ಹೈ-ಟೆನ್ಷನ್ ವಿದ್ಯುತ್‌ ಕಂಬ ಏರಿದ ವ್ಯಕ್ತಿ ; ಪ್ರಧಾನಿ ಮೋದಿ, ಮುಖ್ಯ ನ್ಯಾಯಾಧೀಶರೊಂದಿಗೆ ಮಾತನಾಡುವುದಾಗಿ ಪಟ್ಟು…

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ, ಬುಧವಾರ ದೆಹಲಿಯ ಯಮುನಾ ಖಾದರ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಹೈಟೆನ್ಷನ್ ವೋಲ್ಟೇಜ್ ವಿದ್ಯುತ್ ಕಂಬವನ್ನು ಏರಿದ ಘಟನೆ ನಡೆದಿದೆ. ಈ ಸಂಬಂಧ ಗೀತಾ ಕಾಲೋನಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿದರು. ನಂತರ ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ವ್ಯಕ್ತಿಯನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. … Continued

ಪ್ರಧಾನಿ ಮೋದಿ ಪದವಿ ವಿವಾದ ; ಸುಪ್ರೀಂ ಕೋರ್ಟಿನಲ್ಲಿ ಅರವಿಂದ ಕೇಜ್ರಿವಾಲಗೆ ಹಿನ್ನಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಶೈಕ್ಷಣಿಕ ಅರ್ಹತೆ ಕುರಿತು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಗುಜರಾತ್ ವಿಶ್ವವಿದ್ಯಾಲಯವು ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಗುಜರಾತ್‌ನ ವಿಚಾರಣಾ ನ್ಯಾಯಾಲಯವು ಹೊರಡಿಸಿದ ಸಮನ್ಸ್ ಅನ್ನು … Continued

ಮಾಲ್ಡೀವ್ಸ್‌ ಗೆ ಭೇಟಿ | ಮುಯಿಝು ಆಹ್ವಾನ ಸ್ವೀಕರಿಸಿದ ಪ್ರಧಾನಿ ಮೋದಿ : ರುಪೇ ಕಾರ್ಡ್‌ ಬಿಡುಗಡೆಗೆ ಒಪ್ಪಿಗೆ, ಬೃಹತ್ ಕರೆನ್ಸಿ ಸ್ವಾಪ್ ಒಪ್ಪಂದ

ನವದೆಹಲಿ : ಮಾಲ್ಡೀವ್ಸ್‌ಗೆ ಭೇಟಿ ನೀಡುವಂತೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಆಹ್ವಾನವನ್ನು ಪ್ರಧಾನಿ ನರೇಂದ್ರ ಮೋದಿ ಸ್ವೀಕರಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೋಮವಾರ ತಿಳಿಸಿದೆ. ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮಾತನಾಡಿ, ಪ್ರಧಾನಿ ಮೋದಿ ಅವರು ಮಾಲ್ಡೀವ್ಸ್‌ ಅಧ್ಯಕ್ಷರಿಂದ ಆಹ್ವಾನವನ್ನು ಸ್ವೀಕರಿಸಿದ ನಂತರ ದ್ವೀಪಸಮೂಹ ರಾಷ್ಟ್ರಕ್ಕೆ ಭೇಟಿ ನೀಡುವ ಆಹ್ವಾನ … Continued

ಚುನಾವಣಾ ಪ್ರಚಾರದ ವೇಳೆ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥ ; ಫೋನ್‌ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವದೆಹಲಿ: ಭಾನುವಾರ (ಸೆಪ್ಟೆಂಬರ್ 29) ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಪ್ರಚಾರದ ರ್ಯಾಲಿಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಖರ್ಗೆ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಯ ಮೂರನೇ ಹಂತದ ಮತದಾನಕ್ಕೆ ಮುನ್ನ ಕಥುವಾದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ, ಕಾಂಗ್ರೆಸ್ ಅಧ್ಯಕ್ಷ … Continued

ಪ್ರಧಾನಿ ಮೋದಿ ಭೇಟಿ ವೇಳೆ 297 ಪುರಾತನ ಕಲಾಕೃತಿಗಳನ್ನು ಭಾರತಕ್ಕೆ ಹಸ್ತಾಂತರಿಸಿದ ಅಮೆರಿಕ

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ವೇಳೆ ಅಮೆರಿಕವು 297 ಪುರಾತನ ವಸ್ತುಗಳನ್ನು ಭಾರತಕ್ಕೆ ಹಸ್ತಾಂತರಿಸಿದೆ. ಈ ಪುರಾತನ ವಸ್ತುಗಳನ್ನು ದೇಶದಿಂದ ಕಳ್ಳ ಸಾಗಣೆಯ ಮೂಲಕ ದೇಶದ ಹೊರಕ್ಕೆ ಸಾಗಿಸಲಾಗಿತ್ತು. ಮತ್ತು ನಂತರ ಅವುಗಳನ್ನು ವಶಪಡಿಸಿಕೊಳ್ಳಲಾಯಿತು. ಸಾಂಸ್ಕೃತಿಕ ಆಸ್ತಿಯ ಕಳ್ಳಸಾಗಣೆಯು ದೀರ್ಘಕಾಲದ ಸಮಸ್ಯೆಯಾಗಿದ್ದು, ಇದು ಇತಿಹಾಸದುದ್ದಕ್ಕೂ ಅನೇಕ ಸಂಸ್ಕೃತಿಗಳು ಮತ್ತು ದೇಶಗಳ ಮೇಲೆ ಪರಿಣಾಮ ಬೀರಿದೆ … Continued

