ಸ್ಟಾಲಿನ್‌ಗೆ ಮತ್ತೊಂದು ರಾಜಕೀಯ ಹಿನ್ನಡೆ ; 9 ವರ್ಷಗಳ ಬಳಿಕ ಡಿಎಂಕೆ ಮೈತ್ರಿ ತೊರೆದ ಎಂಡಿಎಂಕೆ ಪಕ್ಷ

ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಪಕ್ಷವು ಡಿಎಂಕೆ ಜೊತೆಗಿನ ತನ್ನ ಒಂಬತ್ತು ವರ್ಷಗಳ ಮೈತ್ರಿಯನ್ನು ಅಧಿಕೃತವಾಗಿ ಅಂತ್ಯಗೊಳಿಸಿದೆ.  ಈ ನಿರ್ಧಾರವನ್ನು ಶನಿವಾರ ನಡೆದ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಕೈಗೊಳ್ಳಲಾಯಿತು. ಆದರೆ ಆಡಳಿತಾರೂಢ ಟಿವಿಕೆ ನೇತೃತ್ವದ ಮೈತ್ರಿಕೂಟಕ್ಕೆ ಸೇರ್ಪಡೆಯ ಬಗ್ಗೆ ಪಕ್ಷ ಇವರೆಗೆ ಏನೂ ಹೇಳಿಲ್ಲ. ಸಭೆಯಲ್ಲಿ … Continued

ಉದ್ಧವ್‌ ಠಾಕ್ರೆಗೆ ಮಹಾ ಶಾಕ್ : ಶಿಂದೆ ಪಾಳಯ ಸೇರಿದ ಪಕ್ಷದ ಆರು ಬಂಡಾಯ ಸಂಸದರು !

ಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ, ಶಿವಸೇನಾ (ಯುಬಿಟಿ) ಪಕ್ಷದ ಆರೂ ಜನ ಬಂಡಾಯ ಸಂಸದರು ಸೋಮವಾರ ಮುಂಬೈನಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಆಡಳಿತಾರೂಢ ಶಿವಸೇನೆಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇದು ಉದ್ಧವ್ ಠಾಕ್ರೆ ಬಣಕ್ಕೆ ಬಿದ್ದ ಬಲವಾದ ಆಘಾತವಾಗಿದೆ. ಮುಂಬೈನಲ್ಲಿ  ಸೋಮವಾರ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ … Continued

ತಮಿಳುನಾಡು ಬಿಜೆಪಿಗೆ ಅಣ್ಣಾಮಲೈ ಗುಡ್‌ ಬೈ: ‘ವಿ ದ ಲೀಡರ್ಸ್’ ಆಂದೋಲನ ಘೋಷಣೆ

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಬಲ್ಲ ಮಹತ್ವದ ಬೆಳವಣಿಗೆಯೊಂದರಲ್ಲಿ, ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಭಾರತೀಯ ಜನತಾ ಪಕ್ಷದೊಂದಿಗೆ (BJP) ಔಪಚಾರಿಕವಾಗಿ ಸಂಬಂಧ ಕಡಿದುಕೊಂಡಿದ್ದಾರೆ. ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅವರು ‘ವಿ ದ ಲೀಡರ್ಸ್’ (We the Leaders) ಹೆಸರಿನ ಹೊಸ ರಾಜಕೀಯ ಆಂದೋಲನವನ್ನು ಘೋಷಿಸುವ ಮೂಲಕ … Continued

ಸಿಎಂ ವಿಜಯ ವಿಶೇಷಾಧಿಕಾರಿಯಾಗಿ ಜ್ಯೋತಿಷಿ ವೆಟ್ರಿವೇಲ್ ನೇಮಕ ; ಕಾಂಗ್ರೆಸ್‌ ಅಸಮಾಧಾನ

 ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿ  ವಿಜಯ ಅವರ ಆಪ್ತ ಜ್ಯೋತಿಷಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ಮುಖ್ಯಮಂತ್ರಿಯವರ ವಿಶೇಷಾಧಿಕಾರಿಯಾಗಿ (OSD) ನೇಮಕ ಮಾಡಿ ಮಂಗಳವಾರ ಆದೇಶ ಹೊರಡಿಸಲಾಗಿದೆ. ತಮಿಳುನಾಡು ಸರ್ಕಾರದ ಸಾರ್ವಜನಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ಈ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. ವೆಟ್ರಿವೇಲ್ ಅವರು ಮುಖ್ಯಮಂತ್ರಿಯವರ ರಾಜಕೀಯ ವಿಭಾಗದ ವಿಶೇಷಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದು, ಅಧಿಕಾರ ವಹಿಸಿಕೊಂಡ … Continued

