ಮಧ್ಯಪ್ರಾಚ್ಯ ನೋಡಿದರೆ… ಭಾರತೀಯರಾಗಿ ನಾವು ಅದೃಷ್ಟವಂತರು’ : ಪ್ರಧಾನಿ ಮೋದಿ, ಅಮಿತ್ ಶಾರನ್ನು ಹೊಗಳಿದ ಅವರಿಬ್ಬರ ಕಟು ಟೀಕಾಕಾರ್ತಿ ಶೆಹ್ಲಾ ರಶೀದ್

ನವದೆಹಲಿ: ಪ್ರಧಾನಿ ಮೋದಿ ಕಟು ಟೀಕಾಕಾರ್ತಿ ಹಾಗೂ ಮಾಜಿ ಜೆಎನ್‌ಯು ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ ಕಾಶ್ಮೀರದಲ್ಲಿ ದೀರ್ಘಾವಧಿಯ ಶಾಂತಿ ಮತ್ತು ಸುರಕ್ಷತೆ ಖಾತ್ರಿಪಡಿಸಿದ್ದಕ್ಕಾಗಿ ಭಾರತೀಯ ಸೇನೆ, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶ್ಲಾಘಿಸಿದ್ದಾರೆ. ಶನಿವಾರ ಇಸ್ರೇಲ್-ಹಮಾಸ್ ಸಂಘರ್ಷ ಎಂಟನೇ ದಿನಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಅವರ ಈ ಪ್ರಶಂಸೆ ಬಂದಿದೆ. … Continued

‘ಭಾರತ ಇಸ್ರೇಲ್‌ ಜೊತೆಗೆ ನಿಂತಿದೆ’: ಹಮಾಸ್ ದಾಳಿ ಕುರಿತು ಇಸ್ರೇಲ್ ಪ್ರಧಾನಿಯೊಂದಿಗೆ ಮಾತನಾಡಿದ ಪ್ರಧಾನಿ ಮೋದಿ

ನವದೆಹಲಿ: ನಡೆಯುತ್ತಿರುವ ಇಸ್ರೇಲ್-ಹಮಾಸ್ ಯುದ್ಧದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಮ್ಮ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದಾರೆ ಹಾಗೂ ಭಾರತವು “ಎಲ್ಲಾ ರೂಪಗಳಲ್ಲಿ ಭಯೋತ್ಪಾದನೆಯನ್ನು ಖಂಡಿಸುತ್ತದೆ” ಎಂದು ಹೇಳಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ ಅವರು ನೆತನ್ಯಾಹು ಅವರೊಂದಿಗೆ ದೂರವಾಣಿ ಕರೆ ಮಾಡಿದ್ದು, ಅವರು “ಸದ್ಯದ ಪರಿಸ್ಥಿತಿಯ ಕುರಿತು … Continued

ಲೋಕಸಭೆಗೆ ಈಗ ಚುನಾವಣೆ ನಡೆದ್ರೆ ಮೋದಿ ನೇತೃತ್ವಕ್ಕೆ ಜೈಕಾರವೋ ? ವಿಪಕ್ಷಗಳ ಮೈತ್ರಿಕೂಟಕ್ಕೋ..? ಯಾರಿಗೆ ಬಹುಮತ..? : ಇದಕ್ಕೆ ಇಂಡಿಯಾ ಟಿವಿ-ಸಿ ಎನ್‌ ಎಕ್ಸ್‌ ಸಮೀಕ್ಷೆ ಏನು ಹೇಳಿದೆ ನೋಡಿ…

ನವದೆಹಲಿ: ಲೋಕಸಭೆಗೆ ಈಗ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲೈಯನ್ಸ್ (ಎನ್‌ಡಿಎ) 543 ಲೋಕಸಭಾ ಸ್ಥಾನಗಳಲ್ಲಿ 315 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತ ಗಳಿಸಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಯಲ್ಲಿ ಕಂಡುಬಂದಿದೆ. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ (I.N.D.I.A) 172 ಲೋಕಸಭಾ ಸ್ಥಾನಗಳನ್ನು ಪಡೆಯಬಹುದು ಮತ್ತು ಪ್ರಾದೇಶಿಕ ಪಕ್ಷಗಳು … Continued

2024ರ ಲೋಕಸಭೆ ಚುನಾವಣೆ-ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ : ನರೇಂದ್ರ ಮೋದಿ Vs ರಾಹುಲ್‌ ಗಾಂಧಿ ; ಸಾಮಾನ್ಯ ವರ್ಗ, ಮುಸ್ಲಿಮರ ಒಲವು ಯಾರತ್ತ..?

