“ಕಾಂಗ್ರೆಸ್ ಅನ್ನು ಎಂದಿಗೂ ನಂಬಲು ಸಾಧ್ಯವಿಲ್ಲ”: ಕಚ್ಚತೀವು ದ್ವೀಪವನ್ನು ಶ್ರೀಲಂಕಾಗೆ ಬಿಟ್ಟುಕೊಟ್ಟ ಇಂದಿರಾ ಗಾಂಧಿ ನಿರ್ಧಾರದ ಬಗ್ಗೆ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: 1970 ರ ದಶಕದಲ್ಲಿ ಆಯಕಟ್ಟಿನ ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಹಸ್ತಾಂತರಿಸುವ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಸರ್ಕಾರದ ನಿರ್ಧಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ ಪಕ್ಷವು ದೇಶದ ಸಮಗ್ರತೆ ಮತ್ತು ಹಿತಾಸಕ್ತಿಗಳನ್ನು “ದುರ್ಬಲಗೊಳಿಸುತ್ತಿದೆ” ಎಂದು ಆರೋಪಿಸಿದ್ದಾರೆ. 1974ರಲ್ಲಿ ಅಂದಿನ ಪ್ರಧಾನಿ ಇಂದಿರಾಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು … Continued

ವೀಡಿಯೊ..| ವಿಶ್ವದ ಅತಿ ಉದ್ದದ ದ್ವಿಪಥ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ : ಈ ಸೆಲಾ ಸುರಂಗದ ಬಗ್ಗೆ ಐದು ಸಂಗತಿಗಳು

ಗುವಾಹತಿ : ಪ್ರಧಾನಿ ನರೇಂದ್ರ ಮೋದಿ ಅವರು ಅರುಣಾಚಲ ಪ್ರದೇಶದಲ್ಲಿ ವಿಶ್ವದ ಅತಿ ಉದ್ದದ ದ್ವಿಪಥ ಸುರಂಗವನ್ನು (ಸೆಲಾ ಸುರಂಗ) ಶನಿವಾರ (ಮಾರ್ಚ್‌ 9) ಉದ್ಘಾಟಿಸಿದರು. ಸುಮಾರು 825 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಸೆಲಾ ಸುರಂಗವು ಇಂಜಿನಿಯರಿಂಗ್ ಕೌಶಲ್ಯದ ಅದ್ಭುತವಾಗಿದೆ. ಇದು ಅರುಣಾಚಲ ಪ್ರದೇಶದ ಬಲಿಪರಾ-ಚರಿದುವಾರ್-ತವಾಂಗ್ ರಸ್ತೆಯಲ್ಲಿ ಸೆಲಾ ಪಾಸ್ ಮೂಲಕ ತವಾಂಗ್‌ಗೆ ಸಂಪರ್ಕ … Continued

ವೀಡಿಯೊ…| ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಆನೆ ಸಫಾರಿ ಮಾಡಿದ ಪ್ರಧಾನಿ ಮೋದಿ

ಕಾಜಿರಂಗ ಉದ್ಯಾನವನ(ಅಸ್ಸಾಂ); ಪ್ರಧಾನಿ ಮೋದಿ ಎರಡು ದಿನಗಳ ಅಸ್ಸಾಂ ಪ್ರವಾಸದಲ್ಲಿದ್ದು, ಈ ಸಂದರ್ಭದಲ್ಲಿ 18,000 ಕೋಟಿ ರೂ.ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳನ್ನು ಅಸ್ಸಾಂ ಮತ್ತು ಕೇಂದ್ರ ಸರ್ಕಾರಗಳು ಕೈಗೊಳ್ಳುತ್ತಿವೆ. ಶನಿವಾರ ಬೆಳ್ಳಂಬೆಳಗ್ಗೆಯೇ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡುವ ಮೂಲಕ ತಮ್ಮ ಪ್ರವಾಸ ಆರಂಭಿಸಿದ ಪ್ರಧಾನಿ … Continued

