ಪ್ರಧಾನಿ ಮೋದಿ ಭೇಟಿಯಾದ ಶಾಲಾ ಸಹಪಾಠಿ ; ಭೂ ವಿವಾದ ಪ್ರಕರಣದ ತನಿಖೆ ಸಿಬಿಐಗೆ ವಹಿಸುವಂತೆ ಮನವಿ

ಮುಂಬೈ: ದಶಕಗಳ ಹಿಂದಿನ ಭೂ ವಿವಾದದಲ್ಲಿ ಮಧ್ಯಪ್ರವೇಶಿಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಕೋರಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿರುವ 81 ವರ್ಷದ ಮುಂಬೈ ಮೀರಾ ರೋಡ್ ನಿವಾಸಿ ಹಾಗೂ ಅವರ ಶಾಲಾ ಸಹಪಾಠಿ ಅಸ್ಗರಲಿ ವೋಹ್ರಾ ಅವರು ಈ ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ … Continued

ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯಗೊಳಿಸಲು ಸರ್ಕಾರ ಮನವೊಲಿಸಿದ್ದು ಹೇಗೆ..? ಮೋದಿ ಸಂದೇಶ, ಮಧ್ಯರಾತ್ರಿಯ 3 ಮಹತ್ವದ ಭರವಸೆಗಳು….

ನವದೆಹಲಿ: ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರು ಕೇಂದ್ರ ಸರ್ಕಾರದಿಂದ ಭರವಸೆಗಳು ದೊರೆತ ಹಿನ್ನೆಲೆಯಲ್ಲಿ 26 ದಿನಗಳ ಕಾಲ ನಡೆಸಿದ್ದ ಉಪವಾಸ ಸತ್ಯಾಗ್ರಹವನ್ನು ಗುರುವಾರ ರಾತ್ರಿ ಅಂತ್ಯಗೊಳಿಸಿದ್ದಾರೆ. ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ಪ್ರಧಾನಮಂತ್ರಿ ಕಚೇರಿಯ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರ ಸಮ್ಮುಖದಲ್ಲಿ ಅವರು ಗುರುವಾರ … Continued

ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆಗೆ ಪ್ರಧಾನಿ ಮೋದಿಗೆ ಅಧಿಕೃತ ಆಹ್ವಾನ ನೀಡಿದ ಅಧ್ಯಕ್ಷ ಪೆಜೆಶ್ಕಿಯಾನ್

ತೆಹ್ರಾನ್/ನವದೆಹಲಿ: ಕಳೆದ ಫೆಬ್ರವರಿ 28 ರಂದು ಅಮೆರಿಕ-ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಹತ್ಯೆಯಾಗಿದ್ದ ಇರಾನ್‌ನ ಸುಪ್ರೀಂ ಲೀಡರ್ ಆಯತೊಲ್ಲಾ ಸಯ್ಯದ್ ಅಲಿ ಖಮೇನಿ ಅವರ ಸರ್ಕಾರಿ ಅಂತ್ಯಸಂಸ್ಕಾರ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಧಿಕೃತ ಆಹ್ವಾನ ನೀಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿದ್ದ ತೀವ್ರ ಸಂಘರ್ಷದ ಕಾರಣದಿಂದಾಗಿ, … Continued

ಬೆಂಗಳೂರು : ಪ್ರಧಾನಿ ಮೋದಿ ಸಂಚಾರದ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ…!

ಬೆಂಗಳೂರು: ನಗರದ ಹೊರವಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಾತಗುಣಿ ಬಳಿ ಪ್ರಧಾನಿ ಮೋದಿ ತೆರಳುವ ಮಾರ್ಗದ ಬಳಿ ನಿಯಮಿತ ಭದ್ರತಾ ತಪಾಸಣೆಯ ಸಮಯದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ವೀಡಿಯೊ…| ಮೋದಿ ಐತಿಹಾಸಿಕ ಸಾಧನೆ: ಅಸ್ಸಾಂನ ವಿಮಾನದ ತುರ್ತು ಭೂಸ್ಪರ್ಶ ಫೆಸಿಲಿಟಿಯಲ್ಲಿ ಲ್ಯಾಂಡ್‌ ಆದ ಪ್ರಧಾನಿ

