ವಿಜಯಪುರ | ಮನಗೂಳಿ ಕೆನರಾ ಬ್ಯಾಂಕಿನಲ್ಲಿ ಭಾರಿ ಕಳ್ಳತನ ; 59 ಕೆಜಿ ಚಿನ್ನಾಭರಣ ದೋಚಿದ ಕಳ್ಳರು…

ವಿಜಯಪುರ:   ಜಿಲ್ಲೆಯ ಮನಗೂಳಿ ಕೆನರಾ ಬ್ಯಾಂಕಿನಿಂದ ಕಳ್ಳರು 59 ಕೆಜಿ ಚಿನ್ನವನ್ನು ದೋಚಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಬ್ಯಾಂಕಿನಿಂದ ಸಾಲ ಪಡೆದ ಜನರು ಚಿನ್ನವನ್ನು ಠೇವಣಿ ಇಟ್ಟಿದ್ದರು ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ಬಿ ನಿಂಬರ್ಗಿ ಸುದ್ದಿಗಾರರಿಗೆ ತಿಳಿಸಿದ್ದಾರೆ. 59 ಕೆಜಿ ಚಿನ್ನ ಕಳುವಾಗಿದೆ ಎಂದು ಬ್ಯಾಂಕ್ ಅಧಿಕಾರಿಗಳು ತೀರ್ಮಾನಕ್ಕೆ … Continued

ಪೊಲೀಸರು ಮೂವರನ್ನು ರಸ್ತೆಯಲ್ಲಿ ಕೂಡ್ರಿಸಿ ಲಾಠಿಯಿಂದ ಥಳಿಸುತ್ತಿರುವ ವೀಡಿಯೊ ವೈರಲ್ ; ಪೊಲೀಸ್‌ ಅಮಾನತು

ಆಂಧ್ರಪ್ರದೇಶದ (Andhra Pradesh) ಗುಂಟೂರು ಜಿಲ್ಲೆಯ ಐತಾನಗರದಲ್ಲಿ ಕಾನ್‌ಸ್ಟೆಬಲ್ ಚಿರಂಜೀವಿ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ಪೊಲೀಸರು ಮೂವರಿಗೆ ನಡು ರಸ್ತೆಯಲ್ಲಿ ಸಾರ್ವಜನಿಕವಾಗಿ ಲಾಠಿಯಿಂದ ಮನಸೋ ಇಚ್ಛೆ ಥಳಿಸಿದ್ದಾರೆ. ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ಪೊಲೀಸರು ಸಾರ್ವಜನಿಕವಾಗಿ ಆರೋಪಿಗಳಿಗೆ ಲಾಠಿಯಿಂದ ಹೊಡೆದು ಶಿಕ್ಷೆ ನೀಡಿರುವ ವೀಡಿಯೊ ವೈರಲ್‌ ಆದ ನಂತರ ಇದು ವಿವಾದಕ್ಕೆ ಕಾರಣವಾಗಿದ್ದು, ಅದಕ್ಕೆ … Continued

ಬೆಂಗಳೂರು | ಪುನರ್ವಸತಿ ಕೇಂದ್ರದಲ್ಲಿ ರೋಗಿಗೆ ದೊಣ್ಣೆಯಿಂದ ಅಮಾನುಷವಾಗಿ ಹಲ್ಲೆ : ವೀಡಿಯೊ ವೈರಲ್‌

ಬೆಂಗಳೂರು : ಬೆಂಗಳೂರಿನ ಬಳಿಯ ಪುನರ್ವಸತಿ ಕೇಂದ್ರವೊಂದರಲ್ಲಿ ರೋಗಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದ್ದು, ಅದರ ಆಘಾತಕಾರಿ ವೀಡಿಯೊವೊಂದು ಹೊರಹೊಮ್ಮಿದೆ. ಸಿಸಿಟಿವಿ ದೃಶ್ಯಗಳಲ್ಲಿ ನಾಲ್ವರು ಇತರರ ಸಮ್ಮುಖದಲ್ಲಿ ವ್ಯಕ್ತಿಯೊಬ್ಬ ಕೋಣೆಯೊಳಗೆ ಕೋಲಿನಿಂದ ರೋಗಿಯನ್ನು ಹೊಡೆಯುತ್ತಿರುವುದನ್ನು ತೋರಿಸಲಾಗಿದೆ. ರೋಗಿಯನ್ನು ಇಬ್ಬರು ಎಳೆದೊಯ್ದಿರುವುದು ಸಹ ಕಂಡುಬಂದಿದೆ. ಬೆಂಗಳೂರಿನಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ನೆಲಮಂಗಲದಲ್ಲಿರುವ ಖಾಸಗಿ … Continued

ಅಪರೂಪದ 11 ಹಲ್ಲಿಗಳ ಕಳ್ಳಸಾಗಾಣಿಕೆಗೆ ಯತ್ನಿಸಿ ಸಿಕ್ಕಿಬಿದ್ದ ಗ್ಯಾಂಗ್‌ ; ಒಂದು ಹಲ್ಲಿಗೆ 60 ಲಕ್ಷ ರೂ.ಗಳಂತೆ ಮಾರಾಟಕ್ಕೆ ಯತ್ನ..!