ಫೆಬ್ರವರಿ 14 ರಂದು ಯುಎಇನಲ್ಲಿ ಮೊದಲ ಹಿಂದೂ ದೇವಾಲಯ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 13 ರಿಂದ 14 ರ ವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಅಧಿಕೃತವಾಗಿ ಭೇಟಿ ನೀಡಲಿದ್ದಾರೆ, ಅವರು ಅಬುಧಾಬಿಯಲ್ಲಿ ದೇಶದ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. ಫೆಬ್ರವರಿ 14 ರಂದು ಸ್ವಾಮಿ ಈಶ್ವರಚರಣದಾs ಮತ್ತು ಸ್ವಾಮಿ ಬ್ರಹ್ಮವಿಹಾರಿದಾs ಅವರ ನಿರ್ದೇಶನದ ಮೇರೆಗೆ ಪ್ರಧಾನಿ ಮೋದಿ ಅವರು … Continued

‘ನಾನು ಶ್ರೀರಾಮನ ಬಳಿ ಕ್ಷಮೆಯಾಚಿಸುತ್ತೇನೆ, ಯಾಕೆಂದರೆ…’ : ಅಯೋಧ್ಯೆ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ನಂತರ ಪ್ರಧಾನಿ ಮೋದಿ

ಅಯೋಧ್ಯಾ : ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಜನವರಿ 22) ಅಯೋಧ್ಯೆಯಲ್ಲಿ ರಾಮಮಂದಿರವನ್ನು ಉದ್ಘಾಟಿಸಿದರು ಮತ್ತು ಮಂದಿರ ನಿರ್ಮಾಣವು “ಭಾರತೀಯ ಸಮಾಜದಲ್ಲಿ ತಾಳ್ಮೆ, ಶಾಂತಿ ಮತ್ತು ಸೌಹಾರ್ದತೆಯ ಸಂಕೇತ” ಎಂದು ಹೇಳಿದರು. ಇದು ಕೇವಲ ಒಂದು ಕ್ಷಣವಲ್ಲ ಎಂದ ಅವರು ಇದು ನಮ್ರತೆಯ ಗೆಲುವು. ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠೆಯನ್ನು ಪ್ರಧಾನಿ ಮೋದಿ … Continued

ಅಯೋಧ್ಯೆ ರಾಮ ಮಂದಿರ ಕುರಿತ ಆರು ಅಂಚೆಚೀಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಅಯೋಧ್ಯೆ : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಜನವರಿ 18) ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ಮಂದಿರದ ಸ್ಮರಣಾರ್ಥ ಅಂಚೆ ಚೀಟಿಗಳು ಮತ್ತು ವಿಶ್ವದಾದ್ಯಂತ ವಿವಿಧ ದೇಶಗಳು ಬಿಡುಗಡೆ ಮಾಡಿರುವ ಭಗವಾನ್ ರಾಮನಿಗೆ ಸಮರ್ಪಿತ ಅಂಚೆಚೀಟಿಗಳ ಪುಸ್ತಕವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಬಿಡುಗಡೆ ಮಾಡಿದರು. ಅಂಚೆಚೀಟಿಗಳ ವಿನ್ಯಾಸದ ಅಂಶಗಳಲ್ಲಿ ರಾಮ ಮಂದಿರ, … Continued

ಅಯೋಧ್ಯಾ ರಾಮ ಮಂದಿರ : ಜನವರಿ 22 ರಂದು ‘ಪ್ರಾಣ ಪ್ರತಿಷ್ಠೆ’ ಕಾರ್ಯಕ್ರಮಕ್ಕೆ ತಡೆ ಕೋರಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ

ಪ್ರಯಾಗರಾಜ್‌ : ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರಂದು ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಿಷೇಧಿಸುವಂತೆ ಕೋರಿ ಅಲಾಹಾಬಾದ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ. ಉತ್ತರ ಪ್ರದೇಶದ ಗಾಜಿಯಾಬಾದ್ ನಿವಾಸಿ ಭೋಲಾ ದಾಸ್ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. 2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ. … Continued

