ವಿಡಿಯೋ | ಪೊಲೀಸರಿಂದ ತಪ್ಪಿಸಿಕೊಳ್ಳಲು ನೀರಿಗೆ ಧುಮುಕಿ ಪಾರಾಗಲು ಯತ್ನಿಸಿದ ಭೂಪ; ಆದ್ರೆ ಹೆಡೆಮುರಿ ಕಟ್ಟಿದ ಮೊಸಳೆ !

ಅಮೆರಿಕದ ಲೂಸಿಯಾನದಲ್ಲಿ ನಡೆದ ಪೊಲೀಸರು ವ್ಯಕ್ತಿಯೊಬ್ಬನನ್ನು ಬೆನ್ನಟ್ಟಿದ ಸಾಧಾರಣ  ಘಟನೆಯು ಪ್ರಕೃತಿಯ ಅನಿರೀಕ್ಷಿತ ಟ್ವಿಸ್ಟ್‌ನಿಂದಾಗಿ ಭಾರಿ ಸುದ್ದಿಯಾಗಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಆರೋಪಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಳ್ಳಲು ಜೌಗು ಪ್ರದೇಶಕ್ಕೆ (ಸ್ವಾಂಪ್) ಧುಮುಕಿದಾಗ, ಅಲ್ಲಿನ ಮೊಸಳೆಯೊಂದು ಆತನ ಮೇಲೆ ದಾಳಿ ಮಾಡಿದ ವಿಲಕ್ಷಣ ಘಟನೆ ನಡೆದಿದೆ. ಕಳೆದ ಭಾನುವಾರ ಲೂಸಿಯಾನದ ಇಂಟರ್‌ಸ್ಟೇಟ್-10 ಹೆದ್ದಾರಿಯಲ್ಲಿ ಟೊಯೋಟಾ ಕಾರೊಂದನ್ನು … Continued

ಕೊಲೆ ರಹಸ್ಯ ಬಿಚ್ಚಿಟ್ಟ ಸಾಕು ಗಿಳಿ ; ಅದರ ಒಂದು ಪುಟ್ಟ ನುಡಿಯಿಂದ ಕೊಲೆ ಪ್ರಕರಣ ಭೇದಿಸಿದ ಪೊಲೀಸರು…!

ಅಪರಾಧ ಲೋಕದ ಇತಿಹಾಸದಲ್ಲಿ ಸಾಕುಪ್ರಾಣಿಗಳು ನೀಡಿದ ಸುಳಿವಿನಿಂದ ಪ್ರಕರಣಗಳನ್ನು ಭೇದಿಸಿದ ಅನೇಕ ಉದಾಹರಣೆಗಳಿವೆ. ಅಮೆರಿಕಾದಲ್ಲಿ ನಡೆದ ಈ ಕೊಲೆ ಪ್ರಕರಣವು 2015ರಲ್ಲಿ ಮನೆಯಲ್ಲಿದ್ದ ಸಾಕು ಗಿಳಿಯೊಂದು ತನ್ನ ಯಜಮಾನನ ಕೊನೆಯ ಕ್ಷಣದ ಆರ್ತನಾದವನ್ನು ಅನುಕರಿಸುವ ಮೂಲಕ ಕೊಲೆಗಡುಕ ಯಾರು ಎಂಬುದನ್ನು ಪತ್ತೆ ಹಚ್ಚಲು ನೆರವಾದ ಪ್ರಸಂಗಕೊಲೆ ಆರೋಪಿಯನ್ನು ಪತ್ತೆ ಹಚ್ಚಲು ನೆರವಾಗಿದ್ದು ಯಾವತ್ತಿಗೂ ಗಮನ ಸೆಳೆಯುತ್ತದೆ. … Continued

ವೀಡಿಯೊ…| ವಿದ್ಯಾರ್ಥಿಯನ್ನು ಬಸ್ಸಿನಿಂದ ಅಪಹರಿಸಿ, ನಕಲಿ ಮಾದಕ ದ್ರವ್ಯ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು…! ಸ್ಫೋಟಕ ಸತ್ಯ ಬಯಲು

