ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ : ಕನ್ನಡದಲ್ಲೇ ಪ್ರಧಾನಿ ಮೋದಿ ಟ್ವೀಟ್

ನವದೆಹಲಿ: ನಿನ್ನೆ ಶುಕ್ರವಾರ ಮಂಗಳೂರಿನಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ ನಂತರ ಬೃಹತ್‌ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು. ಶುಕ್ರವಾರ ಮಂಗಳೂರಿನ ಗೋಲ್ಡ್ ಫಿಂಚ್ ಹೋಟೆಲ್ ಮೈದಾನದಲ್ಲಿ 3೮೦೦ ಸಾವಿರ ಕೋಟಿ ರೂ.ಗಳಷ್ಟು ಮೊತ್ತದ ವಿವಿಧ ಯೋಜನೆಗಳ ಉದ್ಘಾಟನೆ, ಶಿಲಾನ್ಯಾಸ ನಡೆಸಿ ಮಾತನಾಡಿದ್ದ ಪ್ರಧಾನಿ ಮೋದಿ ಅವರು, ಕರಾವಳಿಯ ಉತ್ಪನ್ನಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಸುಲಭವಾಗಿ … Continued

ಜಾಗತಿಕ ಕದನ ವಿರಾಮಕ್ಕಾಗಿ ಪ್ರಧಾನಿ ಮೋದಿ ಸೇರಿದಂತೆ 3 ನಾಯಕರ ನೇತೃತ್ವದಲ್ಲಿ ಆಯೋಗದ ರಚನೆ ಪ್ರಸ್ತಾಪಿಸಿದ ಮೆಕ್ಸಿಕನ್ ಅಧ್ಯಕ್ಷ

ನವದೆಹಲಿ: ಮೆಕ್ಸಿಕೋ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಅವರು ವಿಶ್ವಸಂಸ್ಥೆಗೆ ಲಿಖಿತ ಪ್ರಸ್ತಾವನೆಯನ್ನು ಸಲ್ಲಿಸಲು ಯೋಜಿಸಿದ್ದು, ವಿಶ್ವವನ್ನು ಶಾಂತಿಯನ್ನು ಉತ್ತೇಜಿಸಲು ಐದು ವರ್ಷಗಳ ಅವಧಿಗೆ ಒಪ್ಪಂದ ಮಾಡಿಕೊಳ್ಳುವಂತೆ ಪ್ರೇರೇಪಿಸುವ ಆಯೋಗ ರಚಿಸುವ ಮಾತನ್ನಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಮೂವರು ವಿಶ್ವ ನಾಯಕರ ಹೆಸರು ಸೂಚಿಸಿದ್ದಾರೆ ಎಂದು ಎಂಎಸ್ಎನ್ ನ್ಯೂಸ್ ವರದಿ ಮಾಡಿದೆ. ನಾನು … Continued

ಬೆಂಗಳೂರು ಐಐಎಸ್‌ಸಿಯಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು: ವಿಶ್ವ ಯೋಗ ದಿನಾಚರಣೆ ಹಿನ್ನೆಲೆ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ 280 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಬ್ರೇನ್​ ರಿಸರ್ಚ್ ಸೆಂಟರ್​ ಉದ್ಘಾಟಿದರು. ಅಲ್ಲದೆ ಬಾಗ್ಚಿ ಪಾರ್ಥಸಾರಥಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದರು. ಮೆದುಳು ಸಂಶೋಧನಾ ಕೇಂದ್ರ ದೇಶದ ಅತಿದೊಡ್ಡ ಸಂಶೋಧನಾ ಕೇಂದ್ರವಾಗಿದ್ದು, ವಯಸ್ಸಿಗೆ ಸಂಬಂಧಿಸಿ … Continued

