ಕಿರಣ್‌ ಬೇಡಿ ಪ್ರಮಾದ ಮರೆಮಾಚಲು ಪ್ರಧಾನಿ ಯತ್ನ: ನಾರಾಯಣಸಾಮಿ ಆರೋಪ

ಪುದುಚೇರಿ: ಪ್ರಧಾನಿ ನರೇಂದ್ರ ಮೋದಿ ಹಿಂದಿನ ರಾಜ್ಯಪಾಲರಾಗಿದ್ದ ಕಿರಣ್‌ ಬೇಡಿ ಅವರ ಪ್ರಮಾದಗಳನ್ನು ನಮ್ಮದೆಂದು ಬಿಂಬಿಸುತ್ತಿದ್ದಾರೆ ಎಂದು ಪುದುಚೆರಿ ಮಾಜಿ ಮುಖ್ಯಮಂತ್ರಿ ನಾರಾಯಣಸಾಮಿ ಆರೋಪಿಸಿದ್ದಾರೆ.. ರಾಜ್ಯಪಾಲರಾಗಿದ್ದ ಕಿರಣ್‌ ಬೇಡಿ ಅವರ ಪ್ರಮಾದಗಳನ್ನು ಮುಚ್ಚಿಟ್ಟು ಜನರ ಗಮನವನ್ನು ಬೇರೆಡೆ ಸೆಳೆಯುತ್ತಿದ್ದಾರೆ ಎಂದು ಆರೋಪ ಮಾಡಿದರು. ತಮ್ಮ ಸರ್ಕಾರ ಕೈಗೊಂಡ 52 ಯೋಜನೆಗಳನ್ನು ನಿಲ್ಲಿಸಿದ್ದು ಕಿರಣ್ ಬೇಡಿ, ಆದರೆ … Continued

ಭಾರತದ ಆರೋಗ್ಯ ಪರಿಸರ ವ್ಯವಸ್ಥೆಯನ್ನು ಜಗತ್ತು ಹೊಸ ದೃಷ್ಟಿಕೋನದಿಂದ ನೋಡುತ್ತಿದೆ: ಪ್ರಧಾನಿ ಮೋದಿ

ಭಾರತೀಯ ಆರೋಗ್ಯ ಪರಿಸರ ವ್ಯವಸ್ಥೆಯನ್ನು ಹೊಸ ದೃಷ್ಟಿಕೋನ, ಗೌರವ ಮತ್ತು ಹೊಸ ವಿಶ್ವಾಸಾರ್ಹತೆಯಿಂದ ನೋಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅ ಅವರು ಎಂಜಿಆರ್‌ ವೈದ್ಯಕೀಯ ವಿಶ್ವವಿದ್ಯಾಲಯದ ೩೩ನೇ ಘಟಿಕೋತ್ಸವ ಉದ್ಘಾಟಿಸಿ ಮಾತನಾಡಿದರು. ಕೊರೊನಾ ರೋಗದ ವಿರುದ್ಧದ ಹೋರಾಟದಲ್ಲಿ ನೆರೆಯ ರಾಷ್ಟ್ರಗಳಿಗೆ ನೆರವು ನೀಡುವಲ್ಲಿ ಭಾರತದ ಪ್ರಯತ್ನ ಶ್ಲಾಘನೀಯವಾಗಿದೆ ಎಂದರು. ಭಾರತವು ಕೇವಲ ಹೊಸ … Continued

ಪುದುಚೆರಿ ಮಾಜಿ ಸಿಎಂ ನಾರಾಯಣಸ್ವಾಮಿ ಕಾಂಗ್ರೆಸ್‌ ಮುಖಂಡರ ಚಪ್ಪಲಿ ಎತ್ತೋದ್ರಲ್ಲಿ ಪರಿಣಿತ: ಮೋದಿ ಟೀಕೆ

ಪುದುಚೆರಿಯ ಹಿಂದಿನ ಮುಖ್ಯಮಂತ್ರಿ ನಾರಾಯಣಸ್ವಾಮಿ ಪಕ್ಷದ ಮುಖಂಡ ಚಪ್ಪಲಿಗಳನ್ನು ಎತ್ತುವಲ್ಲಿ ಪರಿಣಿತರಾಗಿದ್ದರೇ ಹೊರತು ಪುದುಚೆರಿಯ ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಪರಿಣಿತರಾಗಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಪುದುಚೇರಿಯಲ್ಲಿ ಮಾತನಾಡಿದ ವರು,  ನಡೆಯುವ ಚುನಾವಣೆಯಲ್ಲಿ ಜನರು ಎನ್‌ಡಿಎ ಪರ ಮತಚಲಾಯಿಸಿದರೆ ಇಲ್ಲಿನ ಜನರನ್ನೇ ಹೈಕಮಾಂಡ್‌ ಎಂದು ಪರಿಗಣಿಸಲಾಗುವುದು. ರಾಜ್ಯದ ಜನರು ಕಾಂಗ್ರೆಸ್‌ ದುರಾಡಳಿತದಿಂದ ಮುಕ್ತರಾಗಿದ್ದಾರೆ. ಪುದುಚೇರಿಯಲ್ಲಿ … Continued

