸಿಕ್: ಸ್ವಚ್ಛತಾ ಅಭಿಯಾನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮಹಾರಾಷ್ಟ್ರದ ನಾಸಿಕದಲ್ಲಿರುವ ಕಲಾರಾಮ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಿದರು. ಮೋದಿ ಅವರು ಬಕೆಟ್‌ನೊಂದಿಗೆ ಮಾಪ್ ಸ್ಟಿಕ್ ಹಿಡಿದು ದೇವಾಲಯದ ನೆಲವನ್ನು ಒರೆಸುವ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೂ ಮುನ್ನ ದೇಶಾದ್ಯಂತ ದೇವಾಲಯಗಳಲ್ಲಿ ಸ್ವಚ್ಛತಾ ಚಟುವಟಿಕೆಗಳನ್ನು (ಸ್ವಚ್ಛತಾ ಅಭಿಯಾನ) ಕೈಗೊಳ್ಳುವಂತೆ ಪ್ರಧಾನಿ ಜನರಿಗೆ ಕರೆ … Continued

ಅಯೋಧ್ಯೆಯಲ್ಲಿ ಭಗವಾನ್‌ ರಾಮನ ಪ್ರಾಣ ಪ್ರತಿಷ್ಠಾಪನೆ : 11 ದಿನಗಳ ವ್ರತ ಆರಂಭಿಸಿದ ಪ್ರಧಾನಿ ಮೋದಿ

ನವದೆಹಲಿ : ಜನವರಿ 22 ರಂದು ನಡೆಯಲಿರುವ ಅಯೋಧ್ಯೆ ರಾಮ ಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಇಂದಿನಿಂದ (ಜನವರಿ 12) 11 ದಿನಗಳ ವ್ರತ ಕೈಗೊಳ್ಳುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶುಕ್ರವಾರ ಪ್ರಕಟಿಸಿದ ಆಡಿಯೋ ಸಂದೇಶದಲ್ಲಿ ಮೋದಿ, ಅವರು ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ಉಪಸ್ಥಿತರಿರುವ ಸೌಭಾಗ್ಯ ನನಗೆ ಸಿಕ್ಕಿದೆ. ಇದರಿಂದ ನಾನು … Continued

ಭಾರತದ ಜೊತೆ ವಿವಾದದಿಂದ ಹಿನ್ನಡೆ: ಹೆಚ್ಚಿನ ಪ್ರವಾಸಿಗರನ್ನು ಕಳುಹಿಸುವಂತೆ ಚೀನಾಕ್ಕೆ ಮನವಿ ಮಾಡಿದ ಮಾಲ್ಡೀವ್ಸ್ ಅಧ್ಯಕ್ಷ

ಬೀಜಿಂಗ್: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮಾಲ್ಡೀವ್ಸ್ ಸಚಿವರ ಅವಹೇಳನಕಾರಿ ಹೇಳಿಕೆಯ ನಂತರ ಎರಡು ದೇಶಗಳ ನಡುವೆ ರಾಜತಾಂತ್ರಿಕ ಕಲಹ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಭಾರತೀಯ ಪ್ರವಾಸಿಗರು ಮಾಲ್ಡೀವ್ಸ್ ಬುಕ್ಕಿಂಗ್ ರದ್ದುಗೊಳಿಸಿದ್ದರಿಂದ ವಿಚಲಿತರಾಗಿರುವ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ತಮ್ಮ ದೇಶಕ್ಕೆ ಹೆಚ್ಚಿನ ಪ್ರವಾಸಿಗರನ್ನು ಕಳುಹಿಸುವ ಪ್ರಯತ್ನಗಳನ್ನು ‘ಚುರುಕುಗೊಳಿಸಬೇಕು’ ಎಂದು ಚೀನಾಕ್ಕೆ ಮನವಿ ಮಾಡಿದ್ದಾರೆ. ಭಾರತ-ಮಾಲ್ಡೀವ್ಸ್ … Continued

ಭಾರತ-ಮಾಲ್ಡೀವ್ಸ್ ವಿವಾದ : ಟಾಟಾ ಸಮೂಹದಿಂದ ಲಕ್ಷದ್ವೀಪದಲ್ಲಿ 2 ತಾಜ್ ಬ್ರಾಂಡ್ ರೆಸಾರ್ಟ್‌ ನಿರ್ಮಾಣ…!

ಟಾಟಾ ಗ್ರೂಪ್‌ನ ಎರಡು ರೆಸಾರ್ಟ್‌ಗಳನ್ನು 2026 ರಲ್ಲಿ ಭಾರತದ ದ್ವೀಪಸಮೂಹವಾದ ಲಕ್ಷದ್ವೀಪದ ಸುಹೇಲಿ ಮತ್ತು ಕದ್ಮತ್ ದ್ವೀಪಗಳಲ್ಲಿ ತೆರೆಯಲು ನಿರ್ಧರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಮತ್ತು ನಂತರದ ಮಾಲ್ಡೀವ್ಸ್‌ನೊಂದಿಗಿನ ಉದ್ವಿಗ್ನತೆಯ ನಂತರ ಇದು ಗಮನ ಸೆಳೆದಿದೆ. ಕಳೆದ ವರ್ಷ ಜನವರಿಯಲ್ಲಿ, ಟಾಟಾ ಗ್ರೂಪ್‌ನ ಅಂಗ ಸಂಸ್ಥೆಯಾದ ಇಂಡಿಯನ್ ಹೋಟೆಲ್ಸ್ ಕಂಪನಿಯು ಲಕ್ಷದ್ವೀಪದಲ್ಲಿ ಎರಡು … Continued

