ರಾಮ ಮಂದಿರ ಪ್ರಾಣ ಪ್ರತಿಷ್ಠೆ : 11 ದಿನಗಳ ಕಠಿಣ ನಿಯಮ ಪಾಲಿಸುತ್ತಿರುವ ಪ್ರಧಾನಿ ಮೋದಿ, ಬರೀ ನೆಲದ ಮೇಲೆ ಮಲಗುತ್ತಾರೆ, ಎಳೆ ನೀರು ಮಾತ್ರ ಸೇವಿಸ್ತಾರೆ….

ನವದೆಹಲಿ: ಜನವರಿ 22 ರಂದು ನಡೆಯಲಿರುವ ಅಯೋಧ್ಯೆ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ನಿಯಮಗಳು ಮತ್ತು ಆಚರಣೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದಾರೆ. ಪ್ರಧಾನಿ ಮೋದಿ ವ್ರತಾಚರಣೆಗಳಿಗಾಗಿ “ಯಮ-ನಿಯಮಗಳನ್ನು” ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ. ಜನವರಿ 12 ರಂದು ಮೋದಿ ವ್ರತಾಚರಣೆ ಆರಂಭಿಸಿದ್ದು, ಪ್ರಾಣ ಪ್ರತಿಷ್ಠೆಯ “ಐತಿಹಾಸಿಕ” … Continued

ಪ್ರಧಾನಿ ಮೋದಿ ಪದವಿ ವಿವಾದ: ಅರವಿಂದ ಕೇಜ್ರಿವಾಲ್, ಸಂಜಯ ಸಿಂಗ್ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗೆ ಸಂಬಂಧಿಸಿದ ಹೇಳಿಕೆಗಳಿಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಸಂಸದ ಸಂಜಯ್ ಸಿಂಗ್ ವಿರುದ್ಧ ಹೂಡಲಾಗಿದ್ದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ. ಈ ವೇಳೆ ಮಧ್ಯಂತರ ಪರಿಹಾರ ಕೋರಿ ಈ ಇಬ್ಬರೂ ಸಲ್ಲಿಸಿರುವ ಮನವಿಯನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ನ್ಯಾಯಮೂರ್ತಿಗಳಾದ ಬಿ.ಆರ್‌. … Continued

‘ಪೂಜಿಸಲೆಂದೇ ಹೂಗಳ ತಂದೆ….’ ಕನ್ನಡದ ಹಾಡಿಗೆ ಮೆಚ್ಚಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ‘ಪೂಜಿಸಲೆಂದೇ ಹೂಗಳ ತಂದೆ’ ಎಂಬ ಕನ್ನಡದ ಜನಪ್ರಿಯ ಹಾಡಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರು ಶಿವಶ್ರೀ ಸ್ಕಂದ ಪ್ರಸಾದ ಎಂಬ ಯುವ ಗಾಯಕಿ ಹಾಡಿರುವ ಹಾಡಿನ ಯೂಟ್ಯೂಬ್ ಲಿಂಕ್ ಪೋಸ್ಟ್ ಅನ್ನು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಕನ್ನಡದಲ್ಲಿ ಶಿವಶ್ರೀ ಸ್ಕಂದಪ್ರಸಾದ ಅವರ ಈ ಗಾಯನವು ಪ್ರಭು ಶ್ರೀ ರಾಮನ … Continued

ಭಾರತ-ಪ್ರಧಾನಿ ಮೋದಿಗೆ ಅವಹೇಳನ : ಮಾಲ್ಡೀವ್ಸ್ ಪ್ರವಾಸ ರದ್ದುಗೊಳಿಸಿದ ನಟ ನಾಗಾರ್ಜುನ, ಲಕ್ಷದ್ವೀಪಕ್ಕೆ ಹೋಗ್ತೇನೆ ಎಂದ ತೆಲುಗು ಸೂಪರ್‌ ಸ್ಟಾರ್‌

ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಲ್ಡೀವ್ಸ್‌ನ ಮೂವರು ಮಂತ್ರಿಗಳು ಅವಹೇಳನಕಾರಿ ಹೇಳಿಕೆ ನೀಡಿದ ನಂತರ ಮಾಲ್ಡೀವ್ಸ್ ಪ್ರವಾಸ ರದ್ದುಗೊಳಿಸಿದವರ ಸಂಖ್ಯೆ ಏರುತ್ತಿದ್ದು, ಆ ಪಟ್ಟಿಗೆ ಈಗ ತೆಲುಗು ಮೆಗಾಸ್ಟಾರ್ ಅಕ್ಕಿನೇನಿ ನಾಗಾರ್ಜುನ ಸೇರ್ಪಡೆಯಾಗಿದ್ದಾರೆ. ಮಾಲ್ಡೀವ್ಸ್‌ಗೆ ತನ್ನ ಯೋಜಿತ ಪ್ರವಾಸವನ್ನು ರದ್ದುಗೊಳಿಸಿರುವುದಾಗಿ ನಾಗಾರ್ಜುನ ಬಹಿರಂಗಪಡಿಸಿದ್ದಾರೆ ಮತ್ತು ಈಗ ಲಕ್ಷದ್ವೀಪಕ್ಕೆ ಭೇಟಿ ನೀಡಲು ಬಯಸುತ್ತಿದ್ದಾರೆ. 2019 … Continued