‘ಅನಿಲ್’ ಆರ್ಮಿಯ ಮಾಸ್ಟರ್ ಪ್ಲಾನ್: ತಮಿಳುನಾಡು ರಾಜಕೀಯ ಚಿತ್ರಣವನ್ನೇ ಬದಲಿಸಿದ ನಟ ʼವಿಜಯʼ ಪಡೆಯ 6 ರಣತಂತ್ರಗಳು !

ತಮಿಳುನಾಡು ರಾಜಕೀಯ ಭೂಪಟದಲ್ಲಿ ನಟ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಅಕ್ಷರಶಃ ಸಂಚಲನ ಸೃಷ್ಟಿಸಿದೆ. ಒಟ್ಟು 234  ಸ್ಥಾನಗಳಲ್ಲಿ108ರಲ್ಲಿ ಜಯಗಳಿಸಿರುವ ಟಿವಿಕೆ ಪಕ್ಷವು  ಬಹುಮತಕ್ಕೆ ಬೇಕಾದ 118 ಸ್ಥಾನಗಳ ಗಡಿಯ ಸಮೀಪಕ್ಕೆ ಬಂದು ನಿಂತಿದೆ. ಇದು ವರ್ಷಗಳ ಕಾಲ ನಡೆದ ವ್ಯವಸ್ಥಿತ ತಯಾರಿ ಮತ್ತು ಹಂತ ಹಂತವಾಗಿ ಕಟ್ಟಿದ ಭದ್ರ ಬುನಾದಿಯ ಫಲವಾಗಿದೆ. … Continued

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ ರಾಜೀನಾಮೆ ಸಾಧ್ಯತೆ : ಪುತ್ರನ ರಾಜಕೀಯ ಪ್ರವೇಶಕ್ಕೆ ತಯಾರಿ, ನಿಶಾಂತಗೆ ಉಪಮುಖ್ಯಮಂತ್ರಿ ಪಟ್ಟ ?

ನವದೆಹಲಿ: ಕಳೆದ ವರ್ಷ ಹತ್ತನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಿತೀಶಕುಮಾರ್ ತಮ್ಮ ಹುದ್ದೆಯಿಂದ ಕೆಳಗಿಳಿಯುತ್ತಿದ್ದಾರೆ ಎಂದು ವರದಿಯಾಗಿದೆ. ನಿತೀಶ ಅವರು ತಮ್ಮ ಮಗ ನಿಶಾಂತ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವ ನಡೆಯ ಭಾಗ ಇದು ಎಂದು ಹೇಳಲಾಗುತ್ತಿದೆ. ನಿತೀಶ ಅವರು ಮುಖ್ಯಮಂತ್ರಿ ಹುದ್ದೆಯನ್ನು ಬಿಜೆಪಿಗೆ ಹಸ್ತಾಂತರಿಸಿ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ ಎಂದು ವರದಿಯಾಗಿದೆ. ನಿಶಾಂತ ಅವರ … Continued

ದೆಹಲಿಯ ಕಾಂಗ್ರೆಸ್‌ ಸಭೆಗೆ ಗೈರು : ಪ್ರಧಾನಿ ಮೋದಿ ಕಾರ್ಯಕ್ರಮಕ್ಕಾಗಿ ಕೇರಳದಲ್ಲೇ ಉಳಿದ ಶಶಿ ತರೂರ್

