ಧರ್ಮೇಂದ್ರ ಪ್ರಧಾನ ರಾಜೀನಾಮೆ ಅಂಗೀಕಾರ; ಪ್ರಲ್ಹಾದ ಜೋಶಿಗೆ ಕೇಂದ್ರ ಶಿಕ್ಷಣ ಇಲಾಖೆಯ ಹೆಚ್ಚುವರಿ ಹೊಣೆ

ನವದೆಹಲಿ: ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ನೀಟ್‌ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನಂತರ ಪ್ರತಿಭಟನೆಗಳ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ರಾಷ್ಟ್ರಪತಿ ಭವನ ಅಂಗೀಕರಿಸಿದ್ದು, ಸದ್ಯ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿರುವ ಪ್ರಲ್ಹಾದ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ … Continued

ʼಹುಬ್ಬಳ್ಳಿ-ಜೋಧಪುರʼ ನೇರ ರೈಲು ಸಂಚಾರಕ್ಕೆ ಸಮ್ಮತಿ

ನವದೆಹಲಿ: ಕೇಂದ್ರ ಸರ್ಕಾರ ಗಣೇಶ ಹಬ್ಬದ ವೇಳೆ ʼಹುಬ್ಬಳ್ಳಿ-ಜೋಧಪುರʼ ನೇರ ರೈಲು ಸಂಚಾರಕ್ಕೆ ಅಸ್ತು ಎಂದು ಹೇಳಿದೆ. ʼಹುಬ್ಬಳ್ಳಿ-ಜೋಧಪುರʼ ವಿಶೇಷ ರೈಲು ಸೆಪ್ಟೆಂಬರ್‌ ತಿಂಗಳಿನಿಂದಲೇ ಸಂಚಾರ ಪ್ರಾರಂಭಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಪ್ರಸ್ತುತ ವಿಶೇಷ ರೈಲಾಗಿರುವ ಇದನ್ನು ಮುಂದಿನ ದಿನಗಳಲ್ಲಿ ನಿಯತಕಾಲಿಕವಾಗಿ ಪರಿವರ್ತನೆಗೊಳಿಸುವ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ … Continued

ಬೆಂಗಳೂರು-ಧಾರವಾಡ ವಂದೇ ಭಾರತ ರೈಲು ಬೆಳಗಾವಿ ವರೆಗೆ ವಿಸ್ತರಣೆ ; ಶೆಟ್ಟರ

ಬೆಳಗಾವಿ : ಬೆಂಗಳೂರು-ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ “ವಂದೇ ಭಾರತ” ರೈಲು ಸಂಚಾರವನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸಲಾಗಿದ್ದು, ನೂತನ ವೇಳಾ ಪಟ್ಟಿಯಂತೆ ಶೀಘ್ರದಲ್ಲಿ ತನ್ನ ನೂತನ ಸಂಚಾರವನ್ನು ಬೆಳಗಾವಿಯಿಂದ ಆರಂಭಿಸಲಿದೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ ತಿಳಿಸಿದ್ದಾರೆ. ಈ ಕುರಿತು ಫೆಬ್ರವರಿ 10ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರೊಂದಿಗೆ, ಕೇಂದ್ರ … Continued

ವಂಚನೆ ಪ್ರಕರಣ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಹೋದರನ ಬಂಧನ

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆ ವೇಳೆ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂಪಾಯಿ ಪಡೆದು ವಂಚಿಸಿರುವ ಆರೋಪದಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸಹೋದರ ಹಾಗೂ ಸಹೋದರನ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮಾಜಿ ಶಾಸಕ ದೇವಾನಂದ ಸಿಂಗ್ ಚವ್ಹಾಣ ಅವರ ಪತ್ನಿ ಸುನಿತಾ ಚವ್ಹಾಣ ಅವರ ದೂರಿನ … Continued

ಮುಡಾ, ವಾಲ್ಮೀಕಿ ನಿಗಮ ಹಗರಣಗಳ ದಾಖಲೆ ನಮಗೆ ಕೊಟ್ಟಿದ್ದೇ ಕಾಂಗ್ರೆಸ್​​ ನಾಯಕರು: ಪ್ರಹ್ಲಾದ ಜೋಶಿ

ಹುಬ್ಬಳ್ಳಿ : ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ದಾಖಲೆಗಳನ್ನು ನಮಗೆ ನೀಡಿದ್ದೇ ಕಾಂಗ್ರೆಸ್​ ನಾಯಕರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಮ್ಮ ಬಳಿ‌ ಏನೂ ಇರಲಿಲ್ಲ, ಕೆಲ ಕಾಂಗ್ರೆಸ್​ನವರೇ ನಮಗೆ ಈ ದಾಖಲೆ ಕೊಟ್ಟಿದ್ದಾರೆ, ನಮಗೆ ಯಾರು ದಾಖಲೆ ಕೊಟ್ಟಿದ್ದಾರೆ ಎಂಬ ಮಾಹಿತಿ … Continued