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಮುನ್ನ ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯಲ್ಲಿ ಪ್ರಧಾನಿ ಸ್ಥಾನಕ್ಕೆ ರಾಹುಲ್ ಗಾಂಧಿ ಮುಸ್ಲಿಮರ ಮೊದಲ ಆಯ್ಕೆಯಾಗಿದ್ದಾರೆ. ಹಾಗೂ ಮುಂದುವರಿದ ವರ್ಗಗಳ ಮತದಾರರಲ್ಲಿ ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಮೊದಲ ಆದ್ಯತೆಯ ಆಯ್ಕೆಯಾಗಿದ್ದಾರೆ ಎಂದು ಕಂಡುಬಂದಿದೆ. ಸಮೀಕ್ಷೆಯ ಪ್ರಕಾರ, 70 %ರಷ್ಟು ಮುಂದುವರಿದ ಅಥವಾ ಸಾಮಾನ್ಯ ವರ್ಗಗಳ ಮತದಾರರು ನರೇಂದ್ರ ಮೋದಿ ಅವರು … Continued

‘ರಾಮ್ ರಾಮ್ ಸರಿಯಾ ನೆ’ ಖ್ಯಾತಿ ಅಂಕಿತ್ ಬೈಯನ್ ಪುರಿಯಾ ಅವರೊಂದಿಗೆ ಸ್ವಚ್ಛತಾ ಅಭಿಯಾನ ಪಾಲ್ಗೊಂಡ ಪ್ರಧಾನಿ ಮೋದಿ | ವೀಕ್ಷಿಸಿ

ನವದೆಹಲಿ: ಕುಸ್ತಿಪಟುವಾಗಿ ಮಾರ್ಪಟ್ಟಿರುವ ಸಾಮಾಜಿಕ ಮಾಧ್ಯಮದ ಪ್ರಭಾವಿ, ‘ರಾಮ್ ರಾಮ್ ಸರಿಯಾ ನೆ’ ಖ್ಯಾತಿಯ ಅಂಕಿತ್ ಬೈಯನ್ ಪುರಿಯಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ‘ಸ್ವಚ್ಛತಾ ಹಿ ಸೇವಾ’ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಪ್ರಧಾನಿ ಮೋದಿ ಅವರು ಹಂಚಿಕೊಂಡ ವೀಡಿಯೊದಲ್ಲಿ, ಅವರು ಅಂಕಿತ್ ಅವರೊಂದಿಗೆ ಪೊರಕೆ ತೆಗೆದುಕೊಂಡು ಸ್ವಚ್ಛಗೊಳಿಸುತ್ತಿರುವುದನ್ನು ಕಾಣಬಹುದು. ಇಂದು, ರಾಷ್ಟ್ರವು ಸ್ವಚ್ಛತೆಯತ್ತ ಗಮನಹರಿಸುತ್ತಿರುವಾಗ, … Continued

ರಾಜಸ್ಥಾನ ವಿಧಾನಸಭೆ ಚುನಾವಣೆ : ಇಟಿಜಿ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ತೀವ್ರ ಹಣಾಹಣಿಯಲ್ಲಿ ಕಾಂಗ್ರೆಸ್‌ಗಿಂತ ಬಿಜೆಪಿ ಸ್ವಲ್ಪ ಮುಂದೆ

ರಾಜಸ್ಥಾನದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ಜಿದ್ದಾಜಿದ್ದಿ ಸ್ಪರ್ಧೆಯಲ್ಲಿ ಪ್ರಸ್ತುತ ಮುಖ್ಯಮಂತ್ರಿ ಅಶೋಕ ಗೆಹ್ಲೋಟ್ ನೇತೃತ್ವದ ಸರ್ಕಾರವು ಹಿನ್ನಡೆ ಎದುರಿಸಬಹುದು, ಇದೇ ವೇಳೆ ಭಾರತೀಯ ಜನತಾ ಪಕ್ಷವು (ಬಿಜೆಪಿ) ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ ಎಂದು ಇಟಿಜಿ ಚುನಾವಣಾ ಪೂರ್ವ ಸಮೀಕ್ಷೆ ಭವಿಷ್ಯ ನುಡಿದಿದೆ. ರಾಜ್ಯದಲ್ಲಿ ಸರ್ಕಾರ ರಚನೆಗೆ ಸರಳ … Continued

ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡ

ಬೆಂಗಳೂರು : ಕರ್ನಾಟಕ ಹಾಗೂ ತಮಿಳುನಾಡಿನ ನಡುವಿನ ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿಲ್ಲದಿದ್ದರೂ ಸಹ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ … Continued

ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ ಸನಾತನ ಧರ್ಮವನ್ನು ನಾಶ ಮಾಡಲು ಪ್ರಯತ್ನಿಸುತ್ತಿದೆ : ಪ್ರಧಾನಿ ಮೋದಿ ವಾಗ್ದಾಳಿ

ಸಾಗರ : ಪ್ರತಿಪಕ್ಷಗಳ ಮೈತ್ರಿಕೂಟದ ವಿರುದ್ಧ ಗುರುವಾರ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಇಂಡಿಯಾ ಮೈತ್ರಿಕೂಟವು ‘ಸನಾತನ ಧರ್ಮ’ಕ್ಕೆ ಹಾಗೂ ದೇಶದ ಸಂಸ್ಕೃತಿ ಮತ್ತು ನಾಗರಿಕರಿಗೆ ಅಪಾಯವನ್ನುಂಟುಮಾಡುತ್ತಿದೆ ಎಂದು ಆರೋಪಿಸಿದರು. ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು “ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ” ಹೇಳಿಕೆಯ ನಂತರ ವಿವಾದ ಭುಗಿಲೆದ್ದಿದೆ. ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ … Continued

G20 ಅಧ್ಯಕ್ಷ ಸ್ಥಾನ ಬ್ರೆಜಿಲ್ ಗೆ ಹಸ್ತಾಂತರ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜಿ 20 ಶೃಂಗಸಭೆಯನ್ನು ‘ಸ್ವಸ್ತಿ ಅಸ್ತು ವಿಶ್ವ’-ಶಾಂತಿಗಾಗಿ ಪ್ರಾರ್ಥನೆಯೊಂದಿಗೆ ಮುಕ್ತಾಯಗೊಳಿಸಿದರು. ಮುಂದಿನ ಜಿ 20 ಅಧ್ಯಕ್ಷ ಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ ಇಂದು, ಭಾನುವಾರ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರಿಗೆ ವಿಧ್ಯುಕ್ತವಾಗಿ ಹಸ್ತಾಂತರಿಸಿದರು. ಬ್ರೆಜಿಲ್ ಅಧ್ಯಕ್ಷರು ಉದಯೋನ್ಮುಖ ಆರ್ಥಿಕತೆಗಳ ಹಿತಾಸಕ್ತಿಗಳ ವಿಷಯಗಳಿಗೆ … Continued

ಐತಿಹಾಸಿಕ…: ಎಲ್ಲ ವಿಷಯಗಳಲ್ಲಿ ನೂರಕ್ಕೆ 100ರಷ್ಟು ಒಮ್ಮತ : ದೆಹಲಿ ಘೋಷಣೆ ಅಂಗೀಕರಿಸಿದ G20 ನಾಯಕರು

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧಕ್ಕೆ ಸಂಬಂಧಿಸಿದ ಸವಾಲುಗಳ ಹೊರತಾಗಿಯೂ, ಜಿ 20 ನಾಯಕರು ಶನಿವಾರ ನವದೆಹಲಿ ಜಿ 20 ಶೃಂಗಸಭೆಯಲ್ಲಿ ಜಂಟಿ ಘೋಷಣೆಯನ್ನು ನೂರಕ್ಕೆ ನೂರು ಅಂಗೀಕರಿಸಿದ್ದಾರೆ. ಯಾವುದೇ ಅಪಸ್ವರಗಳಿಲ್ಲದೆ ದೆಹಲಿ ಘೋಷಣೆ (Delhi Declaration) ಅಂಗೀಕರಿಸಿರುವ ಜಿ20 ನಾಯಕರ ನಿರ್ಧಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಜಂಟಿ ಘೋಷಣೆಯನ್ನು ಸಿದ್ಧಪಡಿಸಿ, ಅಂಗೀಕಾರವಾಗುವಂತೆ ಶ್ರಮಿಸಿದ … Continued