ಭೋಪಾಲ್ : ಮಧ್ಯಪ್ರದೇಶದ ಪೊಲೀಸ್ ಇಲಾಖೆಯನ್ನೇ ಬೆಚ್ಚಿಬೀಳಿಸಿರುವ ಸಂಚಲನಾತ್ಮಕ ಪ್ರಕರಣವೊಂದು ಬೆಳಕಿಗೆ ಬಂದಿದೆ. ದೇಶದ ಅತ್ಯುತ್ತಮ ಪೊಲೀಸ್ ಠಾಣೆಗಳ ಪೈಕಿ ಇತ್ತೀಚೆಗೆ ಒಂಬತ್ತನೇ ಸ್ಥಾನ ಪಡೆದಿದ್ದ ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯ ಮಾಲ್ಹರ್‌ಗಢ ಪೊಲೀಸ್ ಠಾಣೆಯ ಅಧಿಕಾರಿಗಳೇ, ನಿರಪರಾಧಿ ವಿದ್ಯಾರ್ಥಿಯೊಬ್ಬನನ್ನು ಬಸ್‌ನಿಂದ ಅಪಹರಿಸಿ, ಸುಳ್ಳು ಡ್ರಗ್ಸ್ ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿರುವುದು ಬಯಲಾಗಿದೆ. ಪೊಲೀಸರು ದೊಡ್ಡ ಸಾಧನೆ ಎಂದು … Continued

ಪೊಲೀಸ್‌ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ; ಅಂಗೈನಲ್ಲಿ ಡೆತ್‌ ನೋಟ್‌ ಬರೆದಿಟ್ಟು ವೈದ್ಯೆ ಆತ್ಮಹತ್ಯೆ

ಮುಂಬೈ: ಪೊಲೀಸ್‌ ಅಧಿಕಾರಿಗಳ ಮೇಲೆ ಅತ್ಯಾಚಾರ ಮತ್ತು ಕಿರುಕುಳದ ಆರೋಪ ಹೊರಿಸಿ ಮಹಿಳಾ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಮಹಾರಾಷ್ಟ್ರದ (Maharashtra) ಸತಾರಾದ ಹೋಟೇಲ್‌ನಲ್ಲಿ ನಡೆದಿದೆ. ಅವರು ತಮ್ಮ ಕೈಯಲ್ಲಿ ಆತ್ಮಹತ್ಯಾ ಪತ್ರ ಬರೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೀಡ್ ಜಿಲ್ಲೆಯ ಮೂಲದ ಮತ್ತು ಫಲ್ಟನ್ ಉಪ-ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ನಿಯೋಜಿತರಾಗಿದ್ದ … Continued

ಹಣ್ಣು ಮಾರಲು ಬಂದ ಮಹಿಳೆ ಮೇಲೆ ಇಬ್ಬರು ಪೊಲೀಸರಿಂದ ಅತ್ಯಾಚಾರ ಆರೋಪ; ಬಂಧನ, ಅಮಾನತು

ತಿರುವನ್ನಮಲೈ: ಮಂಗಳವಾರ ಮುಂಜಾನೆ ತಿರುವನ್ನಮಲೈನ ಎಂಡಾಲ್ ಬೈಪಾಸ್ ರಸ್ತೆಯ ಬಳಿ ಆಂಧ್ರಪ್ರದೇಶ ಮೂಲದ 26 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ತಿರುವನ್ನಮಲೈ ಪೂರ್ವ ಪೊಲೀಸ್ ಠಾಣೆಗೆ ಸೇರಿದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದ್ದು, ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಆರೋಪಿಗಳಾದ ಸುಂದರ ಮತ್ತು ಸುರೇಶ ರಾಜ ಕ್ರಮವಾಗಿ ಗ್ರೇಡ್ 1 ಮತ್ತು 2 … Continued

ಅತ್ಯಾಚಾರ ಆರೋಪ; ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಮೇಲೆಯೇ ಗುಂಡು ಹಾರಿಸಿ ಪರಾರಿಯಾದ ಶಾಸಕ…!

ಚಂಡೀಗಢ : ಅತ್ಯಾಚಾರ ಮತ್ತು ವಂಚನೆ ಆರೋಪದ ಮೇಲೆ ಪಂಜಾಬಿನ ಆಮ್‌ ಆದ್ಮಿ ಪಕ್ಷದ ಶಾಸಕನನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿದ ಘಟನೆ ಹರಿಯಾಣದ ಕರ್ನಾಲ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಅತ್ಯಾಚಾರ ಆರೋಪದ ಮೇಲೆ ಪಂಜಾಬ್ ಶಾಸಕ ಹರ್ಮೀತ್ ಸಿಂಗ್ ಧಿಲ್ಲೋನ್ ಪಠಾಣಮಜ್ರ ಅವರನ್ನು ಪೊಲೀಸರು ಬಂಧಿಸಿದ್ದರು. ಸ್ಥಳೀಯ ಠಾಣೆಗೆ … Continued

