ನಾಗ್ಪುರದ ಆರ್‌ಎಸ್‌ಎಸ್ ಕೇಂದ್ರ ಸ್ಥಾನ ಸ್ಫೋಟಿಸುವುದಾಗಿ ಅಪರಿಚಿತ ಫೋನ್‌ ಬೆದರಿಕೆ, ಬಿಗಿ ಭದ್ರತೆ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕೇಂದ್ರ ಕಚೇರಿಗೆ ಶನಿವಾರ ಅಪರಿಚಿತ ಕರೆ ಮಾಡಿದವರು ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಫೋನ್ ಕರೆ ಬಂದಿತು. ಮಹಲ್ ಪ್ರದೇಶದಲ್ಲಿನ ಆರ್‌ಎಸ್‌ಎಸ್ ಕೇಂದ್ರ ಕಚೇರಿಯನ್ನು ಬಾಂಬ್‌ನಿಂದ ಸ್ಫೋಟಿಸುವುದಾಗಿ ವ್ಯಕ್ತಿಯೊಬ್ಬ … Continued

ಬೆಂಗಳೂರು: ಡಿಸೆಂಬರ್ 31ರ ರಾತ್ರಿ ಕುಡಿದು ಕುಡಿದು ಟೈಟ್‌ ಆದವರಿಗೆ ಪೊಲೀಸರಿಂದ ಆಂಬುಲೆನ್ಸ್ ವ್ಯವಸ್ಥೆ…!

ಬೆಂಗಳೂರು: ಡಿಸೆಂಬರ್ 31ರ ರಾತ್ರಿ ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಮುಳುಗಿ ತೇಲಾಡುವ ಮಂದಿ ಸುರಕ್ಷತೆಗೆ ಬೆಂಗಳೂರು ಪೊಲೀಸ್ ಇಲಾಖೆ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಯಾರೇ ಕುಡಿದು ಟೈಟಾದರೂ ಅವರಿಗೆ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗುತ್ತಿದೆ. ಡಿಸೆಂಬರ್‌ 31ರ ರಾತ್ರಿ ಮಾತ್ರ ಈ ವ್ಯವಸ್ಥೆ ಮಾಡಲಾಗಿದ್ದು, ಬೆಂಗಳೂರು ಆಗ್ನೇಯ ವಿಭಾಗ ಡಿಸಿಪಿ ಸಿ.ಕೆ. ಬಾಬಾ ಅವರು ಈ ಮೂಲಕ … Continued

ವಿದ್ಯುತ್ ಸ್ಪರ್ಶ: ಮೂವರು ಮಕ್ಕಳು ಸೇರಿ ಐವರು ಸಾವು

ಬಹ್ರೈಚ್: ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ಹೈ ಟೆನ್ಷನ್ ವೈರ್‌ನ ಸ್ಪರ್ಶದಿಂದ ಮೂವರು ಮಕ್ಕಳು ಸೇರಿದಂತೆ ಐವರು ಭಾನುವಾರ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ ಹಾಗೂ ನಾಲ್ವರಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ನನ್ಪಾರಾ ಪ್ರದೇಶದ ಮಸುಪುರ್ ಗ್ರಾಮದಲ್ಲಿ ಮುಂಜಾನೆ 4 ಗಂಟೆಗೆ ಈ ಘಟನೆ ನಡೆದಿದ್ದು, ಗ್ರಾಮಸ್ಥರು ಮೆರವಣಿಗೆ ನಡೆಸುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಗಾಡಿಯಲ್ಲಿ ಇರಿಸಲಾಗಿದ್ದ … Continued

ಕಾಬೂಲ್ ಸ್ಫೋಟ: ಪರೀಕ್ಷಾ ಕೇಂದ್ರದ ಮೇಲೆ ನಡೆದ ಆತ್ಮಾಹುತಿ ಬಾಂಬರ್‌ ದಾಳಿಯಲ್ಲಿ ಕನಿಷ್ಠ 19 ಸಾವು – ಪೊಲೀಸರು

