ಮುಂಬೈ | 17 ಮಕ್ಕಳನ್ನು ಒತ್ತೆ ಇರಿಸಿಕೊಂಡಿದ್ದ ವ್ಯಕ್ತಿ ಪೊಲೀಸರ ಗುಂಡಿಗೆ ಬಲಿ ; ಮಕ್ಕಳ ರಕ್ಷಣೆ

ಮುಂಬೈ: ಮುಂಬೈನ ಪೊವಾಯಿ ಪ್ರದೇಶದಲ್ಲಿ ಗುರುವಾರ 17 ಮಕ್ಕಳನ್ನು ಒತ್ತೆ ಇರಿಸಿದ್ದ ಆರೋಪಿ ರೋಹಿತ್ ಆರ್ಯ ಎಂಬಾತ, ಪೊಲೀಸರೊಂದಿಗಿನ ಗುಂಡಿನ ಚಕಮಕಿಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಪೊಲೀಸರು ಕಾರ್ಯಾಚರಣೆಯ ಮೂಲಕ ಒತ್ತೆಯಲ್ಲಿದ್ದ ಎಲ್ಲಾ ಮಕ್ಕಳನ್ನು ಯಾವುದೇ ತೊಂದರೆಯಿಲ್ಲದೆ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಸ್ಟುಡಿಯೋದಲ್ಲಿ ನಾಟಕೀಯ ಘಟನೆ ಈ ನಾಟಕೀಯ ಘಟನೆಯು ‘ಆರ್.ಎ. ಸ್ಟುಡಿಯೋಸ್’ (RA Studios) ಎಂಬ … Continued

ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ : ಪೊಲೀಸರ ಗುಂಡೇಟಿಗೆ ಆರೋಪಿ ಸಾವು

ಹುಬ್ಬಳ್ಳಿ: ನಗರದಲ್ಲಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿ ನಂತರ ಆಕೆಯನ್ನು ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಎನ್‌ಕೌಂಟರ್‌ನಲ್ಲಿ ಸಾವಿಗೀಡಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಐದು ವರ್ಷದ ಬಾಲಕಿಯ ಕೊಲೆ ಪ್ರಕರಣದ ಆರೋಪಿ ಪತ್ತೆಗಾಗಿ ಹುಬ್ಬಳ್ಳಿ ಪೊಲೀಸರು ಹಲವು ತಂಡಗಳನ್ನು ರಚಿಸಿದ್ದರು. ಆರೋಪಿ ಬಿಹಾರ ಮೂಲದ ರಿತೇಶಕುಮಾರ ಎನ್ನಲಾಗಿದ್ದು, ಈತ … Continued

ವೀಡಿಯೊ…| ಅತ್ಯಾಚಾರ ಸಂತ್ರಸ್ತೆಯ ಹತ್ಯೆ ಪ್ರಕರಣ ; ಪ್ರಮುಖ ಆರೋಪಿಯನ್ನು ಸುತ್ತುವರೆದು ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು, ವೀಡಿಯೊ ವೈರಲ್

ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಮಾಹೆವಾಘಾಟ್ ಪ್ರದೇಶದ ಹಳ್ಳಿಯೊಂದರಲ್ಲಿ 19 ವರ್ಷದ ಅತ್ಯಾಚಾರ ಸಂತ್ರಸ್ತೆಯ ಕೊಲೆಯ ಪ್ರಮುಖ ಆರೋಪಿಯನ್ನು ಶನಿವಾರ ಎನ್‌ಕೌಂಟರ್ ನಡೆಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪರಾಧ ಎಸಗಿದಾಗ ಜಾಮೀನಿನ ಮೇಲೆ ಹೊರಗಿದ್ದ ಪವನ್ ನಿಶಾದ್ ಎಂಬ ಆರೋಪಿ ತನ್ನನ್ನು ಸುತ್ತುವರಿದಿದ್ದ ಪೊಲೀಸರ ಮೇಲೆ ಗುಂಡು ಹಾರಿಸಿದ ನಂತರ ಪ್ರತಿಯಾಗಿ ಗುಂಡು ಹಾರಿಸಿದ … Continued

ರೈಲಿನಲ್ಲಿ ಮಹಿಳಾ ಪೋಲೀಸ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ : ಪೊಲೀಸರಿಗೆ ಬೇಕಾಗಿದ್ದ ಆರೋಪಿ ಎನ್‌ಕೌಂಟರ್‌ನಲ್ಲಿ ಸಾವು

ಅಯೋಧ್ಯಾ : ಕಳೆದ ತಿಂಗಳು ರೈಲು ಕಂಪಾರ್ಟ್‌ಮೆಂಟ್‌ನಲ್ಲಿ “ರಕ್ತದ ಮಡುವಿನಲ್ಲಿ” ಬಿದ್ದಿದ್ದ ಮಹಿಳಾ ಪೋಲೀಸ್ ಮೇಲೆ ದಾಳಿ ಮಾಡಿದ ಆರೋಪದ ಇಬ್ಬರು ವ್ಯಕ್ತಿಗಳಲ್ಲಿ ಒಬ್ಬರು ಶುಕ್ರವಾರ ಅಯೋಧ್ಯೆಯಲ್ಲಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ. ಎನ್‌ಕೌಂಟರ್ ವೇಳೆ ಇತರ ಇಬ್ಬರು ವ್ಯಕ್ತಿಗಳಿಗೆ ಗುಂಡು ತಗುಲಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತರ ಪ್ರದೇಶ ಪೊಲೀಸ್ ಮತ್ತು ಲಕ್ನೋ ವಿಶೇಷ ಕಾರ್ಯಪಡೆ … Continued