ಬೆಳಗಾವಿ | ಕ್ಯಾಂಪ್‌ ಪೊಲೀಸರ ಭರ್ಜರಿ ಕಾರ್ಯಾಚರಣೆ ; 85 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಬೆಳಗಾವಿ : ಇಲ್ಲಿನ ಕ್ಯಾಂಪ್ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಮನೆ ಕಳ್ಳರನ್ನು ಬಂಧಿಸಿ 85 ಲಕ್ಷ ಮೌಲ್ಯದ ಬಂಗಾರ ಆಭರಣಗಳು ವಶಕ್ಕೆ ಪಡೆದಿದ್ದಾರೆ. ಶ್ರಮೇಶ ಸುರೇಶ ರೇಡೆಕರ ಎಂಬವರು ತಮ್ಮ ಮನೆಯಲ್ಲಿ ಒಟ್ಟು 981.1 ಗ್ರಾಂ ತೂಕದ ಬಂಗಾರದ ಆಭರಣಗಳು ಕಳ್ಳತನವಾದ ಬಗ್ಗೆ ಕ್ಯಾಂಪ್ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು. ದೂರು ದಾಖಲಿಸಿದ … Continued

ವರದಕ್ಷಿಣೆಗಾಗಿ ಪತ್ನಿಯನ್ನು ಸುಟ್ಟುಹಾಕಿದ ಆರೋಪಿ ಪತಿ ಪೊಲೀಸ್‌ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡೇಟು

ನವದೆಹಲಿ: ಗ್ರೇಟರ್ ನೋಯ್ಡಾದಲ್ಲಿ ವರದಕ್ಷಿಣೆಗಾಗಿ ಪತ್ನಿಗೆ ಬೆಂಕಿ ಹಚ್ಚಿ ಕೊಂದ ಆರೋಪಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ ನಂತರ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ನಡೆದ ಎನ್‌ಕೌಂಟರ್‌ನಲ್ಲಿ ಆತನ ಕಾಲಿಗೆ ಗುಂಡು ಹಾರಿಸಲಾಯಿತು ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರೋಪಿ ಪತಿಯನ್ನು ವಿಪಿನ್ ಭಾಟಿ ಎಂದು ಗುರುತಿಸಲಾಗಿದ್ದು, ಗುರುವಾರ 36 ಲಕ್ಷ ರೂಪಾಯಿ ವರದಕ್ಷಿಣೆಗಾಗಿ 28 ​​ವರ್ಷದ … Continued

ಧರ್ಮಸ್ಥಳ ಪ್ರಕರಣ : ಯೂ ಟ್ಯೂಬರ್ ಸಮೀರಗೆ ಕೋರ್ಟಿನಿಂದ ನಿರೀಕ್ಷಣಾ ಜಾಮೀನು

ಮಂಗಳೂರು : ಧರ್ಮಸ್ಥಳ ಪ್ರಕರಣದ ಬಗ್ಗೆ ಎಐ ವೀಡಿಯೊ ಮಾಡಿ ಜನರಲ್ಲಿ ಕೋಮು ವೈಷಮ್ಯ ಮೂಡಿಸಲು ಪ್ರಯತ್ನಿಸಿದ ಆರೋಪದ ಮೇರೆಗೆ ಧರ್ಮಸ್ಥಳ ಪೊಲೀಸರು ದಾಖಲಿಸಿದ್ದ ಸುಮಟೋ ಕೇಸ್ ಗೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿದ್ದ ಯೂಟ್ಯೂಬರ್ ಸಮೀರ್ ಎಂಡಿಗೆ ಕೋರ್ಟ್ ಜಾಮೀನು ನೀಡಿದೆ. ಯೂಟ್ಯೂಬರ್‌ ಸಮೀರ್‌ ಎಂ.ಡಿ.ಗೆ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು … Continued

ಧರ್ಮಸ್ಥಳ: ನಾಲ್ವರು ಯೂ ಟ್ಯೂಬರ್‌ ಗಳ ಮೇಲೆ ಹಲ್ಲೆ

ಮಂಗಳೂರು : ವೀಡಿಯೊ ಮಾಡಲು ಹೋಗಿದ್ದ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಂತರ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್‌ ನಡೆಸಿದ್ದಾರೆ. ಸಂದರ್ಶನ ನಡೆಸುತ್ತಿದ್ದ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದಿದೆ. ಈ ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಯೂ ಟ್ಯೂಬರ್‌ಗಳಾದ ಅಜಯ, … Continued