ಪ್ರಧಾನಿ ಮೋದಿ ಹಾದು ಹೋಗುವ ರಸ್ತೆಗಳಲ್ಲಿರುವ ಕಾಲೇಜುಗಳಿಗೆ ರಜೆ : ಡಿಕೆಶಿ ಆಕ್ಷೇಪ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಣಿಸುವ ರಸ್ತೆಗಳಲ್ಲಿರುವ ಕಾಲೇಜುಗಳಿಗೆ ರಜೆ ನೀಡಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುವ ರಸ್ತೆಗಳಲ್ಲಿರುವ ಕಾಲೇಜುಗಳಿಗೆ ಯಾಕೆ ರಜೆ ಕೊಡಬೇಕು, ವಿದ್ಯಾರ್ಥಿಗಳು ಗಲಾಟೆ ಮಾಡ್ತಾರಾ ಎಂದು ಪ್ರಶ್ನಿಸಿದ ಅವರು, ವಿದ್ಯಾರ್ಥಿಗಳನ್ನು ಏಕೆ ಅನುಮಾನದಿಂದ ನೋಡುತ್ತೀರಿ. ನಮ್ಮ ವಿದ್ಯಾರ್ಥಿಗಳೇನೂ ಭಯೋತ್ಪಾದಕರಾ ಎಂದು ಪ್ರಶ್ನಿಸಿದ್ದಾರೆ. … Continued

ಕೊರೊನಾ ಇನ್ನೂ ಮುಗಿದಿಲ್ಲ, ಅದು ಮರುಕಳಿಸಬಹುದು: ಎಚ್ಚರಿಸಿದ ಪ್ರಧಾನಿ ಮೋದಿ

ನವದೆಹಲಿ: ಕೋವಿಡ್ ಇನ್ನೂ ಹೋಗಿಲ್ಲ. ಅದು ನಿರಂತರವಾಗಿ ತನ್ನ ರೂಪಗಳನ್ನು ಬದಲಾಯಿಸುತ್ತಿದೆ ಮತ್ತು ಮರುಕಳಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಜನತೆಗೆ ಎಚ್ಚರಿಸಿದ್ದಾರೆ. ಗುಜರಾತಿನ ಜುನಾಘಡದಲ್ಲಿರುವ ಉಮಿಯಾ ಮಾತಾ ದೇವಾಲಯದವ 14ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ವರ್ಚುವಲ್ ಭಾಷಣ‌ ಮಾಡಿದ ಅವರು, ದೇಶವ್ಯಾಪಿ ಲಸಿಕೆ ಯಶಸ್ವಿಯಾಗಿದೆ ಎಂದು ಒತ್ತಿ ಹೇಳಿದರು. ಕೊರೊನಾ ಮುಗಿದಿದೆ ಎಂದು ಭಾವಿಸಬೇಡಿ. … Continued

ದ್ವಿಪಕ್ಷೀಯ ಸಹಕಾರ: ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಬಿಡೆನ್ ನಾಳೆ ವರ್ಚವಲ್‌ನಲ್ಲಿ ಸಭೆ

ನವದೆಹಲಿ: ದ್ವಿಪಕ್ಷೀಯ ಸಹಕಾರದ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಅವರೊಂದಿಗೆ ವರ್ಚುವಲ್ ಸಭೆ ನಡೆಸಲಿದ್ದಾರೆ ಎಂದು ಭಾರತದ ವಿದೇಶಾಂಗ ಸಚಿವಾಲಯ ಭಾನುವಾರ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 11 ರಂದು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್ ಬಿಡೆನ್ ಅವರೊಂದಿಗೆ ವರ್ಚುವಲ್ ಸಭೆ ನಡೆಸಲಿದ್ದಾರೆ. ಉಭಯ ನಾಯಕರು … Continued