ಕಾಬೂಲ್:‌ ಕಾಬೂಲ್ ಶಿಕ್ಷಣ ಕೇಂದ್ರದ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಕನಿಷ್ಠ 19 ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಈ ಶೈಕ್ಷಣಿಕ ಕೇಂದ್ರದಲ್ಲಿ ಆತ್ಮಹತ್ಯಾ ಬಾಂಬರ್ ದಾಳಿ ಮಾಡಿದಾಗ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ದುರದೃಷ್ಟವಶಾತ್, 19 ಜನರು ಮೃತಪಟ್ಟಿದ್ದಾರೆ ಮತ್ತು 27 ಜನರು ಗಾಯಗೊಂಡಿದ್ದಾರೆ” ಎಂದು ಪೊಲೀಸ್ ವಕ್ತಾರ ಖಾಲಿದ್ … Continued

ಉತ್ತರಾಖಂಡ: ರೆಸಾರ್ಟ್‌ ರಿಸೆಪ್ಶನಿಸ್ಟ್‌ ಕೊಲೆ ಆರೋಪದ ಮೇಲೆ ಬಿಜೆಪಿ ಮುಖಂಡನ ಪುತ್ರನ ಬಂಧನ-ಪೊಲೀಸರು

ಪೌರಿ: ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನಲ್ಲಿರುವ ರೆಸಾರ್ಟ್‌ನಲ್ಲಿ ಸ್ವಾಗತಕಾರಿಣಿ (receptionist)ಯಾಗಿ ಕೆಲಸ ಮಾಡುತ್ತಿದ್ದ 19 ವರ್ಷದ ಹುಡುಗಿಯನ್ನು ಕೊಂದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡರೊಬ್ಬರ ಮಗನನ್ನು ಬಂಧಿಸಲಾಗಿದೆ. ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ರೆಸಾರ್ಟ್‌ನಲ್ಲಿರುವ ಇಬ್ಬರು ಉದ್ಯೋಗಿಗಳನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ಕಾಶ್ಮೀರ: 3 ಎಲ್‌ಇಟಿ ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಶೋಪಿಯಾನ್‌ನ ನಾಗಬಾಲ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ದೊರೆತ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಈ ಶೋಧ ಕಾರ್ಯಾಚರಣೆಯ ವೇಳೆ ಮೂವರು ಉಗ್ರರನ್ನು … Continued

ಸ್ಟಾಕರ್ ಬೆಂಕಿ ಹಚ್ಚಿದ ನಂತರ ಜಾರ್ಖಂಡ್ ವಿದ್ಯಾರ್ಥಿನಿ ಸಾವು: ಪೊಲೀಸರು

ದುಮ್ಕಾ: ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ವ್ಯಕ್ತಿಯೋರ್ವ ತನ್ನ ಮಾತಿಗೆ ಮರುಳಾಗದ ಕಾರಣ ಬೆಂಕಿ ಹಚ್ಚಿದ ನಂತರ ವಿದ್ಯಾರ್ಥಿನಿಯೊಬ್ಬಳು ಭಾನುವಾರ ಮುಂಜಾನೆ ಸುಟ್ಟ ಗಾಯಗಳಿಂದ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. 12ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದ 19 ವರ್ಷದ ಯುವತಿಯನ್ನು ಮೊದಲು 90 ಪ್ರತಿಶತ ಸುಟ್ಟಗಾಯಗಳೊಂದಿಗೆ ಗಂಭೀರ ಸ್ಥಿತಿಯಲ್ಲಿ ದುಮ್ಕಾದ ಫುಲೋ ಜಾನೋ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ … Continued

ಮೇಘಾಲಯ ಬಿಜೆಪಿ ನಾಯಕನ ಫಾರ್ಮ್‌ಹೌಸ್‌ನ ಆರೋಪಿತ ‘ವೇಶ್ಯಾಗೃಹ’ದಿಂದ 6 ಮಕ್ಕಳ ರಕ್ಷಣೆ, 73 ಮಂದಿ ಬಂಧನ: ಪೊಲೀಸರು