3 ದಿನಗಳ ಅಮೆರಿಕ ಭೇಟಿಗೆ ಪ್ರಧಾನಿ ಮೋದಿ ಪಯಣ ; ಅಜೆಂಡಾದಲ್ಲಿ ಏನಿದೆ..?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ಅಮೆರಿಕ ಪ್ರವಾಸಕ್ಕೆ ತೆರಳಿದ್ದಾರೆ, ಅಲ್ಲಿ ಅವರು ಸೆಪ್ಟೆಂಬರ್ 21 ರಂದು ನಾಲ್ಕನೇ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಲಿದ್ದಾರೆ. ಕ್ವಾಡ್ ಶೃಂಗಸಭೆಯನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರ ತವರು ವಿಲ್ಮಿಂಗ್ಟನ್‌ನಲ್ಲಿ ಆಯೋಜಿಸಿದ್ದಾರೆ. ಅವರ ಮೂರು ದಿನಗಳ ಅಮೆರಿಕ … Continued

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರ ಆಕ್ಷೇಪಾರ್ಹ ಹೇಳಿಕೆ ಬಗ್ಗೆ ಖರ್ಗೆ ಪತ್ರದ ನಂತರ ಮೋದಿ ವಿರುದ್ಧ ಕಾಂಗ್ರೆಸ್‌ ಬಳಸಿದ ʼಅವಹೇಳನಕಾರಿ ಪದʼಗಳ ಬಗ್ಗೆ ಬಿಜೆಪಿ ಪತ್ರ

ನವದೆಹಲಿ: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರ ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಎರಡು ದಿನಗಳ ನಂತರ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ಬಳಸಿರುವ ಅವಹೇಳನಕಾರಿ ಪದಗಳನ್ನು ಪಟ್ಟಿ ಮಾಡಿ ಖರ್ಗೆ ಅವರಿಗೆ … Continued

ಪ್ರಧಾನಿ ನಿವಾಸಕ್ಕೆ ಹೊಸ ಅತಿಥಿ ಆಗಮನ; ಮುದ್ದಾದ ಅತಿಥಿಯ ವೀಡಿಯೊ ಹಂಚಿಕೊಂಡ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೆಹಲಿಯ ಲೋಕ್ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸಕ್ಕೆ “ಹೊಸ ಸದಸ್ಯರನ್ನು” ಸ್ವಾಗತಿಸಿದ್ದಾರೆ. ಮುದ್ದಾದ ಕರುವಿನೊಂದಿಗೆ ಸಮಯ ಕಳೆಯುತ್ತಿರುವ ವಿಡಿಯೊವನ್ನು ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಮನೆಗೆ ಆಗಮಿಸಿರುವ ಹೊಸ ಅತಿಥಿಯನ್ನು ಪರಿಚಯಿಸಿದ್ದಾರೆ. ಪ್ರಧಾನಿ ನಿವಾಸದಲ್ಲಿರುವ ಹಸು ಕರುವಿಗೆ ಜನ್ಮ ನೀಡಿದ್ದು ಅದರ ಹಣೆಯ ಮೇಲೆ ವಿಶಿಷ್ಟವಾದ ಬೆಳಕಿನ … Continued

ವೀಡಿಯೊ..| ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ಮನೆಯಲ್ಲಿ ಗಣಪತಿ ಪೂಜೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ನವದೆಹಲಿಯಲ್ಲಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರ ನಿವಾಸದಲ್ಲಿ ಬುಧವಾರ ಗಣೇಶ ಪೂಜೆಯಲ್ಲಿ ಪಾಲ್ಗೊಂಡರು. ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯ ನ್ಯಾಯಮೂರ್ತಿ ಮತ್ತು ಅವರ ಪತ್ನಿ ಕಲ್ಪನಾ ದಾಸ್ ಅವರೊಂದಿಗೆ ಪ್ರಾರ್ಥನೆಗಳನ್ನು ಸಲ್ಲಿಸಿದ್ದಾರೆ. ಗಣೇಶ ಚತುರ್ಥಿ ಆಚರಣೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ … Continued

ಪ್ರಧಾನಿ ಮೋದಿ ಬಗ್ಗೆ ಹೇಳಿಕೆ : ಕಾಂಗ್ರೆಸ್‌ ನಾಯಕ ತರೂರ್ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದತಿಗೆ ದೆಹಲಿ ಹೈಕೋರ್ಟ್ ನಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ನೀಡಿದ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ಶಶಿ ತರೂರ್ ವಿರುದ್ಧ ದಾಖಲಾದ ಮಾನನಷ್ಟ ಮೊಕದ್ದಮೆಯ ಮೊಕದ್ದಮೆಯನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಚೇಳಿಗೆ ಹೋಲಿಸಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ತರೂರ್ ಸಲ್ಲಿಸಿದ್ದ … Continued