ರಾಷ್ಟ್ರಪತಿ ಮುರ್ಮು ಜನ್ಮದಿನ | ಅವರ ಮುಂದೆಯೇ ಹಾಡು ಹಾಡಿದ ದೃಷ್ಟಿ ವಿಕಲಚೇತನ ವಿದ್ಯಾರ್ಥಿಗಳು ; ರಾಷ್ಟ್ರಪತಿಗಳ ಕಣ್ಣಲ್ಲಿ ನೀರು-ವೀಕ್ಷಿಸಿ

ಡೆಹ್ರಾಡೂನ್: ಪ್ರಸ್ತುತ ಉತ್ತರಾಖಂಡಕ್ಕೆ ಮೂರು ದಿನಗಳ ಭೇಟಿಯಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ 67 ನೇ ಜನ್ಮದಿನಾಚರಣೆಗೆ ಡೆಹ್ರಾಡೂನ್‌ನಲ್ಲಿರುವ ರಾಷ್ಟ್ರೀಯ ದೃಷ್ಟಿ ವಿಕಲಚೇತನರ ಸಬಲೀಕರಣ ಸಂಸ್ಥೆಯ (NIEPVD) ವಿದ್ಯಾರ್ಥಿಗಳು ವಿಶೇಷ ಜನ್ಮದಿನದ ಹಾಡನ್ನು ಪ್ರದರ್ಶಿಸಿದಾಗ ಅವರು ಭಾವುಕರಾದರು. ವಿದ್ಯಾರ್ಥಿಗಳ ಹೃದಯಸ್ಪರ್ಶಿ ಪ್ರದರ್ಶನ ನೋಡುತ್ತ ತಮ್ಮ ಭಾವನೆಗಳನ್ನು ತಡೆದುಕೊಳ್ಳಲು ಕಷ್ಟಪಡುತ್ತಿದ್ದ ರಾಷ್ಟ್ರಪತಿಯವರ ಈ ಭಾವನಾತ್ಮಕ ಗೌರವವು ಅವರ … Continued

ವೀಡಿಯೊ..| ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಲ್ಲರ ಹೃದಯಗೆದ್ದ ವಿಶೇಷಚೇತನ ಸಮಾಜ ಸೇವಕ ಬೆಂಗಳೂರಿನ ಡಾ.ರಾಜಣ್ಣ ; ವೀಡಿಯೊ ಭಾರೀ ವೈರಲ್‌

ನವದೆಹಲಿ: ಅಂಗವಿಕಲರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ವಿಶೇಷಚೇತನ ಸಮಾಜ ಸೇವಕ ಡಾ.ಕೆ.ಎಸ್.ರಾಜಣ್ಣ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಭಾರೀ ಕರತಾಡನದ ಮಧ್ಯೆ ಅವರು ಪ್ರಶ್ತಸ್ತಿ ಸ್ವೀಕರಿಸಿದ್ದು ವಿಶೇಷವಾಗಿತ್ತು. ಕೆ.ಎಸ್.ರಾಜಣ್ಣ ಅವರು ತಮ್ಮ ಬಾಲ್ಯದಲ್ಲಿ ಪೋಲಿಯೋಗೆ ತುತ್ತಾಗಿ ಕೈಕಾಲುಗಳನ್ನು ಕಳೆದುಕೊಂಡಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವ ಮೊದಲು ಪ್ರಧಾನಿ ನರೇಂದ್ರ ಮೋದಿ ಮತ್ತು … Continued