ಶೀಘ್ರವೇ 900ಕ್ಕೂ ಹೆಚ್ಚು ಪಿಎಸ್‌ ಐ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಶುರು: ಗೃಹ ಸಚಿವ ಡಾ. ಪರಮೇಶ್ವರ

ಬೆಂಗಳೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸರ್ಕಾರ ಶುಭ ಸುದ್ದಿ ನೀಡಿದೆ. ಶೀಘ್ರವೇ 900ಕ್ಕೂ ಹೆಚ್ಚು ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಪಿಎಸ್ ಐ ಪರೀಕ್ಷೆ ಬಹಳ ಸುಸೂತ್ರವಾಗಿ ನಡೆದಿದೆ. ಪರೀಕ್ಷೆಯಲ್ಲಿ … Continued

ಬೆಳಗಾವಿ : ಪ್ರೇಮಿಗಳೆಂದು ತಿಳಿದು ಅಕ್ಕ-ತಮ್ಮನನ್ನು ಕೂಡಿ ಹಾಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳು

ಬೆಳಗಾವಿ : ಬೆಳಗಾವಿ ಪ್ರವೇಶಿಸುವ ಕೋಟೆ ಕೆರೆಯ ದಡದಲ್ಲಿ ಕುಳಿತಿದ್ದವರನ್ನು ಶೆಡ್ ನೊಳಗೆ ಕೂಡಿಹಾಕಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಗಾಂಜಾ ನಶೆಯಲ್ಲಿ ಏಳು ಜನ ಅನ್ಯಕೋಮಿನ ಯುವಕರು ಸೇರಿ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಹೊರವಲಯದ ಯಮನಪುರದ ಸಚಿನ್ ಲಮಾಣಿ (22), ಮುಸ್ಕಾನ್ ಪಟೇಲ್ (23) … Continued

ಬಿಜೆಪಿ ಶಾಸಕ ಸುನಿಲಕುಮಾರ ಪೊಲೀಸ್ ವಶಕ್ಕೆ

ಬೆಂಗಳೂರು: ‘ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ’ ಎಂದು ಆಗ್ರಹಿಸಿ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಗುರುವಾರ ಬೆಳಿಗ್ಗೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲಕುಮಾರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯಲ್ಲಿ ಬಂಧನ ಮಾಡಿರುವ ಕರಸೇವಕರ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ (BJP) ನಿತ್ಯ ಪ್ರತಿಭಟನೆ … Continued

ಸುದ್ದಿಗೋಷ್ಠಿಗೆ ಮುನ್ನವೇ ಮಣಿಕಂಠ ರಾಠೋಡನ ವಶಕ್ಕೆ ಪಡೆದ ಪೊಲೀಸರು

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಆರೋಪ ಮಾಡಿರುವುದಕ್ಕೆ ಸಂಬಂಧಿಸಿದಂತೆ ಮಣಿಕಂಠ್ ರಾಠೋಡ್ ಸುದ್ದಿಗೋಷ್ಠಿ ಕರೆದಿದ್ದರು. ಆದರೆ ಸುದ್ದಿಗೋಷ್ಠಿಗೆ ಆಗಮಿಸುವ ಮುನ್ನವೇ ಮಣಿಕಂಠ್ ರಾಠೋಡ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಲಬುರಗಿ ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್‌ನಲ್ಲಿದ್ದ ಮಣಿಕಂಠ್ ರಾಠೋಡ್ ನನ್ನು ಇಂದು, ಗುರುವಾರ ಚೌಕ್ … Continued

ಕಾಣೆಯಾಗಿದ್ದ ಮೂವರು ಅಕ್ಕತಂಗಿಯರ ಮೃತದೇಹಗಳು ಕಬ್ಬಿಣದ ಪೆಟ್ಟಿಗೆಯೊಳಗೆ ಪತ್ತೆ

ಚಂಡೀಗಢ: ಪಂಜಾಬಿನ ಜಲಂಧರ್ ಜಿಲ್ಲೆಯ ಕಾನ್ಪುರ ಗ್ರಾಮದಲ್ಲಿ ಮೂವರು ಸಹೋದರಿಯರು ತಮ್ಮ ಮನೆಯಲ್ಲಿ ಟ್ರಂಕ್‌ನೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೂವರು ಹುಡುಗಿಯರು ತಮ್ಮ  ಕೆಲಸ ಮುಗಿಸಿಕೊಂಡು ಮರಳಿ ಮನೆಗೆ ಬಾರದೆ ಇದ್ದಾಗ ಅವರ ತಂದೆ-ತಾಯಿ ಮಕ್ಸೂದನ್ ಪೊಲೀಸ್ ಠಾಣೆಯಲ್ಲಿ ಭಾನುವಾರ ರಾತ್ರಿ ನಾಪತ್ತೆ ಪ್ರಕರಣ ದಾಖಲಿಸಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಲಸೆ … Continued