ಮೊರಾನ್ (ಅಸ್ಸಾಂ): ಅಸ್ಸಾಂ ವಿಧಾನಸಭಾ ಚುನಾವಣೆಯ ಹೊಸ್ತಿಲಿನಲ್ಲಿ ರಾಜ್ಯಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಈಶಾನ್ಯ ಭಾರತದ ಮೊದಲ ತುರ್ತು ಭೂಸ್ಪರ್ಶ ಸೌಲಭ್ಯಕ್ಕೆ (emergency landing facility) ‘C-130J’ ವಿಮಾನದ ಮೂಲಕ ಬಂದಿಳಿಯುವ ಮೂಲಕ ತಮ್ಮ ಒಂದು ದಿನದ ಪ್ರವಾಸವನ್ನು ಆರಂಭಿಸಿದರು. ಚಬುವಾ ವಾಯುನೆಲೆಯಿಂದ ಹೊರಟ ಪ್ರಧಾನಿಯವರು, ರಾಷ್ಟ್ರೀಯ ಹೆದ್ದಾರಿ-37ರ ಮೊರಾನ್ ಬೈಪಾಸ್‌ನಲ್ಲಿ … Continued

ಪಾಕಿಸ್ತಾನ, ಪಾಕ್‌ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲಿನ ಕ್ಷಿಪಣಿ ದಾಳಿಗಳ ವೀಡಿಯೊ ಹಂಚಿಕೊಂಡ ಭಾರತೀಯ ಸೈನ್ಯ | ವೀಕ್ಷಿಸಿ

ನವದೆಹಲಿ: ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ಬುಧವಾರ ಬೆಳಗಿನ ಜಾವ ನಡೆಸಿದ ದಾಳಿಯ ವೀಡಿಯೊಗಳನ್ನು ಭಾರತೀಯ ಸೇನೆ ಬಿಡುಗಡೆ ಮಾಡಿದೆ. ಇದು ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್‌ನಂತಹ ಭಯೋತ್ಪಾದಕ ಗುಂಪುಗಳು ಭಯೋತ್ಪಾದಕರ ತರಬೇತಿಗೆ ಬಳಸುತ್ತಿದ್ದ ಸ್ಥಳಗಳ ಮೇಲೆ ನಿಖರವಾದ ದಾಳಿಗಳನ್ನು ನಡೆಸಿದೆ. ದಾಳಿಯ ನಂತರ, ಭಾರತೀಯ ಸೇನೆಯ ಅಧಿಕೃತ ಹ್ಯಾಂಡಲ್ … Continued

ವೀಡಿಯೊ..| ಸಮಾರಂಭದಲ್ಲಿ ಪ್ರಧಾನಿ ಮೋದಿ ಪಾದ ಮುಟ್ಟಿ ನಮಸ್ಕರಿಸಲು ಮುಂದಾದ ಬಿಹಾರ ಸಿಎಂ ನಿತೀಶಕುಮಾರ : ಮೋದಿ ಏನು ಮಾಡಿದ್ರು ನೋಡಿ

ದರ್ಭಾಂಗ : ಬಿಹಾರದ ದರ್ಭಾಂಗದಲ್ಲಿ ಬುಧವಾರ ನಡೆದ ಕಾರ್ಯಕ್ರಮವೊಂದರಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ಪ್ರಧಾನಿ ನರೇಂದ್ರ ಮೋದಿಯವರ ಪಾದಗಳನ್ನು ಮುಟ್ಟಿ ನಮಸ್ಕರಿಸಲು ಮುಂದಾಗಿರುವುದು ಕಂಡುಬಂದಿದೆ. ಬಿಹಾರ ಮುಖ್ಯಮಂತ್ರಿ ಪ್ರಧಾನಿ ಬಳಿಗೆ ಬರುತ್ತಿದ್ದಂತೆ ಅವರ ಪಾದ ಮುಟ್ಟಿ ಮುಂದಾಗುತ್ತಾರೆ. ಆದಾಗ್ಯೂ, ಪ್ರಧಾನಿ ಮೋದಿ ಅವರನ್ನು ನಡುವೆ ತಡೆಯುತ್ತಾರೆ, ನಂತರ ಅವರು ಅವರೊಂದಿಗೆ ಹಸ್ತಲಾಘವ ಮಾಡುತ್ತಾರೆ.ಈ ಕ್ಷಣದ … Continued