ಗುವಾಹತಿ : ಅಸ್ಸಾಂನ ದಿಬ್ರುಗಢದಲ್ಲಿ ಪೊಲೀಸರು ಶುಕ್ರವಾರ 11 ಅಪರೂಪದ ಟೋಕೆ ಗೆಕ್ಕೊ ಹಲ್ಲಿಗಳನ್ನು ವಶಪಡಿಸಿಕೊಂಡಿದ್ದು, ಮೂವರು ಕಳ್ಳಸಾಗಣೆದಾರರನ್ನು ಬಂಧಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಅಡಿಯಲ್ಲಿ ಟೋಕೆ ಗೆಕ್ಕೊಗಳನ್ನು ಹೆಚ್ಚು ಅಳಿವಿನಂಚಿನಲ್ಲಿವ ಜೀವಿಗಳೆಂದು ಪಟ್ಟಿ ಮಾಡಲಾಗಿರುವುದರಿಂದ ಅವುಗಳ ರಫ್ತು ನಿಷೇಧಿಸಲಾಗಿದೆ. ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದರೆ, ಗರಿಷ್ಠ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ … Continued

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ ; ದರೋಡೆಕೋರನ ಕಾಲಿಗೆ ಗುಂಡೇಟು

ಗದಗ: ಪೊಲೀಸರ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ದರೋಡೆಕೋರನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ​​ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಮತ್ತು ಡೋಣಿ ಗ್ರಾಮದಲ್ಲಿ ನಡೆದಿದೆ. ಆರೋಪಿ ಜಯಸಿಂಹ ಮೊಡಕೆರ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಆರೋಪಿ ಜಯಸಿಂಹ ಮೊಡಕೆರನನ್ನು ಕರೆತರುವಾಗ ಈ ಘಟನೆ ನಡೆದಿದೆ. ಎಂದು ಹೇಳಲಾಗಿದ್ದು, … Continued

ಬಾಯ್‌ ಫ್ರೆಂಡ್‌ ಜೊತೆ ಇರಲು ಪುಟ್ಟ ಮಗನನ್ನು ಬಿಟ್ಟುಹೋದ ತಾಯಿ ; ಫ್ಲಾಟ್‌ ನಲ್ಲಿ 2 ವರ್ಷಗಳ ಕಾಲ ಏಕಾಂಗಿಯಾಗಿ ಬದುಕಿದ ಬಾಲಕ…!

ಆಘಾತಕಾರಿ ಘಟನೆಯೊಂದರಲ್ಲಿ ತಾಯಿಯೊಬ್ಬಳು ತನ್ನ ಬಾಯ್‌ ಫ್ರೆಂಡ್‌ ಜೊತೆ ವಾಸಿಸಲು ತನ್ನ ಸಣ್ಣ ಮಗನನ್ನು ಒಂಟಿಯಾಗಿ ಬಿಟ್ಟು ಹೋಗಿದ್ದಾಳೆ. ಘಟನೆ ಬೆಳಕಿಗೆ ಬಂದಾಗ ಒಂಬತ್ತು ವರ್ಷದವನಾಗಿದ್ದ ಬಾಲಕ ಎರಡು ವರ್ಷಗಳ ಕಾಲ ಶೀತಲ ಫ್ಲಾಟ್‌ನಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ಎಂದು ಹೇಳಲಾಗಿದೆ..! ಈ ಘಟನೆ ಫ್ರಾನ್ಸ್‌ನ ಸಣ್ಣ ಪಟ್ಟಣವಾದ ನೆರ್ಸಾಕ್‌ ಎಂಬಲ್ಲಿ ನಡೆದಿದೆ. 2020 ರಿಂದ 2022 … Continued

ತಿ.ನರಸೀಪುರ : ಇಬ್ಬರು ಮೊಮ್ಮಕ್ಕಳು- ಅಜ್ಜ ನೀರು ಪಾಲು

ಮೈಸೂರು: ಕಾವೇರಿ ನದಿಯಲ್ಲಿ ಇಬ್ಬರು ಮೊಮ್ಮಕ್ಕಳು ಮತ್ತು ಅಜ್ಜ ನೀರು ಪಾಲಾದ ಘೋರ ದುರಂತ ಮೈಸೂರಿನ ಜಿಲ್ಲೆಯ ತಿ.ನರಸೀಪುರ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ನದಿ ನೀರಿನಲ್ಲಿ ಮುಳುಗುತ್ತಿದ್ದ ಮೊಮ್ಮಕ್ಕಳ ರಕ್ಷಣೆಗೆ ಅಜ್ಜ ಚೌಡಯ್ಯ ಇಳಿದಿದ್ದರು. ಆದರೆ ಇಬ್ಬರು ಮೊಮ್ಮಕ್ಕಳ ಜೊತೆಗೆ ಚೌಡಯ್ಯ ಕೂಡ ನೀರುಪಾಲಾಗಿದ್ದಾರೆ ಎನ್ನಲಾಗಿದೆ. ಮೃತರನ್ನು ತಿರುಮಕೂಡಲಿನ ನಿವಾಸಿಗಳಾದ ಚೌಡಯ್ಯ (70) … Continued