ಶಿಲ್ಲಾಂಗ್‌: ಮೇಘಾಲಯ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬರ್ನಾಡ್ ಮರಾಕ್ ಅವರ ಫಾರ್ಮ್‌ಹೌಸ್‌ನಲ್ಲಿ ನಡೆಸಲಾಗುತ್ತಿದೆ ಎಂದು ಆರೋಪಿಸಲಾದ ವೇಶ್ಯಾಗೃಹದಿಂದ 6 ಮಕ್ಕಳನ್ನು ಮೇಘಾಲಯ ಪೊಲೀಸರು ರಕ್ಷಿಸಿದ್ದಾರೆ. ಉಗ್ರಗಾಮಿ-ರಾಜಕಾರಣಿ ಮಾರಾಕ್ ಮಾಲೀಕತ್ವದ ರಿಂಪು ಬಗಾನ್ ಎಂಬ ಫಾರ್ಮ್‌ಹೌಸ್‌ನ ಮೇಲೆ ಸುಳಿವಿನ ಆಧಾರದ ಮೇಲೆ ದಾಳಿ ನಡೆಸಲಾಗಿದೆ ಎಂದು ಪಶ್ಚಿಮ ಗರೋ ಹಿಲ್ಸ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ವಿವೇಕಾನಂದ್ ಸಿಂಗ್ … Continued

ಚುಂಬನದ ವೀಡಿಯೊ ವೈರಲ್‌ ಆದ ನಂತರ 8 ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ಮಂಗಳೂರು: ಇಬ್ಬರು ಕಾಲೇಜು ವಿದ್ಯಾರ್ಥಿಗಳು ಚುಂಬಿಸುತ್ತಿರುವ ವೀಡಿಯೋ ವೈರಲ್ ಆಗಿದ್ದು, ಮಂಗಳೂರಿನಲ್ಲಿ ಎಂಟು ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಂಗಳೂರು: ಇಬ್ಬರು ಕಾಲೇಜು ವಿದ್ಯಾರ್ಥಿಗಳು ಚುಂಬಿಸುತ್ತಿರುವ ವೀಡಿಯೋ ವೈರಲ್ ಆಗಿದ್ದು, ಮಂಗಳೂರಿನಲ್ಲಿ ಎಂಟು ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾಲೇಜಿನ ಎಂಟು ಹದಿಹರೆಯದವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ವೀಡಿಯೊವನ್ನು ಆರು ತಿಂಗಳ ಹಿಂದೆ ಚಿತ್ರೀಕರಿಸಲಾಗಿದ್ದು, ಇತ್ತೀಚೆಗೆ … Continued

ಪ್ರಧಾನಿ ಮೋದಿ ಗುರಿಯಾಗಿಸಿಕೊಂಡಿದ್ದ ಭಯೋತ್ಪಾದನಾ ಘಟಕ ಭೇದಿಸಿದ ಬಿಹಾರ ಪೊಲೀಸರು: ನಿವೃತ್ತ ಪೋಲೀಸ್ ಅಧಿಕಾರಿ ಸೇರಿ ಇಬ್ಬರ ಬಂಧನ

ಪಾಟ್ನಾ: ಪಾಟ್ನಾದಲ್ಲಿ ಶಂಕಿತ ಭಯೋತ್ಪಾದಕ ಘಟಕವನ್ನು ಭೇದಿಸಲಾಗಿದ್ದು, ಇಬ್ಬರು ಶಂಕಿತ ಭಯೋತ್ಪಾದಕರನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಮಾಡ್ಯೂಲ್ 2047 ರ ವೇಳೆಗೆ ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಯೋಜಿಸುತ್ತಿದೆ. ಜುಲೈ 12 ರಂದು ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸುವ ಸಂಚು ಕೂಡ ಇತ್ತು ಎಂದು ಪೊಲೀಸರು ಹೇಳಿದ್ದಾರೆ. ಪ್ರಧಾನಿ ಮೋದಿ ಅವರ … Continued