ವಿಕಲಾಂಗ ಮಹಿಳೆಯ ಕಾಲಿಗೆ ನಮಸ್ಕರಿಸಿದ ಮೋದಿ

ಲಕ್ನೋ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮನ್ನು ಭೇಟಿಯಾಗಲು ಬಂದಿದ್ದ ದಿವ್ಯಾಂಗ ಮಹಿಳೆಯೊರ್ವರ ಕಾಲಿಗೆ ನಮಸ್ಕರಿಸಿದ್ದಾರೆ. ಡಿ.13 ರಂದು ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆಗೆ ಮೋದಿ ವಾರಾಣಸಿಗೆ ಆಗಮಿಸಿದ್ದರು. ಉದ್ಘಾಟನೆ ಬಳಿಕ ಮೋದಿ ಅವರನ್ನು ಭೇಟಿ ಮಾಡಲು ಶಿಖಾ ರಸ್ತೋಗಿ ಅವರು ಬಂದಿದ್ದರು. ಮಹಿಳೆಯನ್ನು ನೋಡಿದ ಪ್ರಧಾನಿ ತಕ್ಷಣವೇ ಆಕೆಯ ಯೋಗಕ್ಷೇಮವನ್ನು ವಿಚಾರಿಸಿದ್ದಾರೆ. ಈ … Continued

ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ, 3 ಸೇನಾ ಮುಖ್ಯಸ್ಥರಿಂದ ಜನರಲ್ ಬಿಪಿನ್ ರಾವತ್, ಇತರ 12 ಜನರಿಗೆ ಅಂತಿಮ ಗೌರವ..ವೀಕ್ಷಿಸಿ

ನವದೆಹಲಿ: ಸೇನಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 11 ಮಂದಿಯ ಪಾರ್ಥಿವ ಶರೀರವನ್ನು ಭಾರತೀಯ ವಾಯುಪಡೆಯ ವಿಶೇಷ ವಿಮಾನದ ಮೂಲಕ ದೆಹಲಿಗೆ ತರಲಾಯಿತು. ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎನ್‌ಎಸ್‌ಎ ಅಜಿತ್ ದೋವಲ್ ಮತ್ತು ಮೂವರು ಸೇನಾ ಮುಖ್ಯಸ್ಥರು ಸಿಡಿಎಸ್ … Continued

ಪರಿಷತ್​ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯೇ: ಮೋದಿ ಭೇಟಿ ನಂತರ ದೇವೇಗೌಡರು ಹೇಳಿರುವುದೇನು..?

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಈ ಮಧ್ಯೆ ಇಂದು ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು ಭೇಟಿ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ದೇವೇಗೌಡ, ಇದುವರೆಗೆ ನಾಲ್ಕೈದು ಬಾರಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದೇನೆ. ಇದುವರೆಗೂ ನನ್ನ ಬಗ್ಗೆ ಮೋದಿಯವರು ಅಗೌರವಯುತವಾಗಿ ನಡೆದುಕೊಂಡಿಲ್ಲ. ತುಂಬ ಪ್ರೀತಿಯಿಂದ ಮಾತನಾಡಿಸಿದ್ದಾರೆ. ಎಲ್ಲ ಬಾರಿ ಭೇಟಿಯಾದಾಗಲೂ ನನ್ನನ್ನು … Continued

ಕುಟುಂಬ ರಾಜಕಾರಣ ದೇಶಕ್ಕೆ ಮಾರಕ: ಕಾಂಗ್ರೆಸ್‌ ವಿರುದ್ಧ ಪ್ರಧಾನಿ ಮೋದಿ ಪರೋಕ್ಷ ವಾಗ್ದಾಳಿ

ನವದೆಹಲಿ:ದೇಶದಲ್ಲಿ ಹೆಚ್ಚುತ್ತಿರುವ ಕುಟುಂಬ ರಾಜಕಾರಣದ ಬಗ್ಗೆ ತೀವ್ರ ಕಿಡಿಕಾರಿರುವ ಪ್ರಧಾನಿ ನರೇಂದ್ರ ಮೋದಿ ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂವಿಧಾನದ ಬಗ್ಗೆ ಹಾಗೂ ಕುಟುಂಬ ರಾಜಕಾರಣದ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಸಂವಿಧಾನದ ದಿನದ ಪ್ರಯುಕ್ತ ಸಂಸತ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, … Continued