ಹಣಕ್ಕಾಗಿ ಕೊಲೆ ಮಾಡಿ ಗೋಣಿ ಚೀಲದಲ್ಲಿ ತುಂಬಿ ಅರಣ್ಯದಲ್ಲಿ ಶವ ಎಸೆದಿದ್ದ ಮೂವರು ಆರೋಪಿಗಳ ಬಂಧನ

ಶಿರಸಿ: ಹಣಕ್ಕಾಗಿ ವ್ಯಕ್ತಿಯೊಬ್ಬನನ್ನು ಕೊಲೆಗೈದು ಶವವನ್ನು ಗೋಣಿ ಚೀಲದಲ್ಲಿ ತುಂಬಿ ಎಸೆದು ಹೋಗಿದ್ದ ಮೂವರು ಆರೋಪಿಗಳನ್ನು ಬನವಾಸಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಹಣಕ್ಕಾಗಿ ಕೊಲೆಗೈದು ಬಳಿಕ ಶವವನ್ನು ತಾಲೂಕಿನ ಕೊರ್ಲಕಟ್ಟಾ – ವಡ್ಡಿನಕೊಪ್ಪ ರಸ್ತೆಯ ಅರಣ್ಯದಲ್ಲಿ ಎಸೆದು ಹೋಗಿದ್ದರು. ಅರಣ್ಯದಲ್ಲಿ ಅಪರಿಚಿತ ವ್ಯಕ್ತಿಯ ಪತ್ತೆಯಾದ 24 ಗಂಟೆಗಳ ಒಳಗೆ ಮೂವರು ಕೊಲೆ ಆರೋಪಿಗಳನ್ನೂ ಬಂಧಿಸಲಾಗಿದೆ ಬಂಧಿತ … Continued

ಗೂಂಡಾ ಕಾಯ್ದೆ ರದ್ದು: ಜೈಲಿನಿಂದ ಪುನೀತ್ ಕೆರೆಹಳ್ಳಿ ಬಿಡುಗಡೆ

ಬೆಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೆರೆಹಳ್ಳಿಯ ಪುನೀತ ಅವರು, ಬೆಂಗಳೂರಿನಲ ಜೆಪಿ ನಗರ 7ನೇ ಹಂತದಲ್ಲಿ ವಾಸವಿದ್ದರು. ಅವರ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿತ್ತು. … Continued

ಅಪರಾಧಗಳ ಕುರಿತ ಪೊಲೀಸರ ಮಾಧ್ಯಮ ವಿವರಣೆ : ಹೊಸ ಮಾರ್ಗಸೂಚಿ ಸಿದ್ಧಪಡಿಸಲು ಗೃಹ ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ

ನವದೆಹಲಿ: ಕ್ರಿಮಿನಲ್ ಪ್ರಕರಣಗಳಲ್ಲಿ ಮಾಧ್ಯಮ ವಿಚಾರಣೆ ತಡೆಯುವುದಕ್ಕಾಗಿ ಅಂತಹ ಪ್ರಕರಣಗಳಲ್ಲಿ ಮಾಧ್ಯಮಗಳಿಗೆ ಕೃತ್ಯದ ವಿವರ ನೀಡುವಾಗ ಪಾಲಿಸಬೇಕಾದ ಮಾರ್ಗಸೂಚಿಗಳ ಕುರಿತು ಸಮಗ್ರ ಕೈಪಿಡಿ ಸಿದ್ಧಪಡಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ. ಈಗಿರುವ ಮಾರ್ಗಸೂಚಿಗಳು ಬಹಳ ಹಳೆಯದಾಗಿದ್ದು, ನಂತರದಲ್ಲಿ ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಮಿನಲ್ ಪ್ರಕರಣ ವರದಿಗೆ ಸಂಬಂಧಿಸಿದಂತೆ … Continued

ಪೊಲೀಸರು ಹಣೆಗೆ ಕುಂಕುಮ, ತಿಲಕ ಇಡಬಾರದೆಂದು ಹೇಳಿಲ್ಲ: ಗೃಹ ಸಚಿವ ಡಾ. ಪರಮೇಶ್ವರ ಸ್ಪಷ್ಟನೆ

ಬೆಂಗಳೂರು : ಪೊಲೀಸರು ಕುಂಕುಮ, ತಿಲಕ ಇಡಬಾರದು ಎಂದು ನಾನು ಯಾವ ಸಭೆಯಲ್ಲೂ ಸೂಚನೆ ಕೊಟ್ಟಿಲ್ಲ. ಆದರೆ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡುವಂತೆ ಸೂಚಿಸಿದ್ದೇನೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸುಳ್ಳು ವದಂತಿ ಹರಡುವುದು ಸರಿಯಲ್ಲ, ಕುಂಕುಮ ಬೊಟ್ಟು, ವಿಭೂತಿ, ತಿಲಕ ಏನು ಬೇಕಾದರೂ ಇಟ್ಟುಕೊಳ್ಳಬಹುದು. … Continued

ನಾಗ್ಪುರದ ಆರ್‌ಎಸ್‌ಎಸ್ ಕೇಂದ್ರ ಸ್ಥಾನ ಸ್ಫೋಟಿಸುವುದಾಗಿ ಅಪರಿಚಿತ ಫೋನ್‌ ಬೆದರಿಕೆ, ಬಿಗಿ ಭದ್ರತೆ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕೇಂದ್ರ ಕಚೇರಿಗೆ ಶನಿವಾರ ಅಪರಿಚಿತ ಕರೆ ಮಾಡಿದವರು ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಫೋನ್ ಕರೆ ಬಂದಿತು. ಮಹಲ್ ಪ್ರದೇಶದಲ್ಲಿನ ಆರ್‌ಎಸ್‌ಎಸ್ ಕೇಂದ್ರ ಕಚೇರಿಯನ್ನು ಬಾಂಬ್‌ನಿಂದ ಸ್ಫೋಟಿಸುವುದಾಗಿ ವ್ಯಕ್ತಿಯೊಬ್ಬ … Continued