ಮೋದಿ 3.0 ಸರ್ಕಾರ : ಹಲವು ಸಚಿವರ ಖಾತೆ ಬದಲು | ಬದಲಾಗಿದ್ದು ಯಾರ್ಯಾರ ಖಾತೆಗಳು? ಇಲ್ಲಿದೆ ಮಾಹಿತಿ

ನವದೆಹಲಿ: ಪ್ರಧಾನಿ ಮೋದಿ 3.0 ಸರ್ಕಾರ ಕಾರ್ಯಾರಂಭ ಮಾಡಿದ್ದು, ಸೋಮವಾರ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಜೂನ್ 9 ರಂದು ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ 71 ಸಚಿವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಹೊಸ ಸಚಿವ ಸಂಪುಟವು ವಿವಿಧ ಹೊಸ ಮುಖಗಳನ್ನು ಒಳಗೊಂಡಿದ್ದು, ಅವರಿಗೆ ಖಾತೆಗಳನ್ನು … Continued

ಮಾರ್ಚ್‌ 31ರೊಳಗೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಬದಲಾವಣೆ ಮಾಡಿ : ಬಿಜೆಪಿ ಹೈಕಮಾಂಡಿಗೆ ಮಠಾಧೀಶರ ಗಡುವು

ಹುಬ್ಬಳ್ಳಿ: ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರ ವಿರುದ್ದ ತಿರುಗಿ ಬಿದ್ದಿರುವ 40ಕ್ಕೂ ಅಧಿಕ ಮಠಾಧೀಶರು ಮಾರ್ಚ್‌ 31ರ ಒಳಗೆ ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಿಸಿ ಎಲ್ಲ ಸಮುದಾಯದವರೂ ಒಪ್ಪುವ ಸೂಕ್ತ ಅಭ್ಯರ್ಥಿಗೆ ಟಿಕೆಟ್‌ ನೀಡಬೇಕು ಎಂದು ಬಿಜೆಪಿಯ ಹೈಕಮಾಂಡ್‍ಗೆ ಗಡುವು ನೀಡಿದ್ದಾರೆ. ಹುಬ್ಬಳ್ಳಿಯ ಮೂರುಸಾವಿರಮಠದಲ್ಲಿ … Continued

ಮಹದಾಯಿ ಕಾಮಗಾರಿಗೆ 2 ತಿಂಗಳಲ್ಲಿ ಶಂಕುಸ್ಥಾಪನೆ : ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ರಾಜ್ಯದ ಅರಣ್ಯ ಇಲಾಖೆಯ ಒಪ್ಪಿಗೆ ಪಡೆದು, ಎರಡು ತಿಂಗಳಲ್ಲಿ ಮಹದಾಯಿ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಶನಿವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ‘ಈಗಾಗಲೇ ಕೇಂದ್ರ ಸರ್ಕಾರ ಮಹದಾಯಿ ಯೋಜನೆಯ ಪರಿಷ್ಕೃತ ಡಿಪಿಆರ್‌ಗೆ ಒಪ್ಪಿಗೆ ನೀಡಿದೆ. ಇದು ಕುಡಿಯುವ ನೀರಿನ ಯೋಜನೆ ಆಗಿರುವುದರಿಂದ ಪರಿಸರ … Continued

ಕರ್ನಾಟಕದ ಅತ್ಯಂತ ಅಗತ್ಯದ ಕಳಸಾ-ಬಂಡೂರಿ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರದಿಂದ ಅನುಮತಿ : ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಇಂದು, ಗುರುವಾರ ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ -ಬಂಡೂರಿ ವಿಸ್ತೃತ ಯೋಜನಾ ವರದಿಗೆ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟರಿನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಗೃಹ ಸಚಿವ ಅಮಿತ್ … Continued

ಮೇ ಮೊದಲ ವಾರದಲ್ಲಿ ಹುಬ್ಬಳ್ಳಿಯಿಂದ ಮಂಗಳೂರು, ಮೈಸೂರಿಗೆ  ವಿಮಾನ ಸೇವೆ ಆರಂಭ: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ವಿಮಾನ ಸೇವೆ ಮೇ ತಿಂಗಳ ಮೊದಲ ವಾರದಲ್ಲಿ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಇಂಡಿಗೋ ಸಂಸ್ಥೆ ಮೇ 1ರಿಂದ ಮಂಗಳೂರಿಗೆ ವಿಮಾನ ಸಂಚಾರ ಆರಂಭಿಸಲಿದೆ ಹಾಗೂ ವಾರದಲ್ಲಿ 4 ದಿನ ಹುಬ್ಬಳ್ಳಿಯಿಂದ ಮಂಗಳೂರಿಗೆ ಸಂಚಾರ ಮಾಡಲಿದೆ. ಮತ್ತು ಮೇ 3ರಿಂದ ವಾರದಲ್ಲಿ 3 ದಿನ … Continued