ರಾಜತಾಂತ್ರಿಕ ಗದ್ದಲದ ನಡುವೆ ಮಾರ್ಚ್ 15ರೊಳಗೆ ತನ್ನ ಸೈನ್ಯ ಹಿಂತೆಗೆದುಕೊಳ್ಳುವಂತೆ ಭಾರತಕ್ಕೆ ಹೇಳಿದ ಮಾಲ್ಡೀವ್ಸ್

ನವದೆಹಲಿ: ಭಾರತ ಸರ್ಕಾರವು ಮಾರ್ಚ್ 15ಕ್ಕಿಂತ ಮೊದಲು ದ್ವೀಪಸಮೂಹ ರಾಷ್ಟ್ರವಾದ ಮಾಲ್ಡೀವ್ಸ್‌ನಿಂದ ತನ್ನ ಮಿಲಿಟರಿ ಉಪಸ್ಥಿತಿಯನ್ನು ಹಿಂತೆಗೆದುಕೊಳ್ಳುವಂತೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಪ್ರಸ್ತಾಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಮಾಲ್ಡೀವ್ಸ್‌ನ ಮೂವರು ಸಚಿವರು ಇತ್ತೀಚಿನ ಅವಹೇಳನಕಾರಿ ಹೇಳಿಕೆಗಳಿಂದ ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಸಂಬಂಧಗಳು ಹದಗೆಟ್ಟಿರುವ ಮಧ್ಯೆ ಭಾರತವು ತನ್ನ ದೇಶದಲ್ಲಿರುವ ಮಿಲಿಟರಿಯನ್ನು … Continued

‘ನಮ್ಮನ್ನು ಬೆದರಿಸಲು ನಿಮಗೆ ಪರವಾನಗಿ ನೀಡಿಲ್ಲ’: ಭಾರತದೊಂದಿಗೆ ಗದ್ದಲದ ನಡುವೆ ಮಾಲ್ಡೀವ್ಸ್ ಅಧ್ಯಕ್ಷ

ಮಾಲೆ: ತನ್ನ ಐದು ದಿನಗಳ ಚೀನಾ ಭೇಟಿಯನ್ನು ಮುಕ್ತಾಯಗೊಳಿಸಿದ ನಂತರ, ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು ಶನಿವಾರ, ಮಾಲ್ಡೀವ್ಸ್‌ ಗೆ “ಬೆದರಿಸುವ” ಹಕ್ಕು ಯಾವ ದೇಶಕ್ಕೂ ಇಲ್ಲ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ಲಕ್ಷದ್ವೀಪ ಭೇಟಿಯ ವಿರುದ್ಧ ಮಾಲ್ಡೀವ್ಸ್ ರಾಜಕಾರಣಿಗಳು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ನಂತರ ಭಾರತ ಮತ್ತು ಮಾಲ್ಡೀವ್ಸ್ ನಡುವಿನ ರಾಜತಾಂತ್ರಿಕ ಗದ್ದಲದ … Continued

ವೀಡಿಯೊ…| ನಾಸಿಕದ ಕಲಾರಾಮ ಮಂದಿರದಲ್ಲಿ ನೆಲ ಒರೆಸಿ, ರಾಮ ಭಜನೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

ನಾಸಿಕ್: ಸ್ವಚ್ಛತಾ ಅಭಿಯಾನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮಹಾರಾಷ್ಟ್ರದ ನಾಸಿಕದಲ್ಲಿರುವ ಕಲಾರಾಮ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಿದರು. ಮೋದಿ ಅವರು ಬಕೆಟ್‌ನೊಂದಿಗೆ ಮಾಪ್ ಸ್ಟಿಕ್ ಹಿಡಿದು ದೇವಾಲಯದ ನೆಲವನ್ನು ಒರೆಸುವ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೂ ಮುನ್ನ ದೇಶಾದ್ಯಂತ ದೇವಾಲಯಗಳಲ್ಲಿ ಸ್ವಚ್ಛತಾ ಚಟುವಟಿಕೆಗಳನ್ನು (ಸ್ವಚ್ಛತಾ ಅಭಿಯಾನ) ಕೈಗೊಳ್ಳುವಂತೆ ಪ್ರಧಾನಿ ಜನರಿಗೆ ಕರೆ … Continued