ಲಕ್ಷದ್ವೀಪ ಹೊಗಳಿದ ಇಸ್ರೇಲ್‌ : ಉಪ್ಪು ನೀರು ಶುದ್ಧೀಕರಿಸುವ ಯೋಜನೆ ಕೆಲಸ ತಕ್ಷಣವೇ ಪ್ರಾರಂಭಿಸ್ತೇವೆ ಎಂದ ದೇಶ

ನವದೆಹಲಿ: ಕಳೆದ ವರ್ಷ ತನ್ನ ತಂಡವು ಸುಂದರವಾದ ದ್ವೀಪಸಮೂಹಕ್ಕೆ ಭೇಟಿ ನೀಡಿದ ನಂತರ ಲಕ್ಷದ್ವೀಪದಲ್ಲಿ ನಿರ್ಲವಣೀಕರಣ ಕಾರ್ಯಕ್ರಮವನ್ನು ಪ್ರಾರಂಭಿಸಲು ಸಿದ್ಧವಾಗಿದೆ ಎಂದು ಇಸ್ರೇಲ್ ಸೋಮವಾರ ಹೇಳಿದೆ. ಭಾರತದಲ್ಲಿನ ಇಸ್ರೇಲ್ ರಾಯಭಾರ ಕಚೇರಿಯು ಯೋಜನೆಯ ಕೆಲಸವನ್ನು ತ್ವರಿತವಾಗಿ ಪ್ರಾರಂಭಿಸಲು ತನ್ನ ಉತ್ಸುಕತೆಯನ್ನು ವ್ಯಕ್ತಪಡಿಸಿತು. X ನಲ್ಲಿನ ಪೋಸ್ಟ್‌ನಲ್ಲಿ, ಇಸ್ರೇಲ್ ರಾಯಭಾರ ಕಚೇರಿಯು, “ಕಳೆದ ವರ್ಷ ನಾವು ನಿರ್ಲವಣೀಕರಣ … Continued

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ: ಕಾಂಗ್ರೆಸ್ ನಾಯಕ ಪವನ್‌ ಖೇರಾ ವಿರುದ್ಧದ ಪ್ರಕರಣ ರದ್ದತಿಗೆ ಸುಪ್ರೀಂಕೋರ್ಟ್‌ ನಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣಗಳನ್ನು ರದ್ದುಪಡಿಸುವಂತೆ ಕೋರಿ ಕಾಂಗ್ರೆಸ್‌ ನಾಯಕ ಪವನ್‌ ಖೇರಾ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಮಾಧ್ಯಮಗೋಷ್ಠಿಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಮಾನಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ನ್ಯಾಯಮೂರ್ತಿಗಳಾದ ಬಿ.ಆರ್‌. ಗವಾಯಿ ಮತ್ತು … Continued

ವೀಡಿಯೊ | ಪ್ರಧಾನಿ ನಿವಾಸದ ಬಳಿ ಪಾದಚಾರಿ ಮಾರ್ಗದಲ್ಲಿ ʼಪದ್ಮಶ್ರೀʼ ಪ್ರಶಸ್ತಿ ಇಟ್ಟು ಹೋದ ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟು ಬಜರಂಗ ಪುನಿಯಾ

ನವದೆಹಲಿ: ಬ್ರಿಜ್ ಭೂಷಣ ಶರಣ್ ಸಿಂಗ್ ಅವರ ಆಪ್ತ ಸಂಜಯ ಸಿಂಗ್ ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ ಕರ್ತವ್ಯ ಪಥದ ಪ್ರಧಾನಿ ನಿವಾಸದ ಸಮೀಪದ ಪಾದಚಾರಿ ಮಾರ್ಗದಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಇಟ್ಟು ಹೋಗಿದ್ದಾರೆ. ಪದ್ಮಶ್ರೀಯನ್ನು ಕರ್ತವ್ಯ ಪಥದಲ್ಲಿ ತೊರೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪುನಿಯಾ, … Continued