ಪಿಎಸ್‌ಯುಗಳ ಖಾಸಗೀಕರಣಕ್ಕೆ ಪಿಎಂ ಮೋದಿ ಪ್ರಬಲ ಪ್ರತಿಪಾದನೆ

ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯತಂತ್ರರಹಿತ ಸಾರ್ವಜನಿಕ ವಲಯದ ಉದ್ದಿಮೆಗಳನ್ನು (ಪಿಎಸ್‌ಯು) ಖಾಸಗೀಕರಣಗೊಳಿಸಲು ಪ್ರಬಲ ಪ್ರತಿಪಾದನೆ ಮಾಡಿದ್ದಾರೆ. ಸರ್ಕಾರಕ್ಕೆ ವ್ಯವಹಾರದಲ್ಲಿ ಯಾವುದೇ ವ್ಯವಹಾರವಿಲ್ಲ ಎಂದು ಹೇಳಿದ ಅವರು, ತೆರಿಗೆದಾರರ ಹಣದ ಮೇಲೆ ನಷ್ಟವನ್ನುಂಟು ಮಾಡುವ ಘಟಕಗಳನ್ನು ಉಳಿಸಿಕೊಳ್ಳುವುದು ಸಾರ್ವಜನಿಕ ಕಲ್ಯಾಣ ಯೋಜನೆಗಳಿಗೆ ಖರ್ಚು ಮಾಡಬಹುದಾದ ಸಂಪನ್ಮೂಲಗಳನ್ನು ಬರಿದಾಗಿಸುತ್ತದೆ . ತೈಲ ಮತ್ತು ಅನಿಲ,ವಿದ್ಯುತ್ ಕ್ಷೇತ್ರಗಳಲ್ಲಿರುವಂತಹ ಸಾರ್ವಜನಿಕ … Continued

ಬಿಜೆಪಿ ಹೊಸ ರಾಷ್ಟ್ರೀಯ ಪದಾಧಿಕಾರಿಗಳ ಉದ್ದೇಶಿಸಿ ಮಾತನಾಡಿದ ಪ್ರಧಾನಿ

ಪಕ್ಷದ ಮುಖ್ಯಸ್ಥ ಜೆ ಪಿ ನಡ್ಡಾ ಅವರ ಅಧ್ಯಕ್ಷತೆಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಹೊಸ ರಾಷ್ಟ್ರೀಯ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಸಭೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದ ಪ್ರಾಣ ಕಳೆದುಕೊಂಡವರಿಗೆ ಗೌರವ ಸಲ್ಲಿಸುವ ಮೂಲಕ ತಮ್ಮ ಮಾತು ಪ್ರಾರಂಭಿಸಿದರು.ಸುಮಾರು ಒಂದು ವರ್ಷದಲ್ಲಿ ನಡೆದ ಪಕ್ಷದ … Continued

ವಿದೇಶ ಸುತ್ತುವ ಪ್ರಧಾನಿಗೆ ರೈತರ ಸಮಸ್ಯೆ ಕೇಳಲು ಸಮಯವಿಲ್ಲ: ಪ್ರಿಯಾಂಕಾ ಲೇವಡಿ

ಪ್ರಪಂಚದ ಹಲವು ದೇಶಗಳಿಗೆ ಭೇಟಿ ನೀಡುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿಭಟನಾ ನಿರತ ರೈತರ ಕಣ್ಣೊರೆಸಲು ಸಮಯವಿಲ್ಲ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ರೈತರು ದೆಹಲಿ ಗಡಿಯಲ್ಲಿ ಕಳೆದ ೯೦ ದಿನಗಳಿಂದ ಪ್ರತಿಭಟನೆ ನಡಸುತ್ತಿದ್ದಾರೆ. ಹಲವು ರೈತರು ಪ್ರತಿಭಟನೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಜೀವ ಕಳೆದುಕೊಂಡರು. ಪ್ರತಿಭಟನಾನಿರತ ರೈತರ ವಿದ್ಯುತ್‌ ಹಾಗೂ … Continued

