ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ ಐಪಿಸಿ ಸೆಕ್ಷನ್‌ 354 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಸಂತ್ರಸ್ತೆಯ ತಾಯಿ ಗುರುವಾರ ಸಂಜೆ ಯಡಿಯೂರಪ್ಪ ಅವರ ವಿರುದ್ಧ ದೂರು ನೀಡಿದ್ದು, ದೂರಿನನ್ವಯ ಸದಾಶಿವನಗರ ಪೊಲೀಸ್‌ ಠಾಣೆ … Continued

ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾ ಶರಣರು ಬಿಡುಗಡೆ

ಚಿತ್ರದುರ್ಗ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 14 ತಿಂಗಳಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿದ್ದ ಮುರುಘಾ ಮಠದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಗುರುವಾರ ಬಿಡುಗಡೆಯಾಗಿದ್ದಾರೆ. ಮೊದಲನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶರಣರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ‌ ಸಂಬಂಧಚಿತ್ರದುರ್ಗದ ಎರಡನೇ ಹೆಚ್ಚುವರಿ‌ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇಬ್ಬರ ಶ್ಯೂರಿಟಿ ಮತ್ತಿತರೆ ಅಂಶಗಳನ್ನು ಪರಿಶೀಲಿಸಿ … Continued

ಪೋಕ್ಸೊ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಶಿವಮೂರ್ತಿ ಮುರುಘಾ ಶರಣರು

ಬೆಂಗಳೂರು : ಪೋಕ್ಸೊ ಕಾಯಿದೆ ಅಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜಾಮೀನು ಕೋರಿ ಬುಧವಾರ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಮೈಸೂರಿನ ನಜರಾಬಾದ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಥಮ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಗ್ರಾಮೀಣ ಠಾಣೆಯ ಪೊಲೀಸರು ಎರಡು ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಮೊದಲ ಆರೋಪ … Continued

ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ: ತನಿಖೆ ನಂತರ ಸತ್ಯಾಂಶ ತಿಳಿಯಲಿದೆ ಎಂದ ಸಿಎಂ

ಬೆಂಗಳೂರು : ಮುರುಘಾಮಠದ ಶಿವಮೂರ್ತಿ ಶರಣರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ಕುರಿತಾಗಿನ ಸತ್ಯಾಂಶ ಏನು ಎಂಬುದು ತನಿಖೆ ಬಳಿಕ ಹೊರಬಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಪ್ರಕರಣದ ತನಿಖೆ ಮಾಡಲು ಪೊಲೀಸರು ಸಂಪೂರ್ಣ ಸ್ವತಂತ್ರರಾಗಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸಲಿದ್ದು, ಆ … Continued