ಕ್ರಿಪ್ಟೋಕರೆನ್ಸಿ ವಂಚನೆ ಪ್ರಕರಣ | ಖ್ಯಾತ ನಟಿಯರಾದ ತಮನ್ನಾ, ಕಾಜಲ್ ಅಗರ್ವಾಲ್ ತನಿಖೆಗೆ ಪೊಲೀಸರ ನಿರ್ಧಾರ : ವರದಿ

ಪುದುಚೇರಿಯಲ್ಲಿ ನಡೆದ ಕ್ರಿಪ್ಟೋಕರೆನ್ಸಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟಿಯರಾದ ಕಾಜಲ್ ಅಗರ್ವಾಲ್ ಮತ್ತು ತಮನ್ನಾ ಭಾಟಿಯಾ ಅವರನ್ನು ತನಿಖೆ ಮಾಡಲು ಪುದುಚೇರಿ ಪೊಲೀಸರು ನಿರ್ಧರಿಸಿದ್ದಾರೆ. ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭ ನೀಡುವ ಭರವಸೆ ತೋರಿಸಿದ ಕಂಪನಿಯೊಂದು ಪುದುಚೇರಿಯ 10 ಮಂದಿಯಿಂದ ಸುಮಾರು ₹2.40 ಕೋಟಿ ವಸೂಲಿ ಮಾಡಿ ವಂಚನೆ ಮಾಡಿತ್ತು ಎಂದು … Continued

ಹೆಂಡತಿಯ ಮೇಲೆ ಸೇಡು ತೀರಿಸಿಕೊಳ್ಳಲು ಟ್ರಾಫಿಕ್ ನಿಯಮ ಪದೇ ಪದೇ ಉಲ್ಲಂಘಿಸಿ ಕಿರುಕುಳ ನೀಡಿದ ಗಂಡ….!

ಪತಿ ಪತ್ನಿಯರ ಜಗಳ ವಿಕೋಪಕ್ಕೆ ಹೋಗಿ ಪತ್ನಿ ನಂತರ ತನ್ನ ತವರು ಮನೆಗೆ ಹೋಗಿದ್ದಳು. ಜಗಳ ವಿಕೋಪಕ್ಕೆ ಹೋದ ನಂತರ ಅವರಿಬ್ಬರ ಸಂಬಂಧ ಹಳಸಿ ಅದು ವಿಚ್ಛೇದನದ ವರೆಗೆ ಬಂದು ನಿಂತಿತು. ವಿಚ್ಛೇದನ ಪ್ರಕರಣ ನ್ಯಾಯಾಲಯದ ಮುಂದೆ ಇದ್ದು, ಈ ವೇಳೆ ಪತಿ ಮಹಾಶಯ ತನ್ನ ಪತ್ನಿಗೆ ಕಿರುಕುಳ ನೀಡಲು ಅಸಾಮಾನ್ಯ ಮಾರ್ವನ್ನು ಅನುಸರಿಸಿದ್ದಾನೆ. ಪತ್ನಿಯ … Continued

ತುಮಕೂರು | ಆಗ್ರೋ ಫುಡ್ ಕಂಪನಿಯಲ್ಲಿ ಆಯಿಲ್‌ ಟ್ಯಾಂಕ್‌ ಸ್ಫೋಟ; ಇಬ್ಬರ ಸಾವು, ಮೂವರಿಗೆ ಗಾಯ

ತುಮಕೂರು: ಪರಿಮಳ ಆಗ್ರೋ ಫುಡ್ ಕಂಪನಿಯಲ್ಲಿ ಆಯಿಲ್ ಟ್ಯಾಂಕ್ ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಂತಸರನಹಳ್ಳಿಯಲ್ಲಿರುವ ಇಂಡಸ್ಟ್ರಿಯಲ್ಲಿ ಈ ದುರ್ಘಟನೆ ನಡೆದಿದೆ. ಆಯಿಲ್ ಟ್ಯಾಂಕ್ ಬಳಿ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಟ್ಯಾಂಕ್‌ ಸ್ಪೋಟಗೊಂಡಿದೆ ಎನ್ನಲಾಗಿದೆ. ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಕಾರ್ಮಿಕರನ್ನು ಸಂತೋಷ … Continued