ಅಪರೂಪದ ದೃಶ್ಯ : ರಾಜಕೀಯ ವೈರಿಗಳಾದ ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಧ್ಯೆ ಸೌಹಾರ್ದಯುತ ಮಾತುಕತೆ ; ವಿಡಿಯೋ ವೈರಲ್!

ನವದೆಹಲಿ: ಸಂಸತ್ತಿನಲ್ಲಿ ಅಪರೂಪದ ವಿದ್ಯಮಾನವೊಂದರಲ್ಲಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಡುವೆ ನಡೆದ ಸೌಹಾರ್ದಯುತ ಸಂಭಾಷಣೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಇವರಿಬ್ಬರ ನಡುವಿನ ಸಂವಾದ ಕಡಿಮೆ ಅವಧಿಯದ್ದಾಗಿದ್ದರೂ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಆಗಾಗ್ಗೆ ನಡೆಯುವ ವಾಗ್ಯುದ್ಧಗಳ ಮಧ್ಯೆ ಇದು ಸಾಕಷ್ಟು … Continued

ಪಶ್ಚಿಮ ಬಂಗಾಳ ಚುನಾವಣೆ : ಮಮತಾಗೆ ಶಾಕ್ ನೀಡುತ್ತಾ ಬಿಜೆಪಿ ? ಅಚ್ಚರಿಯ ಫಲಿತಾಂಶ ಬರಬಹುದು ಎಂದ ಮ್ಯಾಟ್ರಿಜ್ ಸಮೀಕ್ಷೆ

ಕೋಲ್ಕತ್ತಾ: ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಮತ್ತು ಭಾರತೀಯ ಜನತಾ ಪಾರ್ಟಿ (BJP) ನಡುವೆ ತೀವ್ರ ಹಣಾಹಣಿ ನಡೆಯಲಿದೆ ಎಂದು ‘ಮ್ಯಾಟ್ರಿಜ್’ (Matrize) ಸಂಸ್ಥೆಯ ಚುನಾವಣಾ ಪೂರ್ವ ಸರ್ವೆ ಹೇಳಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬಿಜೆಪಿ ಪ್ರಬಲ ಸವಾಲೊಡ್ಡುವ ಸಾಧ್ಯತೆಯಿದೆ ಎಂದು ಅದು ತಿಳಿಸಿದೆ. ಸರ್ವೆ ಪ್ರಕಾರ, … Continued

ಪಶ್ಚಿಮ ಏಷ್ಯಾ ಸಂಘರ್ಷ : ನಾಳೆ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸಮಾಲೋಚನೆ

ನವದೆಹಲಿ: ಪಶ್ಚಿಮ ಏಷ್ಯಾದ ಸಂಘರ್ಷವು ನಾಲ್ಕನೇ ವಾರಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ, ದೇಶದ ಸಿದ್ಧತೆ ಮತ್ತು ಯೋಜನೆಗಳ ಕುರಿತು ಪರಾಮರ್ಶಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.  ‘ಟೀಮ್ ಇಂಡಿಯಾ’ ಭಾವನೆಯೊಂದಿಗೆ ಎಲ್ಲರ ಪ್ರಯತ್ನಗಳನ್ನು ಸಂಯೋಜಿಸುವತ್ತ ಈ ಸಭೆಯು ಗಮನಹರಿಸಲಿದೆ. ಆದಾಗ್ಯೂ, … Continued

ಹಾರ್ಮುಜ್ ಜಲಸಂಧಿ ಮುಕ್ತವಾಗಿರಬೇಕು ; ಟ್ರಂಪ್ ಜೊತೆಗಿನ ಮಾತುಕತೆ ವೇಳೆ ಭಾರತದ ನಿಲುವು ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ತೈಲ ಹಾಗೂ ಇಂಧನ ಹಡಗುಗಳ ಸಂಚಾರಕ್ಕೆ ಇರಾನ್ ಹೇರಿರುವ ನಿರ್ಬಂಧಗಳ ನಡುವೆ, ಅತ್ಯಂತ ನಿರ್ಣಾಯಕವಾಗಿರುವ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಹಡಗುಗಳ ಸಂಚಾರಕ್ಕೆ ಮುಕ್ತವಾಗಿಡುವ ಪ್ರಾಮುಖ್ಯತೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಕರೆ ಮೂಲಕ ಚರ್ಚಿಸಿದರು. … Continued

ಅತಿ ಸುದೀರ್ಘ ಕಾಲ ಸರ್ಕಾರ ಮುನ್ನಡೆಸಿದ ಭಾರತದ ಮೊದಲ ನಾಯಕರಾದ ಪ್ರಧಾನಿ ಮೋದಿ…!

ನವದೆಹಲಿ: ಭಾರತೀಯ ರಾಜಕೀಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಚುನಾಯಿತ ಸರ್ಕಾರವೊಂದರ ಮುಖ್ಯಸ್ಥರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಈ ಮೂಲಕ ಪ್ರಧಾನಿ ಮೋದಿ ಸಿಕ್ಕಿಂ ಮುಖ್ಯಮಂತ್ರಿಯಾಗಿ 8,930 ದಿನಗಳ ಕಾಲ ಅಧಿಕಾರದಲ್ಲಿದ್ದ ಪವನಕುಮಾರ ಚಾಮ್ಲಿಂಗ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಗುಜರಾತ್ ಮುಖ್ಯಮಂತ್ರಿಯಾಗಿ ಮತ್ತು ದೇಶದ ಪ್ರಧಾನಮಂತ್ರಿಯಾಗಿ ಅವರ ಒಟ್ಟು … Continued

ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ ; ಹಡಗು ಸಂಚಾರರ ಸುರಕ್ಷತೆಗೆ ಕರೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಇರಾನ್ ಅಧ್ಯಕ್ಷ ಡಾ. ಮಸೂದ್ ಪೆಜೆಶ್ಕಿಯಾನ್ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡುವಂತೆ ಅವರು ಕರೆ ನೀಡಿದರು. ಕಳೆದ ಎಂಟು ದಿನಗಳಲ್ಲಿ … Continued

ಇನ್‌ಸ್ಟಾಗ್ರಾಂನಲ್ಲಿ 10 ಕೋಟಿ ಫಾಲೋವರ್ಸ್ ದಾಟಿದ ವಿಶ್ವದ ಮೊದಲ ರಾಜಕಾರಣಿಯಾದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಜನಪ್ರಿಯ ಫೋಟೋ ಹಂಚಿಕೆ ಅಪ್ಲಿಕೇಶನ್ ಆದ ಇನ್‌ಸ್ಟಾಗ್ರಾಮ್‌ನಲ್ಲಿ (Instagram) 10 ಕೋಟಿ ((100 ಮಿಲಿಯನ್) ಅನುಯಾಯಿಗಳ (Followers) ಐತಿಹಾಸಿಕ ಮೈಲಿಗಲ್ಲನ್ನು ದಾಟಿದ ವಿಶ್ವದ ಮೊದಲ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2014 ರಲ್ಲಿ ಮೆಟಾ ಮಾಲೀಕತ್ವದ ಈ ಅಪ್ಲಿಕೇಶನ್‌ಗೆ ಸೇರಿದ ಪ್ರಧಾನಿಯವರು, ಪ್ರಸ್ತುತ 1,205 ಪೋಸ್ಟ್‌ಗಳನ್ನು … Continued

ಭಾರತ-ಫ್ರಾನ್ಸ್ ಸಂಬಂಧದಲ್ಲಿ ಹೊಸ ಯುಗ: 20ಕ್ಕೂ ಹೆಚ್ಚು ಒಪ್ಪಂದಗಳ ಘೋಷಣೆ ಮಾಡಿದ ಮೋದಿ-ಮ್ಯಾಕ್ರನ್

ಮುಂಬೈ: ಮುಂಬೈನಲ್ಲಿ ನಡೆದ ವ್ಯಾಪಕ ದ್ವಿಪಕ್ಷೀಯ ಮಾತುಕತೆಗಳ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮಂಗಳವಾರ ರಕ್ಷಣೆ, ಕೌಶಲ್ಯ, ತಂತ್ರಜ್ಞಾನ ಸಹಕಾರ, ವ್ಯಾಪಾರ ಮತ್ತು ಆರೋಗ್ಯ ಸೇರಿದಂತೆ 20ಕ್ಕೂ ಹೆಚ್ಚು ಒಪ್ಪಂದಗಳನ್ನು ಘೋಷಿಸಿದರು. ಅಧ್ಯಕ್ಷ ಮ್ಯಾಕ್ರನ್ ನವದೆಹಲಿಯಲ್ಲಿ ನಡೆಯಲಿರುವ 2026 ರ AI ಶೃಂಗಸಭೆಯಲ್ಲಿ ಭಾಗವಹಿಸಲು ಮತ್ತು ಪ್ರಧಾನಿ ಮೋದಿ … Continued

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ಸುಂಕ ಕಡಿತ, ಆಮದು ಸರಳೀಕರಣಕ್ಕೆ ಸಮ್ಮತಿ, $500 ಬಿಲಿಯನ್ ವ್ಯಾಪಾರ ಗುರಿ

ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಬಾಂಧವ್ಯದಲ್ಲಿ ಉಭಯ ದೇಶಗಳು ಮಧ್ಯಂತರ ವ್ಯಾಪಾರ ಒಪ್ಪಂದವನ್ನು (Interim Trade Agreement) ಅಂತಿಮಗೊಳಿಸಿದ್ದು, ಇದರ ಅನ್ವಯ ಭಾರತೀಯ ಸರಕುಗಳ ಮೇಲೆ ಅಮೆರಿಕ ವಿಧಿಸುತ್ತಿದ್ದ ಸುಂಕವನ್ನು ಶೇ. 18ಕ್ಕೆ ಇಳಿಕೆ ಮಾಡಲಾಗಿದೆ. ಮುಖ್ಯವಾಗಿ, ಈ ಹಿಂದೆ ಭಾರತೀಯ ಆಮದುಗಳ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ ಶೇ. 25ರಷ್ಟು ಸುಂಕವನ್ನು ಅಮೆರಿಕ … Continued

ಲೋಕಸಭೆಯಲ್ಲಿ ಪ್ರತಿಪಕ್ಷಗಳ ಭಾರಿ ಗದ್ದಲ: ಪ್ರಧಾನಿ ಮೋದಿ ಭಾಷಣ ರದ್ದು

ನವದೆಹಲಿ: ಲೋಕಸಭೆಯಲ್ಲಿ ಬುಧವಾರ ವಿಪಕ್ಷಗಳ ಭಾರಿ ಗದ್ದಲ ಮತ್ತು ಪ್ರತಿಭಟನೆಯಿಂದಾಗಿ, ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಬೇಕಿದ್ದ ಉತ್ತರ ಕೊನೆಯ ಕ್ಷಣದಲ್ಲಿ ರದ್ದಾಗಿದೆ. ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ. ನರಾವಣೆ ಅವರ ಪ್ರಕಟವಾಗದ ಆತ್ಮಚರಿತ್ರೆಯ ಆಂಶಗಳನ್ನು ಉಲ್ಲೇಖಿಸಲು ರಾಹುಲ್ ಗಾಂಧಿ ಅವರಿಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ವಿಪಕ್ಷಗಳು ಸರ್ಕಾರದ … Continued