ನವದೆಹಲಿ/ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯ ಪೂರ್ವಸಿದ್ಧತೆ ಕುರಿತು ಚರ್ಚಿಸಲು ಶುಕ್ರವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕರೆದಿದ್ದ ಮಹತ್ವದ ಸಭೆಗೆ ಸಂಸದ ಶಶಿ ತರೂರ್ ಗೈರಾಗಿದ್ದಾರೆ. ಇದು ಪಕ್ಷದೊಳಗೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ರಾಹುಲ್ ಗಾಂಧಿ ಮತ್ತು ಪಕ್ಷದ ನಾಯಕತ್ವದ ಮೇಲೆ ತರೂರ್ ಅಸಮಾಧಾನಗೊಂಡಿದ್ದಾರೆ ಎಂಬ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿವೆ.  ಆರಂಭದಲ್ಲಿ ತರೂರ್ ಅವರು ತಮಗೆ … Continued

ಇನ್ನೆಷ್ಟು ದಿನ ಇರ್ತೀನೋ ಗೊತ್ತಿಲ್ಲ, ನನ್ನ ಆಡಳಿತದ ಬಗ್ಗೆ ತೃಪ್ತಿಯಿದೆ’ ; ಸಿಎಂ ಸಿದ್ದರಾಮಯ್ಯ

ಹಾವೇರಿ : ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರನ್ನು ಹಿಂದಿಕ್ಕಿ ಕರ್ನಾಟಕದಲ್ಲಿ “ದೀರ್ಘಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ” ವ್ಯಕ್ತಿ ಎಂಬ ದಾಖಲೆ ಸೃಷ್ಟಿಸಿದ ದಿನವೇ, ಸಿದ್ದರಾಮಯ್ಯ ಅವರು ʼಇನ್ನೂ ಎಷ್ಟು ದಿನ ಇರ್ತೀವೋ ಗೊತ್ತಿಲ್ಲ. ನನ್ನ ಆಡಳಿತದ ಬಗ್ಗೆ ತೃಪ್ತಿ ಇದೆʼ ಎಂದು ಹೇಳುವ ಮೂಲಕ ಚರ್ಚೆಗೆ ಗ್ರಾಸ ಒದಗಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. … Continued

ಇನ್ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ : ಗೀತಾ ಶಿವರಾಜಕುಮಾರ ಘೋಷಣೆ

ಶಿವಮೊಗ್ಗ : ಇನ್ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಗೀತಾ ಶಿವರಾಜಕುಮಾರ ಘೋಷಿಸಿದ್ದಾರೆ. ಇಂದು, ಶನಿವಾರ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಶ್ವೇತಾ ಬಂಡಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಶಿವರಾಜ್‌ಕುಮಾರ್ ಅವರ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ ಪುತ್ರಿಯಾದ ಗೀತಾ ಶಿವರಾಜಕುಮಾರ (Geetha Shivarajkumar) ಇನ್ಮುಂದೆ ಶಿವಮೊಗ್ಗದಲ್ಲಿ … Continued

ಅನ್ಬುಮಣಿ ಎಂಬ ಕಳೆ ತೆಗೆದುಹಾಕಲಾಗಿದೆ : ಮಗನನ್ನೇ ಪಿಎಂಕೆ ಪಕ್ಷದಿಂದ ಹೊರಹಾಕಿದ ಎಸ್‌.ರಾಮದಾಸ…!

ಚೆನ್ನೈ : ತಮಿಳುನಾಡಿನ ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷದಲ್ಲಿನ ಬಿಕ್ಕಟ್ಟಿನ ನಡುವೆ, ಪಕ್ಷದ ಸಂಸ್ಥಾಪಕ ಎಸ್. ರಾಮದಾಸ ಗುರುವಾರ ತಮ್ಮ ಪುತ್ರ ಅನ್ಬುಮಣಿ ರಾಮದಾಸ್ ಅವರನ್ನು ಪಕ್ಷದಿಂದ ಹೊರಹಾಕಿದ್ದಾರೆ…! ಹಾಗೂ ಪಿಎಂಕೆ ಕಾರ್ಯಕರ್ತರು ಅವರ ಜೊತೆಗಿನ ಎಲ್ಲಾ ಸಂಬಂಧಗಳನ್ನು ಕಡಿತಗೊಳಿಸುವಂತೆ ಸೂಚಿಸಿದ್ದಾರೆ. ರಾಮದಾಸ ಅವರು ಅನ್ಬುಮಣಿ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಿದರು. “ಅನ್ಬುಮಣಿ … Continued