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ : ತನ್ನ ಮೂವರು ಸಚಿವರನ್ನು ಅಮಾನತು ಮಾಡಿದ ಮಾಲ್ಡೀವ್ಸ್‌ ಸರ್ಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಲಕ್ಷದ್ವೀಪ ಭೇಟಿಯನ್ನು ಅಪಹಾಸ್ಯ ಮಾಡಿದ ವಿವಾದಕ್ಕೆ ಸಂಬಂಧಿಸಿದಂತೆ ಮಾಲ್ಡೀವ್ಸ್‌ನಲ್ಲಿ ಮೂವರು ಸಚಿವರ ತಲೆದಂಡವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಲಕ್ಷದ್ವೀಪ ಪ್ರವಾಸದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ಹಂಚಿಕೊಂಡ ಮಾಲ್ಡೀವ್ಸ್‌ನ ಮೂವರು ಸಚಿವರನ್ನು ಅಲ್ಲಿನ ಸರ್ಕಾರವು ಭಾನುವಾರ ಅಮಾನತುಗೊಳಿಸಿದೆ ಎಂದು ಮಾಲ್ಡೀವ್ಸ್ ವಕ್ತಾರರು ತಿಳಿಸಿದ್ದಾರೆ. ಭಾನುವಾರ ಭಾರತವು ಮಾಲ್ಡೀವ್ಸ್‌ … Continued

ಅಯೋಧ್ಯೆಯಿಂದ ಕಾಶಿಗೆ ʼರಾಮಜ್ಯೋತಿʼ ತಂದು ಮೆರವಣಿಗೆ ಮಾಡಲಿರುವ ಮುಸ್ಲಿಂ ಮಹಿಳೆಯರು…!

ಲಕ್ನೋ:  ಕಾಶಿ (ವಾರಾಣಸಿ)ಯ  ಇಬ್ಬರು ಮುಸ್ಲಿಂ ಮಹಿಳೆಯರಾದ ನಜ್ನೀನ್ ಅನ್ಸಾರಿ ಮತ್ತು ನಜ್ಮಾ ಪರ್ವಿನ್ ಅವರು ಅಯೋಧ್ಯೆ ರಾಂಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಮುಂಚಿತವಾಗಿ ಮಹತ್ವದ ಪ್ರಯಾಣ ಪ್ರಾರಂಭಿಸಲಿದ್ದಾರೆ. ರಾಮ ಜ್ಯೋತಿ ತಂದು ಅದನ್ನು ಕಾಶಿಯ  ಮುಸ್ಲಿಂ ಪ್ರದೇಶಗಳಲ್ಲಿ ಮೆರವಣಿಗೆ ಮಾಡಿ ರಾಮ ಜ್ಯೋತಿ ಎಲ್ಲೆಡೆ ದರ್ಶನ ಮಾಡಿಸಲು ಮುಂದಾಗಿದ್ದಾರೆ. ಭಗವಾನ್ ರಾಮನು ತಮ್ಮ ಪೂರ್ವಜ … Continued

ಇಸ್ರೋದಿಂದ ಮತ್ತೊಂದು ಮಹತ್ವದ ಸಾಧನೆ : ಆದಿತ್ಯ L1 ಯಶಸ್ವಿ, ಲ್ಯಾಂಗ್ರೇಜಿಯನ್‌ ಪಾಯಿಂಟ್ 1ರಲ್ಲಿ ಆದಿತ್ಯ-ಎಲ್1 ಇರಿಸಿದ ಇಸ್ರೋ…!

ನವದೆಹಲಿ: ಭಾರತ ತನ್ನ ಬಾಹ್ಯಾಕಾಶ ಸಾಧನೆಗಳಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತಕ್ಕೆ ಮತ್ತೊಂದು ಐತಿಹಾಸಿಕ ಕ್ಷಣ.., ಸೂರ್ಯನನ್ನು ಅಧ್ಯಯನ ಮಾಡುವ ದೇಶದ ಮೊದಲ ಮಿಷನ್ ಆದಿತ್ಯ-ಎಲ್1 ತನ್ನ ಅಂತಿಮ ಗಮ್ಯಸ್ಥಾನವನ್ನು ತಲುಪಿದೆ. ಈ ಬಗ್ಗೆ ಇಸ್ರೋ ಎಕ್ಸ್‌ನಲ್ಲಿ ಹಂಚಿಕೊಂಡಿದೆ. ಇಸ್ರೋ ಆದಿತ್ಯ L1 ಮಿಷನ್ 15 ಲಕ್ಷ ಕಿಲೋಮೀಟರ್‌ಗಳು ಮತ್ತು … Continued

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣ

ಅಯೋಧ್ಯೆ : ಅಯೋಧ್ಯೆಯ ಹೊಸ ವಿಮಾನ ನಿಲ್ದಾಣಕ್ಕೆ ʼಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಯೋಧ್ಯಾ ಧಾಮʼ ಎಂದು ಹೆಸರಿಡಲಾಗಿದೆ. ಜನವರಿ 22 ರಂದು ನಡೆಯಲಿರುವ ರಾಮ ಮಂದಿರದ ಉದ್ಘಾಟನೆಗೆ ಮುನ್ನ ಅಯೋಧ್ಯೆ ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣದ ಹೆಸರನ್ನು ಬದಲಾಯಿಸಲಾಗಿದೆ. ಈ ಹಿಂದೆ ಅಯೋಧ್ಯಾ ವಿಮಾನ ನಿಲ್ದಾಣಕ್ಕೆ “ಅಯೋಧ್ಯಾ ಧಾಮ ಜಂಕ್ಷನ್‌ʼ ಎಂದು … Continued