ದೇಶ ತ್ವರಿತ ಗತಿಯಲ್ಲಿ ಪ್ರಗತಿ ಸಾಧಿಸಬೇಕಿದೆ: ಪ್ರಧಾನಿ ಮೋದಿ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ೨೦೨೧-೨೨ರ ಕೇಂದ್ರ ಬಜೆಟ್‌ ಶ್ಲಾಘಿಸಿದ ಪ್ರಧಾನಿ ಮೋದಿ ದೇಶ ತ್ವರಿತ ಗತಿಯಲ್ಲಿ ಪ್ರಗತಿ ಸಾಧಿಸಬೇಕಿದೆ ಎಂದು ತಿಳಿಸಿದ್ದಾರೆ. ನೀತಿ ಆಯೋಗ ಮಂಡಳಿ ೬ನೇ ಸಭೆಯ ಅಧ್ಯಕ್ಷತೆ ವಹಿಸಿ ಮೋದಿ ಮಾತನಾಡಿದರು. ಪ್ರಸಕ್ತ ವರ್ಷದ ಬಜೆಟ್‌ಗೆ ಬಂದ ಸಕಾರಾತ್ಮಕ ಪ್ರತಿಕ್ರಿಯೆ ದೇಶದ ಜನರ ಮನಸ್ಥಿತಿಯನ್ನು ಬಿಂಬಿಸುತ್ತದೆ. ದೇಶ ತ್ವರಿತವಾಗಿ … Continued

ಕೇಂದ್ರ-ರಾಜ್ಯಗಳು ನಿಕಟವಾಗಿ ಕೆಲಸ ಮಾಡಲು ಕೆಲವು ಕಾನೂನುಗಳು ರದ್ದು:ಪ್ರಧಾನಿ ಇಂಗಿತ

ಮುಂಬೈ: ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲು ಕೇಂದ್ರ ಮತ್ತು ರಾಜ್ಯಗಳು ನಿಕಟವಾಗಿ ಕೆಲಸ ಮಾಡಬೇಕಾಗಿದೆ. ಹೀಗಾಗಿ ಪುರಾತನ ಕಾನೂನುಗಳನ್ನು ರದ್ದುಪಡಿಸಿ ಕೇಂದ್ರ ಮತ್ತು ರಾಜ್ಯದ ವ್ಯವಹಾರವನ್ನು ಸುಲಭಗೊಳಿಸಲು ಬೇಕಾದುದನ್ನು ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಶನಿವಾರ ನೀತಿ ಆಯೋಗದ ಆಡಳಿತ ಮಂಡಳಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಸರ್ಕಾರದ ಆತ್ಮ ನಿರ್ಭರ ಭಾರತ ಕಾರ್ಯಕ್ರಮದ ಭಾಗವಾಗಲು … Continued

ನೂತನ ಕೃಷಿ ಕಾಯ್ದೆ ಸಮರ್ಥಿಸಿಕೊಂಡ ಪ್ರಧಾನಿ

ಲಖನೌ: ರೈತರ ಪ್ರತಿಭಟನೆ ಬೆಂಬಲಿಸುವ ಟೂಲ್‌ಕಿಟ್‌ ಹಂಚಿಕೊಂಡ ಆರೋಪದ ಮೇಲೆ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ಬಂಧಿಸಿರುವುದು ವಿವಾದಕ್ಕೆ ತಿರುಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದ ಹೊಸ ಕೃಷಿ ಕಾಯ್ದೆಗಳನ್ನು ಮತ್ತೊಮ್ಮೆ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ರಾಜ್‌ಭರ್’ (ಒಬಿಸಿ) ಸಮುದಾಯದ ಆದರ್ಶ ಪುರುಷ ರಾಜ ಸುಹೇಲ್ದೇವ್ ಪ್ರತಿಮೆಗೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ … Continued

ಹಿಂದಿನ ಸರಕಾರಗಳು ಯೋಧರನ್ನು, ನಾಯಕರನ್ನು ಕಡೆಗಣಿಸಿದ್ದವು: ಪ್ರಧಾನಿ ಮೋದಿ

ಹಿಂದಿನ ಸರಕಾರಗಳು ಮಾಡಿದ ತಪ್ಪನ್ನು ಸರಿಪಡಿಸಲು ಮುಂದಾಗಿರುವ ನಮ್ಮ ಸರಕಾರ ಅರ್ಹ ಯೋಧರು ಹಾಗೂ ನಾಯಕರಿಗೆ ಗೌರವ ನೀಡುವ ಕಾರ್ಯ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅವರು ಉತ್ತರ ಪ್ರದೇಶದ ಬಹ್ರೇಚ್‌ನಲ್ಲಿ ವೀರ ಯೋಧ ಸೋಹೆಲ್ದೇವ್‌ ಅವರ ಮೂರ್ತಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಹಿಂದಿನ ಸರಕಾರಗಳು ಅರ್ಹ ನಾಯಕರಾದ ನೇತಾಜಿ … Continued