ಅಯೋಧ್ಯೆಯಲ್ಲಿ ಭಗವಾನ್‌ ರಾಮನ ಪ್ರಾಣ ಪ್ರತಿಷ್ಠಾಪನೆ : 11 ದಿನಗಳ ವ್ರತ ಆರಂಭಿಸಿದ ಪ್ರಧಾನಿ ಮೋದಿ

ನವದೆಹಲಿ : ಜನವರಿ 22 ರಂದು ನಡೆಯಲಿರುವ ಅಯೋಧ್ಯೆ ರಾಮ ಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಇಂದಿನಿಂದ (ಜನವರಿ 12) 11 ದಿನಗಳ ವ್ರತ ಕೈಗೊಳ್ಳುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶುಕ್ರವಾರ ಪ್ರಕಟಿಸಿದ ಆಡಿಯೋ ಸಂದೇಶದಲ್ಲಿ ಮೋದಿ, ಅವರು ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ಉಪಸ್ಥಿತರಿರುವ ಸೌಭಾಗ್ಯ ನನಗೆ ಸಿಕ್ಕಿದೆ. ಇದರಿಂದ ನಾನು … Continued

ಭಾರತದ ಜೊತೆ ವಿವಾದದಿಂದ ಹಿನ್ನಡೆ: ಹೆಚ್ಚಿನ ಪ್ರವಾಸಿಗರನ್ನು ಕಳುಹಿಸುವಂತೆ ಚೀನಾಕ್ಕೆ ಮನವಿ ಮಾಡಿದ ಮಾಲ್ಡೀವ್ಸ್ ಅಧ್ಯಕ್ಷ

ಬೀಜಿಂಗ್: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮಾಲ್ಡೀವ್ಸ್ ಸಚಿವರ ಅವಹೇಳನಕಾರಿ ಹೇಳಿಕೆಯ ನಂತರ ಎರಡು ದೇಶಗಳ ನಡುವೆ ರಾಜತಾಂತ್ರಿಕ ಕಲಹ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಭಾರತೀಯ ಪ್ರವಾಸಿಗರು ಮಾಲ್ಡೀವ್ಸ್ ಬುಕ್ಕಿಂಗ್ ರದ್ದುಗೊಳಿಸಿದ್ದರಿಂದ ವಿಚಲಿತರಾಗಿರುವ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ತಮ್ಮ ದೇಶಕ್ಕೆ ಹೆಚ್ಚಿನ ಪ್ರವಾಸಿಗರನ್ನು ಕಳುಹಿಸುವ ಪ್ರಯತ್ನಗಳನ್ನು ‘ಚುರುಕುಗೊಳಿಸಬೇಕು’ ಎಂದು ಚೀನಾಕ್ಕೆ ಮನವಿ ಮಾಡಿದ್ದಾರೆ. ಭಾರತ-ಮಾಲ್ಡೀವ್ಸ್ … Continued

ಭಾರತ-ಮಾಲ್ಡೀವ್ಸ್ ವಿವಾದ : ಟಾಟಾ ಸಮೂಹದಿಂದ ಲಕ್ಷದ್ವೀಪದಲ್ಲಿ 2 ತಾಜ್ ಬ್ರಾಂಡ್ ರೆಸಾರ್ಟ್‌ ನಿರ್ಮಾಣ…!

ಟಾಟಾ ಗ್ರೂಪ್‌ನ ಎರಡು ರೆಸಾರ್ಟ್‌ಗಳನ್ನು 2026 ರಲ್ಲಿ ಭಾರತದ ದ್ವೀಪಸಮೂಹವಾದ ಲಕ್ಷದ್ವೀಪದ ಸುಹೇಲಿ ಮತ್ತು ಕದ್ಮತ್ ದ್ವೀಪಗಳಲ್ಲಿ ತೆರೆಯಲು ನಿರ್ಧರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಮತ್ತು ನಂತರದ ಮಾಲ್ಡೀವ್ಸ್‌ನೊಂದಿಗಿನ ಉದ್ವಿಗ್ನತೆಯ ನಂತರ ಇದು ಗಮನ ಸೆಳೆದಿದೆ. ಕಳೆದ ವರ್ಷ ಜನವರಿಯಲ್ಲಿ, ಟಾಟಾ ಗ್ರೂಪ್‌ನ ಅಂಗ ಸಂಸ್ಥೆಯಾದ ಇಂಡಿಯನ್ ಹೋಟೆಲ್ಸ್ ಕಂಪನಿಯು ಲಕ್ಷದ್ವೀಪದಲ್ಲಿ ಎರಡು … Continued