ಜಾತ್ಯತೀತ ನಾಗರಿಕ ಸಂಹಿತೆ ಕಾಲದ ಅಗತ್ಯ : ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಏಕರೂಪ ನಾಗರಿಕ ಸಂಹಿತೆ ಬಗ್ಗೆ ಬಲವಾಗಿ ಪ್ರತಿಪಾದಿಸಿದ ಪ್ರಧಾನಿ ಮೋದಿ

ನವದೆಹಲಿ : ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ದೇಶಕ್ಕೆ ಏಕರೂಪ ನಾಗರಿಕ ಸಂಹಿತೆ ಅಗತ್ಯದ ಬಗ್ಗೆ ಬಲವಾಗಿ ಪ್ರತಿಪಾದನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶವನ್ನು ವಿಭಜಿಸುವ ಕಾನೂನುಗಳಿಗೆ ಆಧುನಿಕ ಸಮಾಜದಲ್ಲಿ ಸ್ಥಾನವಿಲ್ಲ ಮತ್ತು ಅದನ್ನು ತೆಗೆದುಹಾಕಬೇಕು ಎಂದು ಹೇಳಿದ್ದಾರೆ. “ಸುಪ್ರೀಂಕೋರ್ಟ್ ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಪದೇ ಪದೇ ಚರ್ಚೆಗಳನ್ನು ನಡೆಸಿದೆ, ಆದೇಶಗಳನ್ನು ನೀಡಿದೆ, … Continued

ವಯನಾಡು ಭೂಕುಸಿತದಲ್ಲಿ 24 ಮಂದಿ ಸಾವು; ನಾಲ್ಕು ಗ್ರಾಮಗಳಲ್ಲಿ ನೂರಾರು ಮಂದಿ ಸಿಲುಕಿರುವ ಶಂಕೆ

ವಯನಾಡು : ಭಾರೀ ಮಳೆಯ ನಡುವೆ ಮಂಗಳವಾರ ಬೆಳಿಗ್ಗೆ ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತ ಸಂಭವಿಸಿ ಕನಿಷ್ಠ 24 ಜನರು ಸಾವಿಗೀಡಾಗಿದ್ದಾರೆ ಮತ್ತು ನೂರಾರು ಜನರು ಸಿಲುಕಿರುವ ಆತಂಕವಿದೆ ಎಂದು ವರದಿಯಾಗಿದೆ. ಎನ್‌ಡಿಆರ್‌ಎಫ್ ಮತ್ತು ಸೇನೆ ಸೇರಿದಂತೆ ಹಲವು ಏಜೆನ್ಸಿಗಳನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ … Continued

ಮೋದಿ ಸರ್ಕಾರ 3.0 : ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ -ಸಂಪೂರ್ಣ ಪಟ್ಟಿ ಇಲ್ಲಿದೆ..

ನವದೆಹಲಿ: ನವದೆಹಲಿ: ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿ ತಮ್ಮ ಸತತ ಮೂರನೇ ಇನ್ನಿಂಗ್ಸ್‌ ಅನ್ನು ಆರಂಭಿಸಿದ ಬೆನ್ನಲ್ಲೇ ನೂತನ ಸಂಪುಟ ಸಹೋದ್ಯೋಗಿಗಳಿಗೆ ಇಂದು (ಸೋಮವಾರ) ಖಾತೆ ಹಂಚಿಕೆ ಮಾಡಿದ್ದಾರೆ. ಪ್ರಧಾನಿ ಮೋದಿಯವರ ಸಚಿವರ ತಂಡದಲ್ಲಿ 30 ಕ್ಯಾಬಿನೆಟ್ ಸಚಿವರು, ಐದು ಸ್ವತಂತ್ರ ಉಸ್ತುವಾರಿ ರಾಜ್ಯ ಸಚಿವರು ಮತ್ತು 36 ರಾಜ್ಯ ಸಚಿವರಿದ್ದಾರೆ. ಯಾರಿಗೆ ಯಾವ … Continued